Homeಕರ್ನಾಟಕಸುಡುಗಾಡುಸಿದ್ದರಿಗೆ ಅವಮಾನ: ಸಚಿವ ವಿ.ಸೋಮಣ್ಣ ವಿರುದ್ಧ ದೂರು ದಾಖಲು

ಸುಡುಗಾಡುಸಿದ್ದರಿಗೆ ಅವಮಾನ: ಸಚಿವ ವಿ.ಸೋಮಣ್ಣ ವಿರುದ್ಧ ದೂರು ದಾಖಲು

- Advertisement -
- Advertisement -

“ಸುಡುಗಾಡುಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ” ಎಂದು ವಸತಿ ಸಚಿವ ವಿ.ಸೋಮಣ್ಣ ನೀಡಿರುವ ಹೇಳಿಕೆಯ ವಿರುದ್ಧ ಕರ್ನಾಟಕ ರಾಜ್ಯ ಸುಡುಗಾಡುಸಿದ್ಧ ಮಹಾ ಸಂಘವು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ದೂರು ನೀಡಿದೆ.

“ಸುಡುಗಾಡುಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ” ಎಂದು ರಾಜ್ಯ ಸರ್ಕಾರದ ವಸತಿ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಅವರು ಯಾರ ಮೇಲೆಯೇ ನೀಡಿರಲಿ ಅಥವಾ ಯಾವ ಕಾರಣಕ್ಕೆ ನೀಡಿರಲಿ ಅದು ಸುಡುಗಾಡುಸಿದ್ದ ಸಮುದಾಯದ ಮೇಲೆ ಕಳಂಕ ನೀಡುವಂತಹ ಹೇಯ ಹೇಳಿಕೆಯಾಗಿದೆ” ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಹನುಮಂತಪ್ಪ ದೂರಿನಲ್ಲಿ ಆರೋಪಿಸಿದ್ದಾರೆ.

ಸುಡುಗಾಡುಸಿದ್ಧ ಸಮುದಾಯ ಈ ನೆಲದ ಅತ್ಯಂತ ಪ್ರಾಚೀನ ಸಮುದಾಯವಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿದ್ದು, ಪಾರಂಪರಿಕ ಸಿದ್ಧ ಔಷಧಿಯನ್ನು ನೀಡುತ್ತಾ ತಲೆತಲಾಂತರಗಳಿಂದ ಸಮಾಜದ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಕಾಪಾಡಿಕೊಂಡು ಬಂದಿದೆ. ನಾಡಿನಲ್ಲಿ ಸುಮಾರು 20 ಲಕ್ಷ ಜನರು ಈ ಪರಂಪರೆಯಿಂದ ಬಂದವರಾಗಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ನನ್ನ ಸಮುದಾಯದ ಕುರಿತು ಅತ್ಯಂತ ನೀಚವಾಗಿ ಮಾತನಾಡಿರುವುದರಿಂದ ನನ್ನ ಇಡೀ ಸಮುದಾಯಕ್ಕೆ ಜಾತಿ ನಿಂದನೆಯಾಗಿದೆ. ಅಪಾರ ಅವಮಾನ, ಮಾನನಷ್ಟ ಹಾಗೂ ಜನಾಂಗಕ್ಕೆ ಕಳಂಕ ಉಂಟಾಗಿದೆ. ಈ ಕಾರಣಕ್ಕೆ ತಪ್ಪಿತಸ್ಥ ವಿ.ಸೋಮಣ್ಣನವರ ವಿರುದ್ಧ ತೀವ್ರ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡುತ್ತಾ ವಿ.ಸೋಮಣ್ಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದ್ದರು. “ಅವರ ಕಾಲದಲ್ಲಿ ಬರೀ ಘೋಷಣೆ ಆಗಿತ್ತು. ನಾವು ಮನೆ ಕಟ್ಟಿಕೊಡುತ್ತಿದ್ದೇವೆ. ಇದು ನಿರಂತರ ಪ್ರಕ್ರಿಯೆಯಾಗಿದೆ. ರಾಜಕಾರಣಕ್ಕಾಗಿ ನನ್ನ ಮೇಲೆ ಆರೋಪ ಮಾಡಬೇಡಿ” ಎನ್ನುತ್ತಾ, ಸುಡುಗಾಡು ಸಿದ್ಧ ಜಾತಿಯನ್ನು ಅಪಮಾನಿಸಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿರಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ಬೈಗುಳಗಳಿಗೂ ಈ ಸಮುದಾಯಗಳೇ ಬೇಕಾ?: ಸಿ.ಎಸ್.ದ್ವಾರಕನಾಥ್‌

ವಿ.ಸೋಮಣ್ಣ ಅವರ ಹೇಳಿಕೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು, ಅಲೆಮಾರಿ ಬುಡಕಟ್ಟು ಮಹಾಸಭಾ ಗೌರವಾಧ್ಯಕ್ಷರೂ ಆದ ಸಿ.ಎಸ್.ದ್ವಾರಕನಾಥ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಯಾರನ್ನು ಬೈಯಬೇಕಾದರೂ ಸುಡುಗಾಡು ಸಿದ್ದರನ್ನು ತೆಗೆದುಕೊಳ್ಳುತ್ತಾರೆ, ದೊಂಬರನ್ನು ತೆಗೆದುಕೊಳ್ಳುತ್ತಾರೆ, ದರ್ವೇಸಿಗಳನ್ನು ತೆಗೆದುಕೊಳ್ಳುತ್ತಾರೆ, ಸವಿತಾ ಸಮಾಜವನ್ನು ತೆಗೆದುಕೊಳ್ಳುತ್ತಾರೆ. ಬೈಗುಳಗಳಿಗೂ ಇದೇ ಸಮುದಾಯಗಳು ಇವರಿಗೆ ಬೇಕಾ?” ಎಂದು ಪ್ರಶ್ನಿಸಿದರು.

“ಆ ಸಮುದಾಯಗಳ ಬಗ್ಗೆ ಇವರಿಗೆ ಸ್ಪಷ್ಟವಾದ ಅರಿವು ಹಾಗೂ ಗೌರವ ಇರಬೇಕು. ಇಲ್ಲದಿದ್ದರೆ ಜಾತಿ ಅಹಂಕಾರದಿಂದ ಹೀಗೆ ಮಾತನಾಡುತ್ತಾರೆ. ಸೋಮಣ್ಣ ಅವರ ಅವರ ಹೇಳಿಕೆ ಜಾತಿ ನಿಂದನೆಯ ಅಡಿಯಲ್ಲಿ ಬರುತ್ತದೆ” ಎಂದರು.

‘ಸಹಜವಾಗಿ ಸುಡುಗಾಡುಸಿದ್ದರು ತಪ್ಪು ಮಾಡಿತ್ತಾರೆ ನಾವು ಅದನ್ನು ಸರಿಪಡಿಸಿದ್ದೇವೆ’ ಎಂಬ ಅರ್ಥ ಸೋಮಣ್ಣನವರ ಹೇಳಿಕೆಯಲ್ಲಿದೆ. ಇದರ ಮೂಲಾರ್ಥ ‘ಸುಡುಗಾಡುಸಿದ್ದರು ಸದಾ ತಪ್ಪು ಮಾಡುವವರು’ ಎಂದಾಗುತ್ತದೆ. ಹೀಗೆ ಒಂದು ಇಡೀ ಸಮುದಾಯವನ್ನು ತಪ್ಪಿತಸ್ಥರು ಎಂದು ಪರಿಗಣಿಸಿ ಕಟಕಟೆಯಲ್ಲಿ ನಿಲ್ಲಿಸಿರುವ ಸೋಮಣ್ಣನವರ ಹೇಳಿಕೆ ಅಕ್ಷಮ್ಯವಾದುದು ಎಂದು ಅಭಿಪ್ರಾಯಪಟ್ಟಿದ್ದಾರೆ.

“ಒಬ್ಬ ಸಚಿವರಾಗಿ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಸರ್ಕಾರಿ ಆಡಳಿತಕ್ಕೆ ಬಂದಿರುವ ಮಂತ್ರಿಗೆ ಸಂವಿಧಾನದತ್ತವಾಗಿ ಈ ದೇಶದ ಸಭ್ಯ ನಾಗರಿಕರೆಂದು ಪರಿಗಣಿಸಲ್ಪಟ್ಟ ಇಡೀ ಒಂದು ಸಮುದಾಯವನ್ನೇ ತಪ್ಪಿತಸ್ಥರೆಂದು ಅಪಾದಿಸಿ ಹೇಳಿಕೆ ನೀಡಿರುವುದು ಆ ವ್ಯಕ್ತಿಯ ಅರಿವುಗೇಡಿತನ ಮತ್ತು ದುಷ್ಟತನವನ್ನು ತೋರುತ್ತದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಸುಡುಗಾಡುಸಿದ್ದ ಸಮುದಾಯದ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಕಡೂರು, “ಸೋಮಣ್ಣ ಅವರ ಮೇಲೆ ಗೌರವವಿದೆ. ಅತ್ಯಂತ ಶೋಷಿತ ಸಮುದಾಯದ ಕುರಿತು ಯಾಕೆ ಹೀಗೆ ಮಾತನಾಡುತ್ತಾರೆ. ಇದು ನೋವು ತಂದಿದೆ. ಸೋಮಣ್ಣ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದೆವು. ಆದರೆ ನಮ್ಮ ಆಗ್ರಹಕ್ಕೆ ಬೆಲೆಯನ್ನೇ ನೀಡಲಿಲ್ಲ. ಹೀಗಾಗಿ ಆಯೋಗಕ್ಕೆ ದೂರು ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಿದ್ದೇವೆ” ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: ಗುಜರಾತ್: ಮದುವೆಯಲ್ಲಿ ಸಾಂಪ್ರದಾಯಿಕ ಪೇಟ ಧರಿಸಿದ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಜಕೀಯ ವೆಕ್ತಿಗಳಿಗೆ ಇಂತಹ ಸಮುದಾಯದ ಬಗ್ಗೆ ಮಾತಿಗೂ ಹೀಯಾಳಿಸುವ ನೀಚ ರಾಜಕಾರಣಿ ಗೇ ಧಿಕ್ಕಾರ ಚುನಾವಣೆ ಸಮಯದಲ್ಲಿ ಜನಸಾಮಾನ್ಯರು ಮತದಾರರು ದೇವರು ಎನ್ನುತ್ತಾರೆ ಗೆದ್ದಮೇಲೆ ಜಾತಿ ನಿಂದಿಸುತ್ತಾರೆ ಇಂತಹವರನ್ನು ಸುಮ್ಮನೆ ಬಿಡಬಾರದು 🙏🌹🌹🌹🙏ಜೈ ಸುಡುಗಾಡು ಸಿದ್ದ ಜೈ ಅಲೆಮಾರಿ ಇಂತಿ ಧನಂಜಯ ಎಸ್ ಕಲ್ಯಾಣದವರ್ ಜಿಲ್ಲಾ ಅಧ್ಯಕ್ಷರು ಕರ್ನಾಟಕ ರಾಜ್ಯ ಸುಡುಗಾಡು ಸಿದ್ದ ಮಹಾ ಸಂಘ ಬೆಂಗಳೂರು ಜಿಲ್ಲಾ ಶಾಖೆ

  2. ಸಚಿವ ವಿ ಸೋಮಣ್ಣನವರು ಸುಡುಗಾಡು ಸಿದ್ಧ ಸಮುದಾಯದ ಬಗ್ಗೆ ಅತಿ ಕೀಳಾಗಿ ಮಾತನಾಡಿ ಆ ಸಮುದಾಯದ ಜನರಿಗೆ ತುಂಬಾ ನೋವುಂಟು ಮಾಡಿದ್ದಾರೆ ಹೀಗಾಗಿ ಅವರು ಅತಿ ಶೀಘ್ರದಲ್ಲಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಇಲ್ಲವಾದರೆ ರಾಜ್ಯದ ತಾಲೂಕು ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಇಂತಿ ಹನುಮಂತ ಒಂಟೆತ್ತನವರ ರಾಜ್ಯ ಸಂಘಟನಾ ಕಾರ್ಯದರ್ಶಿ ಕರ್ನಾಟಕ ರಾಜ್ಯ ಸುಡುಗಾಡು ಸಿದ್ದ ಮಹಾಸಂಘ ಬೆಂಗಳೂರು

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...