Homeಕರ್ನಾಟಕಸುಡುಗಾಡುಸಿದ್ದರಿಗೆ ಅವಮಾನ: ಸಚಿವ ವಿ.ಸೋಮಣ್ಣ ವಿರುದ್ಧ ದೂರು ದಾಖಲು

ಸುಡುಗಾಡುಸಿದ್ದರಿಗೆ ಅವಮಾನ: ಸಚಿವ ವಿ.ಸೋಮಣ್ಣ ವಿರುದ್ಧ ದೂರು ದಾಖಲು

- Advertisement -
- Advertisement -

“ಸುಡುಗಾಡುಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ” ಎಂದು ವಸತಿ ಸಚಿವ ವಿ.ಸೋಮಣ್ಣ ನೀಡಿರುವ ಹೇಳಿಕೆಯ ವಿರುದ್ಧ ಕರ್ನಾಟಕ ರಾಜ್ಯ ಸುಡುಗಾಡುಸಿದ್ಧ ಮಹಾ ಸಂಘವು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ದೂರು ನೀಡಿದೆ.

“ಸುಡುಗಾಡುಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ” ಎಂದು ರಾಜ್ಯ ಸರ್ಕಾರದ ವಸತಿ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಅವರು ಯಾರ ಮೇಲೆಯೇ ನೀಡಿರಲಿ ಅಥವಾ ಯಾವ ಕಾರಣಕ್ಕೆ ನೀಡಿರಲಿ ಅದು ಸುಡುಗಾಡುಸಿದ್ದ ಸಮುದಾಯದ ಮೇಲೆ ಕಳಂಕ ನೀಡುವಂತಹ ಹೇಯ ಹೇಳಿಕೆಯಾಗಿದೆ” ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಹನುಮಂತಪ್ಪ ದೂರಿನಲ್ಲಿ ಆರೋಪಿಸಿದ್ದಾರೆ.

ಸುಡುಗಾಡುಸಿದ್ಧ ಸಮುದಾಯ ಈ ನೆಲದ ಅತ್ಯಂತ ಪ್ರಾಚೀನ ಸಮುದಾಯವಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿದ್ದು, ಪಾರಂಪರಿಕ ಸಿದ್ಧ ಔಷಧಿಯನ್ನು ನೀಡುತ್ತಾ ತಲೆತಲಾಂತರಗಳಿಂದ ಸಮಾಜದ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಕಾಪಾಡಿಕೊಂಡು ಬಂದಿದೆ. ನಾಡಿನಲ್ಲಿ ಸುಮಾರು 20 ಲಕ್ಷ ಜನರು ಈ ಪರಂಪರೆಯಿಂದ ಬಂದವರಾಗಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ನನ್ನ ಸಮುದಾಯದ ಕುರಿತು ಅತ್ಯಂತ ನೀಚವಾಗಿ ಮಾತನಾಡಿರುವುದರಿಂದ ನನ್ನ ಇಡೀ ಸಮುದಾಯಕ್ಕೆ ಜಾತಿ ನಿಂದನೆಯಾಗಿದೆ. ಅಪಾರ ಅವಮಾನ, ಮಾನನಷ್ಟ ಹಾಗೂ ಜನಾಂಗಕ್ಕೆ ಕಳಂಕ ಉಂಟಾಗಿದೆ. ಈ ಕಾರಣಕ್ಕೆ ತಪ್ಪಿತಸ್ಥ ವಿ.ಸೋಮಣ್ಣನವರ ವಿರುದ್ಧ ತೀವ್ರ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡುತ್ತಾ ವಿ.ಸೋಮಣ್ಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದ್ದರು. “ಅವರ ಕಾಲದಲ್ಲಿ ಬರೀ ಘೋಷಣೆ ಆಗಿತ್ತು. ನಾವು ಮನೆ ಕಟ್ಟಿಕೊಡುತ್ತಿದ್ದೇವೆ. ಇದು ನಿರಂತರ ಪ್ರಕ್ರಿಯೆಯಾಗಿದೆ. ರಾಜಕಾರಣಕ್ಕಾಗಿ ನನ್ನ ಮೇಲೆ ಆರೋಪ ಮಾಡಬೇಡಿ” ಎನ್ನುತ್ತಾ, ಸುಡುಗಾಡು ಸಿದ್ಧ ಜಾತಿಯನ್ನು ಅಪಮಾನಿಸಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿರಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ಬೈಗುಳಗಳಿಗೂ ಈ ಸಮುದಾಯಗಳೇ ಬೇಕಾ?: ಸಿ.ಎಸ್.ದ್ವಾರಕನಾಥ್‌

ವಿ.ಸೋಮಣ್ಣ ಅವರ ಹೇಳಿಕೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು, ಅಲೆಮಾರಿ ಬುಡಕಟ್ಟು ಮಹಾಸಭಾ ಗೌರವಾಧ್ಯಕ್ಷರೂ ಆದ ಸಿ.ಎಸ್.ದ್ವಾರಕನಾಥ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಯಾರನ್ನು ಬೈಯಬೇಕಾದರೂ ಸುಡುಗಾಡು ಸಿದ್ದರನ್ನು ತೆಗೆದುಕೊಳ್ಳುತ್ತಾರೆ, ದೊಂಬರನ್ನು ತೆಗೆದುಕೊಳ್ಳುತ್ತಾರೆ, ದರ್ವೇಸಿಗಳನ್ನು ತೆಗೆದುಕೊಳ್ಳುತ್ತಾರೆ, ಸವಿತಾ ಸಮಾಜವನ್ನು ತೆಗೆದುಕೊಳ್ಳುತ್ತಾರೆ. ಬೈಗುಳಗಳಿಗೂ ಇದೇ ಸಮುದಾಯಗಳು ಇವರಿಗೆ ಬೇಕಾ?” ಎಂದು ಪ್ರಶ್ನಿಸಿದರು.

“ಆ ಸಮುದಾಯಗಳ ಬಗ್ಗೆ ಇವರಿಗೆ ಸ್ಪಷ್ಟವಾದ ಅರಿವು ಹಾಗೂ ಗೌರವ ಇರಬೇಕು. ಇಲ್ಲದಿದ್ದರೆ ಜಾತಿ ಅಹಂಕಾರದಿಂದ ಹೀಗೆ ಮಾತನಾಡುತ್ತಾರೆ. ಸೋಮಣ್ಣ ಅವರ ಅವರ ಹೇಳಿಕೆ ಜಾತಿ ನಿಂದನೆಯ ಅಡಿಯಲ್ಲಿ ಬರುತ್ತದೆ” ಎಂದರು.

‘ಸಹಜವಾಗಿ ಸುಡುಗಾಡುಸಿದ್ದರು ತಪ್ಪು ಮಾಡಿತ್ತಾರೆ ನಾವು ಅದನ್ನು ಸರಿಪಡಿಸಿದ್ದೇವೆ’ ಎಂಬ ಅರ್ಥ ಸೋಮಣ್ಣನವರ ಹೇಳಿಕೆಯಲ್ಲಿದೆ. ಇದರ ಮೂಲಾರ್ಥ ‘ಸುಡುಗಾಡುಸಿದ್ದರು ಸದಾ ತಪ್ಪು ಮಾಡುವವರು’ ಎಂದಾಗುತ್ತದೆ. ಹೀಗೆ ಒಂದು ಇಡೀ ಸಮುದಾಯವನ್ನು ತಪ್ಪಿತಸ್ಥರು ಎಂದು ಪರಿಗಣಿಸಿ ಕಟಕಟೆಯಲ್ಲಿ ನಿಲ್ಲಿಸಿರುವ ಸೋಮಣ್ಣನವರ ಹೇಳಿಕೆ ಅಕ್ಷಮ್ಯವಾದುದು ಎಂದು ಅಭಿಪ್ರಾಯಪಟ್ಟಿದ್ದಾರೆ.

“ಒಬ್ಬ ಸಚಿವರಾಗಿ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಸರ್ಕಾರಿ ಆಡಳಿತಕ್ಕೆ ಬಂದಿರುವ ಮಂತ್ರಿಗೆ ಸಂವಿಧಾನದತ್ತವಾಗಿ ಈ ದೇಶದ ಸಭ್ಯ ನಾಗರಿಕರೆಂದು ಪರಿಗಣಿಸಲ್ಪಟ್ಟ ಇಡೀ ಒಂದು ಸಮುದಾಯವನ್ನೇ ತಪ್ಪಿತಸ್ಥರೆಂದು ಅಪಾದಿಸಿ ಹೇಳಿಕೆ ನೀಡಿರುವುದು ಆ ವ್ಯಕ್ತಿಯ ಅರಿವುಗೇಡಿತನ ಮತ್ತು ದುಷ್ಟತನವನ್ನು ತೋರುತ್ತದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಸುಡುಗಾಡುಸಿದ್ದ ಸಮುದಾಯದ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಕಡೂರು, “ಸೋಮಣ್ಣ ಅವರ ಮೇಲೆ ಗೌರವವಿದೆ. ಅತ್ಯಂತ ಶೋಷಿತ ಸಮುದಾಯದ ಕುರಿತು ಯಾಕೆ ಹೀಗೆ ಮಾತನಾಡುತ್ತಾರೆ. ಇದು ನೋವು ತಂದಿದೆ. ಸೋಮಣ್ಣ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದೆವು. ಆದರೆ ನಮ್ಮ ಆಗ್ರಹಕ್ಕೆ ಬೆಲೆಯನ್ನೇ ನೀಡಲಿಲ್ಲ. ಹೀಗಾಗಿ ಆಯೋಗಕ್ಕೆ ದೂರು ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಿದ್ದೇವೆ” ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: ಗುಜರಾತ್: ಮದುವೆಯಲ್ಲಿ ಸಾಂಪ್ರದಾಯಿಕ ಪೇಟ ಧರಿಸಿದ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಜಕೀಯ ವೆಕ್ತಿಗಳಿಗೆ ಇಂತಹ ಸಮುದಾಯದ ಬಗ್ಗೆ ಮಾತಿಗೂ ಹೀಯಾಳಿಸುವ ನೀಚ ರಾಜಕಾರಣಿ ಗೇ ಧಿಕ್ಕಾರ ಚುನಾವಣೆ ಸಮಯದಲ್ಲಿ ಜನಸಾಮಾನ್ಯರು ಮತದಾರರು ದೇವರು ಎನ್ನುತ್ತಾರೆ ಗೆದ್ದಮೇಲೆ ಜಾತಿ ನಿಂದಿಸುತ್ತಾರೆ ಇಂತಹವರನ್ನು ಸುಮ್ಮನೆ ಬಿಡಬಾರದು 🙏🌹🌹🌹🙏ಜೈ ಸುಡುಗಾಡು ಸಿದ್ದ ಜೈ ಅಲೆಮಾರಿ ಇಂತಿ ಧನಂಜಯ ಎಸ್ ಕಲ್ಯಾಣದವರ್ ಜಿಲ್ಲಾ ಅಧ್ಯಕ್ಷರು ಕರ್ನಾಟಕ ರಾಜ್ಯ ಸುಡುಗಾಡು ಸಿದ್ದ ಮಹಾ ಸಂಘ ಬೆಂಗಳೂರು ಜಿಲ್ಲಾ ಶಾಖೆ

  2. ಸಚಿವ ವಿ ಸೋಮಣ್ಣನವರು ಸುಡುಗಾಡು ಸಿದ್ಧ ಸಮುದಾಯದ ಬಗ್ಗೆ ಅತಿ ಕೀಳಾಗಿ ಮಾತನಾಡಿ ಆ ಸಮುದಾಯದ ಜನರಿಗೆ ತುಂಬಾ ನೋವುಂಟು ಮಾಡಿದ್ದಾರೆ ಹೀಗಾಗಿ ಅವರು ಅತಿ ಶೀಘ್ರದಲ್ಲಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಇಲ್ಲವಾದರೆ ರಾಜ್ಯದ ತಾಲೂಕು ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಇಂತಿ ಹನುಮಂತ ಒಂಟೆತ್ತನವರ ರಾಜ್ಯ ಸಂಘಟನಾ ಕಾರ್ಯದರ್ಶಿ ಕರ್ನಾಟಕ ರಾಜ್ಯ ಸುಡುಗಾಡು ಸಿದ್ದ ಮಹಾಸಂಘ ಬೆಂಗಳೂರು

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...