Homeಮುಖಪುಟಸುಪ್ರೀಂ ಕೋರ್ಟ್‌ಗೆ ಅವಮಾನ - OPIndia, ನೂಪುರ್ ಜೆ ಶರ್ಮಾ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

ಸುಪ್ರೀಂ ಕೋರ್ಟ್‌ಗೆ ಅವಮಾನ – OPIndia, ನೂಪುರ್ ಜೆ ಶರ್ಮಾ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

- Advertisement -
- Advertisement -

ಪ್ರವಾದಿ ಮೊಹಮ್ಮದ್‌ರವರನ್ನು ನಿಂದಿಸಿದ್ದ ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದ್ದ ಬೆನ್ನಲ್ಲೆ ಸುಪ್ರೀಂ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದಕ್ಕಾಗಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಟಿಎಂಸಿ ಮುಖಂಡ ಸಾಕೇತ್ ಗೋಖಲೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ನೂಪೂರ್ ಜೆ ಶರ್ಮಾ ಎನ್ನುವವರು ಬಿಜೆಪಿ-ಆರ್‌ಎಸ್‌ಎಸ್‌ ಬೆಂಬಲಿತ ಒಪಿಇಂಡಿಯಾ ಎನ್ನುವ ಪ್ರಪಗಂಡಾ ವೆಬ್‌ಸೈಟ್‌ನ ಸಂಪಾದಕಿಯಾಗಿದ್ದಾರೆ. ಅದಕ್ಕೆ ಬಿಜೆಪಿಯಿಂದ ಉಚ್ಛಾಟನೆಯಾಗಿರುವ ಮತ್ತೊಬ್ಬ ನೂಪುರ್ ಶರ್ಮಾ ಕೂಡ ಈ ಹಿಂದೆ ಬರೆಯುತ್ತಿದ್ದರು.

ಸುಪ್ರೀಂ ಕೋರ್ಟ್ ಅನ್ನು ತೀವ್ರವಾಗಿ ಅವಮಾನಿಸಿದ್ದಕ್ಕಾಗಿ ಬಿಜೆಪಿ ಮುಖವಾಣಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಕೋರಿ ಭಾರತದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರಿಗೆ ಪತ್ರ ಬರೆಯಲಾಗಿದೆ.

ತನ್ನ ಮೇಲೆ ದೇಶಾದ್ಯಂತ ದಾಖಲಾಗಿರುವ ಪ್ರಕರಣಗಳನ್ನು ಒಂದೇ ಎಫ್‌ಐಆರ್‌ಗೆ ವರ್ಗಾಹಿಸುವಂತೆ ಆರೋಪಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ “ದೇಶದಲ್ಲಿ ಉಂಟಾದ ಉದ್ವಿಗ್ನ ವಾತಾವರಣಕ್ಕೆ ನೂಪುರ್ ಶರ್ಮಾ ಒಬ್ಬರೆ ಕಾರಣವಾಗಿದ್ದಾರೆ, ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ, ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು” ಎಂದು ಸುಪ್ರೀಂ ಅಭಿಪ್ರಾಯಪಟ್ಟಿತು. ಅಲ್ಲದೆ ನೂಪುರ್ ಶರ್ಮಾ ವಿರುದ್ಧ ಕಿಡಿಕಾರಿತ್ತು.

ಇದಕ್ಕೆ ಪ್ರತಿಯಾಗಿ ಜುಲೈ 1 ರಂದು OPIndia ದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ “ಸುಪ್ರೀಂ ಕೋರ್ಟ್ ಇಸ್ಲಾಂ ಧರ್ಮೀಯರಂತೆ ಮಾತನಾಡುತ್ತದೆ, ಇಸ್ಲಾಮಿಕ್ ಮತಾಂಧರಿಂದ ಹಿಂದೂ ವ್ಯಕ್ತಿಯ ಶಿರಚ್ಛೇದಕ್ಕೆ ನೂಪುರ್ ಶರ್ಮಾ ಅವರ ‘ಸಡಿಲ ನಾಲಿಗೆ’ಯನ್ನು ದೂರುವ ಮೂಲಕ ಕೆಟ್ಟ ವಿಚಾರಣೆ ನಡೆಸುತ್ತದೆ. ಸುಪ್ರೀಂ ಕೋರ್ಟ್ ಷರಿಯಾವನ್ನು ಅನುಸರಿಸುತ್ತದೆಯೇ?” ಎಂದು ಟ್ವೀಟ್ ಮಾಡುವ ಮೂಲಕ ಅವಮಾನ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅದೆ ಟ್ವಿಟರ್ ಹ್ಯಾಂಡಲ್ ನಿಂದ “ಆತ್ಮೀಯ ಮೈಲಾರ್ಡ್‌ಗಳೇ, ನೀವು ಇಸ್ಲಾಮಿಸ್ಟ್‌ಗಳನ್ನು ಸಹ ನಿಮ್ಮ ಸಡಿಲವಾದ ನಾಲಿಗೆಯಿಂದ ಪ್ರಚೋದಿಸಿದ್ದೀರಾ?” ಎಂದು ಬರೆದು ಲೇಖನದ ಲಿಂಕ್ ಒಂದನ್ನು ಪೋಸ್ಟ್ ಮಾಡಲಾಗಿದೆ. ಆ ಲೇಖನದಲ್ಲಿ “ನ್ಯಾಯಾಂಗವು ವಿಚಾರಣೆ ವೇಳೆ ತನ್ನ ಅಪರಿಮಿತ ಬುದ್ಧಿವಂತಿಕೆಯಲ್ಲಿ ಅವರು ಇಸ್ಲಾಮಿಕ್ ಧರ್ಮಗುರುಗಳಾಗಲು ಬಯಸುತ್ತಾರೆಯೇ ಅಥವಾ ನೈಸರ್ಗಿಕ ನ್ಯಾಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆಯೇ ಎಂದು ನಿರ್ಧರಿಸುವ ಅಗತ್ಯವಿದೆ” ಎಂದು ಬರೆಯಲಾಗಿದೆ ಎಂದು ಸಾಕೇತ್ ತಿಳಿಸಿದ್ದಾರೆ.

ಈ ರೀತಿಯಾಗಿ ಸುಪ್ರೀಂ ಕೋರ್ಟ್ ಅನ್ನು ಅವಮಾನಿಸಿದ್ದಕ್ಕಾಗಿ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಅವರು ಕೋರಿದ್ದಾರೆ.

ಇದನ್ನೂ ಓದಿ: ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ: ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು- ಸುಪ್ರೀಂ

ಕರ್ನಾಟಕದಲ್ಲಿಯೂ ಸಹ ನೂಪುರ್ ಶರ್ಮಾ ವಿರುದ್ಧದ ಸುಪ್ರೀಂ ಕೋರ್ಟ್‌ ಹೇಳಿಕೆಗಳನ್ನು ಖಂಡಿಸಿ ಬಿಜೆಪಿ ಬೆಂಬಲಿಗರಾದ ಚಕ್ರವರ್ತಿ ಸೂಲಿಬೆಲೆ, ಪ್ರಶಾಂತ್ ಸಂಬರ್ಗಿ ಸೇರಿದಂತೆ ಹಲವರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆ ದೇಶದ ಮಾನವನ್ನ ಪ್ರಪಂಚದ ರಾಷ್ಟ್ರಗಳ ಮುಂದೆ ಹರಾಜು ಹಾಕಿದ ಮತ್ತು ನ್ಯಾಯಾಂಗ ನಿಂದನೆ ಕೃತ್ಯ ಎಸಗಿರುವ ಈ ಹೆಂಗಸನ್ನ ಹಿಂದೆಯೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕಿತ್ತು ಆದರೆ ದುರದೃಷ್ಟವಶಾತ್ ಕೇಂದ್ರದಲ್ಲಿ ಇರುವ ಮತಿಯವಾದಿ, ಕೋಮುವಾದಿ ಸರ್ಕಾರವಿರುವುದರಿಂದ ಸಾಧ್ಯವಿಲ್ಲ.

  2. ಈ ಹೊಲಸು ಬಾಯಿನಾ ಪ್ರವಾದಿಯವರ ಬಗ್ಗೆ ಬೊಗಳಿದಾಗಲೇ ಮುಚ್ಚಿಸಿದ್ರೆ ಇವತ್ತು ಸುಪ್ರೀಂ ಕೋರ್ಟ್ ಗೆ ಅವಮಾನ ಮಾಡತಿರಲಿಲ್ಲ. ಇವಳ ಒಂದು ಮಾತು ಇಡೀ ದೇಶ ಹೊತ್ತಿ ಉರಿಯೋ ಹಾಗೆ ಮಾಡಿ ಪ್ರಪಂಚದ ಅತಿ ಚಿಕ್ಕ ಚಿಕ್ಕ ದೇಶಗಳ ಮುಂದೆ ನಮ್ಮ ದೇಶದ ಮರ್ಯಾದೆ ಹೋಯಿತು. ಇವಳನ್ನ ಅವತ್ತೇ ಪೊಲೀಸ್ ಕಸ್ಟಡಿಗೆ ಒಪ್ಸಿದ್ರೆ ಹೇಗಿರ್ತಿತ್ತು,, ಇವರಿಗೆಲ್ಲ ನಡು ರೋಡಲ್ಲಿ ಸಾರ್ವಜನಿಕವಾಗಿ ಗಲ್ಲಿಗೆ ಹಾಕಬೇಕು ಥೂ… ಇವಳು ಒಂದು ಭಾರತೀಯ ಹೆಣ್ಣೇ..?

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...