Homeಮುಖಪುಟಸುಪ್ರೀಂ ಕೋರ್ಟ್‌ಗೆ ಅವಮಾನ - OPIndia, ನೂಪುರ್ ಜೆ ಶರ್ಮಾ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

ಸುಪ್ರೀಂ ಕೋರ್ಟ್‌ಗೆ ಅವಮಾನ – OPIndia, ನೂಪುರ್ ಜೆ ಶರ್ಮಾ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

- Advertisement -
- Advertisement -

ಪ್ರವಾದಿ ಮೊಹಮ್ಮದ್‌ರವರನ್ನು ನಿಂದಿಸಿದ್ದ ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದ್ದ ಬೆನ್ನಲ್ಲೆ ಸುಪ್ರೀಂ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದಕ್ಕಾಗಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಟಿಎಂಸಿ ಮುಖಂಡ ಸಾಕೇತ್ ಗೋಖಲೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ನೂಪೂರ್ ಜೆ ಶರ್ಮಾ ಎನ್ನುವವರು ಬಿಜೆಪಿ-ಆರ್‌ಎಸ್‌ಎಸ್‌ ಬೆಂಬಲಿತ ಒಪಿಇಂಡಿಯಾ ಎನ್ನುವ ಪ್ರಪಗಂಡಾ ವೆಬ್‌ಸೈಟ್‌ನ ಸಂಪಾದಕಿಯಾಗಿದ್ದಾರೆ. ಅದಕ್ಕೆ ಬಿಜೆಪಿಯಿಂದ ಉಚ್ಛಾಟನೆಯಾಗಿರುವ ಮತ್ತೊಬ್ಬ ನೂಪುರ್ ಶರ್ಮಾ ಕೂಡ ಈ ಹಿಂದೆ ಬರೆಯುತ್ತಿದ್ದರು.

ಸುಪ್ರೀಂ ಕೋರ್ಟ್ ಅನ್ನು ತೀವ್ರವಾಗಿ ಅವಮಾನಿಸಿದ್ದಕ್ಕಾಗಿ ಬಿಜೆಪಿ ಮುಖವಾಣಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಕೋರಿ ಭಾರತದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರಿಗೆ ಪತ್ರ ಬರೆಯಲಾಗಿದೆ.

ತನ್ನ ಮೇಲೆ ದೇಶಾದ್ಯಂತ ದಾಖಲಾಗಿರುವ ಪ್ರಕರಣಗಳನ್ನು ಒಂದೇ ಎಫ್‌ಐಆರ್‌ಗೆ ವರ್ಗಾಹಿಸುವಂತೆ ಆರೋಪಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ “ದೇಶದಲ್ಲಿ ಉಂಟಾದ ಉದ್ವಿಗ್ನ ವಾತಾವರಣಕ್ಕೆ ನೂಪುರ್ ಶರ್ಮಾ ಒಬ್ಬರೆ ಕಾರಣವಾಗಿದ್ದಾರೆ, ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ, ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು” ಎಂದು ಸುಪ್ರೀಂ ಅಭಿಪ್ರಾಯಪಟ್ಟಿತು. ಅಲ್ಲದೆ ನೂಪುರ್ ಶರ್ಮಾ ವಿರುದ್ಧ ಕಿಡಿಕಾರಿತ್ತು.

ಇದಕ್ಕೆ ಪ್ರತಿಯಾಗಿ ಜುಲೈ 1 ರಂದು OPIndia ದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ “ಸುಪ್ರೀಂ ಕೋರ್ಟ್ ಇಸ್ಲಾಂ ಧರ್ಮೀಯರಂತೆ ಮಾತನಾಡುತ್ತದೆ, ಇಸ್ಲಾಮಿಕ್ ಮತಾಂಧರಿಂದ ಹಿಂದೂ ವ್ಯಕ್ತಿಯ ಶಿರಚ್ಛೇದಕ್ಕೆ ನೂಪುರ್ ಶರ್ಮಾ ಅವರ ‘ಸಡಿಲ ನಾಲಿಗೆ’ಯನ್ನು ದೂರುವ ಮೂಲಕ ಕೆಟ್ಟ ವಿಚಾರಣೆ ನಡೆಸುತ್ತದೆ. ಸುಪ್ರೀಂ ಕೋರ್ಟ್ ಷರಿಯಾವನ್ನು ಅನುಸರಿಸುತ್ತದೆಯೇ?” ಎಂದು ಟ್ವೀಟ್ ಮಾಡುವ ಮೂಲಕ ಅವಮಾನ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅದೆ ಟ್ವಿಟರ್ ಹ್ಯಾಂಡಲ್ ನಿಂದ “ಆತ್ಮೀಯ ಮೈಲಾರ್ಡ್‌ಗಳೇ, ನೀವು ಇಸ್ಲಾಮಿಸ್ಟ್‌ಗಳನ್ನು ಸಹ ನಿಮ್ಮ ಸಡಿಲವಾದ ನಾಲಿಗೆಯಿಂದ ಪ್ರಚೋದಿಸಿದ್ದೀರಾ?” ಎಂದು ಬರೆದು ಲೇಖನದ ಲಿಂಕ್ ಒಂದನ್ನು ಪೋಸ್ಟ್ ಮಾಡಲಾಗಿದೆ. ಆ ಲೇಖನದಲ್ಲಿ “ನ್ಯಾಯಾಂಗವು ವಿಚಾರಣೆ ವೇಳೆ ತನ್ನ ಅಪರಿಮಿತ ಬುದ್ಧಿವಂತಿಕೆಯಲ್ಲಿ ಅವರು ಇಸ್ಲಾಮಿಕ್ ಧರ್ಮಗುರುಗಳಾಗಲು ಬಯಸುತ್ತಾರೆಯೇ ಅಥವಾ ನೈಸರ್ಗಿಕ ನ್ಯಾಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆಯೇ ಎಂದು ನಿರ್ಧರಿಸುವ ಅಗತ್ಯವಿದೆ” ಎಂದು ಬರೆಯಲಾಗಿದೆ ಎಂದು ಸಾಕೇತ್ ತಿಳಿಸಿದ್ದಾರೆ.

ಈ ರೀತಿಯಾಗಿ ಸುಪ್ರೀಂ ಕೋರ್ಟ್ ಅನ್ನು ಅವಮಾನಿಸಿದ್ದಕ್ಕಾಗಿ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಅವರು ಕೋರಿದ್ದಾರೆ.

ಇದನ್ನೂ ಓದಿ: ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ: ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು- ಸುಪ್ರೀಂ

ಕರ್ನಾಟಕದಲ್ಲಿಯೂ ಸಹ ನೂಪುರ್ ಶರ್ಮಾ ವಿರುದ್ಧದ ಸುಪ್ರೀಂ ಕೋರ್ಟ್‌ ಹೇಳಿಕೆಗಳನ್ನು ಖಂಡಿಸಿ ಬಿಜೆಪಿ ಬೆಂಬಲಿಗರಾದ ಚಕ್ರವರ್ತಿ ಸೂಲಿಬೆಲೆ, ಪ್ರಶಾಂತ್ ಸಂಬರ್ಗಿ ಸೇರಿದಂತೆ ಹಲವರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆ ದೇಶದ ಮಾನವನ್ನ ಪ್ರಪಂಚದ ರಾಷ್ಟ್ರಗಳ ಮುಂದೆ ಹರಾಜು ಹಾಕಿದ ಮತ್ತು ನ್ಯಾಯಾಂಗ ನಿಂದನೆ ಕೃತ್ಯ ಎಸಗಿರುವ ಈ ಹೆಂಗಸನ್ನ ಹಿಂದೆಯೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕಿತ್ತು ಆದರೆ ದುರದೃಷ್ಟವಶಾತ್ ಕೇಂದ್ರದಲ್ಲಿ ಇರುವ ಮತಿಯವಾದಿ, ಕೋಮುವಾದಿ ಸರ್ಕಾರವಿರುವುದರಿಂದ ಸಾಧ್ಯವಿಲ್ಲ.

  2. ಈ ಹೊಲಸು ಬಾಯಿನಾ ಪ್ರವಾದಿಯವರ ಬಗ್ಗೆ ಬೊಗಳಿದಾಗಲೇ ಮುಚ್ಚಿಸಿದ್ರೆ ಇವತ್ತು ಸುಪ್ರೀಂ ಕೋರ್ಟ್ ಗೆ ಅವಮಾನ ಮಾಡತಿರಲಿಲ್ಲ. ಇವಳ ಒಂದು ಮಾತು ಇಡೀ ದೇಶ ಹೊತ್ತಿ ಉರಿಯೋ ಹಾಗೆ ಮಾಡಿ ಪ್ರಪಂಚದ ಅತಿ ಚಿಕ್ಕ ಚಿಕ್ಕ ದೇಶಗಳ ಮುಂದೆ ನಮ್ಮ ದೇಶದ ಮರ್ಯಾದೆ ಹೋಯಿತು. ಇವಳನ್ನ ಅವತ್ತೇ ಪೊಲೀಸ್ ಕಸ್ಟಡಿಗೆ ಒಪ್ಸಿದ್ರೆ ಹೇಗಿರ್ತಿತ್ತು,, ಇವರಿಗೆಲ್ಲ ನಡು ರೋಡಲ್ಲಿ ಸಾರ್ವಜನಿಕವಾಗಿ ಗಲ್ಲಿಗೆ ಹಾಕಬೇಕು ಥೂ… ಇವಳು ಒಂದು ಭಾರತೀಯ ಹೆಣ್ಣೇ..?

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...