Homeಮುಖಪುಟಸುಪ್ರೀಂ ಕೋರ್ಟ್‌ಗೆ ಅವಮಾನ - OPIndia, ನೂಪುರ್ ಜೆ ಶರ್ಮಾ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

ಸುಪ್ರೀಂ ಕೋರ್ಟ್‌ಗೆ ಅವಮಾನ – OPIndia, ನೂಪುರ್ ಜೆ ಶರ್ಮಾ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

- Advertisement -
- Advertisement -

ಪ್ರವಾದಿ ಮೊಹಮ್ಮದ್‌ರವರನ್ನು ನಿಂದಿಸಿದ್ದ ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದ್ದ ಬೆನ್ನಲ್ಲೆ ಸುಪ್ರೀಂ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದಕ್ಕಾಗಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಟಿಎಂಸಿ ಮುಖಂಡ ಸಾಕೇತ್ ಗೋಖಲೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ನೂಪೂರ್ ಜೆ ಶರ್ಮಾ ಎನ್ನುವವರು ಬಿಜೆಪಿ-ಆರ್‌ಎಸ್‌ಎಸ್‌ ಬೆಂಬಲಿತ ಒಪಿಇಂಡಿಯಾ ಎನ್ನುವ ಪ್ರಪಗಂಡಾ ವೆಬ್‌ಸೈಟ್‌ನ ಸಂಪಾದಕಿಯಾಗಿದ್ದಾರೆ. ಅದಕ್ಕೆ ಬಿಜೆಪಿಯಿಂದ ಉಚ್ಛಾಟನೆಯಾಗಿರುವ ಮತ್ತೊಬ್ಬ ನೂಪುರ್ ಶರ್ಮಾ ಕೂಡ ಈ ಹಿಂದೆ ಬರೆಯುತ್ತಿದ್ದರು.

ಸುಪ್ರೀಂ ಕೋರ್ಟ್ ಅನ್ನು ತೀವ್ರವಾಗಿ ಅವಮಾನಿಸಿದ್ದಕ್ಕಾಗಿ ಬಿಜೆಪಿ ಮುಖವಾಣಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಕೋರಿ ಭಾರತದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರಿಗೆ ಪತ್ರ ಬರೆಯಲಾಗಿದೆ.

ತನ್ನ ಮೇಲೆ ದೇಶಾದ್ಯಂತ ದಾಖಲಾಗಿರುವ ಪ್ರಕರಣಗಳನ್ನು ಒಂದೇ ಎಫ್‌ಐಆರ್‌ಗೆ ವರ್ಗಾಹಿಸುವಂತೆ ಆರೋಪಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ “ದೇಶದಲ್ಲಿ ಉಂಟಾದ ಉದ್ವಿಗ್ನ ವಾತಾವರಣಕ್ಕೆ ನೂಪುರ್ ಶರ್ಮಾ ಒಬ್ಬರೆ ಕಾರಣವಾಗಿದ್ದಾರೆ, ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ, ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು” ಎಂದು ಸುಪ್ರೀಂ ಅಭಿಪ್ರಾಯಪಟ್ಟಿತು. ಅಲ್ಲದೆ ನೂಪುರ್ ಶರ್ಮಾ ವಿರುದ್ಧ ಕಿಡಿಕಾರಿತ್ತು.

ಇದಕ್ಕೆ ಪ್ರತಿಯಾಗಿ ಜುಲೈ 1 ರಂದು OPIndia ದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ “ಸುಪ್ರೀಂ ಕೋರ್ಟ್ ಇಸ್ಲಾಂ ಧರ್ಮೀಯರಂತೆ ಮಾತನಾಡುತ್ತದೆ, ಇಸ್ಲಾಮಿಕ್ ಮತಾಂಧರಿಂದ ಹಿಂದೂ ವ್ಯಕ್ತಿಯ ಶಿರಚ್ಛೇದಕ್ಕೆ ನೂಪುರ್ ಶರ್ಮಾ ಅವರ ‘ಸಡಿಲ ನಾಲಿಗೆ’ಯನ್ನು ದೂರುವ ಮೂಲಕ ಕೆಟ್ಟ ವಿಚಾರಣೆ ನಡೆಸುತ್ತದೆ. ಸುಪ್ರೀಂ ಕೋರ್ಟ್ ಷರಿಯಾವನ್ನು ಅನುಸರಿಸುತ್ತದೆಯೇ?” ಎಂದು ಟ್ವೀಟ್ ಮಾಡುವ ಮೂಲಕ ಅವಮಾನ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅದೆ ಟ್ವಿಟರ್ ಹ್ಯಾಂಡಲ್ ನಿಂದ “ಆತ್ಮೀಯ ಮೈಲಾರ್ಡ್‌ಗಳೇ, ನೀವು ಇಸ್ಲಾಮಿಸ್ಟ್‌ಗಳನ್ನು ಸಹ ನಿಮ್ಮ ಸಡಿಲವಾದ ನಾಲಿಗೆಯಿಂದ ಪ್ರಚೋದಿಸಿದ್ದೀರಾ?” ಎಂದು ಬರೆದು ಲೇಖನದ ಲಿಂಕ್ ಒಂದನ್ನು ಪೋಸ್ಟ್ ಮಾಡಲಾಗಿದೆ. ಆ ಲೇಖನದಲ್ಲಿ “ನ್ಯಾಯಾಂಗವು ವಿಚಾರಣೆ ವೇಳೆ ತನ್ನ ಅಪರಿಮಿತ ಬುದ್ಧಿವಂತಿಕೆಯಲ್ಲಿ ಅವರು ಇಸ್ಲಾಮಿಕ್ ಧರ್ಮಗುರುಗಳಾಗಲು ಬಯಸುತ್ತಾರೆಯೇ ಅಥವಾ ನೈಸರ್ಗಿಕ ನ್ಯಾಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆಯೇ ಎಂದು ನಿರ್ಧರಿಸುವ ಅಗತ್ಯವಿದೆ” ಎಂದು ಬರೆಯಲಾಗಿದೆ ಎಂದು ಸಾಕೇತ್ ತಿಳಿಸಿದ್ದಾರೆ.

ಈ ರೀತಿಯಾಗಿ ಸುಪ್ರೀಂ ಕೋರ್ಟ್ ಅನ್ನು ಅವಮಾನಿಸಿದ್ದಕ್ಕಾಗಿ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಅವರು ಕೋರಿದ್ದಾರೆ.

ಇದನ್ನೂ ಓದಿ: ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ: ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು- ಸುಪ್ರೀಂ

ಕರ್ನಾಟಕದಲ್ಲಿಯೂ ಸಹ ನೂಪುರ್ ಶರ್ಮಾ ವಿರುದ್ಧದ ಸುಪ್ರೀಂ ಕೋರ್ಟ್‌ ಹೇಳಿಕೆಗಳನ್ನು ಖಂಡಿಸಿ ಬಿಜೆಪಿ ಬೆಂಬಲಿಗರಾದ ಚಕ್ರವರ್ತಿ ಸೂಲಿಬೆಲೆ, ಪ್ರಶಾಂತ್ ಸಂಬರ್ಗಿ ಸೇರಿದಂತೆ ಹಲವರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆ ದೇಶದ ಮಾನವನ್ನ ಪ್ರಪಂಚದ ರಾಷ್ಟ್ರಗಳ ಮುಂದೆ ಹರಾಜು ಹಾಕಿದ ಮತ್ತು ನ್ಯಾಯಾಂಗ ನಿಂದನೆ ಕೃತ್ಯ ಎಸಗಿರುವ ಈ ಹೆಂಗಸನ್ನ ಹಿಂದೆಯೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕಿತ್ತು ಆದರೆ ದುರದೃಷ್ಟವಶಾತ್ ಕೇಂದ್ರದಲ್ಲಿ ಇರುವ ಮತಿಯವಾದಿ, ಕೋಮುವಾದಿ ಸರ್ಕಾರವಿರುವುದರಿಂದ ಸಾಧ್ಯವಿಲ್ಲ.

  2. ಈ ಹೊಲಸು ಬಾಯಿನಾ ಪ್ರವಾದಿಯವರ ಬಗ್ಗೆ ಬೊಗಳಿದಾಗಲೇ ಮುಚ್ಚಿಸಿದ್ರೆ ಇವತ್ತು ಸುಪ್ರೀಂ ಕೋರ್ಟ್ ಗೆ ಅವಮಾನ ಮಾಡತಿರಲಿಲ್ಲ. ಇವಳ ಒಂದು ಮಾತು ಇಡೀ ದೇಶ ಹೊತ್ತಿ ಉರಿಯೋ ಹಾಗೆ ಮಾಡಿ ಪ್ರಪಂಚದ ಅತಿ ಚಿಕ್ಕ ಚಿಕ್ಕ ದೇಶಗಳ ಮುಂದೆ ನಮ್ಮ ದೇಶದ ಮರ್ಯಾದೆ ಹೋಯಿತು. ಇವಳನ್ನ ಅವತ್ತೇ ಪೊಲೀಸ್ ಕಸ್ಟಡಿಗೆ ಒಪ್ಸಿದ್ರೆ ಹೇಗಿರ್ತಿತ್ತು,, ಇವರಿಗೆಲ್ಲ ನಡು ರೋಡಲ್ಲಿ ಸಾರ್ವಜನಿಕವಾಗಿ ಗಲ್ಲಿಗೆ ಹಾಕಬೇಕು ಥೂ… ಇವಳು ಒಂದು ಭಾರತೀಯ ಹೆಣ್ಣೇ..?

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...