Homeಮುಖಪುಟಸುಪ್ರೀಂ ಕೋರ್ಟ್‌ಗೆ ಅವಮಾನ - OPIndia, ನೂಪುರ್ ಜೆ ಶರ್ಮಾ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

ಸುಪ್ರೀಂ ಕೋರ್ಟ್‌ಗೆ ಅವಮಾನ – OPIndia, ನೂಪುರ್ ಜೆ ಶರ್ಮಾ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

- Advertisement -
- Advertisement -

ಪ್ರವಾದಿ ಮೊಹಮ್ಮದ್‌ರವರನ್ನು ನಿಂದಿಸಿದ್ದ ಬಿಜೆಪಿಯ ಉಚ್ಛಾಟಿತ ನಾಯಕಿ ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದ್ದ ಬೆನ್ನಲ್ಲೆ ಸುಪ್ರೀಂ ವಿರುದ್ಧ ನಾಲಿಗೆ ಹರಿಯಬಿಟ್ಟಿದ್ದಕ್ಕಾಗಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಟಿಎಂಸಿ ಮುಖಂಡ ಸಾಕೇತ್ ಗೋಖಲೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ನೂಪೂರ್ ಜೆ ಶರ್ಮಾ ಎನ್ನುವವರು ಬಿಜೆಪಿ-ಆರ್‌ಎಸ್‌ಎಸ್‌ ಬೆಂಬಲಿತ ಒಪಿಇಂಡಿಯಾ ಎನ್ನುವ ಪ್ರಪಗಂಡಾ ವೆಬ್‌ಸೈಟ್‌ನ ಸಂಪಾದಕಿಯಾಗಿದ್ದಾರೆ. ಅದಕ್ಕೆ ಬಿಜೆಪಿಯಿಂದ ಉಚ್ಛಾಟನೆಯಾಗಿರುವ ಮತ್ತೊಬ್ಬ ನೂಪುರ್ ಶರ್ಮಾ ಕೂಡ ಈ ಹಿಂದೆ ಬರೆಯುತ್ತಿದ್ದರು.

ಸುಪ್ರೀಂ ಕೋರ್ಟ್ ಅನ್ನು ತೀವ್ರವಾಗಿ ಅವಮಾನಿಸಿದ್ದಕ್ಕಾಗಿ ಬಿಜೆಪಿ ಮುಖವಾಣಿ OPIndia ಮತ್ತು ಅದರ ಸಂಪಾದಕಿ ನೂಪುರ್ ಜೆ ಶರ್ಮಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಕೋರಿ ಭಾರತದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್‌ರವರಿಗೆ ಪತ್ರ ಬರೆಯಲಾಗಿದೆ.

ತನ್ನ ಮೇಲೆ ದೇಶಾದ್ಯಂತ ದಾಖಲಾಗಿರುವ ಪ್ರಕರಣಗಳನ್ನು ಒಂದೇ ಎಫ್‌ಐಆರ್‌ಗೆ ವರ್ಗಾಹಿಸುವಂತೆ ಆರೋಪಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ “ದೇಶದಲ್ಲಿ ಉಂಟಾದ ಉದ್ವಿಗ್ನ ವಾತಾವರಣಕ್ಕೆ ನೂಪುರ್ ಶರ್ಮಾ ಒಬ್ಬರೆ ಕಾರಣವಾಗಿದ್ದಾರೆ, ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ, ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು” ಎಂದು ಸುಪ್ರೀಂ ಅಭಿಪ್ರಾಯಪಟ್ಟಿತು. ಅಲ್ಲದೆ ನೂಪುರ್ ಶರ್ಮಾ ವಿರುದ್ಧ ಕಿಡಿಕಾರಿತ್ತು.

ಇದಕ್ಕೆ ಪ್ರತಿಯಾಗಿ ಜುಲೈ 1 ರಂದು OPIndia ದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ “ಸುಪ್ರೀಂ ಕೋರ್ಟ್ ಇಸ್ಲಾಂ ಧರ್ಮೀಯರಂತೆ ಮಾತನಾಡುತ್ತದೆ, ಇಸ್ಲಾಮಿಕ್ ಮತಾಂಧರಿಂದ ಹಿಂದೂ ವ್ಯಕ್ತಿಯ ಶಿರಚ್ಛೇದಕ್ಕೆ ನೂಪುರ್ ಶರ್ಮಾ ಅವರ ‘ಸಡಿಲ ನಾಲಿಗೆ’ಯನ್ನು ದೂರುವ ಮೂಲಕ ಕೆಟ್ಟ ವಿಚಾರಣೆ ನಡೆಸುತ್ತದೆ. ಸುಪ್ರೀಂ ಕೋರ್ಟ್ ಷರಿಯಾವನ್ನು ಅನುಸರಿಸುತ್ತದೆಯೇ?” ಎಂದು ಟ್ವೀಟ್ ಮಾಡುವ ಮೂಲಕ ಅವಮಾನ ಮಾಡಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅದೆ ಟ್ವಿಟರ್ ಹ್ಯಾಂಡಲ್ ನಿಂದ “ಆತ್ಮೀಯ ಮೈಲಾರ್ಡ್‌ಗಳೇ, ನೀವು ಇಸ್ಲಾಮಿಸ್ಟ್‌ಗಳನ್ನು ಸಹ ನಿಮ್ಮ ಸಡಿಲವಾದ ನಾಲಿಗೆಯಿಂದ ಪ್ರಚೋದಿಸಿದ್ದೀರಾ?” ಎಂದು ಬರೆದು ಲೇಖನದ ಲಿಂಕ್ ಒಂದನ್ನು ಪೋಸ್ಟ್ ಮಾಡಲಾಗಿದೆ. ಆ ಲೇಖನದಲ್ಲಿ “ನ್ಯಾಯಾಂಗವು ವಿಚಾರಣೆ ವೇಳೆ ತನ್ನ ಅಪರಿಮಿತ ಬುದ್ಧಿವಂತಿಕೆಯಲ್ಲಿ ಅವರು ಇಸ್ಲಾಮಿಕ್ ಧರ್ಮಗುರುಗಳಾಗಲು ಬಯಸುತ್ತಾರೆಯೇ ಅಥವಾ ನೈಸರ್ಗಿಕ ನ್ಯಾಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆಯೇ ಎಂದು ನಿರ್ಧರಿಸುವ ಅಗತ್ಯವಿದೆ” ಎಂದು ಬರೆಯಲಾಗಿದೆ ಎಂದು ಸಾಕೇತ್ ತಿಳಿಸಿದ್ದಾರೆ.

ಈ ರೀತಿಯಾಗಿ ಸುಪ್ರೀಂ ಕೋರ್ಟ್ ಅನ್ನು ಅವಮಾನಿಸಿದ್ದಕ್ಕಾಗಿ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಅವರು ಕೋರಿದ್ದಾರೆ.

ಇದನ್ನೂ ಓದಿ: ಹಿಡಿತವಿಲ್ಲದ ನಾಲಿಗೆಯಿಂದ ರಾಷ್ಟ್ರಕ್ಕೆ ಬೆಂಕಿ ಹಚ್ಚಿದೆ: ನೂಪುರ್ ಶರ್ಮಾ ಇಡೀ ದೇಶದ ಎದುರು ಕ್ಷಮೆ ಕೇಳಬೇಕು- ಸುಪ್ರೀಂ

ಕರ್ನಾಟಕದಲ್ಲಿಯೂ ಸಹ ನೂಪುರ್ ಶರ್ಮಾ ವಿರುದ್ಧದ ಸುಪ್ರೀಂ ಕೋರ್ಟ್‌ ಹೇಳಿಕೆಗಳನ್ನು ಖಂಡಿಸಿ ಬಿಜೆಪಿ ಬೆಂಬಲಿಗರಾದ ಚಕ್ರವರ್ತಿ ಸೂಲಿಬೆಲೆ, ಪ್ರಶಾಂತ್ ಸಂಬರ್ಗಿ ಸೇರಿದಂತೆ ಹಲವರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆ ದೇಶದ ಮಾನವನ್ನ ಪ್ರಪಂಚದ ರಾಷ್ಟ್ರಗಳ ಮುಂದೆ ಹರಾಜು ಹಾಕಿದ ಮತ್ತು ನ್ಯಾಯಾಂಗ ನಿಂದನೆ ಕೃತ್ಯ ಎಸಗಿರುವ ಈ ಹೆಂಗಸನ್ನ ಹಿಂದೆಯೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕಿತ್ತು ಆದರೆ ದುರದೃಷ್ಟವಶಾತ್ ಕೇಂದ್ರದಲ್ಲಿ ಇರುವ ಮತಿಯವಾದಿ, ಕೋಮುವಾದಿ ಸರ್ಕಾರವಿರುವುದರಿಂದ ಸಾಧ್ಯವಿಲ್ಲ.

  2. ಈ ಹೊಲಸು ಬಾಯಿನಾ ಪ್ರವಾದಿಯವರ ಬಗ್ಗೆ ಬೊಗಳಿದಾಗಲೇ ಮುಚ್ಚಿಸಿದ್ರೆ ಇವತ್ತು ಸುಪ್ರೀಂ ಕೋರ್ಟ್ ಗೆ ಅವಮಾನ ಮಾಡತಿರಲಿಲ್ಲ. ಇವಳ ಒಂದು ಮಾತು ಇಡೀ ದೇಶ ಹೊತ್ತಿ ಉರಿಯೋ ಹಾಗೆ ಮಾಡಿ ಪ್ರಪಂಚದ ಅತಿ ಚಿಕ್ಕ ಚಿಕ್ಕ ದೇಶಗಳ ಮುಂದೆ ನಮ್ಮ ದೇಶದ ಮರ್ಯಾದೆ ಹೋಯಿತು. ಇವಳನ್ನ ಅವತ್ತೇ ಪೊಲೀಸ್ ಕಸ್ಟಡಿಗೆ ಒಪ್ಸಿದ್ರೆ ಹೇಗಿರ್ತಿತ್ತು,, ಇವರಿಗೆಲ್ಲ ನಡು ರೋಡಲ್ಲಿ ಸಾರ್ವಜನಿಕವಾಗಿ ಗಲ್ಲಿಗೆ ಹಾಕಬೇಕು ಥೂ… ಇವಳು ಒಂದು ಭಾರತೀಯ ಹೆಣ್ಣೇ..?

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...