Homeಚಳವಳಿನೂತನ ಪಠ್ಯ ಮರು ಪರಿಷ್ಕರಣೆಯಿಂದ ಸಂವಿಧಾನಕ್ಕೆ ಅಪಮಾನ: ಸಂಶೋಧನಾರ್ಥಿಗಳ ಆಕ್ಷೇಪ

ನೂತನ ಪಠ್ಯ ಮರು ಪರಿಷ್ಕರಣೆಯಿಂದ ಸಂವಿಧಾನಕ್ಕೆ ಅಪಮಾನ: ಸಂಶೋಧನಾರ್ಥಿಗಳ ಆಕ್ಷೇಪ

- Advertisement -
- Advertisement -

ಕರ್ನಾಟಕ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದಷ್ಟೇ ತರಾತುರಿಯಲ್ಲಿ ಶಾಲಾ ಪಠ್ಯಪುಸ್ತಕಗಳ ಮರುಪರಿಷ್ಕರಣೆಯನ್ನೂ ಮಾಡಿದೆ. ಆ ಮೂಲಕ ಭಾರತೀಯ ಸಂವಿಧಾನಕ್ಕೆ ನೇರ ಅಪಮಾನ ಮಾಡುತ್ತಿದೆ ಎಂದು ಸಂಶೋಧನಾರ್ಥಿಗಳ ಬಳಗ ಆಕ್ಷೇಪ ವ್ಯಕ್ತಪಡಿಸಿದೆ.

ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮಿತಿಯು ತಮ್ಮ ದಿಕ್ಸೂಚಿ ಬರೆಹದಲ್ಲಿ “ಭಾಷಾಪಠ್ಯವಿರುವುದು ಸಾಮಾಜಿಕ ನ್ಯಾಯ, ಲಿಂಗ ಸಮಾನತೆ ಇತ್ಯಾದಿ ಅಂಶಗಳನ್ನು ತುರುಕುವುದಕ್ಕಲ್ಲ” ಎಂದು ಹೇಳುವ ಮೂಲಕ ಸಂವಿಧಾನದ ಮೂಲಭೂತ ಆಶಯಗಳನ್ನೇ ವ್ಯಂಗ್ಯವಾಡಿದೆ ಎಂದು ದೂರಲಾಗಿದೆ.

ಯಾವುದೇ ಪಠ್ಯಪುಸ್ತಕದಲ್ಲಿ ಅಥವಾ ಯಾವುದೇ ಭಾರತೀಯರಲ್ಲಿ ಸಾಮಾಜಿಕ ನ್ಯಾಯ ಮತ್ತು ಲಿಂಗ ಸಮಾನತೆಯ ಆಶಯಗಳು ಒಂದು ಮೌಲ್ಯವಾಗಿ ಹುದುಗಿರಲೇಬೇಕು. ಅದು ಇದ್ದಲ್ಲಿ ಮಾತ್ರ ಆತ/ಆಕೆ ನಿಜವಾದ ಅರ್ಥದಲ್ಲಿ ಮನುಷ್ಯರಾಗುವುದಕ್ಕೆ ಸಾಧ್ಯ. ಭಾರತೀಯ ಸಂವಿಧಾನವೇ ಪ್ರತಿಪಾದಿಸಿರುವ ಈ ಪ್ರಧಾನ ಮೌಲ್ಯಗಳನ್ನು ಸದರಿ ಸಮಿತಿಯು ‘ತುರುಕುವುದು’ ಎಂದು ಹೇಳುವ ಮೂಲಕ ಅಪಮಾನ ಮಾಡುತ್ತಿದೆ ಎಂದು ಸಂಶೋಧನಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಠ್ಯಪುಸ್ತಕ ಪ್ರಕರಣದಿಂದ ವ್ಯಾಪಕ ಜನಾಕ್ರೋಶಕ್ಕೆ ಗುರಿಯಾಗಿರುವ ಕರ್ನಾಟಕ ಸರ್ಕಾರವು ಪಠ್ಯ ಪುನರ್ ಪರಿಷ್ಕರಣಾ ಸಮಿತಿಯನ್ನು ತಕ್ಷಣವೇ ವಿಸರ್ಜಿಸಬೇಕು ಮತ್ತು ಪಠ್ಯಪುಸ್ತಕ ರಚನೆ ಮತ್ತು ಪರಿಷ್ಕರಣೆಯ ಪ್ರಕ್ರಿಯೆಗಳನ್ನು ನಿಯಮಿತವಾಗಿ ನೋಡಿಕೊಳ್ಳುವ ಒಂದು ಸ್ವಾಯತ್ತ ಪ್ರಾಧಿಕಾರವನ್ನು ಸ್ಥಾಪಿಸಬೇಕು. ಈ ಪ್ರಾಧಿಕಾರದಲ್ಲಿ ಅಧ್ಯಕ್ಷ ಮತ್ತು ಸದಸ್ಯರಾಗಿ ಆಯ್ಕೆಯಾಗುವವರು ನಿರ್ದಿಷ್ಟ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವವರು ಆಗಿರಬೇಕು ಎಂದು ಹೇಳಿಕೆಯಲ್ಲಿ ಒತ್ತಾಯಿಸಲಾಗಿದೆ.

ಈ ಪ್ರಕ್ರಿಯೆ ನಡೆದು ಪೂರ್ಣವಾಗುವವರೆಗೆ ಬರಗೂರು ರಾಮಚಂದ್ರಪ್ಪ ಸಮಿತಿ ಮಾಡಿದ ಪಠ್ಯಕ್ರಮವನ್ನೇ ಊರ್ಜಿತದಲ್ಲಿರಿಸಿಕೊಳ್ಳಬೇಕು ಎಂದು ಸಂಶೋಧನಾರ್ಥಿಗಳ ಪರವಾಗಿ ರಂಗಸ್ವಾಮಿ ಹೆಚ್, ಪ್ರಭುಕುಮಾರ್ ಪಿ, ಗೋವಿಂದರಾಜು ಎಂ ಕಲ್ಲೂರು, ಶ್ರೀಧರ ಆರ್ ವಿ,
ಅಮರ್ ಬಿ, ಶಶಾಂಕ್ ಎಸ್ ಆರ್ ಮತ್ತಿತರರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪಠ್ಯ ತಿರುಚೀಕರಣ ವಿವಾದ: ‘ಅಂದು’ ಮತ್ತು ‘ಇಂದು’ ಏನಾಗಿದೆ ಎಂದು ನೋಡೋಣ ಬನ್ನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...