Homeಚಳವಳಿನೂತನ ಪಠ್ಯ ಮರು ಪರಿಷ್ಕರಣೆಯಿಂದ ಸಂವಿಧಾನಕ್ಕೆ ಅಪಮಾನ: ಸಂಶೋಧನಾರ್ಥಿಗಳ ಆಕ್ಷೇಪ

ನೂತನ ಪಠ್ಯ ಮರು ಪರಿಷ್ಕರಣೆಯಿಂದ ಸಂವಿಧಾನಕ್ಕೆ ಅಪಮಾನ: ಸಂಶೋಧನಾರ್ಥಿಗಳ ಆಕ್ಷೇಪ

- Advertisement -
- Advertisement -

ಕರ್ನಾಟಕ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದಷ್ಟೇ ತರಾತುರಿಯಲ್ಲಿ ಶಾಲಾ ಪಠ್ಯಪುಸ್ತಕಗಳ ಮರುಪರಿಷ್ಕರಣೆಯನ್ನೂ ಮಾಡಿದೆ. ಆ ಮೂಲಕ ಭಾರತೀಯ ಸಂವಿಧಾನಕ್ಕೆ ನೇರ ಅಪಮಾನ ಮಾಡುತ್ತಿದೆ ಎಂದು ಸಂಶೋಧನಾರ್ಥಿಗಳ ಬಳಗ ಆಕ್ಷೇಪ ವ್ಯಕ್ತಪಡಿಸಿದೆ.

ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮಿತಿಯು ತಮ್ಮ ದಿಕ್ಸೂಚಿ ಬರೆಹದಲ್ಲಿ “ಭಾಷಾಪಠ್ಯವಿರುವುದು ಸಾಮಾಜಿಕ ನ್ಯಾಯ, ಲಿಂಗ ಸಮಾನತೆ ಇತ್ಯಾದಿ ಅಂಶಗಳನ್ನು ತುರುಕುವುದಕ್ಕಲ್ಲ” ಎಂದು ಹೇಳುವ ಮೂಲಕ ಸಂವಿಧಾನದ ಮೂಲಭೂತ ಆಶಯಗಳನ್ನೇ ವ್ಯಂಗ್ಯವಾಡಿದೆ ಎಂದು ದೂರಲಾಗಿದೆ.

ಯಾವುದೇ ಪಠ್ಯಪುಸ್ತಕದಲ್ಲಿ ಅಥವಾ ಯಾವುದೇ ಭಾರತೀಯರಲ್ಲಿ ಸಾಮಾಜಿಕ ನ್ಯಾಯ ಮತ್ತು ಲಿಂಗ ಸಮಾನತೆಯ ಆಶಯಗಳು ಒಂದು ಮೌಲ್ಯವಾಗಿ ಹುದುಗಿರಲೇಬೇಕು. ಅದು ಇದ್ದಲ್ಲಿ ಮಾತ್ರ ಆತ/ಆಕೆ ನಿಜವಾದ ಅರ್ಥದಲ್ಲಿ ಮನುಷ್ಯರಾಗುವುದಕ್ಕೆ ಸಾಧ್ಯ. ಭಾರತೀಯ ಸಂವಿಧಾನವೇ ಪ್ರತಿಪಾದಿಸಿರುವ ಈ ಪ್ರಧಾನ ಮೌಲ್ಯಗಳನ್ನು ಸದರಿ ಸಮಿತಿಯು ‘ತುರುಕುವುದು’ ಎಂದು ಹೇಳುವ ಮೂಲಕ ಅಪಮಾನ ಮಾಡುತ್ತಿದೆ ಎಂದು ಸಂಶೋಧನಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಠ್ಯಪುಸ್ತಕ ಪ್ರಕರಣದಿಂದ ವ್ಯಾಪಕ ಜನಾಕ್ರೋಶಕ್ಕೆ ಗುರಿಯಾಗಿರುವ ಕರ್ನಾಟಕ ಸರ್ಕಾರವು ಪಠ್ಯ ಪುನರ್ ಪರಿಷ್ಕರಣಾ ಸಮಿತಿಯನ್ನು ತಕ್ಷಣವೇ ವಿಸರ್ಜಿಸಬೇಕು ಮತ್ತು ಪಠ್ಯಪುಸ್ತಕ ರಚನೆ ಮತ್ತು ಪರಿಷ್ಕರಣೆಯ ಪ್ರಕ್ರಿಯೆಗಳನ್ನು ನಿಯಮಿತವಾಗಿ ನೋಡಿಕೊಳ್ಳುವ ಒಂದು ಸ್ವಾಯತ್ತ ಪ್ರಾಧಿಕಾರವನ್ನು ಸ್ಥಾಪಿಸಬೇಕು. ಈ ಪ್ರಾಧಿಕಾರದಲ್ಲಿ ಅಧ್ಯಕ್ಷ ಮತ್ತು ಸದಸ್ಯರಾಗಿ ಆಯ್ಕೆಯಾಗುವವರು ನಿರ್ದಿಷ್ಟ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವವರು ಆಗಿರಬೇಕು ಎಂದು ಹೇಳಿಕೆಯಲ್ಲಿ ಒತ್ತಾಯಿಸಲಾಗಿದೆ.

ಈ ಪ್ರಕ್ರಿಯೆ ನಡೆದು ಪೂರ್ಣವಾಗುವವರೆಗೆ ಬರಗೂರು ರಾಮಚಂದ್ರಪ್ಪ ಸಮಿತಿ ಮಾಡಿದ ಪಠ್ಯಕ್ರಮವನ್ನೇ ಊರ್ಜಿತದಲ್ಲಿರಿಸಿಕೊಳ್ಳಬೇಕು ಎಂದು ಸಂಶೋಧನಾರ್ಥಿಗಳ ಪರವಾಗಿ ರಂಗಸ್ವಾಮಿ ಹೆಚ್, ಪ್ರಭುಕುಮಾರ್ ಪಿ, ಗೋವಿಂದರಾಜು ಎಂ ಕಲ್ಲೂರು, ಶ್ರೀಧರ ಆರ್ ವಿ,
ಅಮರ್ ಬಿ, ಶಶಾಂಕ್ ಎಸ್ ಆರ್ ಮತ್ತಿತರರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪಠ್ಯ ತಿರುಚೀಕರಣ ವಿವಾದ: ‘ಅಂದು’ ಮತ್ತು ‘ಇಂದು’ ಏನಾಗಿದೆ ಎಂದು ನೋಡೋಣ ಬನ್ನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...