Homeಚಳವಳಿನೂತನ ಪಠ್ಯ ಮರು ಪರಿಷ್ಕರಣೆಯಿಂದ ಸಂವಿಧಾನಕ್ಕೆ ಅಪಮಾನ: ಸಂಶೋಧನಾರ್ಥಿಗಳ ಆಕ್ಷೇಪ

ನೂತನ ಪಠ್ಯ ಮರು ಪರಿಷ್ಕರಣೆಯಿಂದ ಸಂವಿಧಾನಕ್ಕೆ ಅಪಮಾನ: ಸಂಶೋಧನಾರ್ಥಿಗಳ ಆಕ್ಷೇಪ

- Advertisement -
- Advertisement -

ಕರ್ನಾಟಕ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದಷ್ಟೇ ತರಾತುರಿಯಲ್ಲಿ ಶಾಲಾ ಪಠ್ಯಪುಸ್ತಕಗಳ ಮರುಪರಿಷ್ಕರಣೆಯನ್ನೂ ಮಾಡಿದೆ. ಆ ಮೂಲಕ ಭಾರತೀಯ ಸಂವಿಧಾನಕ್ಕೆ ನೇರ ಅಪಮಾನ ಮಾಡುತ್ತಿದೆ ಎಂದು ಸಂಶೋಧನಾರ್ಥಿಗಳ ಬಳಗ ಆಕ್ಷೇಪ ವ್ಯಕ್ತಪಡಿಸಿದೆ.

ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮಿತಿಯು ತಮ್ಮ ದಿಕ್ಸೂಚಿ ಬರೆಹದಲ್ಲಿ “ಭಾಷಾಪಠ್ಯವಿರುವುದು ಸಾಮಾಜಿಕ ನ್ಯಾಯ, ಲಿಂಗ ಸಮಾನತೆ ಇತ್ಯಾದಿ ಅಂಶಗಳನ್ನು ತುರುಕುವುದಕ್ಕಲ್ಲ” ಎಂದು ಹೇಳುವ ಮೂಲಕ ಸಂವಿಧಾನದ ಮೂಲಭೂತ ಆಶಯಗಳನ್ನೇ ವ್ಯಂಗ್ಯವಾಡಿದೆ ಎಂದು ದೂರಲಾಗಿದೆ.

ಯಾವುದೇ ಪಠ್ಯಪುಸ್ತಕದಲ್ಲಿ ಅಥವಾ ಯಾವುದೇ ಭಾರತೀಯರಲ್ಲಿ ಸಾಮಾಜಿಕ ನ್ಯಾಯ ಮತ್ತು ಲಿಂಗ ಸಮಾನತೆಯ ಆಶಯಗಳು ಒಂದು ಮೌಲ್ಯವಾಗಿ ಹುದುಗಿರಲೇಬೇಕು. ಅದು ಇದ್ದಲ್ಲಿ ಮಾತ್ರ ಆತ/ಆಕೆ ನಿಜವಾದ ಅರ್ಥದಲ್ಲಿ ಮನುಷ್ಯರಾಗುವುದಕ್ಕೆ ಸಾಧ್ಯ. ಭಾರತೀಯ ಸಂವಿಧಾನವೇ ಪ್ರತಿಪಾದಿಸಿರುವ ಈ ಪ್ರಧಾನ ಮೌಲ್ಯಗಳನ್ನು ಸದರಿ ಸಮಿತಿಯು ‘ತುರುಕುವುದು’ ಎಂದು ಹೇಳುವ ಮೂಲಕ ಅಪಮಾನ ಮಾಡುತ್ತಿದೆ ಎಂದು ಸಂಶೋಧನಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಠ್ಯಪುಸ್ತಕ ಪ್ರಕರಣದಿಂದ ವ್ಯಾಪಕ ಜನಾಕ್ರೋಶಕ್ಕೆ ಗುರಿಯಾಗಿರುವ ಕರ್ನಾಟಕ ಸರ್ಕಾರವು ಪಠ್ಯ ಪುನರ್ ಪರಿಷ್ಕರಣಾ ಸಮಿತಿಯನ್ನು ತಕ್ಷಣವೇ ವಿಸರ್ಜಿಸಬೇಕು ಮತ್ತು ಪಠ್ಯಪುಸ್ತಕ ರಚನೆ ಮತ್ತು ಪರಿಷ್ಕರಣೆಯ ಪ್ರಕ್ರಿಯೆಗಳನ್ನು ನಿಯಮಿತವಾಗಿ ನೋಡಿಕೊಳ್ಳುವ ಒಂದು ಸ್ವಾಯತ್ತ ಪ್ರಾಧಿಕಾರವನ್ನು ಸ್ಥಾಪಿಸಬೇಕು. ಈ ಪ್ರಾಧಿಕಾರದಲ್ಲಿ ಅಧ್ಯಕ್ಷ ಮತ್ತು ಸದಸ್ಯರಾಗಿ ಆಯ್ಕೆಯಾಗುವವರು ನಿರ್ದಿಷ್ಟ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವವರು ಆಗಿರಬೇಕು ಎಂದು ಹೇಳಿಕೆಯಲ್ಲಿ ಒತ್ತಾಯಿಸಲಾಗಿದೆ.

ಈ ಪ್ರಕ್ರಿಯೆ ನಡೆದು ಪೂರ್ಣವಾಗುವವರೆಗೆ ಬರಗೂರು ರಾಮಚಂದ್ರಪ್ಪ ಸಮಿತಿ ಮಾಡಿದ ಪಠ್ಯಕ್ರಮವನ್ನೇ ಊರ್ಜಿತದಲ್ಲಿರಿಸಿಕೊಳ್ಳಬೇಕು ಎಂದು ಸಂಶೋಧನಾರ್ಥಿಗಳ ಪರವಾಗಿ ರಂಗಸ್ವಾಮಿ ಹೆಚ್, ಪ್ರಭುಕುಮಾರ್ ಪಿ, ಗೋವಿಂದರಾಜು ಎಂ ಕಲ್ಲೂರು, ಶ್ರೀಧರ ಆರ್ ವಿ,
ಅಮರ್ ಬಿ, ಶಶಾಂಕ್ ಎಸ್ ಆರ್ ಮತ್ತಿತರರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪಠ್ಯ ತಿರುಚೀಕರಣ ವಿವಾದ: ‘ಅಂದು’ ಮತ್ತು ‘ಇಂದು’ ಏನಾಗಿದೆ ಎಂದು ನೋಡೋಣ ಬನ್ನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...