Homeಕರ್ನಾಟಕಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಅಕ್ಕೈ ಪದ್ಮಶಾಲಿಯವರ ಜೀವನಾಧಾರಿತ ‘ಅಕ್ಕಯ್‌’ ನಾಟಕ ಭಾನುವಾರ ಪ್ರದರ್ಶನ ಕಂಡಿತು. ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ನೋವುಗಳು ಎಳೆಎಳೆಯಾಗಿ ರಂಗದ ಮೇಲೆ ತೆರೆದುಕೊಂಡವು...

- Advertisement -
- Advertisement -

ಖಾಸಗಿ ಮನರಂಜನಾ ಮಾಧ್ಯಮವೊಂದರ ‘ಮಜಾಭಾರತ’ ಕಾಮಿಡಿ ಷೋನಲ್ಲಿ ಟ್ರಾನ್ಸ್‌ಜೆಂಡರ್‌ ಸಮುದಾಯವನ್ನು ಅಪಹಾಸ್ಯ ಮಾಡಲಾಗಿದೆ ಎಂದು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ನಾಯಕಿ ಸೌಮ್ಯಾ ಬೇಸರ ವ್ಯಕ್ತಪಡಿಸಿದರು.

ಕಾಜಾಣ ಮತ್ತು ರಂಗಪಯಣ ಸಹಯೋಗದಲ್ಲಿ ಭಾನುವಾರ ಬೆಂಗಳೂರಿನ ರವೀಂದ್ರ ಕಲಾಕೇತ್ರದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಹೋರಾಟಗಾರ್ತಿ ಅಕ್ಕಯ್‌ ಪದ್ಮಶಾಲಿಯವರ ಜೀವನ ಆಧಾರಿತ, ಬೇಲೂರು ರಘುನಂದನ್‌ ನಿರ್ದೇಶನದ ‘ಅಕ್ಕಯ್‌’ ಏಕವ್ಯಕ್ತಿ ನಾಟಕ ಪ್ರದರ್ಶನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳ ವೇಷಧರಿಸಿ ಅಭಿನಯಿಸುತ್ತಾರೆ. ಒಳ್ಳೆಯ ಟಿಆರ್‌ಪಿ ಬಂದಿರುವ ಷೋ ಅದು. ಆದರೆ ಪ್ರಾಮಾಣಿಕವಾಗಿ ನೋಡಿದರೆ ನಮ್ಮ ಸಮುದಾಯದ ಕುರಿತು ಎಷ್ಟು ತಾರತಮ್ಯ ಮಾಡುತ್ತಾರೆಂಬುದು ತಿಳಿಯುತ್ತದೆ; ನಮ್ಮ ಸಮುದಾಯವನ್ನು ಎಷ್ಟು ತಾತ್ಸಾರದಿಂದ ಕಾಣುತ್ತಾರೆ ಎಂಬುದು ಕಾಣುತ್ತದೆ” ಎಂದು ವಿವರಿಸಿದರು.

“ಟ್ರಾನ್ಸ್‌ಜೆಂಡರ್‌ ಸಮುದಾಯದ ಕುರಿತು ಅಭಿಮಾನ, ಗೌರವವಿಲ್ಲ. ಈ ಸಮುದಾಯವನ್ನು ಮೂಲೆಗುಂಪು ಮಾಡಿದ್ದೇವೆ; ಇಂತಹ ಸಮುದಾಯವನ್ನು ಸಮಾಜವನ್ನು ಮುಖ್ಯವಾಹಿನಿಗೆ ತರಬೇಕೆಂಬ ಭಾವನೆ ಯಾರಿಗೂ ಇಲ್ಲ. ಎಲ್ಲರಿಗೂ ಮಜಾ ತಗೆದುಕೊಳ್ಳಬೇಕು, ತಮಾಷೆ ಮಾಡಬೇಕು, ಗೇಲಿ ಮಾಡಬೇಕೆಂಬ ಮನಸ್ಥಿತಿ ಇದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಮಜಾ ಭಾರತ ತೀರ್ಪುಗಾರರು ಕೂಡ ತಲೆ ಬಗ್ಗಿಸಿಕೊಂಡು ನಗುತ್ತಾರೆ. ಅದೇ ರೀತಿಯಲ್ಲಿ ಇದನ್ನು ನೋಡುವ ಜನರೂ ನಗುತ್ತಾರೆ. ಎಷ್ಟು ಚೆನ್ನಾಗಿ ಅಭಿನಯಿಸುತ್ತಾನೆ ನೋಡು, ನೋಡಲಿಕ್ಕೆ ಥೇಟ್ ಹುಡುಗಿ ಥರನೇ ಇದ್ದಾನೆ ಎಂದು ಬಣ್ಣಿಸುತ್ತಾರೆ. ಅವನು ಎಲ್ಲಿಯಾದರೂ ಸಿಕ್ಕರೆ ಸೆಲ್ಫಿ ತೆಗೆದುಕೊಳ್ಳುತ್ತಾರೆ. ಒಳ್ಳೆಯ ಆಕ್ಟಿಂಗ್ ಮಾಡ್ತೀರಿ. ನಿಮ್ಮ ಅಭಿಮಾನಿ ನಾವು ಅಂತಾರೆ.  ಆದರೆ ತಮ್ಮ ಕುಟುಂಬದಲ್ಲಿನ ಒಂದು ಮಗು ಟ್ರಾನ್ಸ್‌ಜೆಂಡರ್‌ ಆಗಿದ್ದರೆ ಇವರು ಒಪ್ಪಿಕೊಳ್ಳುತ್ತಾರಾ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

“ಸಿನಿಮಾಗಳಲ್ಲೂ ನೋಡಿರುತ್ತೀರಿ. ನಮ್ಮ ಸಮುದಾಯವನ್ನು ಹಾಸ್ಯಕ್ಕಲ್ಲ, ಅಪಹಾಸ್ಯಕ್ಕೆ ಹೆಚ್ಚು ಬಳಸುತ್ತಾರೆ. ಒಂದು ಮೆಸೇಜ್‌‌ ಸಮಾಜಕ್ಕೆ ಕೊಡೋಣ ಎಂಬ ಕಾಳಜಿ ಯಾರಿಗೂ ಇಲ್ಲ. ಆದರೆ ನಿರ್ದೇಶಕ ಬೇಲೂರು ರಘುನಂದನ್‌ ಅವರು ಎಲ್ಲರ ರೀತಿಯಲ್ಲಿ ನಮ್ಮನ್ನು ನೋಡಿ ಒಂದು ಸ್ಮೈಲ್‌ ಮಾಡಿ ಯಾಕೆ ಸುಮ್ಮನಾಗಲಿಲ್ಲ? ಏಕೆ ಈ ಕಥೆಯನ್ನು ಆಯ್ಕೆ ಮಾಡಿಕೊಂಡು ನಾಟಕ ಮಾಡುತ್ತಿದ್ದೀರಿ ಎಂದು ಬೇಲೂರು ರಘುನಂದನ್‌ ಅವರನ್ನು ಎಷ್ಟೋ ಜನ ಕೇಳಿರುತ್ತಾರೆ” ಎಂದು ಅಭಿಪ್ರಾಯಪಟ್ಟರು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹೋರಾಟಗಾರ್ತಿ ಕೋಲ್ಕತ್ತದ ಅನಿಂದ್ಯಾ ಹಾಜ್ರ ಮಾತನಾಡಿ, “ಸಮಾಜದಲ್ಲಿನ ವ್ಯವಸ್ಥೆ ಬದಲಾಗುವವರೆಗೂ ಲೈಂಗಿಕ ಅಲ್ಪಸಂಖ್ಯಾತರು ಹೋರಾಟ ನಡೆಸಬೇಕು. ಹೋರಾಟದ ಮೂಲಕವೇ ಪ್ರತಿರೋಧ ತೋರಬೇಕು. ಲೈಂಗಿಕ ಅಲ್ಪಸಂಖ್ಯಾತರಿಗೆ ಅನುಕಂಪ ಬೇಕಾಗಿಲ್ಲ. ಘನತೆಯಿಂದ ಬದುಕುವ  ಅವಕಾಶ ಕಲ್ಪಿಸಬೇಕು. ಸಮಾಜದ ಮುಖ್ಯವಾಹಿನಿಗೆ ತರಬೇಕು” ಎಂದು ಹೇಳಿದರು.

“ಲೈಂಗಿಕ ಅಲ್ಪಸಂಖ್ಯಾತರ ಬದುಕು ಮತ್ತು ಸಾವಿಗೂ ಮಾನ್ಯತೆ ಇಲ್ಲದಂತಾಗಿದೆ. ಆದರೆ ಇದನ್ನು ಬದಲಾಯಿಸಲು ಶ್ರಮಿಸಬೇಕಿದೆ. ನಮ್ಮ ಅಸ್ತಿತ್ವ ಸ್ಥಾಪನೆಗೆ ರಾಜಕೀಯ ಕ್ಷೇತ್ರವೂ ಪ್ರಮುಖ ವೇದಿಕೆಯಾಗಿದೆ. ಲೈಂಗಿಕ ಅಲ್ಪಸಂಖ್ಯಾತರನ್ನು ಒಳಗೊಳ್ಳುವಂತೆ ಸಮಾಜದ ಮನಸ್ಥಿತಿ ಬದಲಿಸಬೇಕು” ಎಂದರು.

ನಾಟಕದ ನಿರ್ದೇಶಕ ಬೇಲೂರು ರಘುನಂದನ್ ಮಾತನಾಡಿ, “ಅಕ್ಕಯ್‌‌ ಅವರ ಜೀವನದ ಕುರಿತು ಓದಿದರೆ ನಾವು ಅತ್ತು ಬಿಡುತ್ತೇವೆ. ನಮ್ಮಲ್ಲಿ ಕಣ್ಣೀರು ಬರದಿದ್ದರೆ ನಾವು ಮನುಷ್ಯರಾಗಿರುವುದಿಲ್ಲ” ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತ ರವೀಂದ್ರ ಭಟ್ಟ ಅವರು ಮಾತನಾಡಿ, “ಕುರುಡುನೊಬ್ಬನ ಕಷ್ಟಕ್ಕೆ ನೆರವಾಗದಿದ್ದರೆ ಸಮಾಜ ಕುರುಡಾಗಿರುತ್ತದೆಯೇ ಹೊರತು, ಹುಟ್ಟಿನಿಂದ ಕುರುಡನಾದವನು ನಿಜವಾದ ಕುರುಡನಲ್ಲ. ಹಾಗೆಯೇ ಲೈಂಗಿಕ ಅಲ್ಪಸಂಖ್ಯಾತರನ್ನು ಒಳಗೊಳ್ಳದ ಸಮಾಜ ನಾಗರಿಕವಾಗಿರುವುದಿಲ್ಲ” ಎಂದು ತಿಳಿಸಿದರು.

ಹೋರಾಟಗಾರ್ತಿ ಅಕ್ಕಯ್‌‌ ಪದ್ಮಶಾಲಿ, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ) ಡಾ.ಡಿ.ಡೊಮಿನಿಕ್‌, ಬೇಲೂರು ತಹಸೀಲ್ದಾರ್‌ ಉಲಿವಾಲ ಮೋಹನ್‌ಕುಮಾರ್‌‌, ಅಕ್ಕಯ್‌ ಪದ್ಮಶಾಲಿ ಅವರ ಸಹೋದರ ಪ್ರದೀಪ್‌ ವೇದಿಕೆ ಕಾರ್ಯಕ್ರಮದಲ್ಲಿ ಹಾಜರಿದ್ದರು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಅಕ್ಕೈ ಕಥನಕ್ಕೆ ಕಂಬನಿ ಮಿಡಿದ ಪ್ರೇಕ್ಷಕರು; ಅಭಿನೇತ್ರಿಗೆ ಚಪ್ಪಾಳೆಯ ಮಹಾಪೂರ

ಅಕ್ಕಯ್‌ ಪದ್ಮಶಾಲಿಯವರ ಜೀವನ ಕಥನವನ್ನು ರಂಗದ ಮೇಲೆ ನೋಡಿ ಪ್ರೇಕ್ಷಕರು ಕಂಬನಿ ಮಿಡಿದರು. ಅಕ್ಕಯ್‌ ಅವರು ತಮ್ಮ ಜೀವನದುದ್ದಕ್ಕೂ ಕಂಡ ನೋವಿನ ಘಟನೆಗಳು ರಂಗದ ಮೇಲೆ ಎಳೆಎಳೆಯಾಗಿ ತೆರೆದುಕೊಂಡವು. ನಾಗರಿಕ ಸಮಾಜದೊಳಗಿನ ಕ್ರೌರ್ಯ ಮನಸ್ಸುಗಳನ್ನು ದುಃಖದ ಕಡಲಿಗೆ ದೂಡಿತು. ಅಕ್ಕೈ ಪಾತ್ರವಾಗಿ ಅಭಿನಯಿಸಿದ ನಯನ ಸೂಡ ಅವರ ಅಭಿನಯಕ್ಕೆ ಪ್ರೇಕ್ಷಕರು ಭರಪೂರ ಮೆಚ್ಚುಗೆ ಸೂಚಿಸಿದರು. ನಾಟಕ ಮುಗಿದ ಕೆಲವು ನಿಮಿಷಗಳ ಕಾಲ ಇಡೀ ಸಭಾಂಗಣ ಕರತಾಡನ ಮಾಡುತ್ತಲೇ ಇತ್ತು.

ಈ ನಾಟಕ ನಮ್ಮನ್ನು ಮತ್ತೊಂದು ಜಗತ್ತಿಗೆ ಕರೆದುಕೊಂಡು ಹೋಗಿ, ನಾವು ಮಾಡುತ್ತಿರುವ ಅಸಮಾನತೆ, ಅನ್ಯಾಯಗಳನ್ನೂ ಬೊಟ್ಟು ಮಾಡಿ ತೋರಿಸಿತು. ಇದು ಅಕ್ಕಯ್‌‌ ಒಬ್ಬರ ಜೀವನ ಕಥೆಯಲ್ಲ. ಆ ಸಮುದಾಯದ ಲಕ್ಷಾಂತರ ಜಗದೀಶರ ಕಥೆ (ಜಗದೀಶ ಎಂಬುದು ಅಕ್ಕಯ್‌ ಅವರ ಮೊದಲ ಹೆಸರು). ಸಿಗ್ನಲ್‌‌ಗಳಲ್ಲಿ, ರಸ್ತೆ ಬದಿಯಲ್ಲಿ, ಸಾರ್ವಜನಿಕ ಸಾರಿಗೆಗಳಲ್ಲಿ ಅವರನ್ನೂ ಕಂಡು ಕಣ್ಣು ತಪ್ಪಿಸಿ ಹೋಗುವುದನ್ನು ಬಿಟ್ಟು ಅವರು ನಮ್ಮವರೇ ಎಂಬುದು ಕೆಲವರಿಗೆ ಬಂದರೂ ಸಾಕು, ಅವರು ಭಿಕ್ಷೆ ಬೇಡಲು, ಲೈಂಗಿಕ ಕಾರ್ಯಕರ್ತೆಯರಾಗಲು ನಮ್ಮ ಪಾಲು ಇದೆ ಎಂಬ ಸತ್ಯ ಅರಿವಾಗಬೇಕು ಎಂಬ ಸಂದೇಶವನ್ನು ನಾಟಕ ದಾಟಿಸಿತು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಇದನ್ನೂ ಓದಿರಿ: ’ಕರುಣೆ ಬೇಡ, ಘನತೆಯಿಂದ ಬದುಕುವ ಹಕ್ಕು ಬೇಕು’: ರಂಗದ ಮೇಲೆ ಇಂದು ’ಅಕ್ಕಯ್’ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...