Homeಕರ್ನಾಟಕಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಅಕ್ಕೈ ಪದ್ಮಶಾಲಿಯವರ ಜೀವನಾಧಾರಿತ ‘ಅಕ್ಕಯ್‌’ ನಾಟಕ ಭಾನುವಾರ ಪ್ರದರ್ಶನ ಕಂಡಿತು. ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ನೋವುಗಳು ಎಳೆಎಳೆಯಾಗಿ ರಂಗದ ಮೇಲೆ ತೆರೆದುಕೊಂಡವು...

- Advertisement -
- Advertisement -

ಖಾಸಗಿ ಮನರಂಜನಾ ಮಾಧ್ಯಮವೊಂದರ ‘ಮಜಾಭಾರತ’ ಕಾಮಿಡಿ ಷೋನಲ್ಲಿ ಟ್ರಾನ್ಸ್‌ಜೆಂಡರ್‌ ಸಮುದಾಯವನ್ನು ಅಪಹಾಸ್ಯ ಮಾಡಲಾಗಿದೆ ಎಂದು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ನಾಯಕಿ ಸೌಮ್ಯಾ ಬೇಸರ ವ್ಯಕ್ತಪಡಿಸಿದರು.

ಕಾಜಾಣ ಮತ್ತು ರಂಗಪಯಣ ಸಹಯೋಗದಲ್ಲಿ ಭಾನುವಾರ ಬೆಂಗಳೂರಿನ ರವೀಂದ್ರ ಕಲಾಕೇತ್ರದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಹೋರಾಟಗಾರ್ತಿ ಅಕ್ಕಯ್‌ ಪದ್ಮಶಾಲಿಯವರ ಜೀವನ ಆಧಾರಿತ, ಬೇಲೂರು ರಘುನಂದನ್‌ ನಿರ್ದೇಶನದ ‘ಅಕ್ಕಯ್‌’ ಏಕವ್ಯಕ್ತಿ ನಾಟಕ ಪ್ರದರ್ಶನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳ ವೇಷಧರಿಸಿ ಅಭಿನಯಿಸುತ್ತಾರೆ. ಒಳ್ಳೆಯ ಟಿಆರ್‌ಪಿ ಬಂದಿರುವ ಷೋ ಅದು. ಆದರೆ ಪ್ರಾಮಾಣಿಕವಾಗಿ ನೋಡಿದರೆ ನಮ್ಮ ಸಮುದಾಯದ ಕುರಿತು ಎಷ್ಟು ತಾರತಮ್ಯ ಮಾಡುತ್ತಾರೆಂಬುದು ತಿಳಿಯುತ್ತದೆ; ನಮ್ಮ ಸಮುದಾಯವನ್ನು ಎಷ್ಟು ತಾತ್ಸಾರದಿಂದ ಕಾಣುತ್ತಾರೆ ಎಂಬುದು ಕಾಣುತ್ತದೆ” ಎಂದು ವಿವರಿಸಿದರು.

“ಟ್ರಾನ್ಸ್‌ಜೆಂಡರ್‌ ಸಮುದಾಯದ ಕುರಿತು ಅಭಿಮಾನ, ಗೌರವವಿಲ್ಲ. ಈ ಸಮುದಾಯವನ್ನು ಮೂಲೆಗುಂಪು ಮಾಡಿದ್ದೇವೆ; ಇಂತಹ ಸಮುದಾಯವನ್ನು ಸಮಾಜವನ್ನು ಮುಖ್ಯವಾಹಿನಿಗೆ ತರಬೇಕೆಂಬ ಭಾವನೆ ಯಾರಿಗೂ ಇಲ್ಲ. ಎಲ್ಲರಿಗೂ ಮಜಾ ತಗೆದುಕೊಳ್ಳಬೇಕು, ತಮಾಷೆ ಮಾಡಬೇಕು, ಗೇಲಿ ಮಾಡಬೇಕೆಂಬ ಮನಸ್ಥಿತಿ ಇದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಮಜಾ ಭಾರತ ತೀರ್ಪುಗಾರರು ಕೂಡ ತಲೆ ಬಗ್ಗಿಸಿಕೊಂಡು ನಗುತ್ತಾರೆ. ಅದೇ ರೀತಿಯಲ್ಲಿ ಇದನ್ನು ನೋಡುವ ಜನರೂ ನಗುತ್ತಾರೆ. ಎಷ್ಟು ಚೆನ್ನಾಗಿ ಅಭಿನಯಿಸುತ್ತಾನೆ ನೋಡು, ನೋಡಲಿಕ್ಕೆ ಥೇಟ್ ಹುಡುಗಿ ಥರನೇ ಇದ್ದಾನೆ ಎಂದು ಬಣ್ಣಿಸುತ್ತಾರೆ. ಅವನು ಎಲ್ಲಿಯಾದರೂ ಸಿಕ್ಕರೆ ಸೆಲ್ಫಿ ತೆಗೆದುಕೊಳ್ಳುತ್ತಾರೆ. ಒಳ್ಳೆಯ ಆಕ್ಟಿಂಗ್ ಮಾಡ್ತೀರಿ. ನಿಮ್ಮ ಅಭಿಮಾನಿ ನಾವು ಅಂತಾರೆ.  ಆದರೆ ತಮ್ಮ ಕುಟುಂಬದಲ್ಲಿನ ಒಂದು ಮಗು ಟ್ರಾನ್ಸ್‌ಜೆಂಡರ್‌ ಆಗಿದ್ದರೆ ಇವರು ಒಪ್ಪಿಕೊಳ್ಳುತ್ತಾರಾ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

“ಸಿನಿಮಾಗಳಲ್ಲೂ ನೋಡಿರುತ್ತೀರಿ. ನಮ್ಮ ಸಮುದಾಯವನ್ನು ಹಾಸ್ಯಕ್ಕಲ್ಲ, ಅಪಹಾಸ್ಯಕ್ಕೆ ಹೆಚ್ಚು ಬಳಸುತ್ತಾರೆ. ಒಂದು ಮೆಸೇಜ್‌‌ ಸಮಾಜಕ್ಕೆ ಕೊಡೋಣ ಎಂಬ ಕಾಳಜಿ ಯಾರಿಗೂ ಇಲ್ಲ. ಆದರೆ ನಿರ್ದೇಶಕ ಬೇಲೂರು ರಘುನಂದನ್‌ ಅವರು ಎಲ್ಲರ ರೀತಿಯಲ್ಲಿ ನಮ್ಮನ್ನು ನೋಡಿ ಒಂದು ಸ್ಮೈಲ್‌ ಮಾಡಿ ಯಾಕೆ ಸುಮ್ಮನಾಗಲಿಲ್ಲ? ಏಕೆ ಈ ಕಥೆಯನ್ನು ಆಯ್ಕೆ ಮಾಡಿಕೊಂಡು ನಾಟಕ ಮಾಡುತ್ತಿದ್ದೀರಿ ಎಂದು ಬೇಲೂರು ರಘುನಂದನ್‌ ಅವರನ್ನು ಎಷ್ಟೋ ಜನ ಕೇಳಿರುತ್ತಾರೆ” ಎಂದು ಅಭಿಪ್ರಾಯಪಟ್ಟರು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹೋರಾಟಗಾರ್ತಿ ಕೋಲ್ಕತ್ತದ ಅನಿಂದ್ಯಾ ಹಾಜ್ರ ಮಾತನಾಡಿ, “ಸಮಾಜದಲ್ಲಿನ ವ್ಯವಸ್ಥೆ ಬದಲಾಗುವವರೆಗೂ ಲೈಂಗಿಕ ಅಲ್ಪಸಂಖ್ಯಾತರು ಹೋರಾಟ ನಡೆಸಬೇಕು. ಹೋರಾಟದ ಮೂಲಕವೇ ಪ್ರತಿರೋಧ ತೋರಬೇಕು. ಲೈಂಗಿಕ ಅಲ್ಪಸಂಖ್ಯಾತರಿಗೆ ಅನುಕಂಪ ಬೇಕಾಗಿಲ್ಲ. ಘನತೆಯಿಂದ ಬದುಕುವ  ಅವಕಾಶ ಕಲ್ಪಿಸಬೇಕು. ಸಮಾಜದ ಮುಖ್ಯವಾಹಿನಿಗೆ ತರಬೇಕು” ಎಂದು ಹೇಳಿದರು.

“ಲೈಂಗಿಕ ಅಲ್ಪಸಂಖ್ಯಾತರ ಬದುಕು ಮತ್ತು ಸಾವಿಗೂ ಮಾನ್ಯತೆ ಇಲ್ಲದಂತಾಗಿದೆ. ಆದರೆ ಇದನ್ನು ಬದಲಾಯಿಸಲು ಶ್ರಮಿಸಬೇಕಿದೆ. ನಮ್ಮ ಅಸ್ತಿತ್ವ ಸ್ಥಾಪನೆಗೆ ರಾಜಕೀಯ ಕ್ಷೇತ್ರವೂ ಪ್ರಮುಖ ವೇದಿಕೆಯಾಗಿದೆ. ಲೈಂಗಿಕ ಅಲ್ಪಸಂಖ್ಯಾತರನ್ನು ಒಳಗೊಳ್ಳುವಂತೆ ಸಮಾಜದ ಮನಸ್ಥಿತಿ ಬದಲಿಸಬೇಕು” ಎಂದರು.

ನಾಟಕದ ನಿರ್ದೇಶಕ ಬೇಲೂರು ರಘುನಂದನ್ ಮಾತನಾಡಿ, “ಅಕ್ಕಯ್‌‌ ಅವರ ಜೀವನದ ಕುರಿತು ಓದಿದರೆ ನಾವು ಅತ್ತು ಬಿಡುತ್ತೇವೆ. ನಮ್ಮಲ್ಲಿ ಕಣ್ಣೀರು ಬರದಿದ್ದರೆ ನಾವು ಮನುಷ್ಯರಾಗಿರುವುದಿಲ್ಲ” ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತ ರವೀಂದ್ರ ಭಟ್ಟ ಅವರು ಮಾತನಾಡಿ, “ಕುರುಡುನೊಬ್ಬನ ಕಷ್ಟಕ್ಕೆ ನೆರವಾಗದಿದ್ದರೆ ಸಮಾಜ ಕುರುಡಾಗಿರುತ್ತದೆಯೇ ಹೊರತು, ಹುಟ್ಟಿನಿಂದ ಕುರುಡನಾದವನು ನಿಜವಾದ ಕುರುಡನಲ್ಲ. ಹಾಗೆಯೇ ಲೈಂಗಿಕ ಅಲ್ಪಸಂಖ್ಯಾತರನ್ನು ಒಳಗೊಳ್ಳದ ಸಮಾಜ ನಾಗರಿಕವಾಗಿರುವುದಿಲ್ಲ” ಎಂದು ತಿಳಿಸಿದರು.

ಹೋರಾಟಗಾರ್ತಿ ಅಕ್ಕಯ್‌‌ ಪದ್ಮಶಾಲಿ, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ) ಡಾ.ಡಿ.ಡೊಮಿನಿಕ್‌, ಬೇಲೂರು ತಹಸೀಲ್ದಾರ್‌ ಉಲಿವಾಲ ಮೋಹನ್‌ಕುಮಾರ್‌‌, ಅಕ್ಕಯ್‌ ಪದ್ಮಶಾಲಿ ಅವರ ಸಹೋದರ ಪ್ರದೀಪ್‌ ವೇದಿಕೆ ಕಾರ್ಯಕ್ರಮದಲ್ಲಿ ಹಾಜರಿದ್ದರು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಅಕ್ಕೈ ಕಥನಕ್ಕೆ ಕಂಬನಿ ಮಿಡಿದ ಪ್ರೇಕ್ಷಕರು; ಅಭಿನೇತ್ರಿಗೆ ಚಪ್ಪಾಳೆಯ ಮಹಾಪೂರ

ಅಕ್ಕಯ್‌ ಪದ್ಮಶಾಲಿಯವರ ಜೀವನ ಕಥನವನ್ನು ರಂಗದ ಮೇಲೆ ನೋಡಿ ಪ್ರೇಕ್ಷಕರು ಕಂಬನಿ ಮಿಡಿದರು. ಅಕ್ಕಯ್‌ ಅವರು ತಮ್ಮ ಜೀವನದುದ್ದಕ್ಕೂ ಕಂಡ ನೋವಿನ ಘಟನೆಗಳು ರಂಗದ ಮೇಲೆ ಎಳೆಎಳೆಯಾಗಿ ತೆರೆದುಕೊಂಡವು. ನಾಗರಿಕ ಸಮಾಜದೊಳಗಿನ ಕ್ರೌರ್ಯ ಮನಸ್ಸುಗಳನ್ನು ದುಃಖದ ಕಡಲಿಗೆ ದೂಡಿತು. ಅಕ್ಕೈ ಪಾತ್ರವಾಗಿ ಅಭಿನಯಿಸಿದ ನಯನ ಸೂಡ ಅವರ ಅಭಿನಯಕ್ಕೆ ಪ್ರೇಕ್ಷಕರು ಭರಪೂರ ಮೆಚ್ಚುಗೆ ಸೂಚಿಸಿದರು. ನಾಟಕ ಮುಗಿದ ಕೆಲವು ನಿಮಿಷಗಳ ಕಾಲ ಇಡೀ ಸಭಾಂಗಣ ಕರತಾಡನ ಮಾಡುತ್ತಲೇ ಇತ್ತು.

ಈ ನಾಟಕ ನಮ್ಮನ್ನು ಮತ್ತೊಂದು ಜಗತ್ತಿಗೆ ಕರೆದುಕೊಂಡು ಹೋಗಿ, ನಾವು ಮಾಡುತ್ತಿರುವ ಅಸಮಾನತೆ, ಅನ್ಯಾಯಗಳನ್ನೂ ಬೊಟ್ಟು ಮಾಡಿ ತೋರಿಸಿತು. ಇದು ಅಕ್ಕಯ್‌‌ ಒಬ್ಬರ ಜೀವನ ಕಥೆಯಲ್ಲ. ಆ ಸಮುದಾಯದ ಲಕ್ಷಾಂತರ ಜಗದೀಶರ ಕಥೆ (ಜಗದೀಶ ಎಂಬುದು ಅಕ್ಕಯ್‌ ಅವರ ಮೊದಲ ಹೆಸರು). ಸಿಗ್ನಲ್‌‌ಗಳಲ್ಲಿ, ರಸ್ತೆ ಬದಿಯಲ್ಲಿ, ಸಾರ್ವಜನಿಕ ಸಾರಿಗೆಗಳಲ್ಲಿ ಅವರನ್ನೂ ಕಂಡು ಕಣ್ಣು ತಪ್ಪಿಸಿ ಹೋಗುವುದನ್ನು ಬಿಟ್ಟು ಅವರು ನಮ್ಮವರೇ ಎಂಬುದು ಕೆಲವರಿಗೆ ಬಂದರೂ ಸಾಕು, ಅವರು ಭಿಕ್ಷೆ ಬೇಡಲು, ಲೈಂಗಿಕ ಕಾರ್ಯಕರ್ತೆಯರಾಗಲು ನಮ್ಮ ಪಾಲು ಇದೆ ಎಂಬ ಸತ್ಯ ಅರಿವಾಗಬೇಕು ಎಂಬ ಸಂದೇಶವನ್ನು ನಾಟಕ ದಾಟಿಸಿತು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಇದನ್ನೂ ಓದಿರಿ: ’ಕರುಣೆ ಬೇಡ, ಘನತೆಯಿಂದ ಬದುಕುವ ಹಕ್ಕು ಬೇಕು’: ರಂಗದ ಮೇಲೆ ಇಂದು ’ಅಕ್ಕಯ್’ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...