Homeಕರ್ನಾಟಕಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಅಕ್ಕೈ ಪದ್ಮಶಾಲಿಯವರ ಜೀವನಾಧಾರಿತ ‘ಅಕ್ಕಯ್‌’ ನಾಟಕ ಭಾನುವಾರ ಪ್ರದರ್ಶನ ಕಂಡಿತು. ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ನೋವುಗಳು ಎಳೆಎಳೆಯಾಗಿ ರಂಗದ ಮೇಲೆ ತೆರೆದುಕೊಂಡವು...

- Advertisement -
- Advertisement -

ಖಾಸಗಿ ಮನರಂಜನಾ ಮಾಧ್ಯಮವೊಂದರ ‘ಮಜಾಭಾರತ’ ಕಾಮಿಡಿ ಷೋನಲ್ಲಿ ಟ್ರಾನ್ಸ್‌ಜೆಂಡರ್‌ ಸಮುದಾಯವನ್ನು ಅಪಹಾಸ್ಯ ಮಾಡಲಾಗಿದೆ ಎಂದು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ನಾಯಕಿ ಸೌಮ್ಯಾ ಬೇಸರ ವ್ಯಕ್ತಪಡಿಸಿದರು.

ಕಾಜಾಣ ಮತ್ತು ರಂಗಪಯಣ ಸಹಯೋಗದಲ್ಲಿ ಭಾನುವಾರ ಬೆಂಗಳೂರಿನ ರವೀಂದ್ರ ಕಲಾಕೇತ್ರದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಹೋರಾಟಗಾರ್ತಿ ಅಕ್ಕಯ್‌ ಪದ್ಮಶಾಲಿಯವರ ಜೀವನ ಆಧಾರಿತ, ಬೇಲೂರು ರಘುನಂದನ್‌ ನಿರ್ದೇಶನದ ‘ಅಕ್ಕಯ್‌’ ಏಕವ್ಯಕ್ತಿ ನಾಟಕ ಪ್ರದರ್ಶನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳ ವೇಷಧರಿಸಿ ಅಭಿನಯಿಸುತ್ತಾರೆ. ಒಳ್ಳೆಯ ಟಿಆರ್‌ಪಿ ಬಂದಿರುವ ಷೋ ಅದು. ಆದರೆ ಪ್ರಾಮಾಣಿಕವಾಗಿ ನೋಡಿದರೆ ನಮ್ಮ ಸಮುದಾಯದ ಕುರಿತು ಎಷ್ಟು ತಾರತಮ್ಯ ಮಾಡುತ್ತಾರೆಂಬುದು ತಿಳಿಯುತ್ತದೆ; ನಮ್ಮ ಸಮುದಾಯವನ್ನು ಎಷ್ಟು ತಾತ್ಸಾರದಿಂದ ಕಾಣುತ್ತಾರೆ ಎಂಬುದು ಕಾಣುತ್ತದೆ” ಎಂದು ವಿವರಿಸಿದರು.

“ಟ್ರಾನ್ಸ್‌ಜೆಂಡರ್‌ ಸಮುದಾಯದ ಕುರಿತು ಅಭಿಮಾನ, ಗೌರವವಿಲ್ಲ. ಈ ಸಮುದಾಯವನ್ನು ಮೂಲೆಗುಂಪು ಮಾಡಿದ್ದೇವೆ; ಇಂತಹ ಸಮುದಾಯವನ್ನು ಸಮಾಜವನ್ನು ಮುಖ್ಯವಾಹಿನಿಗೆ ತರಬೇಕೆಂಬ ಭಾವನೆ ಯಾರಿಗೂ ಇಲ್ಲ. ಎಲ್ಲರಿಗೂ ಮಜಾ ತಗೆದುಕೊಳ್ಳಬೇಕು, ತಮಾಷೆ ಮಾಡಬೇಕು, ಗೇಲಿ ಮಾಡಬೇಕೆಂಬ ಮನಸ್ಥಿತಿ ಇದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಮಜಾ ಭಾರತ ತೀರ್ಪುಗಾರರು ಕೂಡ ತಲೆ ಬಗ್ಗಿಸಿಕೊಂಡು ನಗುತ್ತಾರೆ. ಅದೇ ರೀತಿಯಲ್ಲಿ ಇದನ್ನು ನೋಡುವ ಜನರೂ ನಗುತ್ತಾರೆ. ಎಷ್ಟು ಚೆನ್ನಾಗಿ ಅಭಿನಯಿಸುತ್ತಾನೆ ನೋಡು, ನೋಡಲಿಕ್ಕೆ ಥೇಟ್ ಹುಡುಗಿ ಥರನೇ ಇದ್ದಾನೆ ಎಂದು ಬಣ್ಣಿಸುತ್ತಾರೆ. ಅವನು ಎಲ್ಲಿಯಾದರೂ ಸಿಕ್ಕರೆ ಸೆಲ್ಫಿ ತೆಗೆದುಕೊಳ್ಳುತ್ತಾರೆ. ಒಳ್ಳೆಯ ಆಕ್ಟಿಂಗ್ ಮಾಡ್ತೀರಿ. ನಿಮ್ಮ ಅಭಿಮಾನಿ ನಾವು ಅಂತಾರೆ.  ಆದರೆ ತಮ್ಮ ಕುಟುಂಬದಲ್ಲಿನ ಒಂದು ಮಗು ಟ್ರಾನ್ಸ್‌ಜೆಂಡರ್‌ ಆಗಿದ್ದರೆ ಇವರು ಒಪ್ಪಿಕೊಳ್ಳುತ್ತಾರಾ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

“ಸಿನಿಮಾಗಳಲ್ಲೂ ನೋಡಿರುತ್ತೀರಿ. ನಮ್ಮ ಸಮುದಾಯವನ್ನು ಹಾಸ್ಯಕ್ಕಲ್ಲ, ಅಪಹಾಸ್ಯಕ್ಕೆ ಹೆಚ್ಚು ಬಳಸುತ್ತಾರೆ. ಒಂದು ಮೆಸೇಜ್‌‌ ಸಮಾಜಕ್ಕೆ ಕೊಡೋಣ ಎಂಬ ಕಾಳಜಿ ಯಾರಿಗೂ ಇಲ್ಲ. ಆದರೆ ನಿರ್ದೇಶಕ ಬೇಲೂರು ರಘುನಂದನ್‌ ಅವರು ಎಲ್ಲರ ರೀತಿಯಲ್ಲಿ ನಮ್ಮನ್ನು ನೋಡಿ ಒಂದು ಸ್ಮೈಲ್‌ ಮಾಡಿ ಯಾಕೆ ಸುಮ್ಮನಾಗಲಿಲ್ಲ? ಏಕೆ ಈ ಕಥೆಯನ್ನು ಆಯ್ಕೆ ಮಾಡಿಕೊಂಡು ನಾಟಕ ಮಾಡುತ್ತಿದ್ದೀರಿ ಎಂದು ಬೇಲೂರು ರಘುನಂದನ್‌ ಅವರನ್ನು ಎಷ್ಟೋ ಜನ ಕೇಳಿರುತ್ತಾರೆ” ಎಂದು ಅಭಿಪ್ರಾಯಪಟ್ಟರು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹೋರಾಟಗಾರ್ತಿ ಕೋಲ್ಕತ್ತದ ಅನಿಂದ್ಯಾ ಹಾಜ್ರ ಮಾತನಾಡಿ, “ಸಮಾಜದಲ್ಲಿನ ವ್ಯವಸ್ಥೆ ಬದಲಾಗುವವರೆಗೂ ಲೈಂಗಿಕ ಅಲ್ಪಸಂಖ್ಯಾತರು ಹೋರಾಟ ನಡೆಸಬೇಕು. ಹೋರಾಟದ ಮೂಲಕವೇ ಪ್ರತಿರೋಧ ತೋರಬೇಕು. ಲೈಂಗಿಕ ಅಲ್ಪಸಂಖ್ಯಾತರಿಗೆ ಅನುಕಂಪ ಬೇಕಾಗಿಲ್ಲ. ಘನತೆಯಿಂದ ಬದುಕುವ  ಅವಕಾಶ ಕಲ್ಪಿಸಬೇಕು. ಸಮಾಜದ ಮುಖ್ಯವಾಹಿನಿಗೆ ತರಬೇಕು” ಎಂದು ಹೇಳಿದರು.

“ಲೈಂಗಿಕ ಅಲ್ಪಸಂಖ್ಯಾತರ ಬದುಕು ಮತ್ತು ಸಾವಿಗೂ ಮಾನ್ಯತೆ ಇಲ್ಲದಂತಾಗಿದೆ. ಆದರೆ ಇದನ್ನು ಬದಲಾಯಿಸಲು ಶ್ರಮಿಸಬೇಕಿದೆ. ನಮ್ಮ ಅಸ್ತಿತ್ವ ಸ್ಥಾಪನೆಗೆ ರಾಜಕೀಯ ಕ್ಷೇತ್ರವೂ ಪ್ರಮುಖ ವೇದಿಕೆಯಾಗಿದೆ. ಲೈಂಗಿಕ ಅಲ್ಪಸಂಖ್ಯಾತರನ್ನು ಒಳಗೊಳ್ಳುವಂತೆ ಸಮಾಜದ ಮನಸ್ಥಿತಿ ಬದಲಿಸಬೇಕು” ಎಂದರು.

ನಾಟಕದ ನಿರ್ದೇಶಕ ಬೇಲೂರು ರಘುನಂದನ್ ಮಾತನಾಡಿ, “ಅಕ್ಕಯ್‌‌ ಅವರ ಜೀವನದ ಕುರಿತು ಓದಿದರೆ ನಾವು ಅತ್ತು ಬಿಡುತ್ತೇವೆ. ನಮ್ಮಲ್ಲಿ ಕಣ್ಣೀರು ಬರದಿದ್ದರೆ ನಾವು ಮನುಷ್ಯರಾಗಿರುವುದಿಲ್ಲ” ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತ ರವೀಂದ್ರ ಭಟ್ಟ ಅವರು ಮಾತನಾಡಿ, “ಕುರುಡುನೊಬ್ಬನ ಕಷ್ಟಕ್ಕೆ ನೆರವಾಗದಿದ್ದರೆ ಸಮಾಜ ಕುರುಡಾಗಿರುತ್ತದೆಯೇ ಹೊರತು, ಹುಟ್ಟಿನಿಂದ ಕುರುಡನಾದವನು ನಿಜವಾದ ಕುರುಡನಲ್ಲ. ಹಾಗೆಯೇ ಲೈಂಗಿಕ ಅಲ್ಪಸಂಖ್ಯಾತರನ್ನು ಒಳಗೊಳ್ಳದ ಸಮಾಜ ನಾಗರಿಕವಾಗಿರುವುದಿಲ್ಲ” ಎಂದು ತಿಳಿಸಿದರು.

ಹೋರಾಟಗಾರ್ತಿ ಅಕ್ಕಯ್‌‌ ಪದ್ಮಶಾಲಿ, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ) ಡಾ.ಡಿ.ಡೊಮಿನಿಕ್‌, ಬೇಲೂರು ತಹಸೀಲ್ದಾರ್‌ ಉಲಿವಾಲ ಮೋಹನ್‌ಕುಮಾರ್‌‌, ಅಕ್ಕಯ್‌ ಪದ್ಮಶಾಲಿ ಅವರ ಸಹೋದರ ಪ್ರದೀಪ್‌ ವೇದಿಕೆ ಕಾರ್ಯಕ್ರಮದಲ್ಲಿ ಹಾಜರಿದ್ದರು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಅಕ್ಕೈ ಕಥನಕ್ಕೆ ಕಂಬನಿ ಮಿಡಿದ ಪ್ರೇಕ್ಷಕರು; ಅಭಿನೇತ್ರಿಗೆ ಚಪ್ಪಾಳೆಯ ಮಹಾಪೂರ

ಅಕ್ಕಯ್‌ ಪದ್ಮಶಾಲಿಯವರ ಜೀವನ ಕಥನವನ್ನು ರಂಗದ ಮೇಲೆ ನೋಡಿ ಪ್ರೇಕ್ಷಕರು ಕಂಬನಿ ಮಿಡಿದರು. ಅಕ್ಕಯ್‌ ಅವರು ತಮ್ಮ ಜೀವನದುದ್ದಕ್ಕೂ ಕಂಡ ನೋವಿನ ಘಟನೆಗಳು ರಂಗದ ಮೇಲೆ ಎಳೆಎಳೆಯಾಗಿ ತೆರೆದುಕೊಂಡವು. ನಾಗರಿಕ ಸಮಾಜದೊಳಗಿನ ಕ್ರೌರ್ಯ ಮನಸ್ಸುಗಳನ್ನು ದುಃಖದ ಕಡಲಿಗೆ ದೂಡಿತು. ಅಕ್ಕೈ ಪಾತ್ರವಾಗಿ ಅಭಿನಯಿಸಿದ ನಯನ ಸೂಡ ಅವರ ಅಭಿನಯಕ್ಕೆ ಪ್ರೇಕ್ಷಕರು ಭರಪೂರ ಮೆಚ್ಚುಗೆ ಸೂಚಿಸಿದರು. ನಾಟಕ ಮುಗಿದ ಕೆಲವು ನಿಮಿಷಗಳ ಕಾಲ ಇಡೀ ಸಭಾಂಗಣ ಕರತಾಡನ ಮಾಡುತ್ತಲೇ ಇತ್ತು.

ಈ ನಾಟಕ ನಮ್ಮನ್ನು ಮತ್ತೊಂದು ಜಗತ್ತಿಗೆ ಕರೆದುಕೊಂಡು ಹೋಗಿ, ನಾವು ಮಾಡುತ್ತಿರುವ ಅಸಮಾನತೆ, ಅನ್ಯಾಯಗಳನ್ನೂ ಬೊಟ್ಟು ಮಾಡಿ ತೋರಿಸಿತು. ಇದು ಅಕ್ಕಯ್‌‌ ಒಬ್ಬರ ಜೀವನ ಕಥೆಯಲ್ಲ. ಆ ಸಮುದಾಯದ ಲಕ್ಷಾಂತರ ಜಗದೀಶರ ಕಥೆ (ಜಗದೀಶ ಎಂಬುದು ಅಕ್ಕಯ್‌ ಅವರ ಮೊದಲ ಹೆಸರು). ಸಿಗ್ನಲ್‌‌ಗಳಲ್ಲಿ, ರಸ್ತೆ ಬದಿಯಲ್ಲಿ, ಸಾರ್ವಜನಿಕ ಸಾರಿಗೆಗಳಲ್ಲಿ ಅವರನ್ನೂ ಕಂಡು ಕಣ್ಣು ತಪ್ಪಿಸಿ ಹೋಗುವುದನ್ನು ಬಿಟ್ಟು ಅವರು ನಮ್ಮವರೇ ಎಂಬುದು ಕೆಲವರಿಗೆ ಬಂದರೂ ಸಾಕು, ಅವರು ಭಿಕ್ಷೆ ಬೇಡಲು, ಲೈಂಗಿಕ ಕಾರ್ಯಕರ್ತೆಯರಾಗಲು ನಮ್ಮ ಪಾಲು ಇದೆ ಎಂಬ ಸತ್ಯ ಅರಿವಾಗಬೇಕು ಎಂಬ ಸಂದೇಶವನ್ನು ನಾಟಕ ದಾಟಿಸಿತು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಇದನ್ನೂ ಓದಿರಿ: ’ಕರುಣೆ ಬೇಡ, ಘನತೆಯಿಂದ ಬದುಕುವ ಹಕ್ಕು ಬೇಕು’: ರಂಗದ ಮೇಲೆ ಇಂದು ’ಅಕ್ಕಯ್’ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...