Homeಕರ್ನಾಟಕಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಅಕ್ಕೈ ಪದ್ಮಶಾಲಿಯವರ ಜೀವನಾಧಾರಿತ ‘ಅಕ್ಕಯ್‌’ ನಾಟಕ ಭಾನುವಾರ ಪ್ರದರ್ಶನ ಕಂಡಿತು. ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ನೋವುಗಳು ಎಳೆಎಳೆಯಾಗಿ ರಂಗದ ಮೇಲೆ ತೆರೆದುಕೊಂಡವು...

- Advertisement -
- Advertisement -

ಖಾಸಗಿ ಮನರಂಜನಾ ಮಾಧ್ಯಮವೊಂದರ ‘ಮಜಾಭಾರತ’ ಕಾಮಿಡಿ ಷೋನಲ್ಲಿ ಟ್ರಾನ್ಸ್‌ಜೆಂಡರ್‌ ಸಮುದಾಯವನ್ನು ಅಪಹಾಸ್ಯ ಮಾಡಲಾಗಿದೆ ಎಂದು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ನಾಯಕಿ ಸೌಮ್ಯಾ ಬೇಸರ ವ್ಯಕ್ತಪಡಿಸಿದರು.

ಕಾಜಾಣ ಮತ್ತು ರಂಗಪಯಣ ಸಹಯೋಗದಲ್ಲಿ ಭಾನುವಾರ ಬೆಂಗಳೂರಿನ ರವೀಂದ್ರ ಕಲಾಕೇತ್ರದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಹೋರಾಟಗಾರ್ತಿ ಅಕ್ಕಯ್‌ ಪದ್ಮಶಾಲಿಯವರ ಜೀವನ ಆಧಾರಿತ, ಬೇಲೂರು ರಘುನಂದನ್‌ ನಿರ್ದೇಶನದ ‘ಅಕ್ಕಯ್‌’ ಏಕವ್ಯಕ್ತಿ ನಾಟಕ ಪ್ರದರ್ಶನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳ ವೇಷಧರಿಸಿ ಅಭಿನಯಿಸುತ್ತಾರೆ. ಒಳ್ಳೆಯ ಟಿಆರ್‌ಪಿ ಬಂದಿರುವ ಷೋ ಅದು. ಆದರೆ ಪ್ರಾಮಾಣಿಕವಾಗಿ ನೋಡಿದರೆ ನಮ್ಮ ಸಮುದಾಯದ ಕುರಿತು ಎಷ್ಟು ತಾರತಮ್ಯ ಮಾಡುತ್ತಾರೆಂಬುದು ತಿಳಿಯುತ್ತದೆ; ನಮ್ಮ ಸಮುದಾಯವನ್ನು ಎಷ್ಟು ತಾತ್ಸಾರದಿಂದ ಕಾಣುತ್ತಾರೆ ಎಂಬುದು ಕಾಣುತ್ತದೆ” ಎಂದು ವಿವರಿಸಿದರು.

“ಟ್ರಾನ್ಸ್‌ಜೆಂಡರ್‌ ಸಮುದಾಯದ ಕುರಿತು ಅಭಿಮಾನ, ಗೌರವವಿಲ್ಲ. ಈ ಸಮುದಾಯವನ್ನು ಮೂಲೆಗುಂಪು ಮಾಡಿದ್ದೇವೆ; ಇಂತಹ ಸಮುದಾಯವನ್ನು ಸಮಾಜವನ್ನು ಮುಖ್ಯವಾಹಿನಿಗೆ ತರಬೇಕೆಂಬ ಭಾವನೆ ಯಾರಿಗೂ ಇಲ್ಲ. ಎಲ್ಲರಿಗೂ ಮಜಾ ತಗೆದುಕೊಳ್ಳಬೇಕು, ತಮಾಷೆ ಮಾಡಬೇಕು, ಗೇಲಿ ಮಾಡಬೇಕೆಂಬ ಮನಸ್ಥಿತಿ ಇದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಮಜಾ ಭಾರತ ತೀರ್ಪುಗಾರರು ಕೂಡ ತಲೆ ಬಗ್ಗಿಸಿಕೊಂಡು ನಗುತ್ತಾರೆ. ಅದೇ ರೀತಿಯಲ್ಲಿ ಇದನ್ನು ನೋಡುವ ಜನರೂ ನಗುತ್ತಾರೆ. ಎಷ್ಟು ಚೆನ್ನಾಗಿ ಅಭಿನಯಿಸುತ್ತಾನೆ ನೋಡು, ನೋಡಲಿಕ್ಕೆ ಥೇಟ್ ಹುಡುಗಿ ಥರನೇ ಇದ್ದಾನೆ ಎಂದು ಬಣ್ಣಿಸುತ್ತಾರೆ. ಅವನು ಎಲ್ಲಿಯಾದರೂ ಸಿಕ್ಕರೆ ಸೆಲ್ಫಿ ತೆಗೆದುಕೊಳ್ಳುತ್ತಾರೆ. ಒಳ್ಳೆಯ ಆಕ್ಟಿಂಗ್ ಮಾಡ್ತೀರಿ. ನಿಮ್ಮ ಅಭಿಮಾನಿ ನಾವು ಅಂತಾರೆ.  ಆದರೆ ತಮ್ಮ ಕುಟುಂಬದಲ್ಲಿನ ಒಂದು ಮಗು ಟ್ರಾನ್ಸ್‌ಜೆಂಡರ್‌ ಆಗಿದ್ದರೆ ಇವರು ಒಪ್ಪಿಕೊಳ್ಳುತ್ತಾರಾ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

“ಸಿನಿಮಾಗಳಲ್ಲೂ ನೋಡಿರುತ್ತೀರಿ. ನಮ್ಮ ಸಮುದಾಯವನ್ನು ಹಾಸ್ಯಕ್ಕಲ್ಲ, ಅಪಹಾಸ್ಯಕ್ಕೆ ಹೆಚ್ಚು ಬಳಸುತ್ತಾರೆ. ಒಂದು ಮೆಸೇಜ್‌‌ ಸಮಾಜಕ್ಕೆ ಕೊಡೋಣ ಎಂಬ ಕಾಳಜಿ ಯಾರಿಗೂ ಇಲ್ಲ. ಆದರೆ ನಿರ್ದೇಶಕ ಬೇಲೂರು ರಘುನಂದನ್‌ ಅವರು ಎಲ್ಲರ ರೀತಿಯಲ್ಲಿ ನಮ್ಮನ್ನು ನೋಡಿ ಒಂದು ಸ್ಮೈಲ್‌ ಮಾಡಿ ಯಾಕೆ ಸುಮ್ಮನಾಗಲಿಲ್ಲ? ಏಕೆ ಈ ಕಥೆಯನ್ನು ಆಯ್ಕೆ ಮಾಡಿಕೊಂಡು ನಾಟಕ ಮಾಡುತ್ತಿದ್ದೀರಿ ಎಂದು ಬೇಲೂರು ರಘುನಂದನ್‌ ಅವರನ್ನು ಎಷ್ಟೋ ಜನ ಕೇಳಿರುತ್ತಾರೆ” ಎಂದು ಅಭಿಪ್ರಾಯಪಟ್ಟರು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹೋರಾಟಗಾರ್ತಿ ಕೋಲ್ಕತ್ತದ ಅನಿಂದ್ಯಾ ಹಾಜ್ರ ಮಾತನಾಡಿ, “ಸಮಾಜದಲ್ಲಿನ ವ್ಯವಸ್ಥೆ ಬದಲಾಗುವವರೆಗೂ ಲೈಂಗಿಕ ಅಲ್ಪಸಂಖ್ಯಾತರು ಹೋರಾಟ ನಡೆಸಬೇಕು. ಹೋರಾಟದ ಮೂಲಕವೇ ಪ್ರತಿರೋಧ ತೋರಬೇಕು. ಲೈಂಗಿಕ ಅಲ್ಪಸಂಖ್ಯಾತರಿಗೆ ಅನುಕಂಪ ಬೇಕಾಗಿಲ್ಲ. ಘನತೆಯಿಂದ ಬದುಕುವ  ಅವಕಾಶ ಕಲ್ಪಿಸಬೇಕು. ಸಮಾಜದ ಮುಖ್ಯವಾಹಿನಿಗೆ ತರಬೇಕು” ಎಂದು ಹೇಳಿದರು.

“ಲೈಂಗಿಕ ಅಲ್ಪಸಂಖ್ಯಾತರ ಬದುಕು ಮತ್ತು ಸಾವಿಗೂ ಮಾನ್ಯತೆ ಇಲ್ಲದಂತಾಗಿದೆ. ಆದರೆ ಇದನ್ನು ಬದಲಾಯಿಸಲು ಶ್ರಮಿಸಬೇಕಿದೆ. ನಮ್ಮ ಅಸ್ತಿತ್ವ ಸ್ಥಾಪನೆಗೆ ರಾಜಕೀಯ ಕ್ಷೇತ್ರವೂ ಪ್ರಮುಖ ವೇದಿಕೆಯಾಗಿದೆ. ಲೈಂಗಿಕ ಅಲ್ಪಸಂಖ್ಯಾತರನ್ನು ಒಳಗೊಳ್ಳುವಂತೆ ಸಮಾಜದ ಮನಸ್ಥಿತಿ ಬದಲಿಸಬೇಕು” ಎಂದರು.

ನಾಟಕದ ನಿರ್ದೇಶಕ ಬೇಲೂರು ರಘುನಂದನ್ ಮಾತನಾಡಿ, “ಅಕ್ಕಯ್‌‌ ಅವರ ಜೀವನದ ಕುರಿತು ಓದಿದರೆ ನಾವು ಅತ್ತು ಬಿಡುತ್ತೇವೆ. ನಮ್ಮಲ್ಲಿ ಕಣ್ಣೀರು ಬರದಿದ್ದರೆ ನಾವು ಮನುಷ್ಯರಾಗಿರುವುದಿಲ್ಲ” ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತ ರವೀಂದ್ರ ಭಟ್ಟ ಅವರು ಮಾತನಾಡಿ, “ಕುರುಡುನೊಬ್ಬನ ಕಷ್ಟಕ್ಕೆ ನೆರವಾಗದಿದ್ದರೆ ಸಮಾಜ ಕುರುಡಾಗಿರುತ್ತದೆಯೇ ಹೊರತು, ಹುಟ್ಟಿನಿಂದ ಕುರುಡನಾದವನು ನಿಜವಾದ ಕುರುಡನಲ್ಲ. ಹಾಗೆಯೇ ಲೈಂಗಿಕ ಅಲ್ಪಸಂಖ್ಯಾತರನ್ನು ಒಳಗೊಳ್ಳದ ಸಮಾಜ ನಾಗರಿಕವಾಗಿರುವುದಿಲ್ಲ” ಎಂದು ತಿಳಿಸಿದರು.

ಹೋರಾಟಗಾರ್ತಿ ಅಕ್ಕಯ್‌‌ ಪದ್ಮಶಾಲಿ, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ) ಡಾ.ಡಿ.ಡೊಮಿನಿಕ್‌, ಬೇಲೂರು ತಹಸೀಲ್ದಾರ್‌ ಉಲಿವಾಲ ಮೋಹನ್‌ಕುಮಾರ್‌‌, ಅಕ್ಕಯ್‌ ಪದ್ಮಶಾಲಿ ಅವರ ಸಹೋದರ ಪ್ರದೀಪ್‌ ವೇದಿಕೆ ಕಾರ್ಯಕ್ರಮದಲ್ಲಿ ಹಾಜರಿದ್ದರು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಅಕ್ಕೈ ಕಥನಕ್ಕೆ ಕಂಬನಿ ಮಿಡಿದ ಪ್ರೇಕ್ಷಕರು; ಅಭಿನೇತ್ರಿಗೆ ಚಪ್ಪಾಳೆಯ ಮಹಾಪೂರ

ಅಕ್ಕಯ್‌ ಪದ್ಮಶಾಲಿಯವರ ಜೀವನ ಕಥನವನ್ನು ರಂಗದ ಮೇಲೆ ನೋಡಿ ಪ್ರೇಕ್ಷಕರು ಕಂಬನಿ ಮಿಡಿದರು. ಅಕ್ಕಯ್‌ ಅವರು ತಮ್ಮ ಜೀವನದುದ್ದಕ್ಕೂ ಕಂಡ ನೋವಿನ ಘಟನೆಗಳು ರಂಗದ ಮೇಲೆ ಎಳೆಎಳೆಯಾಗಿ ತೆರೆದುಕೊಂಡವು. ನಾಗರಿಕ ಸಮಾಜದೊಳಗಿನ ಕ್ರೌರ್ಯ ಮನಸ್ಸುಗಳನ್ನು ದುಃಖದ ಕಡಲಿಗೆ ದೂಡಿತು. ಅಕ್ಕೈ ಪಾತ್ರವಾಗಿ ಅಭಿನಯಿಸಿದ ನಯನ ಸೂಡ ಅವರ ಅಭಿನಯಕ್ಕೆ ಪ್ರೇಕ್ಷಕರು ಭರಪೂರ ಮೆಚ್ಚುಗೆ ಸೂಚಿಸಿದರು. ನಾಟಕ ಮುಗಿದ ಕೆಲವು ನಿಮಿಷಗಳ ಕಾಲ ಇಡೀ ಸಭಾಂಗಣ ಕರತಾಡನ ಮಾಡುತ್ತಲೇ ಇತ್ತು.

ಈ ನಾಟಕ ನಮ್ಮನ್ನು ಮತ್ತೊಂದು ಜಗತ್ತಿಗೆ ಕರೆದುಕೊಂಡು ಹೋಗಿ, ನಾವು ಮಾಡುತ್ತಿರುವ ಅಸಮಾನತೆ, ಅನ್ಯಾಯಗಳನ್ನೂ ಬೊಟ್ಟು ಮಾಡಿ ತೋರಿಸಿತು. ಇದು ಅಕ್ಕಯ್‌‌ ಒಬ್ಬರ ಜೀವನ ಕಥೆಯಲ್ಲ. ಆ ಸಮುದಾಯದ ಲಕ್ಷಾಂತರ ಜಗದೀಶರ ಕಥೆ (ಜಗದೀಶ ಎಂಬುದು ಅಕ್ಕಯ್‌ ಅವರ ಮೊದಲ ಹೆಸರು). ಸಿಗ್ನಲ್‌‌ಗಳಲ್ಲಿ, ರಸ್ತೆ ಬದಿಯಲ್ಲಿ, ಸಾರ್ವಜನಿಕ ಸಾರಿಗೆಗಳಲ್ಲಿ ಅವರನ್ನೂ ಕಂಡು ಕಣ್ಣು ತಪ್ಪಿಸಿ ಹೋಗುವುದನ್ನು ಬಿಟ್ಟು ಅವರು ನಮ್ಮವರೇ ಎಂಬುದು ಕೆಲವರಿಗೆ ಬಂದರೂ ಸಾಕು, ಅವರು ಭಿಕ್ಷೆ ಬೇಡಲು, ಲೈಂಗಿಕ ಕಾರ್ಯಕರ್ತೆಯರಾಗಲು ನಮ್ಮ ಪಾಲು ಇದೆ ಎಂಬ ಸತ್ಯ ಅರಿವಾಗಬೇಕು ಎಂಬ ಸಂದೇಶವನ್ನು ನಾಟಕ ದಾಟಿಸಿತು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಇದನ್ನೂ ಓದಿರಿ: ’ಕರುಣೆ ಬೇಡ, ಘನತೆಯಿಂದ ಬದುಕುವ ಹಕ್ಕು ಬೇಕು’: ರಂಗದ ಮೇಲೆ ಇಂದು ’ಅಕ್ಕಯ್’ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...