Homeಕರ್ನಾಟಕಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳಿಗೆ ಅಪಹಾಸ್ಯ: ಹೋರಾಟಗಾರ್ತಿ ಆಕ್ಷೇಪ

ಅಕ್ಕೈ ಪದ್ಮಶಾಲಿಯವರ ಜೀವನಾಧಾರಿತ ‘ಅಕ್ಕಯ್‌’ ನಾಟಕ ಭಾನುವಾರ ಪ್ರದರ್ಶನ ಕಂಡಿತು. ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ನೋವುಗಳು ಎಳೆಎಳೆಯಾಗಿ ರಂಗದ ಮೇಲೆ ತೆರೆದುಕೊಂಡವು...

- Advertisement -
- Advertisement -

ಖಾಸಗಿ ಮನರಂಜನಾ ಮಾಧ್ಯಮವೊಂದರ ‘ಮಜಾಭಾರತ’ ಕಾಮಿಡಿ ಷೋನಲ್ಲಿ ಟ್ರಾನ್ಸ್‌ಜೆಂಡರ್‌ ಸಮುದಾಯವನ್ನು ಅಪಹಾಸ್ಯ ಮಾಡಲಾಗಿದೆ ಎಂದು ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ನಾಯಕಿ ಸೌಮ್ಯಾ ಬೇಸರ ವ್ಯಕ್ತಪಡಿಸಿದರು.

ಕಾಜಾಣ ಮತ್ತು ರಂಗಪಯಣ ಸಹಯೋಗದಲ್ಲಿ ಭಾನುವಾರ ಬೆಂಗಳೂರಿನ ರವೀಂದ್ರ ಕಲಾಕೇತ್ರದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಹೋರಾಟಗಾರ್ತಿ ಅಕ್ಕಯ್‌ ಪದ್ಮಶಾಲಿಯವರ ಜೀವನ ಆಧಾರಿತ, ಬೇಲೂರು ರಘುನಂದನ್‌ ನಿರ್ದೇಶನದ ‘ಅಕ್ಕಯ್‌’ ಏಕವ್ಯಕ್ತಿ ನಾಟಕ ಪ್ರದರ್ಶನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಮಜಾಭಾರತ ಷೋನಲ್ಲಿ ಟ್ರಾನ್ಸ್‌ಜೆಂಡರ್‌ಗಳ ವೇಷಧರಿಸಿ ಅಭಿನಯಿಸುತ್ತಾರೆ. ಒಳ್ಳೆಯ ಟಿಆರ್‌ಪಿ ಬಂದಿರುವ ಷೋ ಅದು. ಆದರೆ ಪ್ರಾಮಾಣಿಕವಾಗಿ ನೋಡಿದರೆ ನಮ್ಮ ಸಮುದಾಯದ ಕುರಿತು ಎಷ್ಟು ತಾರತಮ್ಯ ಮಾಡುತ್ತಾರೆಂಬುದು ತಿಳಿಯುತ್ತದೆ; ನಮ್ಮ ಸಮುದಾಯವನ್ನು ಎಷ್ಟು ತಾತ್ಸಾರದಿಂದ ಕಾಣುತ್ತಾರೆ ಎಂಬುದು ಕಾಣುತ್ತದೆ” ಎಂದು ವಿವರಿಸಿದರು.

“ಟ್ರಾನ್ಸ್‌ಜೆಂಡರ್‌ ಸಮುದಾಯದ ಕುರಿತು ಅಭಿಮಾನ, ಗೌರವವಿಲ್ಲ. ಈ ಸಮುದಾಯವನ್ನು ಮೂಲೆಗುಂಪು ಮಾಡಿದ್ದೇವೆ; ಇಂತಹ ಸಮುದಾಯವನ್ನು ಸಮಾಜವನ್ನು ಮುಖ್ಯವಾಹಿನಿಗೆ ತರಬೇಕೆಂಬ ಭಾವನೆ ಯಾರಿಗೂ ಇಲ್ಲ. ಎಲ್ಲರಿಗೂ ಮಜಾ ತಗೆದುಕೊಳ್ಳಬೇಕು, ತಮಾಷೆ ಮಾಡಬೇಕು, ಗೇಲಿ ಮಾಡಬೇಕೆಂಬ ಮನಸ್ಥಿತಿ ಇದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಮಜಾ ಭಾರತ ತೀರ್ಪುಗಾರರು ಕೂಡ ತಲೆ ಬಗ್ಗಿಸಿಕೊಂಡು ನಗುತ್ತಾರೆ. ಅದೇ ರೀತಿಯಲ್ಲಿ ಇದನ್ನು ನೋಡುವ ಜನರೂ ನಗುತ್ತಾರೆ. ಎಷ್ಟು ಚೆನ್ನಾಗಿ ಅಭಿನಯಿಸುತ್ತಾನೆ ನೋಡು, ನೋಡಲಿಕ್ಕೆ ಥೇಟ್ ಹುಡುಗಿ ಥರನೇ ಇದ್ದಾನೆ ಎಂದು ಬಣ್ಣಿಸುತ್ತಾರೆ. ಅವನು ಎಲ್ಲಿಯಾದರೂ ಸಿಕ್ಕರೆ ಸೆಲ್ಫಿ ತೆಗೆದುಕೊಳ್ಳುತ್ತಾರೆ. ಒಳ್ಳೆಯ ಆಕ್ಟಿಂಗ್ ಮಾಡ್ತೀರಿ. ನಿಮ್ಮ ಅಭಿಮಾನಿ ನಾವು ಅಂತಾರೆ.  ಆದರೆ ತಮ್ಮ ಕುಟುಂಬದಲ್ಲಿನ ಒಂದು ಮಗು ಟ್ರಾನ್ಸ್‌ಜೆಂಡರ್‌ ಆಗಿದ್ದರೆ ಇವರು ಒಪ್ಪಿಕೊಳ್ಳುತ್ತಾರಾ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

“ಸಿನಿಮಾಗಳಲ್ಲೂ ನೋಡಿರುತ್ತೀರಿ. ನಮ್ಮ ಸಮುದಾಯವನ್ನು ಹಾಸ್ಯಕ್ಕಲ್ಲ, ಅಪಹಾಸ್ಯಕ್ಕೆ ಹೆಚ್ಚು ಬಳಸುತ್ತಾರೆ. ಒಂದು ಮೆಸೇಜ್‌‌ ಸಮಾಜಕ್ಕೆ ಕೊಡೋಣ ಎಂಬ ಕಾಳಜಿ ಯಾರಿಗೂ ಇಲ್ಲ. ಆದರೆ ನಿರ್ದೇಶಕ ಬೇಲೂರು ರಘುನಂದನ್‌ ಅವರು ಎಲ್ಲರ ರೀತಿಯಲ್ಲಿ ನಮ್ಮನ್ನು ನೋಡಿ ಒಂದು ಸ್ಮೈಲ್‌ ಮಾಡಿ ಯಾಕೆ ಸುಮ್ಮನಾಗಲಿಲ್ಲ? ಏಕೆ ಈ ಕಥೆಯನ್ನು ಆಯ್ಕೆ ಮಾಡಿಕೊಂಡು ನಾಟಕ ಮಾಡುತ್ತಿದ್ದೀರಿ ಎಂದು ಬೇಲೂರು ರಘುನಂದನ್‌ ಅವರನ್ನು ಎಷ್ಟೋ ಜನ ಕೇಳಿರುತ್ತಾರೆ” ಎಂದು ಅಭಿಪ್ರಾಯಪಟ್ಟರು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಹೋರಾಟಗಾರ್ತಿ ಕೋಲ್ಕತ್ತದ ಅನಿಂದ್ಯಾ ಹಾಜ್ರ ಮಾತನಾಡಿ, “ಸಮಾಜದಲ್ಲಿನ ವ್ಯವಸ್ಥೆ ಬದಲಾಗುವವರೆಗೂ ಲೈಂಗಿಕ ಅಲ್ಪಸಂಖ್ಯಾತರು ಹೋರಾಟ ನಡೆಸಬೇಕು. ಹೋರಾಟದ ಮೂಲಕವೇ ಪ್ರತಿರೋಧ ತೋರಬೇಕು. ಲೈಂಗಿಕ ಅಲ್ಪಸಂಖ್ಯಾತರಿಗೆ ಅನುಕಂಪ ಬೇಕಾಗಿಲ್ಲ. ಘನತೆಯಿಂದ ಬದುಕುವ  ಅವಕಾಶ ಕಲ್ಪಿಸಬೇಕು. ಸಮಾಜದ ಮುಖ್ಯವಾಹಿನಿಗೆ ತರಬೇಕು” ಎಂದು ಹೇಳಿದರು.

“ಲೈಂಗಿಕ ಅಲ್ಪಸಂಖ್ಯಾತರ ಬದುಕು ಮತ್ತು ಸಾವಿಗೂ ಮಾನ್ಯತೆ ಇಲ್ಲದಂತಾಗಿದೆ. ಆದರೆ ಇದನ್ನು ಬದಲಾಯಿಸಲು ಶ್ರಮಿಸಬೇಕಿದೆ. ನಮ್ಮ ಅಸ್ತಿತ್ವ ಸ್ಥಾಪನೆಗೆ ರಾಜಕೀಯ ಕ್ಷೇತ್ರವೂ ಪ್ರಮುಖ ವೇದಿಕೆಯಾಗಿದೆ. ಲೈಂಗಿಕ ಅಲ್ಪಸಂಖ್ಯಾತರನ್ನು ಒಳಗೊಳ್ಳುವಂತೆ ಸಮಾಜದ ಮನಸ್ಥಿತಿ ಬದಲಿಸಬೇಕು” ಎಂದರು.

ನಾಟಕದ ನಿರ್ದೇಶಕ ಬೇಲೂರು ರಘುನಂದನ್ ಮಾತನಾಡಿ, “ಅಕ್ಕಯ್‌‌ ಅವರ ಜೀವನದ ಕುರಿತು ಓದಿದರೆ ನಾವು ಅತ್ತು ಬಿಡುತ್ತೇವೆ. ನಮ್ಮಲ್ಲಿ ಕಣ್ಣೀರು ಬರದಿದ್ದರೆ ನಾವು ಮನುಷ್ಯರಾಗಿರುವುದಿಲ್ಲ” ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತ ರವೀಂದ್ರ ಭಟ್ಟ ಅವರು ಮಾತನಾಡಿ, “ಕುರುಡುನೊಬ್ಬನ ಕಷ್ಟಕ್ಕೆ ನೆರವಾಗದಿದ್ದರೆ ಸಮಾಜ ಕುರುಡಾಗಿರುತ್ತದೆಯೇ ಹೊರತು, ಹುಟ್ಟಿನಿಂದ ಕುರುಡನಾದವನು ನಿಜವಾದ ಕುರುಡನಲ್ಲ. ಹಾಗೆಯೇ ಲೈಂಗಿಕ ಅಲ್ಪಸಂಖ್ಯಾತರನ್ನು ಒಳಗೊಳ್ಳದ ಸಮಾಜ ನಾಗರಿಕವಾಗಿರುವುದಿಲ್ಲ” ಎಂದು ತಿಳಿಸಿದರು.

ಹೋರಾಟಗಾರ್ತಿ ಅಕ್ಕಯ್‌‌ ಪದ್ಮಶಾಲಿ, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ) ಡಾ.ಡಿ.ಡೊಮಿನಿಕ್‌, ಬೇಲೂರು ತಹಸೀಲ್ದಾರ್‌ ಉಲಿವಾಲ ಮೋಹನ್‌ಕುಮಾರ್‌‌, ಅಕ್ಕಯ್‌ ಪದ್ಮಶಾಲಿ ಅವರ ಸಹೋದರ ಪ್ರದೀಪ್‌ ವೇದಿಕೆ ಕಾರ್ಯಕ್ರಮದಲ್ಲಿ ಹಾಜರಿದ್ದರು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಅಕ್ಕೈ ಕಥನಕ್ಕೆ ಕಂಬನಿ ಮಿಡಿದ ಪ್ರೇಕ್ಷಕರು; ಅಭಿನೇತ್ರಿಗೆ ಚಪ್ಪಾಳೆಯ ಮಹಾಪೂರ

ಅಕ್ಕಯ್‌ ಪದ್ಮಶಾಲಿಯವರ ಜೀವನ ಕಥನವನ್ನು ರಂಗದ ಮೇಲೆ ನೋಡಿ ಪ್ರೇಕ್ಷಕರು ಕಂಬನಿ ಮಿಡಿದರು. ಅಕ್ಕಯ್‌ ಅವರು ತಮ್ಮ ಜೀವನದುದ್ದಕ್ಕೂ ಕಂಡ ನೋವಿನ ಘಟನೆಗಳು ರಂಗದ ಮೇಲೆ ಎಳೆಎಳೆಯಾಗಿ ತೆರೆದುಕೊಂಡವು. ನಾಗರಿಕ ಸಮಾಜದೊಳಗಿನ ಕ್ರೌರ್ಯ ಮನಸ್ಸುಗಳನ್ನು ದುಃಖದ ಕಡಲಿಗೆ ದೂಡಿತು. ಅಕ್ಕೈ ಪಾತ್ರವಾಗಿ ಅಭಿನಯಿಸಿದ ನಯನ ಸೂಡ ಅವರ ಅಭಿನಯಕ್ಕೆ ಪ್ರೇಕ್ಷಕರು ಭರಪೂರ ಮೆಚ್ಚುಗೆ ಸೂಚಿಸಿದರು. ನಾಟಕ ಮುಗಿದ ಕೆಲವು ನಿಮಿಷಗಳ ಕಾಲ ಇಡೀ ಸಭಾಂಗಣ ಕರತಾಡನ ಮಾಡುತ್ತಲೇ ಇತ್ತು.

ಈ ನಾಟಕ ನಮ್ಮನ್ನು ಮತ್ತೊಂದು ಜಗತ್ತಿಗೆ ಕರೆದುಕೊಂಡು ಹೋಗಿ, ನಾವು ಮಾಡುತ್ತಿರುವ ಅಸಮಾನತೆ, ಅನ್ಯಾಯಗಳನ್ನೂ ಬೊಟ್ಟು ಮಾಡಿ ತೋರಿಸಿತು. ಇದು ಅಕ್ಕಯ್‌‌ ಒಬ್ಬರ ಜೀವನ ಕಥೆಯಲ್ಲ. ಆ ಸಮುದಾಯದ ಲಕ್ಷಾಂತರ ಜಗದೀಶರ ಕಥೆ (ಜಗದೀಶ ಎಂಬುದು ಅಕ್ಕಯ್‌ ಅವರ ಮೊದಲ ಹೆಸರು). ಸಿಗ್ನಲ್‌‌ಗಳಲ್ಲಿ, ರಸ್ತೆ ಬದಿಯಲ್ಲಿ, ಸಾರ್ವಜನಿಕ ಸಾರಿಗೆಗಳಲ್ಲಿ ಅವರನ್ನೂ ಕಂಡು ಕಣ್ಣು ತಪ್ಪಿಸಿ ಹೋಗುವುದನ್ನು ಬಿಟ್ಟು ಅವರು ನಮ್ಮವರೇ ಎಂಬುದು ಕೆಲವರಿಗೆ ಬಂದರೂ ಸಾಕು, ಅವರು ಭಿಕ್ಷೆ ಬೇಡಲು, ಲೈಂಗಿಕ ಕಾರ್ಯಕರ್ತೆಯರಾಗಲು ನಮ್ಮ ಪಾಲು ಇದೆ ಎಂಬ ಸತ್ಯ ಅರಿವಾಗಬೇಕು ಎಂಬ ಸಂದೇಶವನ್ನು ನಾಟಕ ದಾಟಿಸಿತು.

`ಅಕ್ಕಯ್‌’ ನಾಟಕದ ಒಂದು ದೃಶ್ಯ (ಚಿತ್ರ: ತಾಯಿ ಲೋಕೇಶ್‌‌)

ಇದನ್ನೂ ಓದಿರಿ: ’ಕರುಣೆ ಬೇಡ, ಘನತೆಯಿಂದ ಬದುಕುವ ಹಕ್ಕು ಬೇಕು’: ರಂಗದ ಮೇಲೆ ಇಂದು ’ಅಕ್ಕಯ್’ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...