Homeಕರ್ನಾಟಕ'ಕನಕದಾಸ ಅಧ್ಯಯನ ಕೇಂದ್ರ' ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವಮಾನ: ಬೇಸರ ಹೊರಹಾಕಿದ ದಲಿತ ಸಾಹಿತಿ ಗಂಗಪ್ಪ...

‘ಕನಕದಾಸ ಅಧ್ಯಯನ ಕೇಂದ್ರ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವಮಾನ: ಬೇಸರ ಹೊರಹಾಕಿದ ದಲಿತ ಸಾಹಿತಿ ಗಂಗಪ್ಪ ತಳವಾರ

- Advertisement -
- Advertisement -

ಕನಕ ಜಯಂತಿ ಪ್ರಯುಕ್ತ ಸೋಮವಾರ (ನ.18) ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಗ್ರ ‘ತತ್ವಪದ ಯೋಜನೆಯ 18 ಸಂಪುಟಗಳ ಬಿಡುಗಡೆ’ ಸಮಾರಂಭದಲ್ಲಿ ದಲಿತ ಸಾಹಿತಿ ಗಂಗಪ್ಪ ತಳವಾರ ಅವರನ್ನು ಅವಮಾನಿಸಿರುವ ಆರೋಪ ಕೇಳಿ ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದ ದಲಿತ ಸಾಹಿತಿ ಗಂಗಪ್ಪ ತಳವಾರ ಅವರು ಭಾವಾನುವಾದ ಮಾಡಿರುವ ಗುಟ್ಟಹಳ್ಳಿ ಆಂಜನಪ್ಪ ಅವರ “ಸುಜ್ಞಾನ ಭೋಧ ತತ್ವಗಳು ಸಂಪುಟ”ವನ್ನು ಬಿಡುಗಡೆಗೊಳಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಸಾಹಿತಿಗಳು ಸೇರಿದಂತೆ ಹಲವಾರು ಗಣ್ಯರನ್ನು ಆಮಂತ್ರಿಸಿ, ಗೌರವ ಸೂಚಿಸಲಾಗಿದೆ. ಆದರೆ, ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಂಗಪ್ಪ ತಳವಾರ ಅವರನ್ನು ಸೌಜನ್ಯಕ್ಕೂ ಹೆಸರು ಕರೆಯದೆ ಅವಮಾನಿಸಲಾಗಿದೆ ಎಂಬ ಆರೋಪ ‘ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ’ದ ಮುಖ್ಯಸ್ಥರಾದ ಕಾ.ತಾ. ಚಿಕ್ಕಣ್ಣ ಅವರ ಮೇಲೆ ಕೇಳಿಬಂದಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಗಂಗಪ್ಪ ಅವರು, “ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಿಂದ ಕರೆ ಮಾಡಿ ಆಹ್ವಾನಿಸಿದ್ದ ಕಾರಣಕ್ಕೆ ನಾನು ಕಾರ್ಯಕ್ರಮಕ್ಕೆ ಹೋಗಿದ್ದೆ. ಇದಕ್ಕಾಗಿ ಸುಮಾರು 4 ಸಾವಿರ ರೂಪಾಯಿ ಖರ್ಚು ಮಾಡಿದ್ದೆ. ‘ಸುಜ್ಞಾನ ಭೋಧ ತತ್ವಗಳು’ ಸಂಪುಟಕ್ಕಾಗಿ ಕೆಲಸ ಮಾಡಿದ್ದ 18 ಮಂದಿ ಸಾಹಿತಿಗಳಲ್ಲಿ 6-7 ಜನರು ಬಂದಿದ್ದರು. ಅವರೆಲ್ಲರ ಹೆಸರು ಕರೆದು ಗೌರವಿಸಲಾಗಿದೆ. ಆದರೆ, ನನ್ನನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಿದ್ದಾರೆ. ಇದರಿಂದ ನನ್ನ ಮನಸ್ಸಿಗೆ ಬಹಳಷ್ಟು ನೋವಾಗಿದೆ. ನಾನು ಕಾರ್ಯಕ್ರಮದಲ್ಲೇ ಮುಖ್ಯಮಂತ್ರಿ ಎದುರು ಧಿಕ್ಕಾರ ಕೂಗಬೇಕೆಂದಿದ್ದೆ. ನಮ್ಮದೇ ಕಾರ್ಯಕ್ರಮ ಬೇಡ ಎಂದು ಸುಮ್ಮನಾದೆ. ಕೊನೆಗೆ ನಾನೇ ಬರೆದ ಪುಸ್ತಕ ಕೇಳಿದರೆ, 106 ರೂಪಾಯಿ ಹಣ ಪಡೆದು ಕೊಟ್ಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಕನಕದಾಸ ಅಧ್ಯಯನ ಕೇಂದ್ರದ ಅಧಿಕಾರಿಗಳು ಪತ್ರಿಕಾ ಹೇಳಿಕೆ ಮೂಲಕ ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ, ಧರಣಿ ಕೂರುತ್ತೇನೆ” ಎಂದು ಗಂಗಪ್ಪ ಅವರು ಎಚ್ಚರಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯೆ ನೀಡಿರುವ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಕಾ.ತಾ. ಚಿಕ್ಕಣ್ಣ, “ನಮ್ಮ ನಿರೂಪಕರು ಎಲ್ಲಾ ಸಾಹಿತಿಗಳ ಹೆಸರು ಕರೆದಿದ್ದಾರೆ. ಆದರೆ, ಕೆಲವರು ಗಂಗಪ್ಪ ಅವರ ಹೆಸರು ಕರೆದಿಲ್ಲ ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ಹೆಸರು ಕರೆಯಲಾಗಿದೆ ಅವರು ಗಮನಿಸಿಲ್ಲ ಎನ್ನುತ್ತಿದ್ದಾರೆ. ಒಂದು ವೇಳೆ ಹೆಸರು ಕರೆದಿರದಿದ್ದರೆ ಅದು ನಮ್ಮ ತಪ್ಪು, ಒಪ್ಪಿಕೊಳ್ಳುತ್ತೇನೆ. ಈ ಬಗ್ಗೆ ನಾನು ಗಂಗಪ್ಪ ಅವರಿಗೆ ಕರೆ ಮಾಡಿ ಮಾತನಾಡಿದ್ದೇನೆ. ಅವರು ಬೇಸರಗೊಂಡಿದ್ದಾರೆ. ನಾವು ಈ ಬಗ್ಗೆ ಪರಿಶೀಲನೆ ಮಾಡಿ ಎಲ್ಲಿ ತಪ್ಪಾಗಿದೆ ಎಂದು ನೋಡುತ್ತೇವೆ” ಎಂದರು.

ಇದನ್ನೂ ಓದಿ : ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದ ಸರ್ಕಾರಿ ಸಿಬ್ಬಂದಿ ವಿರುದ್ಧ ಕ್ರಮ: ಜಿ.ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...