Homeಮುಖಪುಟಅರ್ಷದೀಪ್‌‌ಗೆ ‘ಖಾಲಿಸ್ತಾನಿ’ ಎಂದು ನಿಂದನೆ: ಕೇಂದ್ರ ಸರ್ಕಾರದಿಂದ ವಿಕಿಪೀಡಿಯಕ್ಕೆ ಸಮನ್ಸ್ ಜಾರಿ

ಅರ್ಷದೀಪ್‌‌ಗೆ ‘ಖಾಲಿಸ್ತಾನಿ’ ಎಂದು ನಿಂದನೆ: ಕೇಂದ್ರ ಸರ್ಕಾರದಿಂದ ವಿಕಿಪೀಡಿಯಕ್ಕೆ ಸಮನ್ಸ್ ಜಾರಿ

- Advertisement -
- Advertisement -

ಭಾರತೀಯ ಕ್ರಿಕೆಟ್ ತಂಡದ ಬೌಲರ್ ಅರ್ಷದೀಪ್ ಸಿಂಗ್ ಅವರ ಕುರಿತು ಅವಹೇಳನಕಾರಿಯಾಗಿ ವಿಕಿಪೀಡಿಯಾದಲ್ಲಿ ಮಾಹಿತಿ ನೀಡಲಾಗಿರುವ ಕುರಿತು ಸರ್ಕಾರ ಎಚ್ಚೆತ್ತುಕೊಂಡಿದೆ.

ಅರ್ಷದೀಪ್‌ ಸಿಂಗ್‌ ಖಾಲಿಸ್ತಾನ್‌ ಹೋರಾಟವನ್ನು ಬೆಂಬಲಿಸಿದ್ದಾರೆಂದು ಸುಳ್ಳು ಹಬ್ಬಿಸಲಾಗಿದ್ದು ಭಾರತದಲ್ಲಿನ ವಿಕಿಪೀಡಿಯಾ ಕಾರ್ಯನಿರ್ವಾಹಕರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಮನ್ಸ್‌ ಜಾರಿ ಮಾಡಿದೆ.

ಏಷ್ಯಾ ಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳೆ, ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಅರ್ಶ್‌ದೀಪ್ ನಿರ್ಣಾಯಕ ಕ್ಯಾಚ್ ಅನ್ನು ಕೈಬಿಟ್ಟರು. ಭಾರತ ತಂಡವು ತನ್ನ ಸಂಪ್ರದಾಯಿಕ ಎದುರಾಳಿ ವಿರುದ್ಧ ಸೋತಿದ್ದರಿಂದ ಟ್ರೋಲ್‌ಗೆ ಗುರಿಯಾದರು.

ಇದರ ಬೆನ್ನಲ್ಲೇ ಅರ್ಹದೀಪ್‌ ಅವರನ್ನು ‘ಖಾಲಿಸ್ತಾನಿ’ ಎಂದು ಜರಿಯುವ ಪ್ರಯತ್ನ ಮಾಡಲಾಯಿತು. ವಿಕಿಪೀಡಿಯಾದಲ್ಲಿ ತಪ್ಪು ಮಾಹಿತಿ ಸೇರಿಸಿ, ಅರ್ಷದೀಪ್ ಅವರ ಚಾರಿತ್ರ್ಯ ವಧೆ ಮಾಡಲು ಯತ್ನಿಸಲಾಯಿತು. ಆನಂತರದಲ್ಲಿ ಈ ಮಾಹಿತಿಯನ್ನು ಪೇಜ್‌ನಿಂದ ತೆಗೆದುಹಾಕಲಾಗಿದೆ. ಅನೇಕ ಟ್ವಿಟ್ಟರ್ ಬಳಕೆದಾರರು ಅರ್ಷದೀಪ್‌ ಅವರನ್ನು ‘ಖಾಲಿಸ್ತಾನಿ’ ಎಂದು ನಿಂದಿಸಿವೆ.

ಎಲೆಕ್ಟ್ರಾನಿಕ್ಸ್ ಸಚಿವಾಲಯ ಮತ್ತು ಐಟಿ ಕಾರ್ಯದರ್ಶಿ ಅಲ್ಕೇಶ್ ಕುಮಾರ್ ಶರ್ಮಾ ನೇತೃತ್ವದ ಅಧಿಕಾರಿಗಳ ತಂಡವು ವಿಕಿಪೀಡಿಯ ಕಾರ್ಯನಿರ್ವಾಹಕರಿಗೆ ಸಮನ್ಸ್‌ ಜಾರಿ ಮಾಡಿದ್ದಾರೆ. ವಿಕಿಪೀಡಿಯಾದಲ್ಲಿ ಮಾಹಿತಿಗಳನ್ನು ಮಾರ್ಪಾಡು ಮಾಡಲು ಹೇಗೆ ಅನುಮತಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ವಿಕಿಪೀಡಿಯಾಕ್ಕೆ ನೋಟಿಸ್ ಕಳುಹಿಸುವಾಗ, “ಇದು ಅರ್ಷದೀಪ್ ಸಿಂಗ್ ಅವರ ಕುಟುಂಬಕ್ಕೆ ನೀಡಿದ ಬೆದರಿಕೆಯಾಗಬಹುದು. ಇದರಿಂದ ದೇಶದ ವಾತಾವರಣವೂ ಹಾಳಾಗಬಹುದು. ಐಪಿ ವಿಳಾಸವನ್ನು ಪರಿಶೀಲಿಸಿದಾಗ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದವರೊಬ್ಬರು ಈ ಕೃತ್ಯ ಎಸಗಿರುವುದು ತಿಳಿದು ಬಂದಿದೆ” ಎಂದಿದೆ.

ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿ, “ಯಾವುದೇ ವ್ಯಕ್ತಿಯ ಮಾನಹಾನಿ ಮಾಡುವ ಇಂತಹ ತಪ್ಪು ಮಾಹಿತಿ ಮತ್ತು ಉದ್ದೇಶಪೂರ್ವಕ ಪ್ರಯತ್ನಗಳನ್ನು ಭಾರತದಲ್ಲಿ ಕಾರ್ಯನಿರ್ವಹಿಸುವ ಯಾವುದೇ ವೇದಿಕೆಯಲ್ಲಿ ಅನುಮತಿಸಲಾಗುವುದಿಲ್ಲ. ಇದು ಸುರಕ್ಷತೆ ಮತ್ತು ಇಂಟರ್‌ನೆಟ್‌ನ ವಿಶ್ವಾಸಾರ್ಹತೆಯ ಮೇಲೆ ಸರ್ಕಾರ ಇಟ್ಟಿರುವ ನಿರೀಕ್ಷೆಗಳನ್ನು ಉಲ್ಲಂಘಿಸುತ್ತದೆ” ಎಂದಿದ್ದಾರೆ.

ಮಾಜಿ ಕ್ರಿಕೆಟಿಗ ಮತ್ತು ರಾಜ್ಯಸಭಾ ಸಂಸದ ಹರ್ಭಜನ್ ಸಿಂಗ್ ಟ್ವೀಟ್ ಮಾಡುವ ಮೂಲಕ ಅರ್ಷದೀಪ್ ಸಿಂಗ್ ಅವರನ್ನು ಬೆಂಬಲಿಸಿದ್ದಾರೆ. “ಅರ್ಷದೀಪ್ ಅವರನ್ನು ಟೀಕಿಸುವುದನ್ನು ನಿಲ್ಲಿಸಬೇಕು. ಯಾರೂ ಉದ್ದೇಶಪೂರ್ವಕವಾಗಿ ಕ್ಯಾಚ್ ಬಿಡುವುದಿಲ್ಲ. ಭಾರತೀಯ ಆಟಗಾರರ ಬಗ್ಗೆ ಹೆಮ್ಮೆ ಇದೆ. ಪಾಕಿಸ್ತಾನ ಉತ್ತಮವಾಗಿ ಆಡಿದೆ. ನಮ್ಮ ತಂಡ ಮತ್ತು ಅರ್ಶ್‌‌ದೀಪ್‌ ಬಗ್ಗೆ ನಡೆಯುತ್ತಿರುವ ಕೆಟ್ಟ ಸಂಗತಿಗಳು ನಾಚಿಕೆಗೇಡಿನದ್ದಾಗಿವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...