Homeಮುಖಪುಟಅರ್ಷದೀಪ್‌‌ಗೆ ‘ಖಾಲಿಸ್ತಾನಿ’ ಎಂದು ನಿಂದನೆ: ಕೇಂದ್ರ ಸರ್ಕಾರದಿಂದ ವಿಕಿಪೀಡಿಯಕ್ಕೆ ಸಮನ್ಸ್ ಜಾರಿ

ಅರ್ಷದೀಪ್‌‌ಗೆ ‘ಖಾಲಿಸ್ತಾನಿ’ ಎಂದು ನಿಂದನೆ: ಕೇಂದ್ರ ಸರ್ಕಾರದಿಂದ ವಿಕಿಪೀಡಿಯಕ್ಕೆ ಸಮನ್ಸ್ ಜಾರಿ

- Advertisement -
- Advertisement -

ಭಾರತೀಯ ಕ್ರಿಕೆಟ್ ತಂಡದ ಬೌಲರ್ ಅರ್ಷದೀಪ್ ಸಿಂಗ್ ಅವರ ಕುರಿತು ಅವಹೇಳನಕಾರಿಯಾಗಿ ವಿಕಿಪೀಡಿಯಾದಲ್ಲಿ ಮಾಹಿತಿ ನೀಡಲಾಗಿರುವ ಕುರಿತು ಸರ್ಕಾರ ಎಚ್ಚೆತ್ತುಕೊಂಡಿದೆ.

ಅರ್ಷದೀಪ್‌ ಸಿಂಗ್‌ ಖಾಲಿಸ್ತಾನ್‌ ಹೋರಾಟವನ್ನು ಬೆಂಬಲಿಸಿದ್ದಾರೆಂದು ಸುಳ್ಳು ಹಬ್ಬಿಸಲಾಗಿದ್ದು ಭಾರತದಲ್ಲಿನ ವಿಕಿಪೀಡಿಯಾ ಕಾರ್ಯನಿರ್ವಾಹಕರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಮನ್ಸ್‌ ಜಾರಿ ಮಾಡಿದೆ.

ಏಷ್ಯಾ ಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳೆ, ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಅರ್ಶ್‌ದೀಪ್ ನಿರ್ಣಾಯಕ ಕ್ಯಾಚ್ ಅನ್ನು ಕೈಬಿಟ್ಟರು. ಭಾರತ ತಂಡವು ತನ್ನ ಸಂಪ್ರದಾಯಿಕ ಎದುರಾಳಿ ವಿರುದ್ಧ ಸೋತಿದ್ದರಿಂದ ಟ್ರೋಲ್‌ಗೆ ಗುರಿಯಾದರು.

ಇದರ ಬೆನ್ನಲ್ಲೇ ಅರ್ಹದೀಪ್‌ ಅವರನ್ನು ‘ಖಾಲಿಸ್ತಾನಿ’ ಎಂದು ಜರಿಯುವ ಪ್ರಯತ್ನ ಮಾಡಲಾಯಿತು. ವಿಕಿಪೀಡಿಯಾದಲ್ಲಿ ತಪ್ಪು ಮಾಹಿತಿ ಸೇರಿಸಿ, ಅರ್ಷದೀಪ್ ಅವರ ಚಾರಿತ್ರ್ಯ ವಧೆ ಮಾಡಲು ಯತ್ನಿಸಲಾಯಿತು. ಆನಂತರದಲ್ಲಿ ಈ ಮಾಹಿತಿಯನ್ನು ಪೇಜ್‌ನಿಂದ ತೆಗೆದುಹಾಕಲಾಗಿದೆ. ಅನೇಕ ಟ್ವಿಟ್ಟರ್ ಬಳಕೆದಾರರು ಅರ್ಷದೀಪ್‌ ಅವರನ್ನು ‘ಖಾಲಿಸ್ತಾನಿ’ ಎಂದು ನಿಂದಿಸಿವೆ.

ಎಲೆಕ್ಟ್ರಾನಿಕ್ಸ್ ಸಚಿವಾಲಯ ಮತ್ತು ಐಟಿ ಕಾರ್ಯದರ್ಶಿ ಅಲ್ಕೇಶ್ ಕುಮಾರ್ ಶರ್ಮಾ ನೇತೃತ್ವದ ಅಧಿಕಾರಿಗಳ ತಂಡವು ವಿಕಿಪೀಡಿಯ ಕಾರ್ಯನಿರ್ವಾಹಕರಿಗೆ ಸಮನ್ಸ್‌ ಜಾರಿ ಮಾಡಿದ್ದಾರೆ. ವಿಕಿಪೀಡಿಯಾದಲ್ಲಿ ಮಾಹಿತಿಗಳನ್ನು ಮಾರ್ಪಾಡು ಮಾಡಲು ಹೇಗೆ ಅನುಮತಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ವಿಕಿಪೀಡಿಯಾಕ್ಕೆ ನೋಟಿಸ್ ಕಳುಹಿಸುವಾಗ, “ಇದು ಅರ್ಷದೀಪ್ ಸಿಂಗ್ ಅವರ ಕುಟುಂಬಕ್ಕೆ ನೀಡಿದ ಬೆದರಿಕೆಯಾಗಬಹುದು. ಇದರಿಂದ ದೇಶದ ವಾತಾವರಣವೂ ಹಾಳಾಗಬಹುದು. ಐಪಿ ವಿಳಾಸವನ್ನು ಪರಿಶೀಲಿಸಿದಾಗ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದವರೊಬ್ಬರು ಈ ಕೃತ್ಯ ಎಸಗಿರುವುದು ತಿಳಿದು ಬಂದಿದೆ” ಎಂದಿದೆ.

ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿ, “ಯಾವುದೇ ವ್ಯಕ್ತಿಯ ಮಾನಹಾನಿ ಮಾಡುವ ಇಂತಹ ತಪ್ಪು ಮಾಹಿತಿ ಮತ್ತು ಉದ್ದೇಶಪೂರ್ವಕ ಪ್ರಯತ್ನಗಳನ್ನು ಭಾರತದಲ್ಲಿ ಕಾರ್ಯನಿರ್ವಹಿಸುವ ಯಾವುದೇ ವೇದಿಕೆಯಲ್ಲಿ ಅನುಮತಿಸಲಾಗುವುದಿಲ್ಲ. ಇದು ಸುರಕ್ಷತೆ ಮತ್ತು ಇಂಟರ್‌ನೆಟ್‌ನ ವಿಶ್ವಾಸಾರ್ಹತೆಯ ಮೇಲೆ ಸರ್ಕಾರ ಇಟ್ಟಿರುವ ನಿರೀಕ್ಷೆಗಳನ್ನು ಉಲ್ಲಂಘಿಸುತ್ತದೆ” ಎಂದಿದ್ದಾರೆ.

ಮಾಜಿ ಕ್ರಿಕೆಟಿಗ ಮತ್ತು ರಾಜ್ಯಸಭಾ ಸಂಸದ ಹರ್ಭಜನ್ ಸಿಂಗ್ ಟ್ವೀಟ್ ಮಾಡುವ ಮೂಲಕ ಅರ್ಷದೀಪ್ ಸಿಂಗ್ ಅವರನ್ನು ಬೆಂಬಲಿಸಿದ್ದಾರೆ. “ಅರ್ಷದೀಪ್ ಅವರನ್ನು ಟೀಕಿಸುವುದನ್ನು ನಿಲ್ಲಿಸಬೇಕು. ಯಾರೂ ಉದ್ದೇಶಪೂರ್ವಕವಾಗಿ ಕ್ಯಾಚ್ ಬಿಡುವುದಿಲ್ಲ. ಭಾರತೀಯ ಆಟಗಾರರ ಬಗ್ಗೆ ಹೆಮ್ಮೆ ಇದೆ. ಪಾಕಿಸ್ತಾನ ಉತ್ತಮವಾಗಿ ಆಡಿದೆ. ನಮ್ಮ ತಂಡ ಮತ್ತು ಅರ್ಶ್‌‌ದೀಪ್‌ ಬಗ್ಗೆ ನಡೆಯುತ್ತಿರುವ ಕೆಟ್ಟ ಸಂಗತಿಗಳು ನಾಚಿಕೆಗೇಡಿನದ್ದಾಗಿವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...