Homeಮುಖಪುಟಅರ್ಷದೀಪ್‌‌ಗೆ ‘ಖಾಲಿಸ್ತಾನಿ’ ಎಂದು ನಿಂದನೆ: ಕೇಂದ್ರ ಸರ್ಕಾರದಿಂದ ವಿಕಿಪೀಡಿಯಕ್ಕೆ ಸಮನ್ಸ್ ಜಾರಿ

ಅರ್ಷದೀಪ್‌‌ಗೆ ‘ಖಾಲಿಸ್ತಾನಿ’ ಎಂದು ನಿಂದನೆ: ಕೇಂದ್ರ ಸರ್ಕಾರದಿಂದ ವಿಕಿಪೀಡಿಯಕ್ಕೆ ಸಮನ್ಸ್ ಜಾರಿ

- Advertisement -
- Advertisement -

ಭಾರತೀಯ ಕ್ರಿಕೆಟ್ ತಂಡದ ಬೌಲರ್ ಅರ್ಷದೀಪ್ ಸಿಂಗ್ ಅವರ ಕುರಿತು ಅವಹೇಳನಕಾರಿಯಾಗಿ ವಿಕಿಪೀಡಿಯಾದಲ್ಲಿ ಮಾಹಿತಿ ನೀಡಲಾಗಿರುವ ಕುರಿತು ಸರ್ಕಾರ ಎಚ್ಚೆತ್ತುಕೊಂಡಿದೆ.

ಅರ್ಷದೀಪ್‌ ಸಿಂಗ್‌ ಖಾಲಿಸ್ತಾನ್‌ ಹೋರಾಟವನ್ನು ಬೆಂಬಲಿಸಿದ್ದಾರೆಂದು ಸುಳ್ಳು ಹಬ್ಬಿಸಲಾಗಿದ್ದು ಭಾರತದಲ್ಲಿನ ವಿಕಿಪೀಡಿಯಾ ಕಾರ್ಯನಿರ್ವಾಹಕರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಮನ್ಸ್‌ ಜಾರಿ ಮಾಡಿದೆ.

ಏಷ್ಯಾ ಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳೆ, ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಅರ್ಶ್‌ದೀಪ್ ನಿರ್ಣಾಯಕ ಕ್ಯಾಚ್ ಅನ್ನು ಕೈಬಿಟ್ಟರು. ಭಾರತ ತಂಡವು ತನ್ನ ಸಂಪ್ರದಾಯಿಕ ಎದುರಾಳಿ ವಿರುದ್ಧ ಸೋತಿದ್ದರಿಂದ ಟ್ರೋಲ್‌ಗೆ ಗುರಿಯಾದರು.

ಇದರ ಬೆನ್ನಲ್ಲೇ ಅರ್ಹದೀಪ್‌ ಅವರನ್ನು ‘ಖಾಲಿಸ್ತಾನಿ’ ಎಂದು ಜರಿಯುವ ಪ್ರಯತ್ನ ಮಾಡಲಾಯಿತು. ವಿಕಿಪೀಡಿಯಾದಲ್ಲಿ ತಪ್ಪು ಮಾಹಿತಿ ಸೇರಿಸಿ, ಅರ್ಷದೀಪ್ ಅವರ ಚಾರಿತ್ರ್ಯ ವಧೆ ಮಾಡಲು ಯತ್ನಿಸಲಾಯಿತು. ಆನಂತರದಲ್ಲಿ ಈ ಮಾಹಿತಿಯನ್ನು ಪೇಜ್‌ನಿಂದ ತೆಗೆದುಹಾಕಲಾಗಿದೆ. ಅನೇಕ ಟ್ವಿಟ್ಟರ್ ಬಳಕೆದಾರರು ಅರ್ಷದೀಪ್‌ ಅವರನ್ನು ‘ಖಾಲಿಸ್ತಾನಿ’ ಎಂದು ನಿಂದಿಸಿವೆ.

ಎಲೆಕ್ಟ್ರಾನಿಕ್ಸ್ ಸಚಿವಾಲಯ ಮತ್ತು ಐಟಿ ಕಾರ್ಯದರ್ಶಿ ಅಲ್ಕೇಶ್ ಕುಮಾರ್ ಶರ್ಮಾ ನೇತೃತ್ವದ ಅಧಿಕಾರಿಗಳ ತಂಡವು ವಿಕಿಪೀಡಿಯ ಕಾರ್ಯನಿರ್ವಾಹಕರಿಗೆ ಸಮನ್ಸ್‌ ಜಾರಿ ಮಾಡಿದ್ದಾರೆ. ವಿಕಿಪೀಡಿಯಾದಲ್ಲಿ ಮಾಹಿತಿಗಳನ್ನು ಮಾರ್ಪಾಡು ಮಾಡಲು ಹೇಗೆ ಅನುಮತಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ವಿಕಿಪೀಡಿಯಾಕ್ಕೆ ನೋಟಿಸ್ ಕಳುಹಿಸುವಾಗ, “ಇದು ಅರ್ಷದೀಪ್ ಸಿಂಗ್ ಅವರ ಕುಟುಂಬಕ್ಕೆ ನೀಡಿದ ಬೆದರಿಕೆಯಾಗಬಹುದು. ಇದರಿಂದ ದೇಶದ ವಾತಾವರಣವೂ ಹಾಳಾಗಬಹುದು. ಐಪಿ ವಿಳಾಸವನ್ನು ಪರಿಶೀಲಿಸಿದಾಗ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದವರೊಬ್ಬರು ಈ ಕೃತ್ಯ ಎಸಗಿರುವುದು ತಿಳಿದು ಬಂದಿದೆ” ಎಂದಿದೆ.

ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿ, “ಯಾವುದೇ ವ್ಯಕ್ತಿಯ ಮಾನಹಾನಿ ಮಾಡುವ ಇಂತಹ ತಪ್ಪು ಮಾಹಿತಿ ಮತ್ತು ಉದ್ದೇಶಪೂರ್ವಕ ಪ್ರಯತ್ನಗಳನ್ನು ಭಾರತದಲ್ಲಿ ಕಾರ್ಯನಿರ್ವಹಿಸುವ ಯಾವುದೇ ವೇದಿಕೆಯಲ್ಲಿ ಅನುಮತಿಸಲಾಗುವುದಿಲ್ಲ. ಇದು ಸುರಕ್ಷತೆ ಮತ್ತು ಇಂಟರ್‌ನೆಟ್‌ನ ವಿಶ್ವಾಸಾರ್ಹತೆಯ ಮೇಲೆ ಸರ್ಕಾರ ಇಟ್ಟಿರುವ ನಿರೀಕ್ಷೆಗಳನ್ನು ಉಲ್ಲಂಘಿಸುತ್ತದೆ” ಎಂದಿದ್ದಾರೆ.

ಮಾಜಿ ಕ್ರಿಕೆಟಿಗ ಮತ್ತು ರಾಜ್ಯಸಭಾ ಸಂಸದ ಹರ್ಭಜನ್ ಸಿಂಗ್ ಟ್ವೀಟ್ ಮಾಡುವ ಮೂಲಕ ಅರ್ಷದೀಪ್ ಸಿಂಗ್ ಅವರನ್ನು ಬೆಂಬಲಿಸಿದ್ದಾರೆ. “ಅರ್ಷದೀಪ್ ಅವರನ್ನು ಟೀಕಿಸುವುದನ್ನು ನಿಲ್ಲಿಸಬೇಕು. ಯಾರೂ ಉದ್ದೇಶಪೂರ್ವಕವಾಗಿ ಕ್ಯಾಚ್ ಬಿಡುವುದಿಲ್ಲ. ಭಾರತೀಯ ಆಟಗಾರರ ಬಗ್ಗೆ ಹೆಮ್ಮೆ ಇದೆ. ಪಾಕಿಸ್ತಾನ ಉತ್ತಮವಾಗಿ ಆಡಿದೆ. ನಮ್ಮ ತಂಡ ಮತ್ತು ಅರ್ಶ್‌‌ದೀಪ್‌ ಬಗ್ಗೆ ನಡೆಯುತ್ತಿರುವ ಕೆಟ್ಟ ಸಂಗತಿಗಳು ನಾಚಿಕೆಗೇಡಿನದ್ದಾಗಿವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...