Homeಮುಖಪುಟಅರ್ಷದೀಪ್‌‌ಗೆ ‘ಖಾಲಿಸ್ತಾನಿ’ ಎಂದು ನಿಂದನೆ: ಕೇಂದ್ರ ಸರ್ಕಾರದಿಂದ ವಿಕಿಪೀಡಿಯಕ್ಕೆ ಸಮನ್ಸ್ ಜಾರಿ

ಅರ್ಷದೀಪ್‌‌ಗೆ ‘ಖಾಲಿಸ್ತಾನಿ’ ಎಂದು ನಿಂದನೆ: ಕೇಂದ್ರ ಸರ್ಕಾರದಿಂದ ವಿಕಿಪೀಡಿಯಕ್ಕೆ ಸಮನ್ಸ್ ಜಾರಿ

- Advertisement -
- Advertisement -

ಭಾರತೀಯ ಕ್ರಿಕೆಟ್ ತಂಡದ ಬೌಲರ್ ಅರ್ಷದೀಪ್ ಸಿಂಗ್ ಅವರ ಕುರಿತು ಅವಹೇಳನಕಾರಿಯಾಗಿ ವಿಕಿಪೀಡಿಯಾದಲ್ಲಿ ಮಾಹಿತಿ ನೀಡಲಾಗಿರುವ ಕುರಿತು ಸರ್ಕಾರ ಎಚ್ಚೆತ್ತುಕೊಂಡಿದೆ.

ಅರ್ಷದೀಪ್‌ ಸಿಂಗ್‌ ಖಾಲಿಸ್ತಾನ್‌ ಹೋರಾಟವನ್ನು ಬೆಂಬಲಿಸಿದ್ದಾರೆಂದು ಸುಳ್ಳು ಹಬ್ಬಿಸಲಾಗಿದ್ದು ಭಾರತದಲ್ಲಿನ ವಿಕಿಪೀಡಿಯಾ ಕಾರ್ಯನಿರ್ವಾಹಕರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಮನ್ಸ್‌ ಜಾರಿ ಮಾಡಿದೆ.

ಏಷ್ಯಾ ಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳೆ, ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಅರ್ಶ್‌ದೀಪ್ ನಿರ್ಣಾಯಕ ಕ್ಯಾಚ್ ಅನ್ನು ಕೈಬಿಟ್ಟರು. ಭಾರತ ತಂಡವು ತನ್ನ ಸಂಪ್ರದಾಯಿಕ ಎದುರಾಳಿ ವಿರುದ್ಧ ಸೋತಿದ್ದರಿಂದ ಟ್ರೋಲ್‌ಗೆ ಗುರಿಯಾದರು.

ಇದರ ಬೆನ್ನಲ್ಲೇ ಅರ್ಹದೀಪ್‌ ಅವರನ್ನು ‘ಖಾಲಿಸ್ತಾನಿ’ ಎಂದು ಜರಿಯುವ ಪ್ರಯತ್ನ ಮಾಡಲಾಯಿತು. ವಿಕಿಪೀಡಿಯಾದಲ್ಲಿ ತಪ್ಪು ಮಾಹಿತಿ ಸೇರಿಸಿ, ಅರ್ಷದೀಪ್ ಅವರ ಚಾರಿತ್ರ್ಯ ವಧೆ ಮಾಡಲು ಯತ್ನಿಸಲಾಯಿತು. ಆನಂತರದಲ್ಲಿ ಈ ಮಾಹಿತಿಯನ್ನು ಪೇಜ್‌ನಿಂದ ತೆಗೆದುಹಾಕಲಾಗಿದೆ. ಅನೇಕ ಟ್ವಿಟ್ಟರ್ ಬಳಕೆದಾರರು ಅರ್ಷದೀಪ್‌ ಅವರನ್ನು ‘ಖಾಲಿಸ್ತಾನಿ’ ಎಂದು ನಿಂದಿಸಿವೆ.

ಎಲೆಕ್ಟ್ರಾನಿಕ್ಸ್ ಸಚಿವಾಲಯ ಮತ್ತು ಐಟಿ ಕಾರ್ಯದರ್ಶಿ ಅಲ್ಕೇಶ್ ಕುಮಾರ್ ಶರ್ಮಾ ನೇತೃತ್ವದ ಅಧಿಕಾರಿಗಳ ತಂಡವು ವಿಕಿಪೀಡಿಯ ಕಾರ್ಯನಿರ್ವಾಹಕರಿಗೆ ಸಮನ್ಸ್‌ ಜಾರಿ ಮಾಡಿದ್ದಾರೆ. ವಿಕಿಪೀಡಿಯಾದಲ್ಲಿ ಮಾಹಿತಿಗಳನ್ನು ಮಾರ್ಪಾಡು ಮಾಡಲು ಹೇಗೆ ಅನುಮತಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ವಿಕಿಪೀಡಿಯಾಕ್ಕೆ ನೋಟಿಸ್ ಕಳುಹಿಸುವಾಗ, “ಇದು ಅರ್ಷದೀಪ್ ಸಿಂಗ್ ಅವರ ಕುಟುಂಬಕ್ಕೆ ನೀಡಿದ ಬೆದರಿಕೆಯಾಗಬಹುದು. ಇದರಿಂದ ದೇಶದ ವಾತಾವರಣವೂ ಹಾಳಾಗಬಹುದು. ಐಪಿ ವಿಳಾಸವನ್ನು ಪರಿಶೀಲಿಸಿದಾಗ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದವರೊಬ್ಬರು ಈ ಕೃತ್ಯ ಎಸಗಿರುವುದು ತಿಳಿದು ಬಂದಿದೆ” ಎಂದಿದೆ.

ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಟ್ವೀಟ್ ಮಾಡಿ, “ಯಾವುದೇ ವ್ಯಕ್ತಿಯ ಮಾನಹಾನಿ ಮಾಡುವ ಇಂತಹ ತಪ್ಪು ಮಾಹಿತಿ ಮತ್ತು ಉದ್ದೇಶಪೂರ್ವಕ ಪ್ರಯತ್ನಗಳನ್ನು ಭಾರತದಲ್ಲಿ ಕಾರ್ಯನಿರ್ವಹಿಸುವ ಯಾವುದೇ ವೇದಿಕೆಯಲ್ಲಿ ಅನುಮತಿಸಲಾಗುವುದಿಲ್ಲ. ಇದು ಸುರಕ್ಷತೆ ಮತ್ತು ಇಂಟರ್‌ನೆಟ್‌ನ ವಿಶ್ವಾಸಾರ್ಹತೆಯ ಮೇಲೆ ಸರ್ಕಾರ ಇಟ್ಟಿರುವ ನಿರೀಕ್ಷೆಗಳನ್ನು ಉಲ್ಲಂಘಿಸುತ್ತದೆ” ಎಂದಿದ್ದಾರೆ.

ಮಾಜಿ ಕ್ರಿಕೆಟಿಗ ಮತ್ತು ರಾಜ್ಯಸಭಾ ಸಂಸದ ಹರ್ಭಜನ್ ಸಿಂಗ್ ಟ್ವೀಟ್ ಮಾಡುವ ಮೂಲಕ ಅರ್ಷದೀಪ್ ಸಿಂಗ್ ಅವರನ್ನು ಬೆಂಬಲಿಸಿದ್ದಾರೆ. “ಅರ್ಷದೀಪ್ ಅವರನ್ನು ಟೀಕಿಸುವುದನ್ನು ನಿಲ್ಲಿಸಬೇಕು. ಯಾರೂ ಉದ್ದೇಶಪೂರ್ವಕವಾಗಿ ಕ್ಯಾಚ್ ಬಿಡುವುದಿಲ್ಲ. ಭಾರತೀಯ ಆಟಗಾರರ ಬಗ್ಗೆ ಹೆಮ್ಮೆ ಇದೆ. ಪಾಕಿಸ್ತಾನ ಉತ್ತಮವಾಗಿ ಆಡಿದೆ. ನಮ್ಮ ತಂಡ ಮತ್ತು ಅರ್ಶ್‌‌ದೀಪ್‌ ಬಗ್ಗೆ ನಡೆಯುತ್ತಿರುವ ಕೆಟ್ಟ ಸಂಗತಿಗಳು ನಾಚಿಕೆಗೇಡಿನದ್ದಾಗಿವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...