Homeಚಳವಳಿರೈತರ ಪ್ರತಿಭಟನೆ ಕುರಿತು ಅವಹೇಳನ: ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್

ರೈತರ ಪ್ರತಿಭಟನೆ ಕುರಿತು ಅವಹೇಳನ: ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್

ಹಲವಾರು ರಾಜಕೀಯ ನಾಯಕರು ಸದುದ್ದೇಶವಿಲ್ಲದ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುವ ಮೂಲಕ ರೈತರ ಪ್ರತಿಭಟನೆಗೆ ಕಳಂಕ ತರಲು ಯತ್ನಿಸಿದ್ದಾರೆ ಎಂದು ನೋಟಿಸ್‌ನಲ್ಲಿ ಅಪಾದಿಸಲಾಗಿದೆ.

- Advertisement -
- Advertisement -

ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿತ್ತಿರುವ ಪಂಜಾಬ್ ಮೂಲದ ರೈತರು, ಪ್ರತಿಭಟನೆ ಮತ್ತು ಪ್ರತಿಭಟನಾಕಾರರನ್ನು ಅವಹೇಳನ ಮಾಡಿದ ಆರೋಪದ ಮೇಲೆ ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್ ಕಳಿಸಿದ್ದಾರೆ.

ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು ಬಿಜೆಪಿ ನಾಯಕ ರಾಮ್ ಮಾಧವ್ ಅವರಿಗೆ ನೋಟಿಸ್‌ ಕಳಿಸಲಾಗಿದ್ದು, ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷದ ಸಹ-ಉಸ್ತುವಾರಿಯಾಗಿರುವ ರಾಘವ್ ಛಡ್ಡಾ, ರೈತರಿಗೆ ಅಗತ್ಯವಾದ ಎಲ್ಲ ಕಾನೂನು ನೆರವುಗಳನ್ನು ಒದಗಿಸುತ್ತೇವೆ ಎಂದಿದ್ದಾರೆ.

ಈ ಮೂವರು ಬಿಜೆಪಿ ನಾಯಕರು ಬೇಷರತ್ ಕ್ಷಮೆಯಾಚಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಹಲವಾರು ರಾಜಕೀಯ ನಾಯಕರು ದುರುದ್ದೇಶಪೂರ್ವಕವಾಗಿ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುವ ಮೂಲಕ ರೈತರ ಪ್ರತಿಭಟನೆಗೆ ಕಳಂಕ ತರಲು ಯತ್ನಿಸಿದ್ದಾರೆ ಎಂದು ನೋಟಿಸ್‌ನಲ್ಲಿ ಅಪಾದಿಸಲಾಗಿದೆ.

ಇದನ್ನೂ ಓದಿ: ರಫ್ತಿನಲ್ಲಿ ಶೇ.0.8 ಕುಸಿತ: 15.71 ಬಿಲಿಯನ್ ಡಾಲರ್‌ಗೇರಿದ‌ ಭಾರತದ ವ್ಯಾಪಾರ ಕೊರತೆ

ಒಂದು ಕಡೆ ಪ್ರಧಾನಿ ಮೋದಿ ಮತ್ತು ಅವರ ಸಹಚರರು ರೈತರೊಂದಿಗೆ ಸಹಮತ ಸಾಧಿಸುವ ಮಾತನಾಡುತ್ತಿದ್ದರೆ, ಅವರದೇ ಗುಂಪಿನ ಹಲವರು, “ರೈತರನ್ನು ದಾರಿ ತಪ್ಪಿಸಲಾಗಿದೆ, ಪ್ರತ್ಯೇಕವಾದಿಗಳು ಮತ್ತು ದೇಶದ್ರೋಹಿಗಳು ರೈತರ ಹಿಂದಿದ್ದಾರೆ” ಎಂಬಂತಹ ಅಭಿಪ್ರಾಯ ಸೃಷ್ಟಿಸುವ ಯತ್ನ ಮಾಡಲಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಅಮೃತಸರ್‌ದ ರೈತ ಜಸ್ಕರಣ್ ಸಿಂಗ್ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರಿಗೆ ನೋಟಿಸ್ ಕಳಿಸಿದ್ದು, ಬೇಷರತ್ ಕ್ಷಮೆ ಯಾಚಿಸಲು ಆಗ್ರಹಿಸಿದ್ದಾರೆ. ಸಂದರ್ಶನವೊಂದರಲ್ಲಿ, “ವಿದೇಶಿ ಶಕ್ತಿಗಳು ಪ್ರತಿಭಟನೆಯಲ್ಲಿ ಸೇರಿವೆ. ಪ್ರತಿಭಟನೆಯಲ್ಲಿ ಖಲಿಸ್ತಾನ್ ಮತ್ತು ಶರ್ಜಿಜ್ ಇಮಾಮ್ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ” ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದರು.

ಇದನ್ನೂ ಓದಿ: ಸುರಿವ ಮಳೆ – ಕೊರೆವ ಚಳಿಯಲ್ಲಿಯೂ ಪಟ್ಟು ಬಿಡದ ಪ್ರತಿಭಟನಾ ನಿರತ ರೈತರು!

ಜಲಂದರ್‌ನ ರೈತ ರಮ್ನೀಕ್ ಸಿಂಗ್ ರಂಧಾವಾ ಅವರು ಗುಜರಾತ್ ಡಿಸಿಎಂ ನಿತಿನ್ ಪಟೇಲ್‌ಗೆ ನೋಟಿಸ್ ಕಳಿಸಿದ್ದಾರೆ. “ರೈತರ ಹೆಸರಲ್ಲಿ ದೇಶದ್ರೋಹಿ ಶಕ್ತಿಗಳು, ಕಮ್ಯುನಿಸ್ಟರು, ಖಲಿಸ್ತಾನಿಗಳು ಮತ್ತು ಚೀನಾ ಪರ ಇರುವವರು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದು, ದೇಶದ್ರೋಹಿಗಳು ಈ ಪ್ರತಿಭಟನೆಗೆ ಧನ ಸಹಾಯ ಮಾಡುತ್ತಿದ್ದಾರೆ” ಎಂದು ಗುಜರಾತ್ ಡಿಸಿಎಂ ನಿತಿನ್ ಪಟೇಲ್ ಹೇಳಿದ್ದರು. “ಪ್ರತಿಭಟನಾನಿರತ ರೈತರು ಪಿಜ್ಜಾ, ಪಕೋಡಾ ತಿನ್ನೋದನ್ನ ನೋಡಿದ್ದೇವೆ, ಅವೆಲ್ಲ ಅವರಿಗೆ ಉಚಿತವಾಗಿ ಬರುತ್ತಿವೆ” ಎಂದೂ ಪಟೇಲ್ ಹೇಳಿದ್ದರು.

ಸಂಗ್ರೂರ್‌ನ ಸುಖ್‌ವಿಂದರ್ ಸಿಂಗ್ ಸಿಧು, ಬಿಜೆಪಿ ರಾಷ್ಟ್ರ ನಾಯಕ ರಾಮ್ ಮಾಧವರಿಗೆ ನೋಟಿಸ್ ಕಳಿಸಿದ್ದಾರೆ. ಟ್ವೀಟ್‌ಗಳ ಮೂಲಕ ಮಾಧವ್ ರೈತ ಪ್ರತಿಭಟನೆಗೆ ಕಳಂಕ ಹಚ್ಚಲು ಯತ್ನಿಸಿದ್ದಾರೆ ಎಂದು ದೂರಲಾಗಿದೆ.

ಇದೇ ಸಂದರ್ಭದಲ್ಲಿ ಪಂಜಾಬ್ ಆಮ್ ಆದ್ಮಿ ಪಾರ್ಟಿಯ ಸಹ ಉಸ್ತುವಾರಿ ಆಗಿ ನೇಮಕವಾಗಿರುವ ದೆಹಲಿ ಶಾಸಕ ರಾಘವ್ ಛಡ್ಡಾ, ನೋಟಿಸ್ ಕಳಿಸಿದ ಈ ಮೂವರು ರೈತರಿಗೆ ಉಚಿತ ಕಾನೂನು ನೆರವು ಮತ್ತು ಸೇವೆಯನ್ನು ಒದಗಿಸಲಾಗುವುದು ಎಂದು ಶನಿವಾರ ಪ್ರಕಟಿಸಿದ್ದಾರೆ.


ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...