Homeಚಳವಳಿರೈತರ ಪ್ರತಿಭಟನೆ ಕುರಿತು ಅವಹೇಳನ: ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್

ರೈತರ ಪ್ರತಿಭಟನೆ ಕುರಿತು ಅವಹೇಳನ: ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್

ಹಲವಾರು ರಾಜಕೀಯ ನಾಯಕರು ಸದುದ್ದೇಶವಿಲ್ಲದ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುವ ಮೂಲಕ ರೈತರ ಪ್ರತಿಭಟನೆಗೆ ಕಳಂಕ ತರಲು ಯತ್ನಿಸಿದ್ದಾರೆ ಎಂದು ನೋಟಿಸ್‌ನಲ್ಲಿ ಅಪಾದಿಸಲಾಗಿದೆ.

- Advertisement -
- Advertisement -

ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿತ್ತಿರುವ ಪಂಜಾಬ್ ಮೂಲದ ರೈತರು, ಪ್ರತಿಭಟನೆ ಮತ್ತು ಪ್ರತಿಭಟನಾಕಾರರನ್ನು ಅವಹೇಳನ ಮಾಡಿದ ಆರೋಪದ ಮೇಲೆ ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್ ಕಳಿಸಿದ್ದಾರೆ.

ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು ಬಿಜೆಪಿ ನಾಯಕ ರಾಮ್ ಮಾಧವ್ ಅವರಿಗೆ ನೋಟಿಸ್‌ ಕಳಿಸಲಾಗಿದ್ದು, ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷದ ಸಹ-ಉಸ್ತುವಾರಿಯಾಗಿರುವ ರಾಘವ್ ಛಡ್ಡಾ, ರೈತರಿಗೆ ಅಗತ್ಯವಾದ ಎಲ್ಲ ಕಾನೂನು ನೆರವುಗಳನ್ನು ಒದಗಿಸುತ್ತೇವೆ ಎಂದಿದ್ದಾರೆ.

ಈ ಮೂವರು ಬಿಜೆಪಿ ನಾಯಕರು ಬೇಷರತ್ ಕ್ಷಮೆಯಾಚಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಹಲವಾರು ರಾಜಕೀಯ ನಾಯಕರು ದುರುದ್ದೇಶಪೂರ್ವಕವಾಗಿ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುವ ಮೂಲಕ ರೈತರ ಪ್ರತಿಭಟನೆಗೆ ಕಳಂಕ ತರಲು ಯತ್ನಿಸಿದ್ದಾರೆ ಎಂದು ನೋಟಿಸ್‌ನಲ್ಲಿ ಅಪಾದಿಸಲಾಗಿದೆ.

ಇದನ್ನೂ ಓದಿ: ರಫ್ತಿನಲ್ಲಿ ಶೇ.0.8 ಕುಸಿತ: 15.71 ಬಿಲಿಯನ್ ಡಾಲರ್‌ಗೇರಿದ‌ ಭಾರತದ ವ್ಯಾಪಾರ ಕೊರತೆ

ಒಂದು ಕಡೆ ಪ್ರಧಾನಿ ಮೋದಿ ಮತ್ತು ಅವರ ಸಹಚರರು ರೈತರೊಂದಿಗೆ ಸಹಮತ ಸಾಧಿಸುವ ಮಾತನಾಡುತ್ತಿದ್ದರೆ, ಅವರದೇ ಗುಂಪಿನ ಹಲವರು, “ರೈತರನ್ನು ದಾರಿ ತಪ್ಪಿಸಲಾಗಿದೆ, ಪ್ರತ್ಯೇಕವಾದಿಗಳು ಮತ್ತು ದೇಶದ್ರೋಹಿಗಳು ರೈತರ ಹಿಂದಿದ್ದಾರೆ” ಎಂಬಂತಹ ಅಭಿಪ್ರಾಯ ಸೃಷ್ಟಿಸುವ ಯತ್ನ ಮಾಡಲಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಅಮೃತಸರ್‌ದ ರೈತ ಜಸ್ಕರಣ್ ಸಿಂಗ್ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರಿಗೆ ನೋಟಿಸ್ ಕಳಿಸಿದ್ದು, ಬೇಷರತ್ ಕ್ಷಮೆ ಯಾಚಿಸಲು ಆಗ್ರಹಿಸಿದ್ದಾರೆ. ಸಂದರ್ಶನವೊಂದರಲ್ಲಿ, “ವಿದೇಶಿ ಶಕ್ತಿಗಳು ಪ್ರತಿಭಟನೆಯಲ್ಲಿ ಸೇರಿವೆ. ಪ್ರತಿಭಟನೆಯಲ್ಲಿ ಖಲಿಸ್ತಾನ್ ಮತ್ತು ಶರ್ಜಿಜ್ ಇಮಾಮ್ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ” ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದರು.

ಇದನ್ನೂ ಓದಿ: ಸುರಿವ ಮಳೆ – ಕೊರೆವ ಚಳಿಯಲ್ಲಿಯೂ ಪಟ್ಟು ಬಿಡದ ಪ್ರತಿಭಟನಾ ನಿರತ ರೈತರು!

ಜಲಂದರ್‌ನ ರೈತ ರಮ್ನೀಕ್ ಸಿಂಗ್ ರಂಧಾವಾ ಅವರು ಗುಜರಾತ್ ಡಿಸಿಎಂ ನಿತಿನ್ ಪಟೇಲ್‌ಗೆ ನೋಟಿಸ್ ಕಳಿಸಿದ್ದಾರೆ. “ರೈತರ ಹೆಸರಲ್ಲಿ ದೇಶದ್ರೋಹಿ ಶಕ್ತಿಗಳು, ಕಮ್ಯುನಿಸ್ಟರು, ಖಲಿಸ್ತಾನಿಗಳು ಮತ್ತು ಚೀನಾ ಪರ ಇರುವವರು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದು, ದೇಶದ್ರೋಹಿಗಳು ಈ ಪ್ರತಿಭಟನೆಗೆ ಧನ ಸಹಾಯ ಮಾಡುತ್ತಿದ್ದಾರೆ” ಎಂದು ಗುಜರಾತ್ ಡಿಸಿಎಂ ನಿತಿನ್ ಪಟೇಲ್ ಹೇಳಿದ್ದರು. “ಪ್ರತಿಭಟನಾನಿರತ ರೈತರು ಪಿಜ್ಜಾ, ಪಕೋಡಾ ತಿನ್ನೋದನ್ನ ನೋಡಿದ್ದೇವೆ, ಅವೆಲ್ಲ ಅವರಿಗೆ ಉಚಿತವಾಗಿ ಬರುತ್ತಿವೆ” ಎಂದೂ ಪಟೇಲ್ ಹೇಳಿದ್ದರು.

ಸಂಗ್ರೂರ್‌ನ ಸುಖ್‌ವಿಂದರ್ ಸಿಂಗ್ ಸಿಧು, ಬಿಜೆಪಿ ರಾಷ್ಟ್ರ ನಾಯಕ ರಾಮ್ ಮಾಧವರಿಗೆ ನೋಟಿಸ್ ಕಳಿಸಿದ್ದಾರೆ. ಟ್ವೀಟ್‌ಗಳ ಮೂಲಕ ಮಾಧವ್ ರೈತ ಪ್ರತಿಭಟನೆಗೆ ಕಳಂಕ ಹಚ್ಚಲು ಯತ್ನಿಸಿದ್ದಾರೆ ಎಂದು ದೂರಲಾಗಿದೆ.

ಇದೇ ಸಂದರ್ಭದಲ್ಲಿ ಪಂಜಾಬ್ ಆಮ್ ಆದ್ಮಿ ಪಾರ್ಟಿಯ ಸಹ ಉಸ್ತುವಾರಿ ಆಗಿ ನೇಮಕವಾಗಿರುವ ದೆಹಲಿ ಶಾಸಕ ರಾಘವ್ ಛಡ್ಡಾ, ನೋಟಿಸ್ ಕಳಿಸಿದ ಈ ಮೂವರು ರೈತರಿಗೆ ಉಚಿತ ಕಾನೂನು ನೆರವು ಮತ್ತು ಸೇವೆಯನ್ನು ಒದಗಿಸಲಾಗುವುದು ಎಂದು ಶನಿವಾರ ಪ್ರಕಟಿಸಿದ್ದಾರೆ.


ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...