Homeಚಳವಳಿರೈತರ ಪ್ರತಿಭಟನೆ ಕುರಿತು ಅವಹೇಳನ: ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್

ರೈತರ ಪ್ರತಿಭಟನೆ ಕುರಿತು ಅವಹೇಳನ: ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್

ಹಲವಾರು ರಾಜಕೀಯ ನಾಯಕರು ಸದುದ್ದೇಶವಿಲ್ಲದ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುವ ಮೂಲಕ ರೈತರ ಪ್ರತಿಭಟನೆಗೆ ಕಳಂಕ ತರಲು ಯತ್ನಿಸಿದ್ದಾರೆ ಎಂದು ನೋಟಿಸ್‌ನಲ್ಲಿ ಅಪಾದಿಸಲಾಗಿದೆ.

- Advertisement -
- Advertisement -

ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿತ್ತಿರುವ ಪಂಜಾಬ್ ಮೂಲದ ರೈತರು, ಪ್ರತಿಭಟನೆ ಮತ್ತು ಪ್ರತಿಭಟನಾಕಾರರನ್ನು ಅವಹೇಳನ ಮಾಡಿದ ಆರೋಪದ ಮೇಲೆ ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್ ಕಳಿಸಿದ್ದಾರೆ.

ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು ಬಿಜೆಪಿ ನಾಯಕ ರಾಮ್ ಮಾಧವ್ ಅವರಿಗೆ ನೋಟಿಸ್‌ ಕಳಿಸಲಾಗಿದ್ದು, ಪಂಜಾಬಿನಲ್ಲಿ ಆಮ್ ಆದ್ಮಿ ಪಕ್ಷದ ಸಹ-ಉಸ್ತುವಾರಿಯಾಗಿರುವ ರಾಘವ್ ಛಡ್ಡಾ, ರೈತರಿಗೆ ಅಗತ್ಯವಾದ ಎಲ್ಲ ಕಾನೂನು ನೆರವುಗಳನ್ನು ಒದಗಿಸುತ್ತೇವೆ ಎಂದಿದ್ದಾರೆ.

ಈ ಮೂವರು ಬಿಜೆಪಿ ನಾಯಕರು ಬೇಷರತ್ ಕ್ಷಮೆಯಾಚಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಹಲವಾರು ರಾಜಕೀಯ ನಾಯಕರು ದುರುದ್ದೇಶಪೂರ್ವಕವಾಗಿ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುವ ಮೂಲಕ ರೈತರ ಪ್ರತಿಭಟನೆಗೆ ಕಳಂಕ ತರಲು ಯತ್ನಿಸಿದ್ದಾರೆ ಎಂದು ನೋಟಿಸ್‌ನಲ್ಲಿ ಅಪಾದಿಸಲಾಗಿದೆ.

ಇದನ್ನೂ ಓದಿ: ರಫ್ತಿನಲ್ಲಿ ಶೇ.0.8 ಕುಸಿತ: 15.71 ಬಿಲಿಯನ್ ಡಾಲರ್‌ಗೇರಿದ‌ ಭಾರತದ ವ್ಯಾಪಾರ ಕೊರತೆ

ಒಂದು ಕಡೆ ಪ್ರಧಾನಿ ಮೋದಿ ಮತ್ತು ಅವರ ಸಹಚರರು ರೈತರೊಂದಿಗೆ ಸಹಮತ ಸಾಧಿಸುವ ಮಾತನಾಡುತ್ತಿದ್ದರೆ, ಅವರದೇ ಗುಂಪಿನ ಹಲವರು, “ರೈತರನ್ನು ದಾರಿ ತಪ್ಪಿಸಲಾಗಿದೆ, ಪ್ರತ್ಯೇಕವಾದಿಗಳು ಮತ್ತು ದೇಶದ್ರೋಹಿಗಳು ರೈತರ ಹಿಂದಿದ್ದಾರೆ” ಎಂಬಂತಹ ಅಭಿಪ್ರಾಯ ಸೃಷ್ಟಿಸುವ ಯತ್ನ ಮಾಡಲಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಅಮೃತಸರ್‌ದ ರೈತ ಜಸ್ಕರಣ್ ಸಿಂಗ್ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರಿಗೆ ನೋಟಿಸ್ ಕಳಿಸಿದ್ದು, ಬೇಷರತ್ ಕ್ಷಮೆ ಯಾಚಿಸಲು ಆಗ್ರಹಿಸಿದ್ದಾರೆ. ಸಂದರ್ಶನವೊಂದರಲ್ಲಿ, “ವಿದೇಶಿ ಶಕ್ತಿಗಳು ಪ್ರತಿಭಟನೆಯಲ್ಲಿ ಸೇರಿವೆ. ಪ್ರತಿಭಟನೆಯಲ್ಲಿ ಖಲಿಸ್ತಾನ್ ಮತ್ತು ಶರ್ಜಿಜ್ ಇಮಾಮ್ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ” ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದರು.

ಇದನ್ನೂ ಓದಿ: ಸುರಿವ ಮಳೆ – ಕೊರೆವ ಚಳಿಯಲ್ಲಿಯೂ ಪಟ್ಟು ಬಿಡದ ಪ್ರತಿಭಟನಾ ನಿರತ ರೈತರು!

ಜಲಂದರ್‌ನ ರೈತ ರಮ್ನೀಕ್ ಸಿಂಗ್ ರಂಧಾವಾ ಅವರು ಗುಜರಾತ್ ಡಿಸಿಎಂ ನಿತಿನ್ ಪಟೇಲ್‌ಗೆ ನೋಟಿಸ್ ಕಳಿಸಿದ್ದಾರೆ. “ರೈತರ ಹೆಸರಲ್ಲಿ ದೇಶದ್ರೋಹಿ ಶಕ್ತಿಗಳು, ಕಮ್ಯುನಿಸ್ಟರು, ಖಲಿಸ್ತಾನಿಗಳು ಮತ್ತು ಚೀನಾ ಪರ ಇರುವವರು ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದು, ದೇಶದ್ರೋಹಿಗಳು ಈ ಪ್ರತಿಭಟನೆಗೆ ಧನ ಸಹಾಯ ಮಾಡುತ್ತಿದ್ದಾರೆ” ಎಂದು ಗುಜರಾತ್ ಡಿಸಿಎಂ ನಿತಿನ್ ಪಟೇಲ್ ಹೇಳಿದ್ದರು. “ಪ್ರತಿಭಟನಾನಿರತ ರೈತರು ಪಿಜ್ಜಾ, ಪಕೋಡಾ ತಿನ್ನೋದನ್ನ ನೋಡಿದ್ದೇವೆ, ಅವೆಲ್ಲ ಅವರಿಗೆ ಉಚಿತವಾಗಿ ಬರುತ್ತಿವೆ” ಎಂದೂ ಪಟೇಲ್ ಹೇಳಿದ್ದರು.

ಸಂಗ್ರೂರ್‌ನ ಸುಖ್‌ವಿಂದರ್ ಸಿಂಗ್ ಸಿಧು, ಬಿಜೆಪಿ ರಾಷ್ಟ್ರ ನಾಯಕ ರಾಮ್ ಮಾಧವರಿಗೆ ನೋಟಿಸ್ ಕಳಿಸಿದ್ದಾರೆ. ಟ್ವೀಟ್‌ಗಳ ಮೂಲಕ ಮಾಧವ್ ರೈತ ಪ್ರತಿಭಟನೆಗೆ ಕಳಂಕ ಹಚ್ಚಲು ಯತ್ನಿಸಿದ್ದಾರೆ ಎಂದು ದೂರಲಾಗಿದೆ.

ಇದೇ ಸಂದರ್ಭದಲ್ಲಿ ಪಂಜಾಬ್ ಆಮ್ ಆದ್ಮಿ ಪಾರ್ಟಿಯ ಸಹ ಉಸ್ತುವಾರಿ ಆಗಿ ನೇಮಕವಾಗಿರುವ ದೆಹಲಿ ಶಾಸಕ ರಾಘವ್ ಛಡ್ಡಾ, ನೋಟಿಸ್ ಕಳಿಸಿದ ಈ ಮೂವರು ರೈತರಿಗೆ ಉಚಿತ ಕಾನೂನು ನೆರವು ಮತ್ತು ಸೇವೆಯನ್ನು ಒದಗಿಸಲಾಗುವುದು ಎಂದು ಶನಿವಾರ ಪ್ರಕಟಿಸಿದ್ದಾರೆ.


ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...