Homeಕರ್ನಾಟಕಮುಸ್ಲಿಮ್ ಮಹಿಳೆಯರ ಅವಹೇಳನ: ಕಲ್ಲಡ್ಕ ಭಟ್ ವಿರುದ್ಧ ಶ್ರೀರಂಗಪಟ್ಟಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ನಜ್ಮಾ

ಮುಸ್ಲಿಮ್ ಮಹಿಳೆಯರ ಅವಹೇಳನ: ಕಲ್ಲಡ್ಕ ಭಟ್ ವಿರುದ್ಧ ಶ್ರೀರಂಗಪಟ್ಟಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ನಜ್ಮಾ

- Advertisement -
- Advertisement -

ಶ್ರೀರಂಗಪಟ್ಟಣದಲ್ಲಿ ಕಳೆದ ತಿಂಗಳು ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಮುಸ್ಲಿಮ್ ಮಹಿಳೆಯರ ಕುರಿತು ಅವಹೇಳನ ಮಾಡಿ, ಧಾರ್ಮಿಕ ದ್ವೇಷ ಬಿತ್ತುವ ಭಾಷಣ ಮಾಡಿದ್ದರು. ಭಟ್ಟರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ದೂರು ದಾಖಲಿಸಿರುವ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಈಗ ಶ್ರೀರಂಗಪಟ್ಟಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ‘ಪ್ರಭಾಕರ್ ಭಟ್ ಜಾಮೀನು ಅರ್ಜಿಗೆ ವಿರೋಧಿಸಲು ತನ್ನ ಇಚ್ಛೆಯ ವಕೀಲರನ್ನು ನೇಮಸಿಕೊಳ್ಳಲು ಅನುಮತಿ ನೀಡುವಂತೆ’ ಕೋರಿ ಅವರು ಬುಧವಾರ ಅರ್ಜಿ ಸಲ್ಲಿಸಿದ್ದಾರೆ ಎಂದು ‘ಬಾರ್ ಅಂಡ್ ಬೆಂಚ್’ ವರದಿ ಮಾಡಿದೆ.

ನಜ್ಮಾ ನಜೀರ್ ಅವರ ಪರವಾಗಿ ಖ್ಯಾತ ವಕೀಲ ಎಸ್. ಬಾಲಕೃಷ್ಣನ್ ಅವರು ಸಿಆರ್‌ಪಿಸಿ ಸೆಕ್ಷನ್ 301 ಮತ್ತು 302 ಅಡಿ ಅರ್ಜಿ ಸಲ್ಲಿಸಿದ್ದು, ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ತಮ್ಮ ವಾದವನ್ನು ಆಲಿಸಬೇಕು ಎಂದು ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೋಪಾಲ ಕೃಷ್ಣ ರೈ ಟಿ ಅವರನ್ನು ಕೋರಿದ್ದಾರೆ. ಪ್ರಕರಣ ಸಂಬಂಧದ ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಲ್ಪಟ್ಟಿದೆ ಎನ್ನಲಾಗಿದೆ.

‘ಆರೋಪಿ ಪ್ರಭಾಕರ್ ಭಟ್ ಈ ಹಿಂದೆಯೂ ಇದೇ ರೀತಿಯ ವರ್ತನೆ ತೋರಿದ್ದಾರೆ. ದೊಂಬಿ ಸೃಷ್ಟಿಸುವುದು, ಮಹಿಳೆಯರನ್ನು ಅವಮಾನಿಸುವುದು, ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಕೆಲಸ ಮಾಡಿದ್ದಾರೆ. ಈ ಆರೋಪಗಳ ಮೇಲೆ ಪ್ರಕರಣಗಳು ದಾಖಲಾಗಿವೆ’ ದೂರುದಾರೆ ತಮ್ಮ ಅರ್ಜಿಯಲ್ಲಿ ಆಕ್ಷೇಪಿಸಿದ್ದಾರೆ.

‘ಪ್ರಭಾಕರ್ ಭಟ್ ಜಾಮೀನು ಅರ್ಜಿಗೆ ಸರ್ಕಾರಿ ಅಭಿಯೋಜಕರ ಜೊತೆ ತಾವೂ ಅದನ್ನು ವಿರೋಧಿಸಲು ಅನುಮತಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಆರೋಪಿ ಪ್ರಭಾಕರ್ ಭಟ್ ಗಂಭೀರ ಹೃದ್ರೋಗ ಸಮಸ್ಯೆಯಿಂದ ಬಳಲುತಿದ್ದಾರೆ ಎಂದು ಅವರ ಪರ ವಕೀಲರು ವಾದ ಮಂಡಿಸಿದ ನಂತರ, ಡಿಸೆಂಬರ್ 28ರಂದು ಶ್ರೀರಂಗಪಟ್ಟಣ ನ್ಯಾಯಾಲಯವು ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಹಿನ್ನೆಲೆ:

ಹನುಮ ಜಯಂತಿ ಪ್ರಯುಕ್ತ ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆ ಆಯೋಜಿಸಿದ್ದ ‘ಸಂಕೀರ್ತನಾ ಯಾತ್ರೆ’ಯಲ್ಲಿ ಪ್ರಭಾಕರ್ ಭಟ್ ಮಾತನಾಡಿದ್ದರು. ‘ಅವರು ಮುಸ್ಲಿಮರ ವಿರುದ್ಧ ಧಾರ್ಮಿಕ ದ್ವೇಷಕಾರಿದ್ದಾರೆ’ ಎಂದು ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ನೀಡಿದ್ದ ದೂರಿನ ಅನ್ವಯ ಶ್ರೀರಂಗಪಟ್ಟಣ ಟೌನ್ ಠಾಣೆಯ ಪೊಲೀಸರು ಪ್ರಭಾಕರ್ ಭಟ್ ವಿರುದ್ಧ ಐಪಿಸಿ ಸೆಕ್ಷನ್ಗಳಾದ 294 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾತುಗಳನ್ನು ಆಡುವುದು), 509 (ಮಹಿಳೆಯ ಖಾಸಗಿತನಕ್ಕೆ ಸಂಬಂಧಿಸಿದ ಮಾತುಗಳನ್ನಾಡುವುದು), 153ಎ (ಧರ್ಮದ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಹರಡುವುದು) ಮತ್ತು 298 (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು) ಅಡಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ರದ್ದು ಕೋರಿ ಪ್ರಭಾಕರ್ ಭಟ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ; ‘ಭಗವಾನ್ ರಾಮನು ಮಾಂಸಾಹಾರಿ..’; ವಿವಾದ ಹುಟ್ಟುಹಾಕಿದ ಎನ್‌ಸಿಪಿ ನಾಯಕ ಅವ್ಹಾದ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...