Homeಮುಖಪುಟಅಮಿತ್ ಶಾ & ಹಿಂದೂ ದೇವತೆಗಳಿಗೆ ಅವಮಾನ ಆರೋಪ: ಹಾಸ್ಯ ಕಲಾವಿದನ ಬಂಧನ

ಅಮಿತ್ ಶಾ & ಹಿಂದೂ ದೇವತೆಗಳಿಗೆ ಅವಮಾನ ಆರೋಪ: ಹಾಸ್ಯ ಕಲಾವಿದನ ಬಂಧನ

ಹಿಂದೂ ರಕ್ಷಕ ಸಂಘಟನೆಯ ಮುಖಂಡ ಮತ್ತು ಬಿಜೆಪಿ ಶಾಸಕ ಮಾಲಿನಿ ಗೌರ್ ಅವರ ಪುತ್ರ ಏಕಲವ್ಯ ಗೌರ್ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

- Advertisement -
- Advertisement -

ಮಧ್ಯಪ್ರದೇಶದ ಇಂಧೋರ್‌ನಲ್ಲಿ ನಡೆದ ಹೊಸ ವರ್ಷಾಚರಣೆಯ ಕಾರ್ಯಕ್ರಮವೊಂದರಲ್ಲಿ ‘ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯುಂಟು ಮಾಡಿದ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅವಮಾನಿಸಿದ್ದಾರೆ’ ಎಂದು ಆರೋಪಿಸಿ ಹಾಸ್ಯ ಕಲಾವಿದ ಮತ್ತು ಇತರೆ ನಾಲ್ಕು ಜನ ಕಾರ್ಯಕ್ರಮ ಸಂಘಟಕರನ್ನು ಬಂಧಿಸಲಾಗಿದೆ.

ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ಹಿಂದೂ ಕಾರ್ಯಕರ್ತರ ಗುಂಪೊಂದು ಕಾರ್ಯಕ್ರಮದಲ್ಲಿ ಹಾಜರಿತ್ತು. ಈ ವೇಳೆ ಇವರಿಗೆ ಇಷ್ಟವಿಲ್ಲದ ಹೇಳಿಕೆಗಳನ್ನು ಕಲಾವಿದರು ನೀಡಿದ್ದಕ್ಕಾಗಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದ ಹಿಂದೂ ಕಾರ್ಯಕರ್ತರು ಕಲಾವಿದರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ…

ಇಂಧೋರ್‌ನ ಡುಕಾನ್ ಪ್ರದೇಶದ ಕೆಫೆಯೊಂದರಲ್ಲಿ ಕಾರ್ಯಕ್ರಮ ನೀಡಿದ್ದ ಹಾಸ್ಯ ಕಲಾವಿದ ಮುನ್ವರ್ ಫಾರುಕಿ ಅವರನ್ನು ಶುಕ್ರವಾರ ಬಂಧಿಸಲಾಯಿತು. ಇವರ ಜೊತೆಗೆ ಪ್ರಖರ್ ವ್ಯಾಸ್, ಪ್ರಿಯಮ್ ವ್ಯಾಸ್, ನಳಿನ್ ಯಾದವ್ ಮತ್ತು ಕಾರ್ಯಕ್ರಮ ಸಂಯೋಜಕ ಎಡ್ವಿನ್ ಆಂಥೋನಿ ಎಂಬುವವರನ್ನು ಬಂಧಿಸಲಾಗಿದೆ.

“ಬಂಧನಕ್ಕೊಳಗಾದವರ ಮೇಲೆ ಐಪಿಸಿ ಸೆಕ್ಷನ್ 188, 269, 34 ಮತ್ತು 295 (ಎ) ಅಡಿಯಲ್ಲಿ ಈವೆಂಟ್ ಆಯೋಜನೆಗೆ ಅನುಮತಿ, ಕೊರೊನಾ ಸುರಕ್ಷತಾ ಮಾನದಂಡಗಳ ಉಲ್ಲಂಘನೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ” ಎನ್ನುವ ಪ್ರಕರಣಗಳಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಇಂಧೋರ್‌ನ ಟುಕೊಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಕಲ್ಮೇಶ್ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮೇಲೆ ನಂಬಿಕೆಯಿಲ್ಲ, ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

ಹಿಂದೂ ರಕ್ಷಕ ಸಂಘಟನೆಯ ಮುಖಂಡ ಮತ್ತು ಬಿಜೆಪಿ ಶಾಸಕ ಮಾಲಿನಿ ಗೌರ್ ಅವರ ಪುತ್ರ ಏಕಲವ್ಯ ಗೌರ್ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

“ಮುನ್ವರ್ ಫಾರುಕಿಯ ಮೇಲೆ ಸರಣಿ ಆರೋಪಗಳಿದ್ದು, ಈ ಹಿಂದೆ ತಮ್ಮ ಪ್ರದರ್ಶನಗಳಲ್ಲಿ ಹಿಂದೂ ದೇವತೆಗಳನ್ನು ಅವಮಾನ ಮಾಡಿದ್ದರು. ಇದರ ಬಗ್ಗೆ ತಿಳಿದುಕೊಳ್ಳಲು ನಾವು ಕೂಡ ಟಿಕೆಟ್ ಖರೀದಿಸಿ ಕಾರ್ಯಕ್ರಮಕ್ಕೆ ಹೋಗಿದ್ದೆವು. ಅಲ್ಲಿ ಪ್ರದರ್ಶನ ನೀಡಿದವರು ಒಕ್ಕೂಟ ವ್ಯವಸ್ಥೆಯ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಗೋಧ್ರಾ ಹತ್ಯಾಕಾಂಡದಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಹೆಸರನ್ನು ವಿನಾಃಕಾರಣ ಬಳಸಿದ್ದಾರೆ” ಎಂದು ಮಾಲಿನಿ ಗೌರ್ ಹೇಳಿದರು.

“ನಾವು ಕಾರ್ಯಕ್ರಮವನ್ನು ತಕ್ಷಣವೇ ನಿಲ್ಲಿಸಿದೆವು. ನಂತರ ಪ್ರೇಕ್ಷಕರನ್ನು ಹೊರಗೆ ಕಳುಹಿಸಿ, ಕಲಾವಿದರನ್ನು ಮತ್ತು ಕಾರ್ಯಕ್ರಮ ಸಂಘಟಕರನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದೇವೆ” ಎಂದು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ರೈತ ಹೋರಾಟದ ಕುರಿತು ವಿವಾದಾತ್ಮಕ ಹೇಳಿಕೆಯ ಆರೋಪ: ಕಾಂಗ್ರೆಸ್ ಸಂಸದನ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...