Homeಮುಖಪುಟಅಮಿತ್ ಶಾ & ಹಿಂದೂ ದೇವತೆಗಳಿಗೆ ಅವಮಾನ ಆರೋಪ: ಹಾಸ್ಯ ಕಲಾವಿದನ ಬಂಧನ

ಅಮಿತ್ ಶಾ & ಹಿಂದೂ ದೇವತೆಗಳಿಗೆ ಅವಮಾನ ಆರೋಪ: ಹಾಸ್ಯ ಕಲಾವಿದನ ಬಂಧನ

ಹಿಂದೂ ರಕ್ಷಕ ಸಂಘಟನೆಯ ಮುಖಂಡ ಮತ್ತು ಬಿಜೆಪಿ ಶಾಸಕ ಮಾಲಿನಿ ಗೌರ್ ಅವರ ಪುತ್ರ ಏಕಲವ್ಯ ಗೌರ್ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

- Advertisement -
- Advertisement -

ಮಧ್ಯಪ್ರದೇಶದ ಇಂಧೋರ್‌ನಲ್ಲಿ ನಡೆದ ಹೊಸ ವರ್ಷಾಚರಣೆಯ ಕಾರ್ಯಕ್ರಮವೊಂದರಲ್ಲಿ ‘ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯುಂಟು ಮಾಡಿದ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅವಮಾನಿಸಿದ್ದಾರೆ’ ಎಂದು ಆರೋಪಿಸಿ ಹಾಸ್ಯ ಕಲಾವಿದ ಮತ್ತು ಇತರೆ ನಾಲ್ಕು ಜನ ಕಾರ್ಯಕ್ರಮ ಸಂಘಟಕರನ್ನು ಬಂಧಿಸಲಾಗಿದೆ.

ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ಹಿಂದೂ ಕಾರ್ಯಕರ್ತರ ಗುಂಪೊಂದು ಕಾರ್ಯಕ್ರಮದಲ್ಲಿ ಹಾಜರಿತ್ತು. ಈ ವೇಳೆ ಇವರಿಗೆ ಇಷ್ಟವಿಲ್ಲದ ಹೇಳಿಕೆಗಳನ್ನು ಕಲಾವಿದರು ನೀಡಿದ್ದಕ್ಕಾಗಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದ ಹಿಂದೂ ಕಾರ್ಯಕರ್ತರು ಕಲಾವಿದರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ…

ಇಂಧೋರ್‌ನ ಡುಕಾನ್ ಪ್ರದೇಶದ ಕೆಫೆಯೊಂದರಲ್ಲಿ ಕಾರ್ಯಕ್ರಮ ನೀಡಿದ್ದ ಹಾಸ್ಯ ಕಲಾವಿದ ಮುನ್ವರ್ ಫಾರುಕಿ ಅವರನ್ನು ಶುಕ್ರವಾರ ಬಂಧಿಸಲಾಯಿತು. ಇವರ ಜೊತೆಗೆ ಪ್ರಖರ್ ವ್ಯಾಸ್, ಪ್ರಿಯಮ್ ವ್ಯಾಸ್, ನಳಿನ್ ಯಾದವ್ ಮತ್ತು ಕಾರ್ಯಕ್ರಮ ಸಂಯೋಜಕ ಎಡ್ವಿನ್ ಆಂಥೋನಿ ಎಂಬುವವರನ್ನು ಬಂಧಿಸಲಾಗಿದೆ.

“ಬಂಧನಕ್ಕೊಳಗಾದವರ ಮೇಲೆ ಐಪಿಸಿ ಸೆಕ್ಷನ್ 188, 269, 34 ಮತ್ತು 295 (ಎ) ಅಡಿಯಲ್ಲಿ ಈವೆಂಟ್ ಆಯೋಜನೆಗೆ ಅನುಮತಿ, ಕೊರೊನಾ ಸುರಕ್ಷತಾ ಮಾನದಂಡಗಳ ಉಲ್ಲಂಘನೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ” ಎನ್ನುವ ಪ್ರಕರಣಗಳಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಇಂಧೋರ್‌ನ ಟುಕೊಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಕಲ್ಮೇಶ್ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮೇಲೆ ನಂಬಿಕೆಯಿಲ್ಲ, ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

ಹಿಂದೂ ರಕ್ಷಕ ಸಂಘಟನೆಯ ಮುಖಂಡ ಮತ್ತು ಬಿಜೆಪಿ ಶಾಸಕ ಮಾಲಿನಿ ಗೌರ್ ಅವರ ಪುತ್ರ ಏಕಲವ್ಯ ಗೌರ್ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

“ಮುನ್ವರ್ ಫಾರುಕಿಯ ಮೇಲೆ ಸರಣಿ ಆರೋಪಗಳಿದ್ದು, ಈ ಹಿಂದೆ ತಮ್ಮ ಪ್ರದರ್ಶನಗಳಲ್ಲಿ ಹಿಂದೂ ದೇವತೆಗಳನ್ನು ಅವಮಾನ ಮಾಡಿದ್ದರು. ಇದರ ಬಗ್ಗೆ ತಿಳಿದುಕೊಳ್ಳಲು ನಾವು ಕೂಡ ಟಿಕೆಟ್ ಖರೀದಿಸಿ ಕಾರ್ಯಕ್ರಮಕ್ಕೆ ಹೋಗಿದ್ದೆವು. ಅಲ್ಲಿ ಪ್ರದರ್ಶನ ನೀಡಿದವರು ಒಕ್ಕೂಟ ವ್ಯವಸ್ಥೆಯ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಗೋಧ್ರಾ ಹತ್ಯಾಕಾಂಡದಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಹೆಸರನ್ನು ವಿನಾಃಕಾರಣ ಬಳಸಿದ್ದಾರೆ” ಎಂದು ಮಾಲಿನಿ ಗೌರ್ ಹೇಳಿದರು.

“ನಾವು ಕಾರ್ಯಕ್ರಮವನ್ನು ತಕ್ಷಣವೇ ನಿಲ್ಲಿಸಿದೆವು. ನಂತರ ಪ್ರೇಕ್ಷಕರನ್ನು ಹೊರಗೆ ಕಳುಹಿಸಿ, ಕಲಾವಿದರನ್ನು ಮತ್ತು ಕಾರ್ಯಕ್ರಮ ಸಂಘಟಕರನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದೇವೆ” ಎಂದು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ರೈತ ಹೋರಾಟದ ಕುರಿತು ವಿವಾದಾತ್ಮಕ ಹೇಳಿಕೆಯ ಆರೋಪ: ಕಾಂಗ್ರೆಸ್ ಸಂಸದನ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...