Homeಮುಖಪುಟಅಮಿತ್ ಶಾ & ಹಿಂದೂ ದೇವತೆಗಳಿಗೆ ಅವಮಾನ ಆರೋಪ: ಹಾಸ್ಯ ಕಲಾವಿದನ ಬಂಧನ

ಅಮಿತ್ ಶಾ & ಹಿಂದೂ ದೇವತೆಗಳಿಗೆ ಅವಮಾನ ಆರೋಪ: ಹಾಸ್ಯ ಕಲಾವಿದನ ಬಂಧನ

ಹಿಂದೂ ರಕ್ಷಕ ಸಂಘಟನೆಯ ಮುಖಂಡ ಮತ್ತು ಬಿಜೆಪಿ ಶಾಸಕ ಮಾಲಿನಿ ಗೌರ್ ಅವರ ಪುತ್ರ ಏಕಲವ್ಯ ಗೌರ್ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

- Advertisement -
- Advertisement -

ಮಧ್ಯಪ್ರದೇಶದ ಇಂಧೋರ್‌ನಲ್ಲಿ ನಡೆದ ಹೊಸ ವರ್ಷಾಚರಣೆಯ ಕಾರ್ಯಕ್ರಮವೊಂದರಲ್ಲಿ ‘ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯುಂಟು ಮಾಡಿದ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅವಮಾನಿಸಿದ್ದಾರೆ’ ಎಂದು ಆರೋಪಿಸಿ ಹಾಸ್ಯ ಕಲಾವಿದ ಮತ್ತು ಇತರೆ ನಾಲ್ಕು ಜನ ಕಾರ್ಯಕ್ರಮ ಸಂಘಟಕರನ್ನು ಬಂಧಿಸಲಾಗಿದೆ.

ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ಹಿಂದೂ ಕಾರ್ಯಕರ್ತರ ಗುಂಪೊಂದು ಕಾರ್ಯಕ್ರಮದಲ್ಲಿ ಹಾಜರಿತ್ತು. ಈ ವೇಳೆ ಇವರಿಗೆ ಇಷ್ಟವಿಲ್ಲದ ಹೇಳಿಕೆಗಳನ್ನು ಕಲಾವಿದರು ನೀಡಿದ್ದಕ್ಕಾಗಿ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದ ಹಿಂದೂ ಕಾರ್ಯಕರ್ತರು ಕಲಾವಿದರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಮಧ್ಯ ಪ್ರದೇಶ: ಮಸೀದಿ ಮೇಲೆ ಕೇಸರಿ ಧ್ವಜ ನೆಟ್ಟು ಹಿಂಸಾಚಾರ ನಡೆಸಿದ ಸಂಘ ಪರಿವಾರದ…

ಇಂಧೋರ್‌ನ ಡುಕಾನ್ ಪ್ರದೇಶದ ಕೆಫೆಯೊಂದರಲ್ಲಿ ಕಾರ್ಯಕ್ರಮ ನೀಡಿದ್ದ ಹಾಸ್ಯ ಕಲಾವಿದ ಮುನ್ವರ್ ಫಾರುಕಿ ಅವರನ್ನು ಶುಕ್ರವಾರ ಬಂಧಿಸಲಾಯಿತು. ಇವರ ಜೊತೆಗೆ ಪ್ರಖರ್ ವ್ಯಾಸ್, ಪ್ರಿಯಮ್ ವ್ಯಾಸ್, ನಳಿನ್ ಯಾದವ್ ಮತ್ತು ಕಾರ್ಯಕ್ರಮ ಸಂಯೋಜಕ ಎಡ್ವಿನ್ ಆಂಥೋನಿ ಎಂಬುವವರನ್ನು ಬಂಧಿಸಲಾಗಿದೆ.

“ಬಂಧನಕ್ಕೊಳಗಾದವರ ಮೇಲೆ ಐಪಿಸಿ ಸೆಕ್ಷನ್ 188, 269, 34 ಮತ್ತು 295 (ಎ) ಅಡಿಯಲ್ಲಿ ಈವೆಂಟ್ ಆಯೋಜನೆಗೆ ಅನುಮತಿ, ಕೊರೊನಾ ಸುರಕ್ಷತಾ ಮಾನದಂಡಗಳ ಉಲ್ಲಂಘನೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ” ಎನ್ನುವ ಪ್ರಕರಣಗಳಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಇಂಧೋರ್‌ನ ಟುಕೊಗಂಜ್ ಪೊಲೀಸ್ ಠಾಣೆಯ ಉಸ್ತುವಾರಿ ಕಲ್ಮೇಶ್ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮೇಲೆ ನಂಬಿಕೆಯಿಲ್ಲ, ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

ಹಿಂದೂ ರಕ್ಷಕ ಸಂಘಟನೆಯ ಮುಖಂಡ ಮತ್ತು ಬಿಜೆಪಿ ಶಾಸಕ ಮಾಲಿನಿ ಗೌರ್ ಅವರ ಪುತ್ರ ಏಕಲವ್ಯ ಗೌರ್ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಲಾಗಿದೆ.

“ಮುನ್ವರ್ ಫಾರುಕಿಯ ಮೇಲೆ ಸರಣಿ ಆರೋಪಗಳಿದ್ದು, ಈ ಹಿಂದೆ ತಮ್ಮ ಪ್ರದರ್ಶನಗಳಲ್ಲಿ ಹಿಂದೂ ದೇವತೆಗಳನ್ನು ಅವಮಾನ ಮಾಡಿದ್ದರು. ಇದರ ಬಗ್ಗೆ ತಿಳಿದುಕೊಳ್ಳಲು ನಾವು ಕೂಡ ಟಿಕೆಟ್ ಖರೀದಿಸಿ ಕಾರ್ಯಕ್ರಮಕ್ಕೆ ಹೋಗಿದ್ದೆವು. ಅಲ್ಲಿ ಪ್ರದರ್ಶನ ನೀಡಿದವರು ಒಕ್ಕೂಟ ವ್ಯವಸ್ಥೆಯ ಬಗ್ಗೆ ವ್ಯಂಗ್ಯ ಮಾಡಿದ್ದಾರೆ. ಗೋಧ್ರಾ ಹತ್ಯಾಕಾಂಡದಲ್ಲಿ ಗೃಹ ಸಚಿವ ಅಮಿತ್ ಶಾ ಅವರ ಹೆಸರನ್ನು ವಿನಾಃಕಾರಣ ಬಳಸಿದ್ದಾರೆ” ಎಂದು ಮಾಲಿನಿ ಗೌರ್ ಹೇಳಿದರು.

“ನಾವು ಕಾರ್ಯಕ್ರಮವನ್ನು ತಕ್ಷಣವೇ ನಿಲ್ಲಿಸಿದೆವು. ನಂತರ ಪ್ರೇಕ್ಷಕರನ್ನು ಹೊರಗೆ ಕಳುಹಿಸಿ, ಕಲಾವಿದರನ್ನು ಮತ್ತು ಕಾರ್ಯಕ್ರಮ ಸಂಘಟಕರನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದೇವೆ” ಎಂದು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ರೈತ ಹೋರಾಟದ ಕುರಿತು ವಿವಾದಾತ್ಮಕ ಹೇಳಿಕೆಯ ಆರೋಪ: ಕಾಂಗ್ರೆಸ್ ಸಂಸದನ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...