Homeಮುಖಪುಟಮಕ್ಕಳ ಕಾಮಿಡಿ ಶೋನಲ್ಲಿ ಪ್ರಧಾನಿ ಅವಹೇಳನ ಆರೋಪ; I&Bಗೆ ದೂರು ನೀಡಿದ BJP

ಮಕ್ಕಳ ಕಾಮಿಡಿ ಶೋನಲ್ಲಿ ಪ್ರಧಾನಿ ಅವಹೇಳನ ಆರೋಪ; I&Bಗೆ ದೂರು ನೀಡಿದ BJP

- Advertisement -
- Advertisement -

ಝೀ-ತಮಿಳ್‌ ಚಾನೆಲ್‌‌ ಆಯೋಜಿಸಿದ್ದ ಮಕ್ಕಳ ರಿಯಾಲಿಟಿ ಷೋ ‘ಜೂನಿಯರ್ ಸೂಪರ್ ಸ್ಟಾರ್ ಸೀಸನ್ 4’ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯನ್ನು ಅಪಹಾಸ್ಯ ಮಾಡಲಾಗಿದೆ ಎಂದು ಆರೋಪಿಸಿ ತಮಿಳುನಾಡು ಬಿಜೆಪಿ ನಾಯಕ ಸಿಟಿಆರ್ ನಿರ್ಮಲ್ ಕುಮಾರ್ ಅವರು ಕಾರ್ಯಕ್ರಮದ ವಿರುದ್ದ ದೂರು ದಾಖಲಿಸಿದ್ದಾರೆ. ಇವರ ದೂರು ಆಧರಿಸಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ ವಿಷಯದ ಬಗ್ಗೆ ವಿವರಣೆ ನೀಡುವಂತೆ ಝೀ ಟಿವಿಗೆ ನೋಟಿಸ್ ನೀಡಿದೆ.

ಝೀ ತಮಿಳು ಟಿವಿ ಚಾನೆಲ್‌ನ ಜನವರಿ 15ರ ಟಿವಿ ಕಾರ್ಯಕ್ರಮ ಜೂನಿಯರ್ ಸೂಪರ್ ಸ್ಟಾರ್ ಸೀಸನ್ 4 ರ ಪ್ರಸಾರದ ವಿರುದ್ಧ ಸಚಿವಾಲಯವು ದೂರನ್ನು ಸ್ವೀಕರಿಸಿದೆ ಎಂದು ನೋಟಿಸ್ ಹೇಳಿದೆ. “ಸಚಿವಾಲಯಕ್ಕೆ 7 ದಿನಗಳ ಅವಧಿಯೊಳಗೆ ದೂರಿನ ಕುರಿತು ಪ್ರತಿಕ್ರಿಯೆಗಳನ್ನು ನೀಡಲು ವಿನಂತಿಸಲಾಗಿದೆ. ವಿಫಲವಾದರೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:ಬಿಜೆಪಿ, ಮೋದಿ ವಿರುದ್ಧ ಪೋಸ್ಟ್: ಧಾರಾವಾಹಿಯಿಂದ ಮರಾಠಿ ನಟ ಹೊರಕ್ಕೆ, ಗ್ರಾಮದಲ್ಲಿ ಚಿತ್ರೀಕರಣ ಬೇಡ ಎಂದ ಗ್ರಾಮಸ್ಥರು

ನಿರ್ಮಲ್‌ ಕುಮಾರ್‌‌‌ ಅವರು ಆರೋಪಿಸಿರುವ ಈ ಕಾರ್ಯಕ್ರಮದಲ್ಲಿ, ಜನಪ್ರಿಯ ತಮಿಳು ಐತಿಹಾಸಿಕ, ರಾಜಕೀಯ ವಿಡಂಬನಾತ್ಮಕ ಚಲನಚಿತ್ರ ‘ಇಮ್ಸೈ ಅರಸನ್ 23 ನೇ ಪುಲಿಕೇಸಿ’ಯ ಸ್ಕಿಟ್‌ ಅನ್ನು ನಾಟಕೀಯವಾಗಿ ನಿರೂಪಿಸಲಾಗಿತ್ತು. ಅದರಲ್ಲಿ ರಾಜ ಮತ್ತು ಮಂತ್ರಿಯಂತೆ ಧರಿಸಿರುವ ಇಬ್ಬರು ಮಕ್ಕಳು ವಿಡಂಬನಾತ್ಮಕವಾಗಿ ಮಾತನಾಡುತ್ತಾರೆ.

ಸ್ಕಿಟ್‌ನಲ್ಲಿ ಬಳಸಿದ ಸಂಭಾಷಣೆಗಳಲ್ಲಿ, “ಸಿಂಧಿಯಾ ಎಂಬ ಕಾಲ್ಪನಿಕ ದೇಶದ ರಾಜನೊಬ್ಬ ಕಪ್ಪುಹಣವನ್ನು ತಡೆಯಲು ಕರೆನ್ಸಿಯನ್ನು ರದ್ದುಗೊಳಿಸಿ ವಿಫಲನಾದ. ನಂತರ ಅದನ್ನು ಮುಚ್ಚಿಡಲು ವಿವಿಧ ಬಣ್ಣಗಳ ಕೋಟುಗಳನ್ನು ಧರಿಸಿ ಜಗತ್ತನ್ನು ಸುತ್ತಿದ” ಎಂದು ಮಗುವೊಂದು ಹೇಳುತ್ತದೆ.

ಇಷ್ಟೇ ಅಲ್ಲದೆ, ಲಾಭದಲ್ಲಿರುವ ಉದ್ದಿಮೆಗಳನ್ನು ಮಾರುತ್ತಿರುವ ಬಗ್ಗೆಯೂ ಮಕ್ಕಳಿಬ್ಬರು ಸ್ಕಿಟ್‌ನಲ್ಲಿ ಮಾತನಾಡುತ್ತಾರೆ. ಜೊತೆಗೆ, “ಬೇರೆ ದೇಶದ ಜನರು ಖುಷಿಯಾಗಿ ಇರುವುದು ನಮ್ಮ ಆಡಳಿತ ಇಲ್ಲದಿರುವುದರಿಂದಾಗಿದೆ, ಅಲ್ಲಿಗೆ ಮಾರುವೇಷದಲ್ಲಿ ಹೋಗಬೇಕಾಗುತ್ತದೆ. ಇಲ್ಲವೆಂದರೆ ನಮ್ಮನ್ನು ಗುರುತಿಸುತ್ತಾರೆ. ನಮ್ಮ ದೇಶದಲ್ಲಾದರೆ ನಮ್ಮನ್ನು ಗುರುತಿಸುವುದೇ ಇಲ್ಲ” ಎಂದು ಮಂತ್ರಿಯ ವೇಷದಲ್ಲಿ ಇರುವ ಮಗುವೊಂದು ರಾಜನ ವೇಷದಾರಿಗೆ ಅಣಕಿಸುತ್ತಾ ಹೇಳುತ್ತದೆ.

ಇದನ್ನೂ ಓದಿ:ಶ್ರೀರಾಮನಂತೆಯೆ ಪ್ರಧಾನಿ ಮೋದಿ ‘ದೇವರ ಅವತಾರ’: ಮಧ್ಯಪ್ರದೇಶ ಕೃಷಿ ಸಚಿವ ಕಮಲ್ ಪಟೇಲ್‌

ನಾಟಕದ ಈ ಸಂಭಾಷಣೆಯು ಪ್ರಧಾನಿ ಮೋದಿಯನ್ನು ನೇರವಾಗಿ ಉಲ್ಲೇಖಿಸುತ್ತದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಈ ಕಾರ್ಯಕ್ರಮವು 2016 ರ ನೋಟು ಅಮಾನ್ಯೀಕರಣದ ಬಗ್ಗೆ ಪ್ರಧಾನಿಯವರನ್ನು ತಮಾಷೆ ಮಾಡಿದೆ ಮತ್ತು ಅವರ ಅಧಿಕಾರಾವಧಿಯ ಬಗ್ಗೆ ತಪ್ಪು ಮಾಹಿತಿಯನ್ನು ಹರಡುತ್ತದೆ ಎಂದು ಬಿಜೆಪಿ ಆರೋಪಿಸಿದೆ.

ಚಿಕ್ಕ ಮಕ್ಕಳನ್ನು ದುರುದ್ದೇಶದಿಂದ ಈ ಸಂಭಾಷಣೆ ನಡೆಸುವಂತೆ ಮಾಡಲಾಗಿದೆ ಎಂದು ನಿರ್ಮಲ್ ಕುಮಾರ್ ಅವರು ಝೀ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ತಮಿಳುನಾಡು ಮುಖ್ಯ ಕ್ಲಸ್ಟರ್ ಅಧಿಕಾರಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....