Homeಮುಖಪುಟಮಕ್ಕಳ ಕಾಮಿಡಿ ಶೋನಲ್ಲಿ ಪ್ರಧಾನಿ ಅವಹೇಳನ ಆರೋಪ; I&Bಗೆ ದೂರು ನೀಡಿದ BJP

ಮಕ್ಕಳ ಕಾಮಿಡಿ ಶೋನಲ್ಲಿ ಪ್ರಧಾನಿ ಅವಹೇಳನ ಆರೋಪ; I&Bಗೆ ದೂರು ನೀಡಿದ BJP

- Advertisement -
- Advertisement -

ಝೀ-ತಮಿಳ್‌ ಚಾನೆಲ್‌‌ ಆಯೋಜಿಸಿದ್ದ ಮಕ್ಕಳ ರಿಯಾಲಿಟಿ ಷೋ ‘ಜೂನಿಯರ್ ಸೂಪರ್ ಸ್ಟಾರ್ ಸೀಸನ್ 4’ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯನ್ನು ಅಪಹಾಸ್ಯ ಮಾಡಲಾಗಿದೆ ಎಂದು ಆರೋಪಿಸಿ ತಮಿಳುನಾಡು ಬಿಜೆಪಿ ನಾಯಕ ಸಿಟಿಆರ್ ನಿರ್ಮಲ್ ಕುಮಾರ್ ಅವರು ಕಾರ್ಯಕ್ರಮದ ವಿರುದ್ದ ದೂರು ದಾಖಲಿಸಿದ್ದಾರೆ. ಇವರ ದೂರು ಆಧರಿಸಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ ವಿಷಯದ ಬಗ್ಗೆ ವಿವರಣೆ ನೀಡುವಂತೆ ಝೀ ಟಿವಿಗೆ ನೋಟಿಸ್ ನೀಡಿದೆ.

ಝೀ ತಮಿಳು ಟಿವಿ ಚಾನೆಲ್‌ನ ಜನವರಿ 15ರ ಟಿವಿ ಕಾರ್ಯಕ್ರಮ ಜೂನಿಯರ್ ಸೂಪರ್ ಸ್ಟಾರ್ ಸೀಸನ್ 4 ರ ಪ್ರಸಾರದ ವಿರುದ್ಧ ಸಚಿವಾಲಯವು ದೂರನ್ನು ಸ್ವೀಕರಿಸಿದೆ ಎಂದು ನೋಟಿಸ್ ಹೇಳಿದೆ. “ಸಚಿವಾಲಯಕ್ಕೆ 7 ದಿನಗಳ ಅವಧಿಯೊಳಗೆ ದೂರಿನ ಕುರಿತು ಪ್ರತಿಕ್ರಿಯೆಗಳನ್ನು ನೀಡಲು ವಿನಂತಿಸಲಾಗಿದೆ. ವಿಫಲವಾದರೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:ಬಿಜೆಪಿ, ಮೋದಿ ವಿರುದ್ಧ ಪೋಸ್ಟ್: ಧಾರಾವಾಹಿಯಿಂದ ಮರಾಠಿ ನಟ ಹೊರಕ್ಕೆ, ಗ್ರಾಮದಲ್ಲಿ ಚಿತ್ರೀಕರಣ ಬೇಡ ಎಂದ ಗ್ರಾಮಸ್ಥರು

ನಿರ್ಮಲ್‌ ಕುಮಾರ್‌‌‌ ಅವರು ಆರೋಪಿಸಿರುವ ಈ ಕಾರ್ಯಕ್ರಮದಲ್ಲಿ, ಜನಪ್ರಿಯ ತಮಿಳು ಐತಿಹಾಸಿಕ, ರಾಜಕೀಯ ವಿಡಂಬನಾತ್ಮಕ ಚಲನಚಿತ್ರ ‘ಇಮ್ಸೈ ಅರಸನ್ 23 ನೇ ಪುಲಿಕೇಸಿ’ಯ ಸ್ಕಿಟ್‌ ಅನ್ನು ನಾಟಕೀಯವಾಗಿ ನಿರೂಪಿಸಲಾಗಿತ್ತು. ಅದರಲ್ಲಿ ರಾಜ ಮತ್ತು ಮಂತ್ರಿಯಂತೆ ಧರಿಸಿರುವ ಇಬ್ಬರು ಮಕ್ಕಳು ವಿಡಂಬನಾತ್ಮಕವಾಗಿ ಮಾತನಾಡುತ್ತಾರೆ.

ಸ್ಕಿಟ್‌ನಲ್ಲಿ ಬಳಸಿದ ಸಂಭಾಷಣೆಗಳಲ್ಲಿ, “ಸಿಂಧಿಯಾ ಎಂಬ ಕಾಲ್ಪನಿಕ ದೇಶದ ರಾಜನೊಬ್ಬ ಕಪ್ಪುಹಣವನ್ನು ತಡೆಯಲು ಕರೆನ್ಸಿಯನ್ನು ರದ್ದುಗೊಳಿಸಿ ವಿಫಲನಾದ. ನಂತರ ಅದನ್ನು ಮುಚ್ಚಿಡಲು ವಿವಿಧ ಬಣ್ಣಗಳ ಕೋಟುಗಳನ್ನು ಧರಿಸಿ ಜಗತ್ತನ್ನು ಸುತ್ತಿದ” ಎಂದು ಮಗುವೊಂದು ಹೇಳುತ್ತದೆ.

ಇಷ್ಟೇ ಅಲ್ಲದೆ, ಲಾಭದಲ್ಲಿರುವ ಉದ್ದಿಮೆಗಳನ್ನು ಮಾರುತ್ತಿರುವ ಬಗ್ಗೆಯೂ ಮಕ್ಕಳಿಬ್ಬರು ಸ್ಕಿಟ್‌ನಲ್ಲಿ ಮಾತನಾಡುತ್ತಾರೆ. ಜೊತೆಗೆ, “ಬೇರೆ ದೇಶದ ಜನರು ಖುಷಿಯಾಗಿ ಇರುವುದು ನಮ್ಮ ಆಡಳಿತ ಇಲ್ಲದಿರುವುದರಿಂದಾಗಿದೆ, ಅಲ್ಲಿಗೆ ಮಾರುವೇಷದಲ್ಲಿ ಹೋಗಬೇಕಾಗುತ್ತದೆ. ಇಲ್ಲವೆಂದರೆ ನಮ್ಮನ್ನು ಗುರುತಿಸುತ್ತಾರೆ. ನಮ್ಮ ದೇಶದಲ್ಲಾದರೆ ನಮ್ಮನ್ನು ಗುರುತಿಸುವುದೇ ಇಲ್ಲ” ಎಂದು ಮಂತ್ರಿಯ ವೇಷದಲ್ಲಿ ಇರುವ ಮಗುವೊಂದು ರಾಜನ ವೇಷದಾರಿಗೆ ಅಣಕಿಸುತ್ತಾ ಹೇಳುತ್ತದೆ.

ಇದನ್ನೂ ಓದಿ:ಶ್ರೀರಾಮನಂತೆಯೆ ಪ್ರಧಾನಿ ಮೋದಿ ‘ದೇವರ ಅವತಾರ’: ಮಧ್ಯಪ್ರದೇಶ ಕೃಷಿ ಸಚಿವ ಕಮಲ್ ಪಟೇಲ್‌

ನಾಟಕದ ಈ ಸಂಭಾಷಣೆಯು ಪ್ರಧಾನಿ ಮೋದಿಯನ್ನು ನೇರವಾಗಿ ಉಲ್ಲೇಖಿಸುತ್ತದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಈ ಕಾರ್ಯಕ್ರಮವು 2016 ರ ನೋಟು ಅಮಾನ್ಯೀಕರಣದ ಬಗ್ಗೆ ಪ್ರಧಾನಿಯವರನ್ನು ತಮಾಷೆ ಮಾಡಿದೆ ಮತ್ತು ಅವರ ಅಧಿಕಾರಾವಧಿಯ ಬಗ್ಗೆ ತಪ್ಪು ಮಾಹಿತಿಯನ್ನು ಹರಡುತ್ತದೆ ಎಂದು ಬಿಜೆಪಿ ಆರೋಪಿಸಿದೆ.

ಚಿಕ್ಕ ಮಕ್ಕಳನ್ನು ದುರುದ್ದೇಶದಿಂದ ಈ ಸಂಭಾಷಣೆ ನಡೆಸುವಂತೆ ಮಾಡಲಾಗಿದೆ ಎಂದು ನಿರ್ಮಲ್ ಕುಮಾರ್ ಅವರು ಝೀ ಎಂಟರ್‌ಪ್ರೈಸಸ್ ಲಿಮಿಟೆಡ್‌ನ ತಮಿಳುನಾಡು ಮುಖ್ಯ ಕ್ಲಸ್ಟರ್ ಅಧಿಕಾರಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...