Homeಮುಖಪುಟಭಾರತ್‌ ಜೋಡೋದಲ್ಲಿ ರಾಹುಲ್‌ ಜೊತೆ ಸಂವಾದ ನಡೆಸಿದವರ ವಿಚಾರಣೆಗೆ ಮುಂದಾದ ಗುಪ್ತಚರ ಇಲಾಖೆ: ಕಾಂಗ್ರೆಸ್‌

ಭಾರತ್‌ ಜೋಡೋದಲ್ಲಿ ರಾಹುಲ್‌ ಜೊತೆ ಸಂವಾದ ನಡೆಸಿದವರ ವಿಚಾರಣೆಗೆ ಮುಂದಾದ ಗುಪ್ತಚರ ಇಲಾಖೆ: ಕಾಂಗ್ರೆಸ್‌

- Advertisement -
- Advertisement -

ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ಸಂವಾದ ನಡೆಸಿದವರನ್ನು ಗುಪ್ತಚರ ದಳದ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

“ಎಲ್ಲಾ ರೀತಿಯ ಪ್ರಶ್ನೆಗಳನ್ನು ಕೇಳಲಾಗುತ್ತಿದೆ, ರಾಹುಲ್ ಗಾಂಧಿಯವರಿಗೆ ಸಲ್ಲಿಸಿರುವ ಜ್ಞಾಪಕ ಪತ್ರಗಳ ಪ್ರತಿಗಳನ್ನು ಕೋರುತ್ತಿದ್ದಾರೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ಟ್ವೀಟ್ ಮಾಡಿದ್ದಾರೆ.

“ಯಾತ್ರೆಯ ವಿಚಾರದಲ್ಲಿ ರಹಸ್ಯವಾಗಿ ಏನೂ ಇಲ್ಲ. ಆದರೆ ಇದು ಸ್ಪಷ್ಟವಾಗಿ ಜಿ2 (ನರೇಂದ್ರ ಮೋದಿ ಮತ್ತು ಅಮಿತ್ ಶಾ) ಗಲಾಟೆಯಾಗಿದೆ” ಎಂದು ದೂರಿದ್ದಾರೆ.

ಭಾರತೀಯ ಜನತಾ ಪಕ್ಷದ ದ್ವೇಷದ ರಾಜಕಾರಣವನ್ನು ಎದುರಿಸುವ ಗುರಿಯನ್ನು ಇಟ್ಟುಕೊಂಡು ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯು ಡಿಸೆಂಬರ್ 24 ರಂದು ರಾಷ್ಟ್ರದ ರಾಜಧಾನಿಯನ್ನು ಪ್ರವೇಶಿಸಿತ್ತು.

ಕಾಂಗ್ರೆಸ್ ಸಂವಹನ ವಿಭಾಗದ ಕಾರ್ಯದರ್ಶಿ ವೈಭವ್ ವಾಲಿಯಾ ಟ್ವೀಟ್ ಮಾಡಿದ್ದು, “ಡಿಸೆಂಬರ್ 23 ರಂದು ಬೆಳಿಗ್ಗೆ ಕೆಲವು ಅನಧಿಕೃತ ವ್ಯಕ್ತಿಗಳು ನಮ್ಮ ಕಂಟೇನರ್‌ಗೆ ಪ್ರವೇಶಿಸಿದರು. ಹೊರಬರುವಾಗ ನಮಗೆ ಸಿಕ್ಕಿಬಿದ್ದರು. ಭಾರತ್ ಜೋಡೋ ಯಾತ್ರಿಗಳ ಪರವಾಗಿ ನಾನು ಸೊಹ್ನಾ ಸಿಟಿ ಪಿಎಸ್‌ಗೆ ದೂರು ನೀಡಿದ್ದೇನೆ. ಪ್ರತಿಯನ್ನು ಲಗತ್ತಿಸಲಾಗಿದೆ. ಅನೌಪಚಾರಿಕವಾಗಿ ತಿಳಿದ ಮಾಹಿತಿಯ ಪ್ರಕಾರ ಅವರು ರಾಜ್ಯದ ಗುಪ್ತಚರ ಇಲಾಖೆಯವರಾಗಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 20ರಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಭಾರತ್ ಜೋಡೋ ಯಾತ್ರೆಯ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು. ನೆರೆಯ ಚೀನಾದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಬೆಳವಣಿಗೆಗಳ ಬೆನ್ನಲ್ಲಿ ರಾಹುಲ್ ಗಾಂಧಿಯವರಿಗೆ ಪತ್ರವನ್ನು ಬರೆದಿದ್ದರು.

ಕೋವಿಡ್ -19 ಪ್ರೋಟೋಕಾಲ್ಗಳನ್ನು ಅನುಸರಿಸಲು ಸಾಧ್ಯವಾಗದಿದ್ದರೆ ಮೆರವಣಿಗೆಯನ್ನು ನಿಲ್ಲಿಸುವಂತೆ ಕಾಂಗ್ರೆಸ್‌‌ಗೆ ಪತ್ರ ಬರೆದ ಕೆಲವು ದಿನಗಳ ನಂತರ ಕಾಂಗ್ರೆಸ್‌ನ ಇತ್ತೀಚಿನ ಆರೋಪಗಳು ಹೊರಬಿದ್ದಿವೆ.

ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಲು ಕೇಂದ್ರವು ನೆಪ ಹೇಳುತ್ತಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ರಾಹುಲ್ ಪಾದಯಾತ್ರೆಯಲ್ಲಿ ಸಾವಿರಾರು ಜನರು ಪಾಲ್ಗೊಳ್ಳುತ್ತಿದ್ದಾರೆ.

ಹರಿಯಾಣದ ನುಹ್‌ನಲ್ಲಿ ಮಾತನಾಡಿದ್ದ ರಾಹುಲ್‌, “ಈ ಯಾತ್ರೆ ಕಾಶ್ಮೀರದವರೆಗೂ ಸಂಚರಿಸಲಿದೆ. ಈಗ ಬಿಜೆಪಿಯವರು ಹೊಸ ಐಡಿಯಾವನ್ನು ಮಾಡಿದ್ದಾರೆ. ಕೋವಿಡ್ ಬರುತ್ತಿದೆ, ಹಾಗಾಗಿ ಯಾತ್ರೆ ನಿಲ್ಲಿಸಿ ಎಂದು ನನಗೆ ಪತ್ರ ಬರೆದಿದ್ದಾರೆ. ನೋಡಿ, ಈಗ ಯಾತ್ರೆ ನಿಲ್ಲಿಸಲು ಸಬೂಬು ಹೇಳಲಾಗುತ್ತಿದೆ. ಮಾಸ್ಕ್ ಧರಿಸಿ, ಯಾತ್ರೆ ನಿಲ್ಲಿಸಿ… ಇವೆಲ್ಲ ನೆಪಗಳಷ್ಟೆ. ಅವರು ಈ ದೇಶದ ಶಕ್ತಿ ಮತ್ತು ಸತ್ಯದ ಬಗ್ಗೆ ಹೆದರುತ್ತಾರೆ” ಎಂದಿದ್ದರು.

ಜೈರಾಂ ರಮೇಶ್ ಟ್ವೀಟ್ ಮಾಡಿ, “Omicron ಸಬ್-ವೇರಿಯಂಟ್ BF.7 ಉಲ್ಬಣದ 4 ಪ್ರಕರಣಗಳು ಗುಜರಾತ್ ಮತ್ತು ಒಡಿಶಾದಲ್ಲಿ ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್‌ನಲ್ಲಿ ವರದಿಯಾಗಿದೆ. ಆರೋಗ್ಯ ಸಚಿವರು ನಿನ್ನೆ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ ಮತ್ತು ಇಂದು ಪ್ರಧಾನಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. #BharatJodoYatra ಮರುದಿನ ದೆಹಲಿ ಪ್ರವೇಶಿಸಲಿದೆ. ಕ್ರೊನಾಲಜಿ ಅರ್ಥ ಮಾಡಿಕೊಳ್ಳಿ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...