Homeಮುಖಪುಟಭಾರತ್‌ ಜೋಡೋದಲ್ಲಿ ರಾಹುಲ್‌ ಜೊತೆ ಸಂವಾದ ನಡೆಸಿದವರ ವಿಚಾರಣೆಗೆ ಮುಂದಾದ ಗುಪ್ತಚರ ಇಲಾಖೆ: ಕಾಂಗ್ರೆಸ್‌

ಭಾರತ್‌ ಜೋಡೋದಲ್ಲಿ ರಾಹುಲ್‌ ಜೊತೆ ಸಂವಾದ ನಡೆಸಿದವರ ವಿಚಾರಣೆಗೆ ಮುಂದಾದ ಗುಪ್ತಚರ ಇಲಾಖೆ: ಕಾಂಗ್ರೆಸ್‌

- Advertisement -
- Advertisement -

ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ಸಂವಾದ ನಡೆಸಿದವರನ್ನು ಗುಪ್ತಚರ ದಳದ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

“ಎಲ್ಲಾ ರೀತಿಯ ಪ್ರಶ್ನೆಗಳನ್ನು ಕೇಳಲಾಗುತ್ತಿದೆ, ರಾಹುಲ್ ಗಾಂಧಿಯವರಿಗೆ ಸಲ್ಲಿಸಿರುವ ಜ್ಞಾಪಕ ಪತ್ರಗಳ ಪ್ರತಿಗಳನ್ನು ಕೋರುತ್ತಿದ್ದಾರೆ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ಟ್ವೀಟ್ ಮಾಡಿದ್ದಾರೆ.

“ಯಾತ್ರೆಯ ವಿಚಾರದಲ್ಲಿ ರಹಸ್ಯವಾಗಿ ಏನೂ ಇಲ್ಲ. ಆದರೆ ಇದು ಸ್ಪಷ್ಟವಾಗಿ ಜಿ2 (ನರೇಂದ್ರ ಮೋದಿ ಮತ್ತು ಅಮಿತ್ ಶಾ) ಗಲಾಟೆಯಾಗಿದೆ” ಎಂದು ದೂರಿದ್ದಾರೆ.

ಭಾರತೀಯ ಜನತಾ ಪಕ್ಷದ ದ್ವೇಷದ ರಾಜಕಾರಣವನ್ನು ಎದುರಿಸುವ ಗುರಿಯನ್ನು ಇಟ್ಟುಕೊಂಡು ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯು ಡಿಸೆಂಬರ್ 24 ರಂದು ರಾಷ್ಟ್ರದ ರಾಜಧಾನಿಯನ್ನು ಪ್ರವೇಶಿಸಿತ್ತು.

ಕಾಂಗ್ರೆಸ್ ಸಂವಹನ ವಿಭಾಗದ ಕಾರ್ಯದರ್ಶಿ ವೈಭವ್ ವಾಲಿಯಾ ಟ್ವೀಟ್ ಮಾಡಿದ್ದು, “ಡಿಸೆಂಬರ್ 23 ರಂದು ಬೆಳಿಗ್ಗೆ ಕೆಲವು ಅನಧಿಕೃತ ವ್ಯಕ್ತಿಗಳು ನಮ್ಮ ಕಂಟೇನರ್‌ಗೆ ಪ್ರವೇಶಿಸಿದರು. ಹೊರಬರುವಾಗ ನಮಗೆ ಸಿಕ್ಕಿಬಿದ್ದರು. ಭಾರತ್ ಜೋಡೋ ಯಾತ್ರಿಗಳ ಪರವಾಗಿ ನಾನು ಸೊಹ್ನಾ ಸಿಟಿ ಪಿಎಸ್‌ಗೆ ದೂರು ನೀಡಿದ್ದೇನೆ. ಪ್ರತಿಯನ್ನು ಲಗತ್ತಿಸಲಾಗಿದೆ. ಅನೌಪಚಾರಿಕವಾಗಿ ತಿಳಿದ ಮಾಹಿತಿಯ ಪ್ರಕಾರ ಅವರು ರಾಜ್ಯದ ಗುಪ್ತಚರ ಇಲಾಖೆಯವರಾಗಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 20ರಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಭಾರತ್ ಜೋಡೋ ಯಾತ್ರೆಯ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರು. ನೆರೆಯ ಚೀನಾದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಬೆಳವಣಿಗೆಗಳ ಬೆನ್ನಲ್ಲಿ ರಾಹುಲ್ ಗಾಂಧಿಯವರಿಗೆ ಪತ್ರವನ್ನು ಬರೆದಿದ್ದರು.

ಕೋವಿಡ್ -19 ಪ್ರೋಟೋಕಾಲ್ಗಳನ್ನು ಅನುಸರಿಸಲು ಸಾಧ್ಯವಾಗದಿದ್ದರೆ ಮೆರವಣಿಗೆಯನ್ನು ನಿಲ್ಲಿಸುವಂತೆ ಕಾಂಗ್ರೆಸ್‌‌ಗೆ ಪತ್ರ ಬರೆದ ಕೆಲವು ದಿನಗಳ ನಂತರ ಕಾಂಗ್ರೆಸ್‌ನ ಇತ್ತೀಚಿನ ಆರೋಪಗಳು ಹೊರಬಿದ್ದಿವೆ.

ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಲು ಕೇಂದ್ರವು ನೆಪ ಹೇಳುತ್ತಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ರಾಹುಲ್ ಪಾದಯಾತ್ರೆಯಲ್ಲಿ ಸಾವಿರಾರು ಜನರು ಪಾಲ್ಗೊಳ್ಳುತ್ತಿದ್ದಾರೆ.

ಹರಿಯಾಣದ ನುಹ್‌ನಲ್ಲಿ ಮಾತನಾಡಿದ್ದ ರಾಹುಲ್‌, “ಈ ಯಾತ್ರೆ ಕಾಶ್ಮೀರದವರೆಗೂ ಸಂಚರಿಸಲಿದೆ. ಈಗ ಬಿಜೆಪಿಯವರು ಹೊಸ ಐಡಿಯಾವನ್ನು ಮಾಡಿದ್ದಾರೆ. ಕೋವಿಡ್ ಬರುತ್ತಿದೆ, ಹಾಗಾಗಿ ಯಾತ್ರೆ ನಿಲ್ಲಿಸಿ ಎಂದು ನನಗೆ ಪತ್ರ ಬರೆದಿದ್ದಾರೆ. ನೋಡಿ, ಈಗ ಯಾತ್ರೆ ನಿಲ್ಲಿಸಲು ಸಬೂಬು ಹೇಳಲಾಗುತ್ತಿದೆ. ಮಾಸ್ಕ್ ಧರಿಸಿ, ಯಾತ್ರೆ ನಿಲ್ಲಿಸಿ… ಇವೆಲ್ಲ ನೆಪಗಳಷ್ಟೆ. ಅವರು ಈ ದೇಶದ ಶಕ್ತಿ ಮತ್ತು ಸತ್ಯದ ಬಗ್ಗೆ ಹೆದರುತ್ತಾರೆ” ಎಂದಿದ್ದರು.

ಜೈರಾಂ ರಮೇಶ್ ಟ್ವೀಟ್ ಮಾಡಿ, “Omicron ಸಬ್-ವೇರಿಯಂಟ್ BF.7 ಉಲ್ಬಣದ 4 ಪ್ರಕರಣಗಳು ಗುಜರಾತ್ ಮತ್ತು ಒಡಿಶಾದಲ್ಲಿ ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್‌ನಲ್ಲಿ ವರದಿಯಾಗಿದೆ. ಆರೋಗ್ಯ ಸಚಿವರು ನಿನ್ನೆ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ ಮತ್ತು ಇಂದು ಪ್ರಧಾನಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. #BharatJodoYatra ಮರುದಿನ ದೆಹಲಿ ಪ್ರವೇಶಿಸಲಿದೆ. ಕ್ರೊನಾಲಜಿ ಅರ್ಥ ಮಾಡಿಕೊಳ್ಳಿ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...