Homeಕರ್ನಾಟಕಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ?: ಪ್ರಿಯಾಂಕ್ ಪ್ರಶ್ನೆ

- Advertisement -
- Advertisement -

ಚಾಣಕ್ಯ ಗೃಹ ಸಚಿವರು ಎಂದು ಕರೆಯಲ್ಪಡುವವರು ಸರ್ಕಾರಗಳನ್ನು ಉರುಳಿಸುವಲ್ಲಿ, ಪಕ್ಷಗಳನ್ನು ಒಡೆಯುವಲ್ಲಿ ಮತ್ತು ಚುನಾವಣೆಗಳಲ್ಲಿ ಅಕ್ರಮ ನಡೆಸುವಲ್ಲಿ ನಿರತರಾಗಿರುವಾಗ ಪಹಲ್ಗಾಮ್‌ನಂತಹ ಘಟನೆಗಳು ನಡೆಯಲು ಸಾಧ್ಯವಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ. ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ? ಎಂದು ಅವರು ಪ್ರಶ್ನಿಸಿದ್ದಾರೆ.

ಘಟನೆ ಬಗ್ಗೆ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಗುಪ್ತಚರ ಎಲ್ಲಿದೆ? ಕಣ್ಗಾವಲು ಎಲ್ಲಿದೆ? ಜೇಮ್ಸ್ ಬಾಂಡ್ ದೋವಲ್ ಎಲ್ಲಿದ್ದಾರೆ? ಪಹಲ್ಗಾಮ್‌ ಮತ್ತು ಪುಲ್ವಾಮದ ಭದ್ರತಾ ಲೋಪಗಳನ್ನು ಮೊದಲೇ ಎರಡೂ ಸಂದರ್ಭಗಳಲ್ಲಿ ಗುರುತಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಎರಡನ್ನೂ ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

ಇಷ್ಟೆ ಅಲ್ಲದೆ, ಆಘಾತಕಾರಿಯಾಗಿ ಬಿಜೆಪಿ ಸರ್ಕಾರವು ಹಣವನ್ನು ಉಳಿಸಲು ಕೋವಿಡ್ ನಂತರ 1.8 ಲಕ್ಷಕ್ಕೂ ಹೆಚ್ಚು ಸೇನಾ ಸಿಬ್ಬಂದಿಯನ್ನು ಕಡಿತಗೊಳಿಸಿದೆ ಎಂದು ಅವರು ಹೇಳಿದ್ದಾರೆ.

ಮಾನ್ಯ ಅಮಿತ್ ಶಾ ಅವರು ವಿರೋಧ ಪಕ್ಷದ ನಾಯಕರ ಮೇಲೆ ಕಣ್ಣಿಡಲು ಅಥವಾ ಜಯ್ ಶಾ ಅವರನ್ನು ಐಸಿಸಿ ಅಧ್ಯಕ್ಷರನ್ನಾಗಿ ಮಾಡಲು ತೋರುವ ಬದ್ಧತೆಯಂತೆಯೇ ವಿದೇಶಿ ಬೆದರಿಕೆಗಳನ್ನು ಮೇಲ್ವಿಚಾರಣೆ ಮಾಡಲು ಆಸಕ್ತಿ ತೋರಿಸಿದ್ದರೆ, ಬಹುಶಃ ಚೀನಾ ಭಾರತದ ನೆಲದಲ್ಲಿ ನುಸುಳುತ್ತಿರಲಿಲ್ಲ ಮತ್ತು ಬಹುಶಃ ಈ ದುರದೃಷ್ಟಕರ ದಾಳಿಯನ್ನು ತಡೆಯಬಹುದಿತ್ತು ಎಂದು ಪ್ರಿಯಾಂಕ್ ಹೇಳಿದ್ದಾರೆ.

ಮಾಧ್ಯಮಗಳು ಪುಲ್ವಾಮಾಕ್ಕೆ ಹೋಲಿಸಿದರೆ ಈ ಬಾರಿ ಉತ್ತಮವಾಗಿ ಮತ್ತು ಹೆಚ್ಚು ಜವಾಬ್ದಾರಿಯುತವಾಗಿ ಪ್ರತಿಕ್ರಿಯಿಸುತ್ತವೆ ಎಂದು ನಾನು ಭಾವಿಸುತ್ತೇನೆ. ಈ ಸರ್ಕಾರ ಘಟನೆಯ ಗಂಭೀರತೆಯನ್ನು ಕಡಿಮೆ ಮಾಡಲು, ಸಾವುನೋವುಗಳನ್ನು ಕಡಿಮೆ ವರದಿ ಮಾಡಲು ಮತ್ತು ಈ ದುರಂತವನ್ನು ಕೋಮು ಉದ್ವಿಗ್ನತೆಯನ್ನು ಹುಟ್ಟುಹಾಕಲು ಅಥವಾ ಕಾಂಗ್ರೆಸ್ ಅನ್ನು ಎಂದಿನಂತೆ ದೂಷಿಸಲು ಖಂಡಿತವಾಗಿಯೂ ಬಳಸುತ್ತದೆ ಎಂದು ಅವರು ಹೇಳಿದ್ದಾರೆ.

ಗೃಹ ಸಚಿವ ಶಾ ಅವರ ರಾಜೀನಾಮೆಗೆ ಆದೇಶಿಸುವ ಧೈರ್ಯ ಪ್ರಧಾನಿಗೆ ಇದೆಯೇ? ಆರೆಸ್ಸೆಸ್‌ನ ಆಕ್ರಮಣವು ವಿಜಯದಶಮಿ ಉತ್ಸವ ಭಾಷಣಗಳು ಮತ್ತು ಅಲ್ಪಸಂಖ್ಯಾತರು ಮತ್ತು ದಲಿತರ ಮೇಲಿನ ಆಕ್ರಮಣಕ್ಕೆ ಮಾತ್ರ ಸೀಮಿತವಾಗುತ್ತದೆಯೇ? ಪ್ರಧಾನಿಗೆ ಬಾಗಿಲು ತೋರಿಸುವಷ್ಟು ಶಕ್ತಿ ಅವರಲ್ಲಿದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ದಾಳಿಯ ಬಗ್ಗೆ ಮಂಗಳವಾರ ಪ್ರತಿಕ್ರಿಯಿಸಿದ್ದ ಪ್ರಿಯಾಂಕ್, “ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮಂಜುನಾಥ್ ಎಂಬುವವರು ಮೃತಪಟ್ಟಿದ್ದು, ಹಲವು ಪ್ರವಾಸಿಗರು ಗಾಯಗೊಂಡಿರುವ ವಿಷಯ ತಿಳಿದು ಅತೀವ ದುಃಖವಾಯಿತು. ಕಾಶ್ಮೀರದಲ್ಲಿ ಸಿಲುಕಿರುವ ಕರ್ನಾಟಕದ ಪ್ರವಾಸಿಗರ ರಕ್ಷಣೆಗೆ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದು, ಅವರಿಗೆ ನೆರವಾಗಲು ಅಧಿಕಾರಿಗಳ ತಂಡವನ್ನು ಸ್ಥಳಕ್ಕೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ವರ್ಗದವರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಆಶಿಸುತ್ತೇನೆ” ಎಂದು ಹೇಳಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಸ್ಮಿಲ್ಲಾ… ಎನ್ನುತ್ತಾ ಸ್ಥಳೀಯ ಮುಸ್ಲಿಮರು ನಮಗೆ ಸಹಾಯ ಮಾಡಿದರು: ಪಹಲ್ಗಾಮ್ ದಾಳಿಯ ಸಂತ್ರಸ್ತೆ

ಬಿಸ್ಮಿಲ್ಲಾ… ಎನ್ನುತ್ತಾ ಸ್ಥಳೀಯ ಮುಸ್ಲಿಮರು ನಮಗೆ ಸಹಾಯ ಮಾಡಿದರು: ಪಹಲ್ಗಾಮ್ ದಾಳಿಯ ಸಂತ್ರಸ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -