Homeಮುಖಪುಟರಾಷ್ಟ್ರ ರಾಜಧಾನಿಯಲ್ಲಿ ತೀವ್ರಗೊಂಡ ಬಿಸಿ ಗಾಳಿ; ಬಿಹಾರದ ವ್ಯಕ್ತಿ ದೆಹಲಿ ಆಸ್ಪತ್ರೆಯಲ್ಲಿ ಸಾವು

ರಾಷ್ಟ್ರ ರಾಜಧಾನಿಯಲ್ಲಿ ತೀವ್ರಗೊಂಡ ಬಿಸಿ ಗಾಳಿ; ಬಿಹಾರದ ವ್ಯಕ್ತಿ ದೆಹಲಿ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ ಬಿಸಿ ಗಾಳಿ ಸಮಯದಲ್ಲಿ ಶಾಖದ ಹೊಡೆತಕ್ಕೆ ಒಳಗಾಗಿದ್ದ ಬಿಹಾರದ ದರ್ಭಾಂಗದ 40 ವರ್ಷದ ವ್ಯಕ್ತಿ ನಿನ್ನೆ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜ್ವರ ತೀವ್ರಗೊಂಡಿದ್ದರಿಂದ ಅವರನ್ನು ಸೋಮವಾರ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

ಮೃತ ವ್ಯಕ್ತಿ ಕೂಲರ್ ಅಥವಾ ಫ್ಯಾನ್ ಇಲ್ಲದ ಕೋಣೆಯಲ್ಲಿ ವಾಸಿಸುತ್ತಿದ್ದರು, ತೀವ್ರ ಜ್ವರವಿದ್ದ ಕಾಋಣ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ವೈದ್ಯರು ಹೇಳಿದರು. ದೇಹದ ಉಷ್ಣತೆಯು 107 ಡಿಗ್ರಿ ಸೆಲ್ಸಿಯಸ್ ಮಾರ್ಕ್ ಅನ್ನು ದಾಟಿತ್ತು, ಸಾಮಾನ್ಯಕ್ಕಿಂತ ಸುಮಾರು 10 ಡಿಗ್ರಿ ಹೆಚ್ಚಾಗಿತ್ತು. ಈ ಬೇಸಿಗೆಯಲ್ಲಿ ದೆಹಲಿಯಲ್ಲಿ ವರದಿಯಾದ ಮೊದಲ ಬಿಸಿಗಾಳಿ ಹೊಡೆತದ ಸಾವು ಇದಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯು ತನ್ನ ಬೇಸಿಗೆ ತಾಪಮಾನವು ದಾಖಲೆ ನಿರ್ಮಿಇಸಿದೆ. ಇಲ್ಲಿನ ಜನರು ಸಾರ್ವಕಾಲಿಕ ಹೆಚ್ಚಿನ ವಿದ್ಯುತ್ ಬೇಡಿಕೆ ಮತ್ತು ನೀರಿನ ಬಿಕ್ಕಟ್ಟಿನೊಂದಿಗೆ ಜೀವಿಸುತ್ತಿದೆ. ನಗರದ ಹೊರವಲಯದಲ್ಲಿರುವ ಮುಂಗೇಶ್‌ಪುರ ಹವಾಮಾನ ಕೇಂದ್ರವು 52.9 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ, ದೇಶದ ಯಾವುದೇ ಪ್ರದೇಶಕ್ಕಿಂತ ಇದುವರೆಗೆ ಅತಿ ಹೆಚ್ಚು ತಾಫಮಾನ. ಮುಂಗೇಶಪುರ ನಿಲ್ದಾಣದ ರೆಕಾರ್ಡ್ ರೀಡಿಂಗ್ ಸಂವೇದಕ ದೋಷ ಅಥವಾ ಸ್ಥಳೀಯ ಅಂಶಗಳಿಂದಾಗಿ ಹವಾಮಾನ ಕಚೇರಿ ಈಗ ತನಿಖೆ ನಡೆಸುತ್ತಿದೆ.

ದೆಹಲಿಯ 20 ಮೇಲ್ವಿಚಾರಣಾ ಕೇಂದ್ರಗಳಲ್ಲಿ 14 ನಿನ್ನೆ ತಾಪಮಾನದಲ್ಲಿ ಕುಸಿತವನ್ನು ದಾಖಲಿಸಿದೆ ಮತ್ತು ನಗರದಾದ್ಯಂತ ಸರಾಸರಿ 45-50 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಎಂ ಮಹಪಾತ್ರ ಹೇಳಿದ್ದಾರೆ.

ತಾಪಮಾನ ಏರುವಿಕೆ ಮತ್ತು ದಾಖಲೆಗಳ ಹೊರತಾಗಿಯೂ, ರಾಜಧಾನಿಯ ನಿವಾಸಿಗಳು ಕಳೆದ ಒಂದು ವಾರದಿಂದ ತೀವ್ರ ಶಾಖದ ಅಲೆಯಲ್ಲಿ ತತ್ತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯಕ್ಕೆ ಪೂರಕವಾಗಿ ದೆಹಲಿಯ ಹಲವು ಭಾಗಗಳು ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿವೆ.

ದೆಹಲಿಯ ಗೀತಾ ಕಾಲೋನಿಯಂತಹ ಪ್ರದೇಶಗಳು ಮತ್ತು ಚಾಣಕ್ಯಪುರಿಯ ಕೆಲವು ಭಾಗಗಳಿಗೆ ಟ್ಯಾಂಕರ್‌ಗಳ ಮೂಲಕ ಸೀಮಿತ ನೀರು ಸರಬರಾಜು ಮಾಡಲಾಗುತ್ತಿದೆ. ಜನರು ನೀರಿನ ಟ್ಯಾಂಕರ್ ಅನ್ನು ಸುತ್ತುವರೆದು ತಮ್ಮ ದೈನಂದಿನ ಪೂರೈಕೆಗೆ ನೀರು ಸಂಗ್ರಹಿಸಲು ಪರಸ್ಪರ ಜಗಳವಾಡುವುದನ್ನು ಕಾಣಬಹುದಾಗಿದೆ.

ದೆಹಲಿ ಸರ್ಕಾರವು ಇದೀಗ ನಿವಾಸಿಗಳಿಗೆ ನೀರನ್ನು ವಿವೇಚನೆಯಿಂದ ಬಳಸುವಂತೆ ಮನವಿ ಮಾಡಿದೆ. ನೀರು ವ್ಯರ್ಥವಾಗುತ್ತಿರುವ ಪ್ರಕರಣಗಳನ್ನು ಗುರುತಿಸಲು ಮತ್ತು ಪರಿಶೀಲಿಸಲು 200 ತಂಡಗಳನ್ನು ರಚಿಸಲಾಗಿದೆ. ಹೋಸ್ ಪೈಪ್‌ನಿಂದ ಕಾರುಗಳನ್ನು ತೊಳೆಯುವುದು, ನೀರಿನ ಟ್ಯಾಂಕ್‌ಗಳನ್ನು ತುಂಬಿ ಹರಿಯುವುದು ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ಕುಡಿಯುವ ನೀರನ್ನು ಬಳಸುವುದು ಮುಂತಾದ ಚಟುವಟಿಕೆಗಳಿಗೆ ₹2000 ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ; ರೆಮಲ್ ಚಂಡಮಾರುತ ಪ್ರಭಾವ; ಈಶಾನ್ಯ ಭಾರತದಲ್ಲಿ ರೈಲು ಸೇವೆಗಳು ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...