Homeಮುಖಪುಟರಾಷ್ಟ್ರ ರಾಜಧಾನಿಯಲ್ಲಿ ತೀವ್ರಗೊಂಡ ಬಿಸಿ ಗಾಳಿ; ಬಿಹಾರದ ವ್ಯಕ್ತಿ ದೆಹಲಿ ಆಸ್ಪತ್ರೆಯಲ್ಲಿ ಸಾವು

ರಾಷ್ಟ್ರ ರಾಜಧಾನಿಯಲ್ಲಿ ತೀವ್ರಗೊಂಡ ಬಿಸಿ ಗಾಳಿ; ಬಿಹಾರದ ವ್ಯಕ್ತಿ ದೆಹಲಿ ಆಸ್ಪತ್ರೆಯಲ್ಲಿ ಸಾವು

- Advertisement -
- Advertisement -

ರಾಷ್ಟ್ರ ರಾಜಧಾನಿಯಲ್ಲಿ ದಾಖಲೆಯ ಬಿಸಿ ಗಾಳಿ ಸಮಯದಲ್ಲಿ ಶಾಖದ ಹೊಡೆತಕ್ಕೆ ಒಳಗಾಗಿದ್ದ ಬಿಹಾರದ ದರ್ಭಾಂಗದ 40 ವರ್ಷದ ವ್ಯಕ್ತಿ ನಿನ್ನೆ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜ್ವರ ತೀವ್ರಗೊಂಡಿದ್ದರಿಂದ ಅವರನ್ನು ಸೋಮವಾರ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.

ಮೃತ ವ್ಯಕ್ತಿ ಕೂಲರ್ ಅಥವಾ ಫ್ಯಾನ್ ಇಲ್ಲದ ಕೋಣೆಯಲ್ಲಿ ವಾಸಿಸುತ್ತಿದ್ದರು, ತೀವ್ರ ಜ್ವರವಿದ್ದ ಕಾಋಣ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ವೈದ್ಯರು ಹೇಳಿದರು. ದೇಹದ ಉಷ್ಣತೆಯು 107 ಡಿಗ್ರಿ ಸೆಲ್ಸಿಯಸ್ ಮಾರ್ಕ್ ಅನ್ನು ದಾಟಿತ್ತು, ಸಾಮಾನ್ಯಕ್ಕಿಂತ ಸುಮಾರು 10 ಡಿಗ್ರಿ ಹೆಚ್ಚಾಗಿತ್ತು. ಈ ಬೇಸಿಗೆಯಲ್ಲಿ ದೆಹಲಿಯಲ್ಲಿ ವರದಿಯಾದ ಮೊದಲ ಬಿಸಿಗಾಳಿ ಹೊಡೆತದ ಸಾವು ಇದಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯು ತನ್ನ ಬೇಸಿಗೆ ತಾಪಮಾನವು ದಾಖಲೆ ನಿರ್ಮಿಇಸಿದೆ. ಇಲ್ಲಿನ ಜನರು ಸಾರ್ವಕಾಲಿಕ ಹೆಚ್ಚಿನ ವಿದ್ಯುತ್ ಬೇಡಿಕೆ ಮತ್ತು ನೀರಿನ ಬಿಕ್ಕಟ್ಟಿನೊಂದಿಗೆ ಜೀವಿಸುತ್ತಿದೆ. ನಗರದ ಹೊರವಲಯದಲ್ಲಿರುವ ಮುಂಗೇಶ್‌ಪುರ ಹವಾಮಾನ ಕೇಂದ್ರವು 52.9 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ, ದೇಶದ ಯಾವುದೇ ಪ್ರದೇಶಕ್ಕಿಂತ ಇದುವರೆಗೆ ಅತಿ ಹೆಚ್ಚು ತಾಫಮಾನ. ಮುಂಗೇಶಪುರ ನಿಲ್ದಾಣದ ರೆಕಾರ್ಡ್ ರೀಡಿಂಗ್ ಸಂವೇದಕ ದೋಷ ಅಥವಾ ಸ್ಥಳೀಯ ಅಂಶಗಳಿಂದಾಗಿ ಹವಾಮಾನ ಕಚೇರಿ ಈಗ ತನಿಖೆ ನಡೆಸುತ್ತಿದೆ.

ದೆಹಲಿಯ 20 ಮೇಲ್ವಿಚಾರಣಾ ಕೇಂದ್ರಗಳಲ್ಲಿ 14 ನಿನ್ನೆ ತಾಪಮಾನದಲ್ಲಿ ಕುಸಿತವನ್ನು ದಾಖಲಿಸಿದೆ ಮತ್ತು ನಗರದಾದ್ಯಂತ ಸರಾಸರಿ 45-50 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಎಂ ಮಹಪಾತ್ರ ಹೇಳಿದ್ದಾರೆ.

ತಾಪಮಾನ ಏರುವಿಕೆ ಮತ್ತು ದಾಖಲೆಗಳ ಹೊರತಾಗಿಯೂ, ರಾಜಧಾನಿಯ ನಿವಾಸಿಗಳು ಕಳೆದ ಒಂದು ವಾರದಿಂದ ತೀವ್ರ ಶಾಖದ ಅಲೆಯಲ್ಲಿ ತತ್ತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯಕ್ಕೆ ಪೂರಕವಾಗಿ ದೆಹಲಿಯ ಹಲವು ಭಾಗಗಳು ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿವೆ.

ದೆಹಲಿಯ ಗೀತಾ ಕಾಲೋನಿಯಂತಹ ಪ್ರದೇಶಗಳು ಮತ್ತು ಚಾಣಕ್ಯಪುರಿಯ ಕೆಲವು ಭಾಗಗಳಿಗೆ ಟ್ಯಾಂಕರ್‌ಗಳ ಮೂಲಕ ಸೀಮಿತ ನೀರು ಸರಬರಾಜು ಮಾಡಲಾಗುತ್ತಿದೆ. ಜನರು ನೀರಿನ ಟ್ಯಾಂಕರ್ ಅನ್ನು ಸುತ್ತುವರೆದು ತಮ್ಮ ದೈನಂದಿನ ಪೂರೈಕೆಗೆ ನೀರು ಸಂಗ್ರಹಿಸಲು ಪರಸ್ಪರ ಜಗಳವಾಡುವುದನ್ನು ಕಾಣಬಹುದಾಗಿದೆ.

ದೆಹಲಿ ಸರ್ಕಾರವು ಇದೀಗ ನಿವಾಸಿಗಳಿಗೆ ನೀರನ್ನು ವಿವೇಚನೆಯಿಂದ ಬಳಸುವಂತೆ ಮನವಿ ಮಾಡಿದೆ. ನೀರು ವ್ಯರ್ಥವಾಗುತ್ತಿರುವ ಪ್ರಕರಣಗಳನ್ನು ಗುರುತಿಸಲು ಮತ್ತು ಪರಿಶೀಲಿಸಲು 200 ತಂಡಗಳನ್ನು ರಚಿಸಲಾಗಿದೆ. ಹೋಸ್ ಪೈಪ್‌ನಿಂದ ಕಾರುಗಳನ್ನು ತೊಳೆಯುವುದು, ನೀರಿನ ಟ್ಯಾಂಕ್‌ಗಳನ್ನು ತುಂಬಿ ಹರಿಯುವುದು ಮತ್ತು ವಾಣಿಜ್ಯ ಉದ್ದೇಶಗಳಿಗಾಗಿ ಕುಡಿಯುವ ನೀರನ್ನು ಬಳಸುವುದು ಮುಂತಾದ ಚಟುವಟಿಕೆಗಳಿಗೆ ₹2000 ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ; ರೆಮಲ್ ಚಂಡಮಾರುತ ಪ್ರಭಾವ; ಈಶಾನ್ಯ ಭಾರತದಲ್ಲಿ ರೈಲು ಸೇವೆಗಳು ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...