Homeಮುಖಪುಟಮಣಿಪುರದಲ್ಲಿ ತೀವ್ರಗೊಂಡ ಗಲಭೆ; ಡ್ರೋನ್, ರಾಕೆಟ್ ದಾಳಿಯ ನಡುವೆ ಮೂರು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ

ಮಣಿಪುರದಲ್ಲಿ ತೀವ್ರಗೊಂಡ ಗಲಭೆ; ಡ್ರೋನ್, ರಾಕೆಟ್ ದಾಳಿಯ ನಡುವೆ ಮೂರು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ

- Advertisement -
- Advertisement -

ಮಣಿಪುರದಲ್ಲಿ ಹೆಚ್ಚುತ್ತಿರುವ ಸಂಘರ್ಷದ ನಡುವೆ ಡ್ರೋನ್, ರಾಕೆಟ್ ದಾಳಿ ಹೆಚ್ಚಾಗಿದ್ದು, ಮೂರು ಜಿಲ್ಲೆಗಳಲ್ಲಿ ಮಂಗಳವಾರ ಕರ್ಫ್ಯೂ ವಿಧಿಸಲಾಗಿದೆ.

ಲೋಕಸಭೆ ಚುನಾವಣೆ ನಂತರ ತಹಬದಿಗೆ ಬಂದಿದ್ದ ಮಣಿಪುರದಲ್ಲಿ, ಇದೀಗ ಘರ್ಷಣೆ ಮತ್ತೆ ಉಲ್ಬಣಗೊಂಡಿದೆ. ಇತ್ತೀಚಿನ ಹಿಂಸಾಚಾರದ ಘಟನೆಗಳು ಮತ್ತು ಪ್ರತಿಭಟನೆಗಳು ಪ್ರಕ್ಷುಬ್ಧತೆಯನ್ನು ಹೆಚ್ಚಿಸಿವೆ. ಹಿಂಸಾಚಾರದ ಉಲ್ಬಣದಿಂದಾಗಿ, ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಆಯಾ ಜಿಲ್ಲೆಗಳಲ್ಲಿ ಮಂಗಳವಾರ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಿದ್ದರು.  ಆದರೆ, ಸಂಘರ್ಷ ಹೆಚ್ಚುತ್ತಿರುವ ಕಾರಣ ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ. ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ ಮರು ಹೇರಲಾಗಿದೆ ಎಂದು ಡಿಎಂಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಧ್ಯಮ, ವಿದ್ಯುತ್, ನ್ಯಾಯಾಲಯ ಮತ್ತು ಆರೋಗ್ಯ ಸೇರಿದಂತೆ ಅಗತ್ಯ ಸೇವೆಗಳಿಗೆ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ಒಳಗೊಂಡಿರುವ ರಾಜ್ಯದಲ್ಲಿ ಆರಂಭವಾಗಿರುವ ಹೊಸ ಹಿಂಸಾಚಾರದಲ್ಲಿ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ. 12 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸೋಮವಾರ ಇಂಫಾಲ್‌ನ ಖ್ವೈರಂಬಂಡ್ ಮಹಿಳಾ ಮಾರುಕಟ್ಟೆಯಲ್ಲಿ ವಿವಿಧ ಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಶಿಬಿರಗಳನ್ನು ಸ್ಥಾಪಿಸಿದರು. ವಿದ್ಯಾರ್ಥಿಗಳು, ಅವರ ಸಮವಸ್ತ್ರದಲ್ಲಿ, ಮಹಿಳಾ ಅಂಗಡಿಯವರು ಮಾರುಕಟ್ಟೆಯಲ್ಲಿ ಶಿಬಿರಗಳನ್ನು ಸ್ಥಾಪಿಸಲು ಸಹಾಯ ಮಾಡಿದರು ಎಂದು ರಾ‍ಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇತ್ತೀಚಿನ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ಹಿಂದಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ರಾಜ್ಯದ “ಪ್ರಾದೇಶಿಕ ಮತ್ತು ಆಡಳಿತ ಸಮಗ್ರತೆ” ರಕ್ಷಣೆಗೆ ಕರೆ ನೀಡಿ ಸೋಮವಾರ ಮಣಿಪುರ ಸೆಕ್ರೆಟರಿಯೇಟ್ ಮತ್ತು ರಾಜಭವನದ ಮುಂದೆ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ್ ಕಣಿವೆ ಮೂಲದ ಮೈತೇಯಿಗಳು ಮತ್ತು ಪಕ್ಕದ ಬೆಟ್ಟಗಳ ಮೂಲದ ಕುಕಿ-ಜೋ ಗುಂಪುಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ; ‘ಲೋಕಸಭೆ ಚುನಾವಣೆಗೂ ಮುನ್ನ ಜನರಲ್ಲಿ ಇದ್ದ ಭಯದ ಭಾವನೆ ಈಗ ಮಾಯವಾಗಿದೆ..’; ರಾಹುಲ್ ಅಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...