Homeಮುಖಪುಟಮಣಿಪುರದಲ್ಲಿ ತೀವ್ರಗೊಂಡ ಗಲಭೆ; ಡ್ರೋನ್, ರಾಕೆಟ್ ದಾಳಿಯ ನಡುವೆ ಮೂರು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ

ಮಣಿಪುರದಲ್ಲಿ ತೀವ್ರಗೊಂಡ ಗಲಭೆ; ಡ್ರೋನ್, ರಾಕೆಟ್ ದಾಳಿಯ ನಡುವೆ ಮೂರು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ

- Advertisement -
- Advertisement -

ಮಣಿಪುರದಲ್ಲಿ ಹೆಚ್ಚುತ್ತಿರುವ ಸಂಘರ್ಷದ ನಡುವೆ ಡ್ರೋನ್, ರಾಕೆಟ್ ದಾಳಿ ಹೆಚ್ಚಾಗಿದ್ದು, ಮೂರು ಜಿಲ್ಲೆಗಳಲ್ಲಿ ಮಂಗಳವಾರ ಕರ್ಫ್ಯೂ ವಿಧಿಸಲಾಗಿದೆ.

ಲೋಕಸಭೆ ಚುನಾವಣೆ ನಂತರ ತಹಬದಿಗೆ ಬಂದಿದ್ದ ಮಣಿಪುರದಲ್ಲಿ, ಇದೀಗ ಘರ್ಷಣೆ ಮತ್ತೆ ಉಲ್ಬಣಗೊಂಡಿದೆ. ಇತ್ತೀಚಿನ ಹಿಂಸಾಚಾರದ ಘಟನೆಗಳು ಮತ್ತು ಪ್ರತಿಭಟನೆಗಳು ಪ್ರಕ್ಷುಬ್ಧತೆಯನ್ನು ಹೆಚ್ಚಿಸಿವೆ. ಹಿಂಸಾಚಾರದ ಉಲ್ಬಣದಿಂದಾಗಿ, ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಆಯಾ ಜಿಲ್ಲೆಗಳಲ್ಲಿ ಮಂಗಳವಾರ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಿದ್ದರು.  ಆದರೆ, ಸಂಘರ್ಷ ಹೆಚ್ಚುತ್ತಿರುವ ಕಾರಣ ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ. ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ ಮರು ಹೇರಲಾಗಿದೆ ಎಂದು ಡಿಎಂಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಧ್ಯಮ, ವಿದ್ಯುತ್, ನ್ಯಾಯಾಲಯ ಮತ್ತು ಆರೋಗ್ಯ ಸೇರಿದಂತೆ ಅಗತ್ಯ ಸೇವೆಗಳಿಗೆ ಕರ್ಫ್ಯೂನಿಂದ ವಿನಾಯಿತಿ ನೀಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ಒಳಗೊಂಡಿರುವ ರಾಜ್ಯದಲ್ಲಿ ಆರಂಭವಾಗಿರುವ ಹೊಸ ಹಿಂಸಾಚಾರದಲ್ಲಿ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ. 12 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸೋಮವಾರ ಇಂಫಾಲ್‌ನ ಖ್ವೈರಂಬಂಡ್ ಮಹಿಳಾ ಮಾರುಕಟ್ಟೆಯಲ್ಲಿ ವಿವಿಧ ಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಶಿಬಿರಗಳನ್ನು ಸ್ಥಾಪಿಸಿದರು. ವಿದ್ಯಾರ್ಥಿಗಳು, ಅವರ ಸಮವಸ್ತ್ರದಲ್ಲಿ, ಮಹಿಳಾ ಅಂಗಡಿಯವರು ಮಾರುಕಟ್ಟೆಯಲ್ಲಿ ಶಿಬಿರಗಳನ್ನು ಸ್ಥಾಪಿಸಲು ಸಹಾಯ ಮಾಡಿದರು ಎಂದು ರಾ‍ಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇತ್ತೀಚಿನ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ಹಿಂದಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ರಾಜ್ಯದ “ಪ್ರಾದೇಶಿಕ ಮತ್ತು ಆಡಳಿತ ಸಮಗ್ರತೆ” ರಕ್ಷಣೆಗೆ ಕರೆ ನೀಡಿ ಸೋಮವಾರ ಮಣಿಪುರ ಸೆಕ್ರೆಟರಿಯೇಟ್ ಮತ್ತು ರಾಜಭವನದ ಮುಂದೆ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ್ ಕಣಿವೆ ಮೂಲದ ಮೈತೇಯಿಗಳು ಮತ್ತು ಪಕ್ಕದ ಬೆಟ್ಟಗಳ ಮೂಲದ ಕುಕಿ-ಜೋ ಗುಂಪುಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ; ‘ಲೋಕಸಭೆ ಚುನಾವಣೆಗೂ ಮುನ್ನ ಜನರಲ್ಲಿ ಇದ್ದ ಭಯದ ಭಾವನೆ ಈಗ ಮಾಯವಾಗಿದೆ..’; ರಾಹುಲ್ ಅಭಿಪ್ರಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...