Homeಚಳವಳಿತೀವ್ರಗೊಂಡ ಬಿಹಾರ ನಾಗರಿಕ ಸೇವಾ ಪರೀಕ್ಷೆಯ ವಿರುದ್ಧದ ಪ್ರತಿಭಟನೆ

ತೀವ್ರಗೊಂಡ ಬಿಹಾರ ನಾಗರಿಕ ಸೇವಾ ಪರೀಕ್ಷೆಯ ವಿರುದ್ಧದ ಪ್ರತಿಭಟನೆ

- Advertisement -
- Advertisement -

ಡಿಸೆಂಬರ್ 13 ರಂದು ನಡೆದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಬಿಹಾರ ಲೋಕಸೇವಾ ಆಯೋಗದ (BPSC) ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಈ ನಡುವೆ ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಶುಕ್ರವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಬೆಂಬಲ ನೀಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಬಗ್ಗೆ ವಿದ್ಯಾರ್ಥಿಗಳ ಬೇಡಿಕೆಯನ್ನು ಮನ್ನಿಸಿ ಸಮಸ್ಯೆ ಬಗೆಹರಿಸಲು ಸಮಿತಿ ರಚಿಸುವಂತೆ ಕಿಶೋರ್ ಅವರು ಸಿಎಂ ನಿತೀಶ್ ಕುಮಾರ್ ಅವರಿಗೆ ಒತ್ತಾಯಿಸಿದ್ದಾರೆ. ತೀವ್ರಗೊಂಡ ಬಿಹಾರ

ಖಾನ್ ಸರ್ ಎಂದೆ ಜನಪ್ರಿಯರಾಗಿರುವ ಖ್ಯಾತ ಶಿಕ್ಷಣತಜ್ಞ ಫೈಝಲ್ ಖಾನ್ ಅವರು ಕಳೆದ ಒಂಬತ್ತು ದಿನಗಳಿಂದ ಧರಣಿ ನಡೆಸುತ್ತಾ ಮರು ಪರೀಕ್ಷೆಗೆ ಒತ್ತಾಯಿಸುತ್ತಿರುವ ವಿದ್ಯಾರ್ಥಿಗಳ ಬೇಡಿಕೆಯನ್ನು ಬೆಂಬಲಿಸಿದ್ದಾರೆ. ಗರ್ದಾನಿಬಾಗ್ ಪ್ರದೇಶದಲ್ಲಿ ಪ್ರತಿಭಟನಾನಿರತ ಅಭ್ಯರ್ಥಿಗಳನ್ನು ಭೇಟಿ ಮಾಡಿದ ಖಾನ್ ಸರ್, “ಆಯೋಗವು ಸಾಕ್ಷ್ಯ ಮತ್ತು ಸಿಸಿಟಿವಿ ದೃಶ್ಯಗಳನ್ನು ಏಕೆ ಮರೆಮಾಚುತ್ತಿದೆ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಪಿಎಸ್‌ಸಿ ನಡೆಸಿದ ಪೂರ್ವಭಾವಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮತ್ತು ರಾಜ್ಯಾದ್ಯಂತ ಮರುಪರೀಕ್ಷೆ ನಡೆಸುವಂತೆ ಒತ್ತಾಯಿಸಿ ಹಲವು ಬಿಪಿಎಸ್‌ಸಿ ಅಭ್ಯರ್ಥಿಗಳು ಡಿಸೆಂಬರ್ 13ರಂದು ಪ್ರತಿಭಟನೆ ಆರಂಭಿಸಿದ್ದರು. ಹಲವಾರು ಅಭ್ಯರ್ಥಿಗಳು ಸುಮಾರು ಒಂದು ಗಂಟೆ ತಡವಾಗಿ ಪ್ರಶ್ನೆ ಪತ್ರಿಕೆ ಪಡೆದಿದ್ದಾರೆ ಎಂದು ಆರೋಪಿಸಿದ್ದು, ಇತರ ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳು ಹರಿದಿತ್ತು ಎಂದು ಹೇಳಿದ್ದಾರೆ. ಜೊತೆಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿವೆ ಎಂದು ಅನುಮಾನಗಳನ್ನು ಮುಂದಿಟ್ಟಿದ್ದಾರೆ. ತೀವ್ರಗೊಂಡ ಬಿಹಾರ

ಪ್ರತಿಭಟನಾ ಸ್ಥಳದಲ್ಲಿ ಮಾತನಾಡಿದ ಖಾನ್ ಸರ್,”ನಾವು ಆಯೋಗದಿಂದ ಮರು ಪರೀಕ್ಷೆಗೆ ಒತ್ತಾಯಿಸುತ್ತೇವೆ. ಆಯೋಗವು ಸಾಕ್ಷ್ಯ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಏಕೆ ಮರೆಮಾಚುತ್ತಿದೆ? ಈ ಬಗ್ಗೆ ತನಿಖೆ ಮಾಡಬೇಕು… ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ಬಿಹಾರದಲ್ಲಿ ನಡೆಯುತ್ತಿರುವುದನ್ನು ರಾಷ್ಟ್ರಪತಿಯವರಿಗೂ ಹೇಳುತ್ತೇವೆ… ಮೊದಲು ದೇಶದ ಜಿಡಿಪಿ ಕುಸಿಯಿತು, ನಂತರ ಬಿಹಾರದಲ್ಲಿ ಸೇತುವೆ ಕುಸಿದಿದೆ ಮತ್ತು ಈಗ ಬಿಪಿಎಸ್‌ಸಿ ಕುಸಿದಿದೆ” ಎಂದು ಹೇಳಿದ್ದಾರೆ.

ಮತ್ತೊಬ್ಬ ಜನಪ್ರಿಯ ಶಿಕ್ಷಕ ಮತ್ತು ಕೋಚಿಂಗ್ ಸೆಂಟರ್ ಮಾಲೀಕ ಗುರು ರೆಹಮಾನ್ ಕೂಡ ಅಭ್ಯರ್ಥಿಗಳನ್ನು ಬೆಂಬಲಿಸಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೋಚಿಂಗ್ ಸೆಂಟರ್‌ಗಳು ತಮ್ಮ ಆಂದೋಲನವನ್ನು ‘ಹೈಜಾಕ್’ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಅಭ್ಯರ್ಥಿಗಳು ಆರೋಪಿಸಿದ ನಂತರ ಖಾನ್ ಸರ್ ಮತ್ತು ಗುರು ರೆಹಮಾನ್ ಇಬ್ಬರೂ ಸ್ಥಳವನ್ನು ತೊರೆದಿದ್ದಾರೆ. ಇದಕ್ಕೂ ಮುನ್ನ ಧರಣಿ ಸತ್ಯಾಗ್ರಹದಲ್ಲಿ ಪಕ್ಷೇತರ ಸಂಸದ ಪೂರ್ಣೆ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಭಾಗವಹಿಸಿದ್ದರು.

ಅದಾಗ್ಯೂ, BPSC ಪರೀಕ್ಷಾ ನಿಯಂತ್ರಕ ರಾಜೇಶ್ ಕುಮಾರ್ ಸಿಂಗ್ ಅವರು, 70 ನೇ ಇಂಟಿಗ್ರೇಟೆಡ್ ಕಂಬೈನ್ಡ್ ಸ್ಪರ್ಧಾತ್ಮಕ ಪರೀಕ್ಷೆ (CCE) 2024 ಅನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಹೇಳಿದ್ದಾರೆ. ಅಭ್ಯರ್ಥಿಗಳು ಅಕ್ರಮಗಳು ಎಸಗಿದ್ದಾರೆ ಎಂಬ ಆರೋಪವನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ ಎಂದು ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಅದಾಗ್ಯೂ, BPSC ಬಾಪು ಪರೀಕ್ಷಾ ಪರಿಸರ್‌ ಕೇಂದ್ರದಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳ ಪೂರ್ವಭಾವಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಡಿಸೆಂಬರ್ 13 ರಂದು ನಡೆಸಲಾದ ಪರೀಕ್ಷೆಯ ವೇಳೆ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದರು. ಈ ವೇಳೆ ಉಂಟಾದ ಗೊಂದಲದ ಸಮಯದಲ್ಲಿ ಕೇಂದ್ರದಲ್ಲಿ ಅಭ್ಯರ್ಥಿಗಳಿಂದ “ಅಶಿಸ್ತು” ನಡೆದಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ರೈತ ನಾಯಕ ದಲ್ಲೆವಾಲ್‌ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ – ಪಂಜಾಬ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...