Homeಚಳವಳಿರೈತರಿಗೆ ಬೆಂಬಲ: '#WeUnitedForFarmers' ಟ್ರೆಂಡಿಂಗ್ - ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

ರೈತರಿಗೆ ಬೆಂಬಲ: ‘#WeUnitedForFarmers’ ಟ್ರೆಂಡಿಂಗ್ – ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

ಇಡೀ ಮಾನವ ಇತಿಹಾಸದಲ್ಲಿಯೇ ಶಾಂತಿಯುತವಾದ ಮತ್ತು ಅತಿದೊಡ್ಡ ಪ್ರತಿಭಟನೆ ನಡೆಯುತ್ತಿದೆ. ಇನ್ನೂ ನಾವು ಮೌನವಾಗಿರಲು ಸಾಧ್ಯವಿಲ್ಲ. ಹಿಂಸಾಚಾರದ ವಿರುದ್ಧ ದನಿಯೆತ್ತೋಣ...

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದ ರೈತರು ದೆಹಲಿಯಲ್ಲಿ ಕಳೆದ 15 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದುವರೆಗೆ ಕೇಂದ್ರದೊಟ್ಟಿಗೆ ಹಲವು ಸುತ್ತಿನ ಸಂಧಾನ ಸಭೆಗಳು ನಡೆದಿದ್ದರೂ ಸಹ ಪಟ್ಟು ಬಿಡದ ರೈತರು ‘ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಟ್ವಿಟ್ಟರ್‌ನಲ್ಲಿ ಲಕ್ಷಾಂತರ ಜನ ಬೆಂಬಲ ನೀಡುತ್ತಿದ್ದು #WeUnitedForFarmers ಟ್ರೆಂಡಿಂಗ್ ಆಗುತ್ತಿದೆ.

ಇದನ್ನೂ ಓದಿ: ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಕೆನಡಾ ಪ್ರಧಾನಿ: ಅನಪೇಕ್ಷಿತ, ಅನಗತ್ಯ ಎಂದ ಭಾರತ ಸರ್ಕಾರ!

ರೈತರ ಈ ಪ್ರತಿಭಟನೆಗೆ ಇಡೀ ದೇಶದಾದ್ಯಂತ ಬೆಂಬಲ ವ್ಯಕ್ತವಾಗುತ್ತಿದ್ದು, ಚಿಂತಕರು, ವಿದ್ವಾಂಸರು, ವಿದ್ಯಾರ್ಥಿಗಳು, ಕಾರ್ಮಿಕ ದಲಿತ ಸಂಘಟನೆಗಳು ಸೇರಿದಂತೆ ಎಲ್ಲರೂ ರೈತರ ಪರ ನಿಂತಿದ್ದಾರೆ. ಇದರ ಭಾಗವಾಗಿಯೇ ಸಾಮಾಜಿಕ ಮಾಧ್ಯಮ ಟ್ವಿಟ್ಟರ್‌ನಲ್ಲಿ #WeUnitedForFarmers ಎಂದು ಟ್ರೆಂಡಿಂಗ್ ಆಗುತ್ತಿದೆ.

 

ಈ ವರದಿ ಬರೆಯುವ ವೇಳೆಗೆ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಬಳಕೆದಾರರು ಈ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ- ಲವ್ ಜಿಹಾದ್ ವಿರೋಧಿಸಿ, ಪ್ರೀತಿಗಾಗಿ ಪ್ರತಿಭಟನೆ!

ಜಶನ್ ಕೌರ್ ಎಂಬುವವರು ಟ್ವೀಟ್ ಮಾಡಿ, “ಭಾರತದಲ್ಲಿ ಈಗ ನಡೆಯುತ್ತಿರುವುದರ ಬಗ್ಗೆ ಎಲ್ಲರಿಗೂ ತಿಳಿದಿದೆ. ಇಡೀ ಮಾನವ ಇತಿಹಾಸದಲ್ಲಿಯೇ ಶಾಂತಿಯುತವಾದ ಮತ್ತು ಅತಿದೊಡ್ಡ ಪ್ರತಿಭಟನೆ ನಡೆಯುತ್ತಿದೆ. ಇನ್ನೂ ನಾವು ಮೌನವಾಗಿರಲು ಸಾಧ್ಯವಿಲ್ಲ. ಹಿಂಸಾಚಾರದ ವಿರುದ್ಧ ದನಿಯೆತ್ತೋಣ ಮತ್ತು ಸಮಾನ ಮಾನವ ಹಕ್ಕುಗಳನ್ನು ಬೆಂಬಲಿಸೋಣ. # WeUnitedForFarmers” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ ರೈತರ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ- AIKSCC ಅಧಿಕೃತ ಹೇಳಿಕೆ

ಜಶ್ವಂದರ್ ಪಾಲ್ ಸಿಂಗ್ ಎಂಬುವವರು “ಗೋಧಿ ಮಾಧ್ಯಮಗಳು ಈ ಟ್ರೆಂಡಿಂಗ್ ಅನ್ನು ಪ್ರಸಾರ ಮಾಡುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆಯನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಶಾಹೀನ್ ಬಾಗ್ ಆಗಿ ಪರಿವರ್ತಿಸುತ್ತಿದೆ- ದೆಹಲಿ ಸಂಸದ

ಸತ್ನಂ ಸೋಹಲ್ ಎಂಬುವವರು ಟ್ವೀಟ್ ಮಾಡಿ, “ಯಾರಾದರೂ ಧೈರ್ಯ ಎಂದರೆ ಏನು ಎಂದು ಕೇಳಿದರೆ, ಅವರಿಗೆ ಈ ದೃಶ್ಯವನ್ನು ತೋರಿಸಿ” ಎಂದು ಗಾಯಗೊಂಡಿರುವ ರೈತರೊಬ್ಬರ ಮಾತುಗಳಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ’ಬಿಜೆಪಿ ರೈತರ ಕಲ್ಯಾಣವನ್ನೇ ಯೋಚಿಸುತ್ತದೆ- ಪ್ರತಿಭಟನೆ ಬಗ್ಗೆ ನಟ ಸನ್ನಿ ಡಿಯೋಲ್ ಹೇಳಿಕೆ

ಕುಲ್ವಿಂದರ್ ಸೆಖೊನ್ ಎಂಬುವವರು ವೀಡಿಯೋವೊಂದನ್ನು ಟ್ವೀಟ್ ಮಾಡಿ, “ನ್ಯೂಜಿಲ್ಯಾಂಡ್ ಸಂಸತ್ತಿನ ಮುಂದೆ ನಾವು ರೈತರನ್ನು ಬೆಂಬಲಿಸುತ್ತೇವೆ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ಮೋದಿಯವರಿಗೆ ನಾಚಿಕೆಯಾಗಬೇಕು. ಗೋಧಿ ಮೀಡಿಯಾಗೆ ಧಿಕ್ಕಾರ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಸೈನಿಕನನ್ನು ಬಂಧಿಸಿದ ಪೊಲೀಸರು!

ಹೀಗೆ ಲಕ್ಷಾಂತರ ಜನರು ರೈತರನ್ನು ಮತ್ತು ರೈತರ ಹೋರಾಟವನ್ನು ಬೆಂಬಲಿಸಿದ್ದಾರೆ.

ಇಷ್ಟೆಲ್ಲಾ ನಡೆಯುತ್ತಿದ್ದರೂ ಸಹ ಕೇಂದ್ರದ ಬಿಜೆಪಿ ಸರ್ಕಾರವು ದರ್ಪ ತೋರುತ್ತಲೇ ಇದೆ. ಜೊತೆಗೆ ಪ್ರತಿಭಟನೆಯನ್ನು ಹತ್ತಿಕ್ಕುವ ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತದೆ.

ಅಲ್ಲದೇ ಕೃಷಿ ಕಾಯ್ದೆಗಳ ಬಗ್ಗೆ ಅರಿವು ಮೂಡಸಲೆಂದು 700 ಜಿಲ್ಲೆಗಳಲ್ಲಿ 100 ಪ್ರತಿಕಾಗೋಷ್ಠಿಗಳು ಮತ್ತು 700 ರೈತ ಸಭೆಗಳನ್ನು ಆಯೋಜಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ವಿವಾದಾತ್ಮಕ ಕಾನೂನುಗಳ ಕುರಿತು ಜನರಲ್ಲಿನ ಆತಂಕ ಮತ್ತು ಕಳವಳಗಳನ್ನು ದೂರ ಮಾಡುಲು ಇದನ್ನು ಆಯೋಜಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಆದರೆ ರೈತರು ಇದಾವುದಕ್ಕೂ ಸೊಪ್ಪು ಹಾಕದೇ ತಮ್ಮ ಗುರಿಯನ್ನು ಮುಟ್ಟಿಯೇ ತೀರುತ್ತೇವೆ ಎಂದು ಬೀದಿಗಿಳಿದಿದ್ದಾರೆ.

ಪ್ರತಿಭಟನೆಯನ್ನು ಕೊನೆಗೊಳಿಸಬೇಕೆಂದು ಕೇಂದ್ರ ಸರ್ಕಾರವು ರೈತ ಸಂಘಟನೆಗಳೊಂದಿಗೆ ಹಲವು ಸುತ್ತಿನ ಮಾತಕತೆ ಮತ್ತು ಸಂಧಾನ ಸಭೆಗಳನ್ನು ನಡೆಸಿದರೂ ಸಹ ಅವುಗಳೆಲ್ಲಾ ವಿಫಲಾಗಿವೆ.

ಇದನ್ನೂ ಓದಿ: ಇಂದು BMTC ಬಸ್‌ಗಳು ರಸ್ತೆಗಿಳಿಯುವುದಿಲ್ಲ: ಸಾರಿಗೆ ನೌಕರರ ಪ್ರತಿಭಟನೆ

ಇತ್ತೀಚೆಗೆ ಅಮಿತ್ ಶಾ ರೈತ ಮುಖಂಡರನ್ನು ಮಾತುಕತೆಗೆ ಕರೆದು, ಕಾನೂನುಗಳಲ್ಲಿ ಕೆಲವು ತಿದ್ದುಪಡಿಗಳನ್ನು ತರುವುದಾಗಿ ಪ್ರಸ್ತಾವವನ್ನು ಲಿಖಿತ ರೂಪದಲ್ಲಿ ಸಲ್ಲಿಸಿದ್ದರು. ಆದರೆ ರೈತರು ಇದನ್ನೂ ಒಪ್ಪಿರಲಿಲ್ಲ.

ಇದರ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸೀಮಗ್ ತೋಮರ್, “ನಮ್ಮ ಲಿಖಿತ ಪ್ರಸ್ತಾವಕ್ಕೆ ರೈತ ಸಂಘಟನೆಗಳು ಇನ್ನೂ ಪ್ರತಿಕ್ರಿಯಿಸಿಲ್ಲ” ಎಂದು ಹೇಳಿದ್ದಾರೆ. ಆದರೆ ಈಗಾಗಲೇ ರೈತರು ಕೇಂದ್ರ ಸರ್ಕಾರದ ಪ್ರಸ್ತಾವವನ್ನು ತಿರಸ್ಕರಿಸಿದ್ದಾರೆ.


ಇದನ್ನೂ ಓದಿ: ನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...