Homeಚಳವಳಿರೈತರಿಗೆ ಬೆಂಬಲ: '#WeUnitedForFarmers' ಟ್ರೆಂಡಿಂಗ್ - ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

ರೈತರಿಗೆ ಬೆಂಬಲ: ‘#WeUnitedForFarmers’ ಟ್ರೆಂಡಿಂಗ್ – ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

ಇಡೀ ಮಾನವ ಇತಿಹಾಸದಲ್ಲಿಯೇ ಶಾಂತಿಯುತವಾದ ಮತ್ತು ಅತಿದೊಡ್ಡ ಪ್ರತಿಭಟನೆ ನಡೆಯುತ್ತಿದೆ. ಇನ್ನೂ ನಾವು ಮೌನವಾಗಿರಲು ಸಾಧ್ಯವಿಲ್ಲ. ಹಿಂಸಾಚಾರದ ವಿರುದ್ಧ ದನಿಯೆತ್ತೋಣ...

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದ ರೈತರು ದೆಹಲಿಯಲ್ಲಿ ಕಳೆದ 15 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದುವರೆಗೆ ಕೇಂದ್ರದೊಟ್ಟಿಗೆ ಹಲವು ಸುತ್ತಿನ ಸಂಧಾನ ಸಭೆಗಳು ನಡೆದಿದ್ದರೂ ಸಹ ಪಟ್ಟು ಬಿಡದ ರೈತರು ‘ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಟ್ವಿಟ್ಟರ್‌ನಲ್ಲಿ ಲಕ್ಷಾಂತರ ಜನ ಬೆಂಬಲ ನೀಡುತ್ತಿದ್ದು #WeUnitedForFarmers ಟ್ರೆಂಡಿಂಗ್ ಆಗುತ್ತಿದೆ.

ಇದನ್ನೂ ಓದಿ: ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಕೆನಡಾ ಪ್ರಧಾನಿ: ಅನಪೇಕ್ಷಿತ, ಅನಗತ್ಯ ಎಂದ ಭಾರತ ಸರ್ಕಾರ!

ರೈತರ ಈ ಪ್ರತಿಭಟನೆಗೆ ಇಡೀ ದೇಶದಾದ್ಯಂತ ಬೆಂಬಲ ವ್ಯಕ್ತವಾಗುತ್ತಿದ್ದು, ಚಿಂತಕರು, ವಿದ್ವಾಂಸರು, ವಿದ್ಯಾರ್ಥಿಗಳು, ಕಾರ್ಮಿಕ ದಲಿತ ಸಂಘಟನೆಗಳು ಸೇರಿದಂತೆ ಎಲ್ಲರೂ ರೈತರ ಪರ ನಿಂತಿದ್ದಾರೆ. ಇದರ ಭಾಗವಾಗಿಯೇ ಸಾಮಾಜಿಕ ಮಾಧ್ಯಮ ಟ್ವಿಟ್ಟರ್‌ನಲ್ಲಿ #WeUnitedForFarmers ಎಂದು ಟ್ರೆಂಡಿಂಗ್ ಆಗುತ್ತಿದೆ.

 

ಈ ವರದಿ ಬರೆಯುವ ವೇಳೆಗೆ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಬಳಕೆದಾರರು ಈ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ- ಲವ್ ಜಿಹಾದ್ ವಿರೋಧಿಸಿ, ಪ್ರೀತಿಗಾಗಿ ಪ್ರತಿಭಟನೆ!

ಜಶನ್ ಕೌರ್ ಎಂಬುವವರು ಟ್ವೀಟ್ ಮಾಡಿ, “ಭಾರತದಲ್ಲಿ ಈಗ ನಡೆಯುತ್ತಿರುವುದರ ಬಗ್ಗೆ ಎಲ್ಲರಿಗೂ ತಿಳಿದಿದೆ. ಇಡೀ ಮಾನವ ಇತಿಹಾಸದಲ್ಲಿಯೇ ಶಾಂತಿಯುತವಾದ ಮತ್ತು ಅತಿದೊಡ್ಡ ಪ್ರತಿಭಟನೆ ನಡೆಯುತ್ತಿದೆ. ಇನ್ನೂ ನಾವು ಮೌನವಾಗಿರಲು ಸಾಧ್ಯವಿಲ್ಲ. ಹಿಂಸಾಚಾರದ ವಿರುದ್ಧ ದನಿಯೆತ್ತೋಣ ಮತ್ತು ಸಮಾನ ಮಾನವ ಹಕ್ಕುಗಳನ್ನು ಬೆಂಬಲಿಸೋಣ. # WeUnitedForFarmers” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ ರೈತರ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ- AIKSCC ಅಧಿಕೃತ ಹೇಳಿಕೆ

ಜಶ್ವಂದರ್ ಪಾಲ್ ಸಿಂಗ್ ಎಂಬುವವರು “ಗೋಧಿ ಮಾಧ್ಯಮಗಳು ಈ ಟ್ರೆಂಡಿಂಗ್ ಅನ್ನು ಪ್ರಸಾರ ಮಾಡುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆಯನ್ನು ತುಕ್ಡೆ-ತುಕ್ಡೆ ಗ್ಯಾಂಗ್ ಶಾಹೀನ್ ಬಾಗ್ ಆಗಿ ಪರಿವರ್ತಿಸುತ್ತಿದೆ- ದೆಹಲಿ ಸಂಸದ

ಸತ್ನಂ ಸೋಹಲ್ ಎಂಬುವವರು ಟ್ವೀಟ್ ಮಾಡಿ, “ಯಾರಾದರೂ ಧೈರ್ಯ ಎಂದರೆ ಏನು ಎಂದು ಕೇಳಿದರೆ, ಅವರಿಗೆ ಈ ದೃಶ್ಯವನ್ನು ತೋರಿಸಿ” ಎಂದು ಗಾಯಗೊಂಡಿರುವ ರೈತರೊಬ್ಬರ ಮಾತುಗಳಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ’ಬಿಜೆಪಿ ರೈತರ ಕಲ್ಯಾಣವನ್ನೇ ಯೋಚಿಸುತ್ತದೆ- ಪ್ರತಿಭಟನೆ ಬಗ್ಗೆ ನಟ ಸನ್ನಿ ಡಿಯೋಲ್ ಹೇಳಿಕೆ

ಕುಲ್ವಿಂದರ್ ಸೆಖೊನ್ ಎಂಬುವವರು ವೀಡಿಯೋವೊಂದನ್ನು ಟ್ವೀಟ್ ಮಾಡಿ, “ನ್ಯೂಜಿಲ್ಯಾಂಡ್ ಸಂಸತ್ತಿನ ಮುಂದೆ ನಾವು ರೈತರನ್ನು ಬೆಂಬಲಿಸುತ್ತೇವೆ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ಮೋದಿಯವರಿಗೆ ನಾಚಿಕೆಯಾಗಬೇಕು. ಗೋಧಿ ಮೀಡಿಯಾಗೆ ಧಿಕ್ಕಾರ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ರೈತರ ಪ್ರತಿಭಟನೆಗೆ ಬೆಂಬಲ ನೀಡಿದ ಸೈನಿಕನನ್ನು ಬಂಧಿಸಿದ ಪೊಲೀಸರು!

ಹೀಗೆ ಲಕ್ಷಾಂತರ ಜನರು ರೈತರನ್ನು ಮತ್ತು ರೈತರ ಹೋರಾಟವನ್ನು ಬೆಂಬಲಿಸಿದ್ದಾರೆ.

ಇಷ್ಟೆಲ್ಲಾ ನಡೆಯುತ್ತಿದ್ದರೂ ಸಹ ಕೇಂದ್ರದ ಬಿಜೆಪಿ ಸರ್ಕಾರವು ದರ್ಪ ತೋರುತ್ತಲೇ ಇದೆ. ಜೊತೆಗೆ ಪ್ರತಿಭಟನೆಯನ್ನು ಹತ್ತಿಕ್ಕುವ ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತದೆ.

ಅಲ್ಲದೇ ಕೃಷಿ ಕಾಯ್ದೆಗಳ ಬಗ್ಗೆ ಅರಿವು ಮೂಡಸಲೆಂದು 700 ಜಿಲ್ಲೆಗಳಲ್ಲಿ 100 ಪ್ರತಿಕಾಗೋಷ್ಠಿಗಳು ಮತ್ತು 700 ರೈತ ಸಭೆಗಳನ್ನು ಆಯೋಜಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ವಿವಾದಾತ್ಮಕ ಕಾನೂನುಗಳ ಕುರಿತು ಜನರಲ್ಲಿನ ಆತಂಕ ಮತ್ತು ಕಳವಳಗಳನ್ನು ದೂರ ಮಾಡುಲು ಇದನ್ನು ಆಯೋಜಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಆದರೆ ರೈತರು ಇದಾವುದಕ್ಕೂ ಸೊಪ್ಪು ಹಾಕದೇ ತಮ್ಮ ಗುರಿಯನ್ನು ಮುಟ್ಟಿಯೇ ತೀರುತ್ತೇವೆ ಎಂದು ಬೀದಿಗಿಳಿದಿದ್ದಾರೆ.

ಪ್ರತಿಭಟನೆಯನ್ನು ಕೊನೆಗೊಳಿಸಬೇಕೆಂದು ಕೇಂದ್ರ ಸರ್ಕಾರವು ರೈತ ಸಂಘಟನೆಗಳೊಂದಿಗೆ ಹಲವು ಸುತ್ತಿನ ಮಾತಕತೆ ಮತ್ತು ಸಂಧಾನ ಸಭೆಗಳನ್ನು ನಡೆಸಿದರೂ ಸಹ ಅವುಗಳೆಲ್ಲಾ ವಿಫಲಾಗಿವೆ.

ಇದನ್ನೂ ಓದಿ: ಇಂದು BMTC ಬಸ್‌ಗಳು ರಸ್ತೆಗಿಳಿಯುವುದಿಲ್ಲ: ಸಾರಿಗೆ ನೌಕರರ ಪ್ರತಿಭಟನೆ

ಇತ್ತೀಚೆಗೆ ಅಮಿತ್ ಶಾ ರೈತ ಮುಖಂಡರನ್ನು ಮಾತುಕತೆಗೆ ಕರೆದು, ಕಾನೂನುಗಳಲ್ಲಿ ಕೆಲವು ತಿದ್ದುಪಡಿಗಳನ್ನು ತರುವುದಾಗಿ ಪ್ರಸ್ತಾವವನ್ನು ಲಿಖಿತ ರೂಪದಲ್ಲಿ ಸಲ್ಲಿಸಿದ್ದರು. ಆದರೆ ರೈತರು ಇದನ್ನೂ ಒಪ್ಪಿರಲಿಲ್ಲ.

ಇದರ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸೀಮಗ್ ತೋಮರ್, “ನಮ್ಮ ಲಿಖಿತ ಪ್ರಸ್ತಾವಕ್ಕೆ ರೈತ ಸಂಘಟನೆಗಳು ಇನ್ನೂ ಪ್ರತಿಕ್ರಿಯಿಸಿಲ್ಲ” ಎಂದು ಹೇಳಿದ್ದಾರೆ. ಆದರೆ ಈಗಾಗಲೇ ರೈತರು ಕೇಂದ್ರ ಸರ್ಕಾರದ ಪ್ರಸ್ತಾವವನ್ನು ತಿರಸ್ಕರಿಸಿದ್ದಾರೆ.


ಇದನ್ನೂ ಓದಿ: ನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...