Homeಕರ್ನಾಟಕ19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ...

19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ ಸಿದ್ಧತೆ

ಬೆಳಗ್ಗೆ ನನ್ನ ಗಂಡನನ್ನು ಕಾಪಾಡಿ ಎಂದು ಬೊಬ್ಬಿರಿಯುತ್ತಿದ್ದ ಹುಡುಗಿ ಸಂಜೆ ಅಷ್ಟೊತ್ತಿಗೆ ಆ ಹುಡುಗನೇ ಬೇಡ ಎಂದು ರೋಧಿಸತೊಡಗಿದ್ದಾಳೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಭಯಮಿಶ್ರಿತ ಗೊಂದಲದಲ್ಲಿದ್ದ ಹುಡುಗನ ಕಣ್ಣಂಚು ತೇವ ತೇವ.

- Advertisement -
- Advertisement -

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಕಳೆದ 20 ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ ಯುವಜೋಡಿಗಳ ಪ್ರಕರಣ ಸಿನಿಮಿಯ ರೀತಿಯಲ್ಲಿ ಕೊನೆಗೊಂಡಿದೆ. ಕೊನೆಗೂ ಆ ಪ್ರಕರಣದಲ್ಲಿ ಊರ ಹಿರಿಯರು ಎನಿಸಿಕೊಳ್ಳುವ ನೈತಿಕತೆಯ ವಾರಸುದಾರರು ಹುಡುಗ ಹುಡುಗಿಯನ್ನು ಬೇರ್ಪಡಿಸಿ ದುರಂತ ಅಂತ್ಯದ ಷರಾ ಬರೆದಿದ್ದಾರೆ.

ಹುಡುಗ ಗಾಣಿಗ ಸಮುದಾಯದವ. ಹುಡುಗಿ ಮಾದರ ಜಾತಿಗೆ ಸೇರಿದವಳು. ಈ ಯುವಪ್ರೇಮಿಗಳು ಕಳೆದ ಅಕ್ಟೋಬರ್ 24ರಂದು ಕಾನೂನುಬದ್ಧವಾಗಿಯೇ ರಜಿಸ್ಟರ್ ಮದುವೆಯಾಗಿದ್ದರು. ಕೇವಲ ಮದುವೆಯಾಗಿ 19 ದಿನಗಳಲ್ಲೆ ಮುರಿದು ಬಿದ್ದಿದೆ. ಮತ್ತು ಈ ಪ್ರಕರಣ ಗೊತ್ತಿದ್ದರೂ ಏನು ಮಾಡಲಿಕ್ಕಾಗದೇ  ಹಲವಾರು ಜೀವಪರ ಮನಸ್ಸುಗಳು ದಲಿತಪರ ಸಂಘಟನೆಗಳು ಏನೂ ಮಡಲಾಗದೇ ಕೈ ಚೆಲ್ಲಿ ಕುಳಿತಿವೆ.

ನಿಮ್ಮ ಮದುವೆಯನ್ನು ಮಾನ್ಯ ಮಾಡುತ್ತೇವೆ ಬನ್ನಿ ಎಂದು ಊರಿಂದ ತಪ್ಪಿಸಿಕೊಂಡು ದೂರ ಹೋಗಿದ್ದ ಯುವಪ್ರೇಮಿಗಳನ್ನು ಊರಿನ ನೈತಿಕತೆಯ ವಾರಸುದಾರರು ವಾಪಸ್ ಕರೆಸಿಕೊಂಡಿದ್ದರು. ಆದರೆ, ಆದದ್ದೇ ಬೇರೆ. ಹುಡುಗಿಯದ್ದು ಕೀಳುಜಾತಿಯಾದ್ದರಿಂದ ಹುಡುಗಿಯನ್ನು ಮರೆತುಬಿಡಬೇಕೆಂದು ಹುಡುಗನಿಗೆ ವಾರ್ನಿಂಗ್ ಮಾಡಿದ್ದಾರೆ. ಹುಡುಗ ಒಪ್ಪದಿದ್ದುದ್ದಕ್ಕೆ ಅವನನ್ನು ಮೈ ಬಾಯುವ ಹಾಗೆ ಮುಖ ಮೋತಿಯನ್ನದೇ ಬಡಿದು ಹೆದರಿಸಿದ್ದಾರೆ. ಇದು ಗೊತ್ತಾಗುತ್ತಿದ್ದಂತೆ ಕೆಲವು ದಲಿತಪರ ಹೋರಾಟಗಾರರಾದ ನಾಗಮ್ಮ, ರಮೇಶ ಕೋಳೂರು ಮತ್ತಿತರರು ಧಾವಿಸಿ ಬಂದು ಹುಡುಗನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜೊತೆಗೆ ಎರಡು ಕಡೆಯವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಪ್ರಕರಣಕ್ಕೆ ಸುಖಾಂತ್ಯ ಹಾಡಲು ನೋಡಿದ್ದಾರೆ.

ಆದರೆ, ಅಷ್ಟೊತ್ತಿಗೆಗಾಗಲೇ ನೈತಿಕ ವಾರಸುದಾರರು ಹೆದರಿಸುವಿಕೆ ಮತ್ತು ಪುಸಲಾಯಿಸುವಿಕೆ ಎಷ್ಟರಮಟ್ಟಿಗೆ ಇತ್ತೆಂದರೆ ಸಂಜೆ ಅಷ್ಟೊತ್ತಿಗೆ ನಾನು ಆ ಹುಡುಗನೊಂದಿಗೆ ಬಾಳ್ವೆ ಮಾಡಲು ಸುತಾರಂ ಇಷ್ಟವಿಲ್ಲ. ನನಗೆ ಡೈವೋರ್ಸ್ ಕೊಡಿಸಿ  ಎಂದು ಪೊಲೀಸರ ಮುಂದೆಯೇ ಹುಡುಗಿ ಉಲ್ಟಾ ಹೊಡೆದಿದ್ದಾಳೆ. “ನೀನು ಅವನನ್ನು ಬಿಟ್ಟರೆ ನಿನ್ನನ್ನು ಇವನೊಂದಿಗೆ ಮದುವೆಯ ಮಾಡುತ್ತೇವೆ ಬಿಡು” ಎಂದು ನೈತಿಕತೆಯ ವಾರಸುದಾರರು ಮೊದಲೇ ರೆಡಿ ಇಟ್ಟುಕೊಂಡಿದ್ದ ಸಜಾತಿಯ ವರನನ್ನು ಹುಡುಗಿ ಮುಂದೆ ನಿಲ್ಲಿಸಿದ್ದಾರೆ.  “ಇವನೊಂದಿಗೆ ಮದವೆ ಮಾಡುವ ಜವಾಬ್ಧಾರಿ ನಮ್ಮದು” ಎಂದು ಹುಡುಗಿಗೆ ಧೈರ್ಯ ತುಂಬಿದ್ದಾರೆ. ಕೋಲೆ ಬಸವನಂತ ಆ ಹುಡುಗ ಕೂಡ ತಲೆಯಾಡಿಸಿದ್ದಾನೆ.

ಹೀಗೆ ಸಂಜೆಯ ಹೊತ್ತಿಗೆ ಪೊಲೀಸ್ ಠಾಣೆಯಲ್ಲೆ ಸಿನಿಮಿಯ ರೀತಿಯಲ್ಲಿ ಉಲ್ಟಾ ಹೊಡೆದ ಪ್ರಕರಣ ನೋಡಿದ ಪೊಲೀಸ್ ಇನ್ಸಪೆಕ್ಟರ್ ಸಹ “ಆ ಹುಡುಗ ಹುಡುಗಿಯ ಬದುಕನ್ನು ಬಲಿಪಶು ತೊಗೊತ್ತಿದ್ದಿರಲ್ಲ ನೀವು, ನಾಚಿಕೆಯಾಗಲ್ವಾ, ಈ ಹೊಸ ಹುಡುಗ ಈ ಹುಡುಗಿಯನ್ನು ಮುಂದೆ ಚನ್ನಾಗಿ ಬಾಳಿಸದಿದ್ದರೆ, ಅನುಮಾನಪಡತೊಡಗಿದರೆ ಏನ್ ಮಾಡ್ತಿರಿ ಎಂದು ಎರಡೂ ಕಡೆಯವರನ್ನು ಹತಾಶೆಯಿಂದ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಂತೂ ಬೆಳಗ್ಗೆ ನನ್ನ ಗಂಡನನ್ನು ಕಾಪಾಡಿ ಎಂದು ಬೊಬ್ಬಿರಿಯುತ್ತಿದ್ದ ಹುಡುಗಿ ಸಂಜೆ ಅಷ್ಟೊತ್ತಿಗೆ ಆ ಹುಡುಗನೇ ಬೇಡ ಎಂದು ರೋಧಿಸತೊಡಗಿದ್ದಾಳೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಭಯಮಿಶ್ರಿತ ಗೊಂದಲದಲ್ಲಿದ್ದ ಹುಡುಗನ ಕಣ್ಣಂಚು ತೇವ ತೇವ. ನನ್ನ ಹುಡುಗಿಯನ್ನು ನನಗೆ ಕೊಡಿಸಿದರೆ ಸಾಕು ಎಂದು ಆತ ಅಳತೊಡಗಿದ್ದಾನೆ.

ಗದಗ ಜಿಲ್ಲೆಯ ಲಕ್ಕಲಕಟ್ಟಿ ಗ್ರಾಮದಲ್ಲಿ ಕಳೆದ ಒಂದು ವಾರದ ಹಿಂದೆ ಅಷ್ಟೆ ಅಂತರ್ಜಾತಿ ವಿವಾಹವಾಗಿದ್ದ ಯುವ ದಂಪತಿಗಳ ಜೋಡಿ ಕೊಲೆ ನಡೆದಿತ್ತು. ಅದು ನಡೆದ ಒಂದೇ ವಾರದಲ್ಲಿ ಈಗ ಈ ಪ್ರಕರಣ ನಡೆದಿದೆ. ಹಾಗೆ ನೋಡಿದರೆ ಜಾತಿ ಗೋಡೆಯನ್ನು ಕಿತ್ತೆಸೆದು, ಧರ್ಮದ ಬೇಲಿಗೆ ಕಿವಿಗೊಡದೇ ಹಲವಾರು ಯುವ ಜೋಡಿಗಳು ಪ್ರೀತಿಸಿ ಮದುವೆಯಾಗುವ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಆದರೆ, ಆ ಜೋಡಿಗಳು ನೆಮ್ಮದಿಯಿಂದ ಬಾಳುವೆ ಮಾಡುವ ವಾತಾವರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡು ಬರುವುದಿಲ್ಲ. ಈ ಭಾಗದಲ್ಲಿ ದಲಿತ ಸಂಘರ್ಷ ಸಮಿತಿಗಳು ಸಹ ಅಷ್ಟೊಂದು ಸಕ್ರಿಯವಾಗಿಲ್ಲ.

ಮಾಡದ ತಪ್ಪಿಗೆ ಆತ ತನ್ನ ಹುಡುಗಿಯನ್ನು ಇನ್ನೊಂದು ಹುಡುಗನೊಂದಿಗ ಮದುವೆ ಮಾಡಿಸಲು ಖರ್ಚಿನ ಬಾಬ್ತು ಎಂದು ಮೂರು ಲಕ್ಷ ರೂಪಾಯಿ ತಪ್ಪುದಂಡ ಕೊಡಬೇಕು. ಈ ಹಣದಲ್ಲಿ ಒಂದಿಷ್ಟು ಪಾಲು ಎರಡು ಕಡೆಯ ನೈತಿಕ ವಾರಸುದಾರರಿಗೂ ಹಂಚಿಕೆಯಾಗುತ್ತದೆ ಎಂಬ ಆರೋಪವೂ ಸ್ಥಳಿಯರಿಂದ ಕೇಳಿ ಬಂದಿದೆ.

ಈ ಎರಡು ಪ್ರಕರಣಗಳ ಹಿಂದೆ ನಾವು ನಿಮ್ಮ ಹಿಂದೆ ಇದ್ದೇವೆ ಎಂದು ಧೈರ್ಯ ತುಂಬುವ, ಕರೆತಂದು ಮದುವೆ ಮಾಡಿಸುವ, ಇಂಥ ಯುವಜೋಡಿಗಳ ಮೇಲೆ ಹಲ್ಲೆಗಳು ನಡೆದಾಗ ಬೀದಿಗಿಳಿದು ಪ್ರತಿಭಟನೆ ಮಾಡುವ ಸಂಘಟನೆಗಳ, ಜೀವಪರ ಮನಸ್ಸುಗಳ ಕೊರತೆ ಇದೆ. ಹೀಗಾಗಿ ಇಲ್ಲಿನ ಅಂತರ್ಜಾತಿ ವಿವಾಹಗಳು ದುರಂತ ಅಂತ್ಯ ಕಾಣುತ್ತವೆ ಎಂದು ಗದಗದ ದಲಿತಪರ ಹೋರಾಟಗಾರ ರಮೇಶ ಕೋಳೂರು ನೋವಿನಿಂದ ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾತೀಯತೆ ಎನ್ನುವುದು ಮೇಲ್ಜಾತಿಯ ಜನರಲ್ಲಿ ಮಾತ್ರವಲ್ಲ, ಬಹುತೇಕ ಜಾತಿಗಳಲ್ಲಿ ತುಂಬಿ ತುಳುಕುತ್ತಿದೆ. ಇದೇ ಈ ದೇಶದ ದುರಂತ.

LEAVE A REPLY

Please enter your comment!
Please enter your name here

- Advertisment -

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...

“ಆರೆಸ್ಸೆಸ್‌ ದೇಶಕ್ಕೆ ವಂಚಿಸುತ್ತಿದೆ” -ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಆರೆಸ್ಸೆಸ್‌ ಕುರಿತು ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿರುವ ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತೊಮ್ಮೆ ಆರೆಸ್ಸೆಸ್‌ ದೇಶದ ಆರ್ಥಿಕತೆಗೆ ವಂಚಿಸುತ್ತಿದೆ ಎಂದು ಆರೋಪಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಿಯಾಂಕ್‌ ಖರ್ಗೆ ಟ್ವೀಟ್‌...

‘ನರೇಗಾ’ ಹೆಸರು ಬದಲಾವಣೆ, ಕೆಲಸದ ದಿನಗಳು ಹೆಚ್ಚಳಕ್ಕೆ ಕೇಂದ್ರ ಸಂಪುಟ ಅನುಮೋದನೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ-ನರೇಗಾ)ಯನ್ನು 'ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ' ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಶುಕ್ರವಾರ (ಡಿಸೆಂಬರ್ 12) ಅನುಮೋದನೆ ನೀಡಿದೆ. ಸರ್ಕಾರ...

ಅಖ್ಲಾಕ್‌ ಗುಂಪು ಹತ್ಯೆ ಪ್ರಕರಣ: ಬಿಜೆಪಿ ಸರ್ಕಾರದಿಂದ ಆರೋಪಿಗಳ ಆರೋಪ ಹಿಂಪಡೆಯಲು ಅರ್ಜಿ ಸಲ್ಲಿಕೆ

2015ರಲ್ಲಿ ಮಹಮ್ಮದ್‌ ಅಖ್ಲಾಕ್‌ ತನ್ನ ಮನೆಯಲ್ಲಿ ದನ ಮಾಂಸ ಶೇಖರಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಗುಂಪು ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದೇಶದೆಲ್ಲೆಡೆ ಗುಂಪು ಹಲ್ಲೆಗಳ ವಿರುದ್ದ (ಮಾಬ್‌ ಲಿಂಚಿಂಗ್‌)...