Homeಕರ್ನಾಟಕ19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ...

19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ ಸಿದ್ಧತೆ

ಬೆಳಗ್ಗೆ ನನ್ನ ಗಂಡನನ್ನು ಕಾಪಾಡಿ ಎಂದು ಬೊಬ್ಬಿರಿಯುತ್ತಿದ್ದ ಹುಡುಗಿ ಸಂಜೆ ಅಷ್ಟೊತ್ತಿಗೆ ಆ ಹುಡುಗನೇ ಬೇಡ ಎಂದು ರೋಧಿಸತೊಡಗಿದ್ದಾಳೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಭಯಮಿಶ್ರಿತ ಗೊಂದಲದಲ್ಲಿದ್ದ ಹುಡುಗನ ಕಣ್ಣಂಚು ತೇವ ತೇವ.

- Advertisement -
- Advertisement -

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಕಳೆದ 20 ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ ಯುವಜೋಡಿಗಳ ಪ್ರಕರಣ ಸಿನಿಮಿಯ ರೀತಿಯಲ್ಲಿ ಕೊನೆಗೊಂಡಿದೆ. ಕೊನೆಗೂ ಆ ಪ್ರಕರಣದಲ್ಲಿ ಊರ ಹಿರಿಯರು ಎನಿಸಿಕೊಳ್ಳುವ ನೈತಿಕತೆಯ ವಾರಸುದಾರರು ಹುಡುಗ ಹುಡುಗಿಯನ್ನು ಬೇರ್ಪಡಿಸಿ ದುರಂತ ಅಂತ್ಯದ ಷರಾ ಬರೆದಿದ್ದಾರೆ.

ಹುಡುಗ ಗಾಣಿಗ ಸಮುದಾಯದವ. ಹುಡುಗಿ ಮಾದರ ಜಾತಿಗೆ ಸೇರಿದವಳು. ಈ ಯುವಪ್ರೇಮಿಗಳು ಕಳೆದ ಅಕ್ಟೋಬರ್ 24ರಂದು ಕಾನೂನುಬದ್ಧವಾಗಿಯೇ ರಜಿಸ್ಟರ್ ಮದುವೆಯಾಗಿದ್ದರು. ಕೇವಲ ಮದುವೆಯಾಗಿ 19 ದಿನಗಳಲ್ಲೆ ಮುರಿದು ಬಿದ್ದಿದೆ. ಮತ್ತು ಈ ಪ್ರಕರಣ ಗೊತ್ತಿದ್ದರೂ ಏನು ಮಾಡಲಿಕ್ಕಾಗದೇ  ಹಲವಾರು ಜೀವಪರ ಮನಸ್ಸುಗಳು ದಲಿತಪರ ಸಂಘಟನೆಗಳು ಏನೂ ಮಡಲಾಗದೇ ಕೈ ಚೆಲ್ಲಿ ಕುಳಿತಿವೆ.

ನಿಮ್ಮ ಮದುವೆಯನ್ನು ಮಾನ್ಯ ಮಾಡುತ್ತೇವೆ ಬನ್ನಿ ಎಂದು ಊರಿಂದ ತಪ್ಪಿಸಿಕೊಂಡು ದೂರ ಹೋಗಿದ್ದ ಯುವಪ್ರೇಮಿಗಳನ್ನು ಊರಿನ ನೈತಿಕತೆಯ ವಾರಸುದಾರರು ವಾಪಸ್ ಕರೆಸಿಕೊಂಡಿದ್ದರು. ಆದರೆ, ಆದದ್ದೇ ಬೇರೆ. ಹುಡುಗಿಯದ್ದು ಕೀಳುಜಾತಿಯಾದ್ದರಿಂದ ಹುಡುಗಿಯನ್ನು ಮರೆತುಬಿಡಬೇಕೆಂದು ಹುಡುಗನಿಗೆ ವಾರ್ನಿಂಗ್ ಮಾಡಿದ್ದಾರೆ. ಹುಡುಗ ಒಪ್ಪದಿದ್ದುದ್ದಕ್ಕೆ ಅವನನ್ನು ಮೈ ಬಾಯುವ ಹಾಗೆ ಮುಖ ಮೋತಿಯನ್ನದೇ ಬಡಿದು ಹೆದರಿಸಿದ್ದಾರೆ. ಇದು ಗೊತ್ತಾಗುತ್ತಿದ್ದಂತೆ ಕೆಲವು ದಲಿತಪರ ಹೋರಾಟಗಾರರಾದ ನಾಗಮ್ಮ, ರಮೇಶ ಕೋಳೂರು ಮತ್ತಿತರರು ಧಾವಿಸಿ ಬಂದು ಹುಡುಗನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜೊತೆಗೆ ಎರಡು ಕಡೆಯವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಪ್ರಕರಣಕ್ಕೆ ಸುಖಾಂತ್ಯ ಹಾಡಲು ನೋಡಿದ್ದಾರೆ.

ಆದರೆ, ಅಷ್ಟೊತ್ತಿಗೆಗಾಗಲೇ ನೈತಿಕ ವಾರಸುದಾರರು ಹೆದರಿಸುವಿಕೆ ಮತ್ತು ಪುಸಲಾಯಿಸುವಿಕೆ ಎಷ್ಟರಮಟ್ಟಿಗೆ ಇತ್ತೆಂದರೆ ಸಂಜೆ ಅಷ್ಟೊತ್ತಿಗೆ ನಾನು ಆ ಹುಡುಗನೊಂದಿಗೆ ಬಾಳ್ವೆ ಮಾಡಲು ಸುತಾರಂ ಇಷ್ಟವಿಲ್ಲ. ನನಗೆ ಡೈವೋರ್ಸ್ ಕೊಡಿಸಿ  ಎಂದು ಪೊಲೀಸರ ಮುಂದೆಯೇ ಹುಡುಗಿ ಉಲ್ಟಾ ಹೊಡೆದಿದ್ದಾಳೆ. “ನೀನು ಅವನನ್ನು ಬಿಟ್ಟರೆ ನಿನ್ನನ್ನು ಇವನೊಂದಿಗೆ ಮದುವೆಯ ಮಾಡುತ್ತೇವೆ ಬಿಡು” ಎಂದು ನೈತಿಕತೆಯ ವಾರಸುದಾರರು ಮೊದಲೇ ರೆಡಿ ಇಟ್ಟುಕೊಂಡಿದ್ದ ಸಜಾತಿಯ ವರನನ್ನು ಹುಡುಗಿ ಮುಂದೆ ನಿಲ್ಲಿಸಿದ್ದಾರೆ.  “ಇವನೊಂದಿಗೆ ಮದವೆ ಮಾಡುವ ಜವಾಬ್ಧಾರಿ ನಮ್ಮದು” ಎಂದು ಹುಡುಗಿಗೆ ಧೈರ್ಯ ತುಂಬಿದ್ದಾರೆ. ಕೋಲೆ ಬಸವನಂತ ಆ ಹುಡುಗ ಕೂಡ ತಲೆಯಾಡಿಸಿದ್ದಾನೆ.

ಹೀಗೆ ಸಂಜೆಯ ಹೊತ್ತಿಗೆ ಪೊಲೀಸ್ ಠಾಣೆಯಲ್ಲೆ ಸಿನಿಮಿಯ ರೀತಿಯಲ್ಲಿ ಉಲ್ಟಾ ಹೊಡೆದ ಪ್ರಕರಣ ನೋಡಿದ ಪೊಲೀಸ್ ಇನ್ಸಪೆಕ್ಟರ್ ಸಹ “ಆ ಹುಡುಗ ಹುಡುಗಿಯ ಬದುಕನ್ನು ಬಲಿಪಶು ತೊಗೊತ್ತಿದ್ದಿರಲ್ಲ ನೀವು, ನಾಚಿಕೆಯಾಗಲ್ವಾ, ಈ ಹೊಸ ಹುಡುಗ ಈ ಹುಡುಗಿಯನ್ನು ಮುಂದೆ ಚನ್ನಾಗಿ ಬಾಳಿಸದಿದ್ದರೆ, ಅನುಮಾನಪಡತೊಡಗಿದರೆ ಏನ್ ಮಾಡ್ತಿರಿ ಎಂದು ಎರಡೂ ಕಡೆಯವರನ್ನು ಹತಾಶೆಯಿಂದ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಂತೂ ಬೆಳಗ್ಗೆ ನನ್ನ ಗಂಡನನ್ನು ಕಾಪಾಡಿ ಎಂದು ಬೊಬ್ಬಿರಿಯುತ್ತಿದ್ದ ಹುಡುಗಿ ಸಂಜೆ ಅಷ್ಟೊತ್ತಿಗೆ ಆ ಹುಡುಗನೇ ಬೇಡ ಎಂದು ರೋಧಿಸತೊಡಗಿದ್ದಾಳೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಭಯಮಿಶ್ರಿತ ಗೊಂದಲದಲ್ಲಿದ್ದ ಹುಡುಗನ ಕಣ್ಣಂಚು ತೇವ ತೇವ. ನನ್ನ ಹುಡುಗಿಯನ್ನು ನನಗೆ ಕೊಡಿಸಿದರೆ ಸಾಕು ಎಂದು ಆತ ಅಳತೊಡಗಿದ್ದಾನೆ.

ಗದಗ ಜಿಲ್ಲೆಯ ಲಕ್ಕಲಕಟ್ಟಿ ಗ್ರಾಮದಲ್ಲಿ ಕಳೆದ ಒಂದು ವಾರದ ಹಿಂದೆ ಅಷ್ಟೆ ಅಂತರ್ಜಾತಿ ವಿವಾಹವಾಗಿದ್ದ ಯುವ ದಂಪತಿಗಳ ಜೋಡಿ ಕೊಲೆ ನಡೆದಿತ್ತು. ಅದು ನಡೆದ ಒಂದೇ ವಾರದಲ್ಲಿ ಈಗ ಈ ಪ್ರಕರಣ ನಡೆದಿದೆ. ಹಾಗೆ ನೋಡಿದರೆ ಜಾತಿ ಗೋಡೆಯನ್ನು ಕಿತ್ತೆಸೆದು, ಧರ್ಮದ ಬೇಲಿಗೆ ಕಿವಿಗೊಡದೇ ಹಲವಾರು ಯುವ ಜೋಡಿಗಳು ಪ್ರೀತಿಸಿ ಮದುವೆಯಾಗುವ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಆದರೆ, ಆ ಜೋಡಿಗಳು ನೆಮ್ಮದಿಯಿಂದ ಬಾಳುವೆ ಮಾಡುವ ವಾತಾವರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡು ಬರುವುದಿಲ್ಲ. ಈ ಭಾಗದಲ್ಲಿ ದಲಿತ ಸಂಘರ್ಷ ಸಮಿತಿಗಳು ಸಹ ಅಷ್ಟೊಂದು ಸಕ್ರಿಯವಾಗಿಲ್ಲ.

ಮಾಡದ ತಪ್ಪಿಗೆ ಆತ ತನ್ನ ಹುಡುಗಿಯನ್ನು ಇನ್ನೊಂದು ಹುಡುಗನೊಂದಿಗ ಮದುವೆ ಮಾಡಿಸಲು ಖರ್ಚಿನ ಬಾಬ್ತು ಎಂದು ಮೂರು ಲಕ್ಷ ರೂಪಾಯಿ ತಪ್ಪುದಂಡ ಕೊಡಬೇಕು. ಈ ಹಣದಲ್ಲಿ ಒಂದಿಷ್ಟು ಪಾಲು ಎರಡು ಕಡೆಯ ನೈತಿಕ ವಾರಸುದಾರರಿಗೂ ಹಂಚಿಕೆಯಾಗುತ್ತದೆ ಎಂಬ ಆರೋಪವೂ ಸ್ಥಳಿಯರಿಂದ ಕೇಳಿ ಬಂದಿದೆ.

ಈ ಎರಡು ಪ್ರಕರಣಗಳ ಹಿಂದೆ ನಾವು ನಿಮ್ಮ ಹಿಂದೆ ಇದ್ದೇವೆ ಎಂದು ಧೈರ್ಯ ತುಂಬುವ, ಕರೆತಂದು ಮದುವೆ ಮಾಡಿಸುವ, ಇಂಥ ಯುವಜೋಡಿಗಳ ಮೇಲೆ ಹಲ್ಲೆಗಳು ನಡೆದಾಗ ಬೀದಿಗಿಳಿದು ಪ್ರತಿಭಟನೆ ಮಾಡುವ ಸಂಘಟನೆಗಳ, ಜೀವಪರ ಮನಸ್ಸುಗಳ ಕೊರತೆ ಇದೆ. ಹೀಗಾಗಿ ಇಲ್ಲಿನ ಅಂತರ್ಜಾತಿ ವಿವಾಹಗಳು ದುರಂತ ಅಂತ್ಯ ಕಾಣುತ್ತವೆ ಎಂದು ಗದಗದ ದಲಿತಪರ ಹೋರಾಟಗಾರ ರಮೇಶ ಕೋಳೂರು ನೋವಿನಿಂದ ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾತೀಯತೆ ಎನ್ನುವುದು ಮೇಲ್ಜಾತಿಯ ಜನರಲ್ಲಿ ಮಾತ್ರವಲ್ಲ, ಬಹುತೇಕ ಜಾತಿಗಳಲ್ಲಿ ತುಂಬಿ ತುಳುಕುತ್ತಿದೆ. ಇದೇ ಈ ದೇಶದ ದುರಂತ.

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...