Homeಕರ್ನಾಟಕ19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ...

19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ ಸಿದ್ಧತೆ

ಬೆಳಗ್ಗೆ ನನ್ನ ಗಂಡನನ್ನು ಕಾಪಾಡಿ ಎಂದು ಬೊಬ್ಬಿರಿಯುತ್ತಿದ್ದ ಹುಡುಗಿ ಸಂಜೆ ಅಷ್ಟೊತ್ತಿಗೆ ಆ ಹುಡುಗನೇ ಬೇಡ ಎಂದು ರೋಧಿಸತೊಡಗಿದ್ದಾಳೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಭಯಮಿಶ್ರಿತ ಗೊಂದಲದಲ್ಲಿದ್ದ ಹುಡುಗನ ಕಣ್ಣಂಚು ತೇವ ತೇವ.

- Advertisement -
- Advertisement -

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಕಳೆದ 20 ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ ಯುವಜೋಡಿಗಳ ಪ್ರಕರಣ ಸಿನಿಮಿಯ ರೀತಿಯಲ್ಲಿ ಕೊನೆಗೊಂಡಿದೆ. ಕೊನೆಗೂ ಆ ಪ್ರಕರಣದಲ್ಲಿ ಊರ ಹಿರಿಯರು ಎನಿಸಿಕೊಳ್ಳುವ ನೈತಿಕತೆಯ ವಾರಸುದಾರರು ಹುಡುಗ ಹುಡುಗಿಯನ್ನು ಬೇರ್ಪಡಿಸಿ ದುರಂತ ಅಂತ್ಯದ ಷರಾ ಬರೆದಿದ್ದಾರೆ.

ಹುಡುಗ ಗಾಣಿಗ ಸಮುದಾಯದವ. ಹುಡುಗಿ ಮಾದರ ಜಾತಿಗೆ ಸೇರಿದವಳು. ಈ ಯುವಪ್ರೇಮಿಗಳು ಕಳೆದ ಅಕ್ಟೋಬರ್ 24ರಂದು ಕಾನೂನುಬದ್ಧವಾಗಿಯೇ ರಜಿಸ್ಟರ್ ಮದುವೆಯಾಗಿದ್ದರು. ಕೇವಲ ಮದುವೆಯಾಗಿ 19 ದಿನಗಳಲ್ಲೆ ಮುರಿದು ಬಿದ್ದಿದೆ. ಮತ್ತು ಈ ಪ್ರಕರಣ ಗೊತ್ತಿದ್ದರೂ ಏನು ಮಾಡಲಿಕ್ಕಾಗದೇ  ಹಲವಾರು ಜೀವಪರ ಮನಸ್ಸುಗಳು ದಲಿತಪರ ಸಂಘಟನೆಗಳು ಏನೂ ಮಡಲಾಗದೇ ಕೈ ಚೆಲ್ಲಿ ಕುಳಿತಿವೆ.

ನಿಮ್ಮ ಮದುವೆಯನ್ನು ಮಾನ್ಯ ಮಾಡುತ್ತೇವೆ ಬನ್ನಿ ಎಂದು ಊರಿಂದ ತಪ್ಪಿಸಿಕೊಂಡು ದೂರ ಹೋಗಿದ್ದ ಯುವಪ್ರೇಮಿಗಳನ್ನು ಊರಿನ ನೈತಿಕತೆಯ ವಾರಸುದಾರರು ವಾಪಸ್ ಕರೆಸಿಕೊಂಡಿದ್ದರು. ಆದರೆ, ಆದದ್ದೇ ಬೇರೆ. ಹುಡುಗಿಯದ್ದು ಕೀಳುಜಾತಿಯಾದ್ದರಿಂದ ಹುಡುಗಿಯನ್ನು ಮರೆತುಬಿಡಬೇಕೆಂದು ಹುಡುಗನಿಗೆ ವಾರ್ನಿಂಗ್ ಮಾಡಿದ್ದಾರೆ. ಹುಡುಗ ಒಪ್ಪದಿದ್ದುದ್ದಕ್ಕೆ ಅವನನ್ನು ಮೈ ಬಾಯುವ ಹಾಗೆ ಮುಖ ಮೋತಿಯನ್ನದೇ ಬಡಿದು ಹೆದರಿಸಿದ್ದಾರೆ. ಇದು ಗೊತ್ತಾಗುತ್ತಿದ್ದಂತೆ ಕೆಲವು ದಲಿತಪರ ಹೋರಾಟಗಾರರಾದ ನಾಗಮ್ಮ, ರಮೇಶ ಕೋಳೂರು ಮತ್ತಿತರರು ಧಾವಿಸಿ ಬಂದು ಹುಡುಗನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜೊತೆಗೆ ಎರಡು ಕಡೆಯವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಪ್ರಕರಣಕ್ಕೆ ಸುಖಾಂತ್ಯ ಹಾಡಲು ನೋಡಿದ್ದಾರೆ.

ಆದರೆ, ಅಷ್ಟೊತ್ತಿಗೆಗಾಗಲೇ ನೈತಿಕ ವಾರಸುದಾರರು ಹೆದರಿಸುವಿಕೆ ಮತ್ತು ಪುಸಲಾಯಿಸುವಿಕೆ ಎಷ್ಟರಮಟ್ಟಿಗೆ ಇತ್ತೆಂದರೆ ಸಂಜೆ ಅಷ್ಟೊತ್ತಿಗೆ ನಾನು ಆ ಹುಡುಗನೊಂದಿಗೆ ಬಾಳ್ವೆ ಮಾಡಲು ಸುತಾರಂ ಇಷ್ಟವಿಲ್ಲ. ನನಗೆ ಡೈವೋರ್ಸ್ ಕೊಡಿಸಿ  ಎಂದು ಪೊಲೀಸರ ಮುಂದೆಯೇ ಹುಡುಗಿ ಉಲ್ಟಾ ಹೊಡೆದಿದ್ದಾಳೆ. “ನೀನು ಅವನನ್ನು ಬಿಟ್ಟರೆ ನಿನ್ನನ್ನು ಇವನೊಂದಿಗೆ ಮದುವೆಯ ಮಾಡುತ್ತೇವೆ ಬಿಡು” ಎಂದು ನೈತಿಕತೆಯ ವಾರಸುದಾರರು ಮೊದಲೇ ರೆಡಿ ಇಟ್ಟುಕೊಂಡಿದ್ದ ಸಜಾತಿಯ ವರನನ್ನು ಹುಡುಗಿ ಮುಂದೆ ನಿಲ್ಲಿಸಿದ್ದಾರೆ.  “ಇವನೊಂದಿಗೆ ಮದವೆ ಮಾಡುವ ಜವಾಬ್ಧಾರಿ ನಮ್ಮದು” ಎಂದು ಹುಡುಗಿಗೆ ಧೈರ್ಯ ತುಂಬಿದ್ದಾರೆ. ಕೋಲೆ ಬಸವನಂತ ಆ ಹುಡುಗ ಕೂಡ ತಲೆಯಾಡಿಸಿದ್ದಾನೆ.

ಹೀಗೆ ಸಂಜೆಯ ಹೊತ್ತಿಗೆ ಪೊಲೀಸ್ ಠಾಣೆಯಲ್ಲೆ ಸಿನಿಮಿಯ ರೀತಿಯಲ್ಲಿ ಉಲ್ಟಾ ಹೊಡೆದ ಪ್ರಕರಣ ನೋಡಿದ ಪೊಲೀಸ್ ಇನ್ಸಪೆಕ್ಟರ್ ಸಹ “ಆ ಹುಡುಗ ಹುಡುಗಿಯ ಬದುಕನ್ನು ಬಲಿಪಶು ತೊಗೊತ್ತಿದ್ದಿರಲ್ಲ ನೀವು, ನಾಚಿಕೆಯಾಗಲ್ವಾ, ಈ ಹೊಸ ಹುಡುಗ ಈ ಹುಡುಗಿಯನ್ನು ಮುಂದೆ ಚನ್ನಾಗಿ ಬಾಳಿಸದಿದ್ದರೆ, ಅನುಮಾನಪಡತೊಡಗಿದರೆ ಏನ್ ಮಾಡ್ತಿರಿ ಎಂದು ಎರಡೂ ಕಡೆಯವರನ್ನು ಹತಾಶೆಯಿಂದ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಂತೂ ಬೆಳಗ್ಗೆ ನನ್ನ ಗಂಡನನ್ನು ಕಾಪಾಡಿ ಎಂದು ಬೊಬ್ಬಿರಿಯುತ್ತಿದ್ದ ಹುಡುಗಿ ಸಂಜೆ ಅಷ್ಟೊತ್ತಿಗೆ ಆ ಹುಡುಗನೇ ಬೇಡ ಎಂದು ರೋಧಿಸತೊಡಗಿದ್ದಾಳೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಭಯಮಿಶ್ರಿತ ಗೊಂದಲದಲ್ಲಿದ್ದ ಹುಡುಗನ ಕಣ್ಣಂಚು ತೇವ ತೇವ. ನನ್ನ ಹುಡುಗಿಯನ್ನು ನನಗೆ ಕೊಡಿಸಿದರೆ ಸಾಕು ಎಂದು ಆತ ಅಳತೊಡಗಿದ್ದಾನೆ.

ಗದಗ ಜಿಲ್ಲೆಯ ಲಕ್ಕಲಕಟ್ಟಿ ಗ್ರಾಮದಲ್ಲಿ ಕಳೆದ ಒಂದು ವಾರದ ಹಿಂದೆ ಅಷ್ಟೆ ಅಂತರ್ಜಾತಿ ವಿವಾಹವಾಗಿದ್ದ ಯುವ ದಂಪತಿಗಳ ಜೋಡಿ ಕೊಲೆ ನಡೆದಿತ್ತು. ಅದು ನಡೆದ ಒಂದೇ ವಾರದಲ್ಲಿ ಈಗ ಈ ಪ್ರಕರಣ ನಡೆದಿದೆ. ಹಾಗೆ ನೋಡಿದರೆ ಜಾತಿ ಗೋಡೆಯನ್ನು ಕಿತ್ತೆಸೆದು, ಧರ್ಮದ ಬೇಲಿಗೆ ಕಿವಿಗೊಡದೇ ಹಲವಾರು ಯುವ ಜೋಡಿಗಳು ಪ್ರೀತಿಸಿ ಮದುವೆಯಾಗುವ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಆದರೆ, ಆ ಜೋಡಿಗಳು ನೆಮ್ಮದಿಯಿಂದ ಬಾಳುವೆ ಮಾಡುವ ವಾತಾವರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡು ಬರುವುದಿಲ್ಲ. ಈ ಭಾಗದಲ್ಲಿ ದಲಿತ ಸಂಘರ್ಷ ಸಮಿತಿಗಳು ಸಹ ಅಷ್ಟೊಂದು ಸಕ್ರಿಯವಾಗಿಲ್ಲ.

ಮಾಡದ ತಪ್ಪಿಗೆ ಆತ ತನ್ನ ಹುಡುಗಿಯನ್ನು ಇನ್ನೊಂದು ಹುಡುಗನೊಂದಿಗ ಮದುವೆ ಮಾಡಿಸಲು ಖರ್ಚಿನ ಬಾಬ್ತು ಎಂದು ಮೂರು ಲಕ್ಷ ರೂಪಾಯಿ ತಪ್ಪುದಂಡ ಕೊಡಬೇಕು. ಈ ಹಣದಲ್ಲಿ ಒಂದಿಷ್ಟು ಪಾಲು ಎರಡು ಕಡೆಯ ನೈತಿಕ ವಾರಸುದಾರರಿಗೂ ಹಂಚಿಕೆಯಾಗುತ್ತದೆ ಎಂಬ ಆರೋಪವೂ ಸ್ಥಳಿಯರಿಂದ ಕೇಳಿ ಬಂದಿದೆ.

ಈ ಎರಡು ಪ್ರಕರಣಗಳ ಹಿಂದೆ ನಾವು ನಿಮ್ಮ ಹಿಂದೆ ಇದ್ದೇವೆ ಎಂದು ಧೈರ್ಯ ತುಂಬುವ, ಕರೆತಂದು ಮದುವೆ ಮಾಡಿಸುವ, ಇಂಥ ಯುವಜೋಡಿಗಳ ಮೇಲೆ ಹಲ್ಲೆಗಳು ನಡೆದಾಗ ಬೀದಿಗಿಳಿದು ಪ್ರತಿಭಟನೆ ಮಾಡುವ ಸಂಘಟನೆಗಳ, ಜೀವಪರ ಮನಸ್ಸುಗಳ ಕೊರತೆ ಇದೆ. ಹೀಗಾಗಿ ಇಲ್ಲಿನ ಅಂತರ್ಜಾತಿ ವಿವಾಹಗಳು ದುರಂತ ಅಂತ್ಯ ಕಾಣುತ್ತವೆ ಎಂದು ಗದಗದ ದಲಿತಪರ ಹೋರಾಟಗಾರ ರಮೇಶ ಕೋಳೂರು ನೋವಿನಿಂದ ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾತೀಯತೆ ಎನ್ನುವುದು ಮೇಲ್ಜಾತಿಯ ಜನರಲ್ಲಿ ಮಾತ್ರವಲ್ಲ, ಬಹುತೇಕ ಜಾತಿಗಳಲ್ಲಿ ತುಂಬಿ ತುಳುಕುತ್ತಿದೆ. ಇದೇ ಈ ದೇಶದ ದುರಂತ.

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...