Homeಕರ್ನಾಟಕ19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ...

19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ ಸಿದ್ಧತೆ

ಬೆಳಗ್ಗೆ ನನ್ನ ಗಂಡನನ್ನು ಕಾಪಾಡಿ ಎಂದು ಬೊಬ್ಬಿರಿಯುತ್ತಿದ್ದ ಹುಡುಗಿ ಸಂಜೆ ಅಷ್ಟೊತ್ತಿಗೆ ಆ ಹುಡುಗನೇ ಬೇಡ ಎಂದು ರೋಧಿಸತೊಡಗಿದ್ದಾಳೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಭಯಮಿಶ್ರಿತ ಗೊಂದಲದಲ್ಲಿದ್ದ ಹುಡುಗನ ಕಣ್ಣಂಚು ತೇವ ತೇವ.

- Advertisement -
- Advertisement -

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಕಳೆದ 20 ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ ಯುವಜೋಡಿಗಳ ಪ್ರಕರಣ ಸಿನಿಮಿಯ ರೀತಿಯಲ್ಲಿ ಕೊನೆಗೊಂಡಿದೆ. ಕೊನೆಗೂ ಆ ಪ್ರಕರಣದಲ್ಲಿ ಊರ ಹಿರಿಯರು ಎನಿಸಿಕೊಳ್ಳುವ ನೈತಿಕತೆಯ ವಾರಸುದಾರರು ಹುಡುಗ ಹುಡುಗಿಯನ್ನು ಬೇರ್ಪಡಿಸಿ ದುರಂತ ಅಂತ್ಯದ ಷರಾ ಬರೆದಿದ್ದಾರೆ.

ಹುಡುಗ ಗಾಣಿಗ ಸಮುದಾಯದವ. ಹುಡುಗಿ ಮಾದರ ಜಾತಿಗೆ ಸೇರಿದವಳು. ಈ ಯುವಪ್ರೇಮಿಗಳು ಕಳೆದ ಅಕ್ಟೋಬರ್ 24ರಂದು ಕಾನೂನುಬದ್ಧವಾಗಿಯೇ ರಜಿಸ್ಟರ್ ಮದುವೆಯಾಗಿದ್ದರು. ಕೇವಲ ಮದುವೆಯಾಗಿ 19 ದಿನಗಳಲ್ಲೆ ಮುರಿದು ಬಿದ್ದಿದೆ. ಮತ್ತು ಈ ಪ್ರಕರಣ ಗೊತ್ತಿದ್ದರೂ ಏನು ಮಾಡಲಿಕ್ಕಾಗದೇ  ಹಲವಾರು ಜೀವಪರ ಮನಸ್ಸುಗಳು ದಲಿತಪರ ಸಂಘಟನೆಗಳು ಏನೂ ಮಡಲಾಗದೇ ಕೈ ಚೆಲ್ಲಿ ಕುಳಿತಿವೆ.

ನಿಮ್ಮ ಮದುವೆಯನ್ನು ಮಾನ್ಯ ಮಾಡುತ್ತೇವೆ ಬನ್ನಿ ಎಂದು ಊರಿಂದ ತಪ್ಪಿಸಿಕೊಂಡು ದೂರ ಹೋಗಿದ್ದ ಯುವಪ್ರೇಮಿಗಳನ್ನು ಊರಿನ ನೈತಿಕತೆಯ ವಾರಸುದಾರರು ವಾಪಸ್ ಕರೆಸಿಕೊಂಡಿದ್ದರು. ಆದರೆ, ಆದದ್ದೇ ಬೇರೆ. ಹುಡುಗಿಯದ್ದು ಕೀಳುಜಾತಿಯಾದ್ದರಿಂದ ಹುಡುಗಿಯನ್ನು ಮರೆತುಬಿಡಬೇಕೆಂದು ಹುಡುಗನಿಗೆ ವಾರ್ನಿಂಗ್ ಮಾಡಿದ್ದಾರೆ. ಹುಡುಗ ಒಪ್ಪದಿದ್ದುದ್ದಕ್ಕೆ ಅವನನ್ನು ಮೈ ಬಾಯುವ ಹಾಗೆ ಮುಖ ಮೋತಿಯನ್ನದೇ ಬಡಿದು ಹೆದರಿಸಿದ್ದಾರೆ. ಇದು ಗೊತ್ತಾಗುತ್ತಿದ್ದಂತೆ ಕೆಲವು ದಲಿತಪರ ಹೋರಾಟಗಾರರಾದ ನಾಗಮ್ಮ, ರಮೇಶ ಕೋಳೂರು ಮತ್ತಿತರರು ಧಾವಿಸಿ ಬಂದು ಹುಡುಗನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜೊತೆಗೆ ಎರಡು ಕಡೆಯವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಪ್ರಕರಣಕ್ಕೆ ಸುಖಾಂತ್ಯ ಹಾಡಲು ನೋಡಿದ್ದಾರೆ.

ಆದರೆ, ಅಷ್ಟೊತ್ತಿಗೆಗಾಗಲೇ ನೈತಿಕ ವಾರಸುದಾರರು ಹೆದರಿಸುವಿಕೆ ಮತ್ತು ಪುಸಲಾಯಿಸುವಿಕೆ ಎಷ್ಟರಮಟ್ಟಿಗೆ ಇತ್ತೆಂದರೆ ಸಂಜೆ ಅಷ್ಟೊತ್ತಿಗೆ ನಾನು ಆ ಹುಡುಗನೊಂದಿಗೆ ಬಾಳ್ವೆ ಮಾಡಲು ಸುತಾರಂ ಇಷ್ಟವಿಲ್ಲ. ನನಗೆ ಡೈವೋರ್ಸ್ ಕೊಡಿಸಿ  ಎಂದು ಪೊಲೀಸರ ಮುಂದೆಯೇ ಹುಡುಗಿ ಉಲ್ಟಾ ಹೊಡೆದಿದ್ದಾಳೆ. “ನೀನು ಅವನನ್ನು ಬಿಟ್ಟರೆ ನಿನ್ನನ್ನು ಇವನೊಂದಿಗೆ ಮದುವೆಯ ಮಾಡುತ್ತೇವೆ ಬಿಡು” ಎಂದು ನೈತಿಕತೆಯ ವಾರಸುದಾರರು ಮೊದಲೇ ರೆಡಿ ಇಟ್ಟುಕೊಂಡಿದ್ದ ಸಜಾತಿಯ ವರನನ್ನು ಹುಡುಗಿ ಮುಂದೆ ನಿಲ್ಲಿಸಿದ್ದಾರೆ.  “ಇವನೊಂದಿಗೆ ಮದವೆ ಮಾಡುವ ಜವಾಬ್ಧಾರಿ ನಮ್ಮದು” ಎಂದು ಹುಡುಗಿಗೆ ಧೈರ್ಯ ತುಂಬಿದ್ದಾರೆ. ಕೋಲೆ ಬಸವನಂತ ಆ ಹುಡುಗ ಕೂಡ ತಲೆಯಾಡಿಸಿದ್ದಾನೆ.

ಹೀಗೆ ಸಂಜೆಯ ಹೊತ್ತಿಗೆ ಪೊಲೀಸ್ ಠಾಣೆಯಲ್ಲೆ ಸಿನಿಮಿಯ ರೀತಿಯಲ್ಲಿ ಉಲ್ಟಾ ಹೊಡೆದ ಪ್ರಕರಣ ನೋಡಿದ ಪೊಲೀಸ್ ಇನ್ಸಪೆಕ್ಟರ್ ಸಹ “ಆ ಹುಡುಗ ಹುಡುಗಿಯ ಬದುಕನ್ನು ಬಲಿಪಶು ತೊಗೊತ್ತಿದ್ದಿರಲ್ಲ ನೀವು, ನಾಚಿಕೆಯಾಗಲ್ವಾ, ಈ ಹೊಸ ಹುಡುಗ ಈ ಹುಡುಗಿಯನ್ನು ಮುಂದೆ ಚನ್ನಾಗಿ ಬಾಳಿಸದಿದ್ದರೆ, ಅನುಮಾನಪಡತೊಡಗಿದರೆ ಏನ್ ಮಾಡ್ತಿರಿ ಎಂದು ಎರಡೂ ಕಡೆಯವರನ್ನು ಹತಾಶೆಯಿಂದ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಂತೂ ಬೆಳಗ್ಗೆ ನನ್ನ ಗಂಡನನ್ನು ಕಾಪಾಡಿ ಎಂದು ಬೊಬ್ಬಿರಿಯುತ್ತಿದ್ದ ಹುಡುಗಿ ಸಂಜೆ ಅಷ್ಟೊತ್ತಿಗೆ ಆ ಹುಡುಗನೇ ಬೇಡ ಎಂದು ರೋಧಿಸತೊಡಗಿದ್ದಾಳೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಭಯಮಿಶ್ರಿತ ಗೊಂದಲದಲ್ಲಿದ್ದ ಹುಡುಗನ ಕಣ್ಣಂಚು ತೇವ ತೇವ. ನನ್ನ ಹುಡುಗಿಯನ್ನು ನನಗೆ ಕೊಡಿಸಿದರೆ ಸಾಕು ಎಂದು ಆತ ಅಳತೊಡಗಿದ್ದಾನೆ.

ಗದಗ ಜಿಲ್ಲೆಯ ಲಕ್ಕಲಕಟ್ಟಿ ಗ್ರಾಮದಲ್ಲಿ ಕಳೆದ ಒಂದು ವಾರದ ಹಿಂದೆ ಅಷ್ಟೆ ಅಂತರ್ಜಾತಿ ವಿವಾಹವಾಗಿದ್ದ ಯುವ ದಂಪತಿಗಳ ಜೋಡಿ ಕೊಲೆ ನಡೆದಿತ್ತು. ಅದು ನಡೆದ ಒಂದೇ ವಾರದಲ್ಲಿ ಈಗ ಈ ಪ್ರಕರಣ ನಡೆದಿದೆ. ಹಾಗೆ ನೋಡಿದರೆ ಜಾತಿ ಗೋಡೆಯನ್ನು ಕಿತ್ತೆಸೆದು, ಧರ್ಮದ ಬೇಲಿಗೆ ಕಿವಿಗೊಡದೇ ಹಲವಾರು ಯುವ ಜೋಡಿಗಳು ಪ್ರೀತಿಸಿ ಮದುವೆಯಾಗುವ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಆದರೆ, ಆ ಜೋಡಿಗಳು ನೆಮ್ಮದಿಯಿಂದ ಬಾಳುವೆ ಮಾಡುವ ವಾತಾವರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡು ಬರುವುದಿಲ್ಲ. ಈ ಭಾಗದಲ್ಲಿ ದಲಿತ ಸಂಘರ್ಷ ಸಮಿತಿಗಳು ಸಹ ಅಷ್ಟೊಂದು ಸಕ್ರಿಯವಾಗಿಲ್ಲ.

ಮಾಡದ ತಪ್ಪಿಗೆ ಆತ ತನ್ನ ಹುಡುಗಿಯನ್ನು ಇನ್ನೊಂದು ಹುಡುಗನೊಂದಿಗ ಮದುವೆ ಮಾಡಿಸಲು ಖರ್ಚಿನ ಬಾಬ್ತು ಎಂದು ಮೂರು ಲಕ್ಷ ರೂಪಾಯಿ ತಪ್ಪುದಂಡ ಕೊಡಬೇಕು. ಈ ಹಣದಲ್ಲಿ ಒಂದಿಷ್ಟು ಪಾಲು ಎರಡು ಕಡೆಯ ನೈತಿಕ ವಾರಸುದಾರರಿಗೂ ಹಂಚಿಕೆಯಾಗುತ್ತದೆ ಎಂಬ ಆರೋಪವೂ ಸ್ಥಳಿಯರಿಂದ ಕೇಳಿ ಬಂದಿದೆ.

ಈ ಎರಡು ಪ್ರಕರಣಗಳ ಹಿಂದೆ ನಾವು ನಿಮ್ಮ ಹಿಂದೆ ಇದ್ದೇವೆ ಎಂದು ಧೈರ್ಯ ತುಂಬುವ, ಕರೆತಂದು ಮದುವೆ ಮಾಡಿಸುವ, ಇಂಥ ಯುವಜೋಡಿಗಳ ಮೇಲೆ ಹಲ್ಲೆಗಳು ನಡೆದಾಗ ಬೀದಿಗಿಳಿದು ಪ್ರತಿಭಟನೆ ಮಾಡುವ ಸಂಘಟನೆಗಳ, ಜೀವಪರ ಮನಸ್ಸುಗಳ ಕೊರತೆ ಇದೆ. ಹೀಗಾಗಿ ಇಲ್ಲಿನ ಅಂತರ್ಜಾತಿ ವಿವಾಹಗಳು ದುರಂತ ಅಂತ್ಯ ಕಾಣುತ್ತವೆ ಎಂದು ಗದಗದ ದಲಿತಪರ ಹೋರಾಟಗಾರ ರಮೇಶ ಕೋಳೂರು ನೋವಿನಿಂದ ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾತೀಯತೆ ಎನ್ನುವುದು ಮೇಲ್ಜಾತಿಯ ಜನರಲ್ಲಿ ಮಾತ್ರವಲ್ಲ, ಬಹುತೇಕ ಜಾತಿಗಳಲ್ಲಿ ತುಂಬಿ ತುಳುಕುತ್ತಿದೆ. ಇದೇ ಈ ದೇಶದ ದುರಂತ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...