Homeಕರ್ನಾಟಕ19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ...

19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ ಸಿದ್ಧತೆ

ಬೆಳಗ್ಗೆ ನನ್ನ ಗಂಡನನ್ನು ಕಾಪಾಡಿ ಎಂದು ಬೊಬ್ಬಿರಿಯುತ್ತಿದ್ದ ಹುಡುಗಿ ಸಂಜೆ ಅಷ್ಟೊತ್ತಿಗೆ ಆ ಹುಡುಗನೇ ಬೇಡ ಎಂದು ರೋಧಿಸತೊಡಗಿದ್ದಾಳೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಭಯಮಿಶ್ರಿತ ಗೊಂದಲದಲ್ಲಿದ್ದ ಹುಡುಗನ ಕಣ್ಣಂಚು ತೇವ ತೇವ.

- Advertisement -
- Advertisement -

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಕಳೆದ 20 ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ ಯುವಜೋಡಿಗಳ ಪ್ರಕರಣ ಸಿನಿಮಿಯ ರೀತಿಯಲ್ಲಿ ಕೊನೆಗೊಂಡಿದೆ. ಕೊನೆಗೂ ಆ ಪ್ರಕರಣದಲ್ಲಿ ಊರ ಹಿರಿಯರು ಎನಿಸಿಕೊಳ್ಳುವ ನೈತಿಕತೆಯ ವಾರಸುದಾರರು ಹುಡುಗ ಹುಡುಗಿಯನ್ನು ಬೇರ್ಪಡಿಸಿ ದುರಂತ ಅಂತ್ಯದ ಷರಾ ಬರೆದಿದ್ದಾರೆ.

ಹುಡುಗ ಗಾಣಿಗ ಸಮುದಾಯದವ. ಹುಡುಗಿ ಮಾದರ ಜಾತಿಗೆ ಸೇರಿದವಳು. ಈ ಯುವಪ್ರೇಮಿಗಳು ಕಳೆದ ಅಕ್ಟೋಬರ್ 24ರಂದು ಕಾನೂನುಬದ್ಧವಾಗಿಯೇ ರಜಿಸ್ಟರ್ ಮದುವೆಯಾಗಿದ್ದರು. ಕೇವಲ ಮದುವೆಯಾಗಿ 19 ದಿನಗಳಲ್ಲೆ ಮುರಿದು ಬಿದ್ದಿದೆ. ಮತ್ತು ಈ ಪ್ರಕರಣ ಗೊತ್ತಿದ್ದರೂ ಏನು ಮಾಡಲಿಕ್ಕಾಗದೇ  ಹಲವಾರು ಜೀವಪರ ಮನಸ್ಸುಗಳು ದಲಿತಪರ ಸಂಘಟನೆಗಳು ಏನೂ ಮಡಲಾಗದೇ ಕೈ ಚೆಲ್ಲಿ ಕುಳಿತಿವೆ.

ನಿಮ್ಮ ಮದುವೆಯನ್ನು ಮಾನ್ಯ ಮಾಡುತ್ತೇವೆ ಬನ್ನಿ ಎಂದು ಊರಿಂದ ತಪ್ಪಿಸಿಕೊಂಡು ದೂರ ಹೋಗಿದ್ದ ಯುವಪ್ರೇಮಿಗಳನ್ನು ಊರಿನ ನೈತಿಕತೆಯ ವಾರಸುದಾರರು ವಾಪಸ್ ಕರೆಸಿಕೊಂಡಿದ್ದರು. ಆದರೆ, ಆದದ್ದೇ ಬೇರೆ. ಹುಡುಗಿಯದ್ದು ಕೀಳುಜಾತಿಯಾದ್ದರಿಂದ ಹುಡುಗಿಯನ್ನು ಮರೆತುಬಿಡಬೇಕೆಂದು ಹುಡುಗನಿಗೆ ವಾರ್ನಿಂಗ್ ಮಾಡಿದ್ದಾರೆ. ಹುಡುಗ ಒಪ್ಪದಿದ್ದುದ್ದಕ್ಕೆ ಅವನನ್ನು ಮೈ ಬಾಯುವ ಹಾಗೆ ಮುಖ ಮೋತಿಯನ್ನದೇ ಬಡಿದು ಹೆದರಿಸಿದ್ದಾರೆ. ಇದು ಗೊತ್ತಾಗುತ್ತಿದ್ದಂತೆ ಕೆಲವು ದಲಿತಪರ ಹೋರಾಟಗಾರರಾದ ನಾಗಮ್ಮ, ರಮೇಶ ಕೋಳೂರು ಮತ್ತಿತರರು ಧಾವಿಸಿ ಬಂದು ಹುಡುಗನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜೊತೆಗೆ ಎರಡು ಕಡೆಯವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಪ್ರಕರಣಕ್ಕೆ ಸುಖಾಂತ್ಯ ಹಾಡಲು ನೋಡಿದ್ದಾರೆ.

ಆದರೆ, ಅಷ್ಟೊತ್ತಿಗೆಗಾಗಲೇ ನೈತಿಕ ವಾರಸುದಾರರು ಹೆದರಿಸುವಿಕೆ ಮತ್ತು ಪುಸಲಾಯಿಸುವಿಕೆ ಎಷ್ಟರಮಟ್ಟಿಗೆ ಇತ್ತೆಂದರೆ ಸಂಜೆ ಅಷ್ಟೊತ್ತಿಗೆ ನಾನು ಆ ಹುಡುಗನೊಂದಿಗೆ ಬಾಳ್ವೆ ಮಾಡಲು ಸುತಾರಂ ಇಷ್ಟವಿಲ್ಲ. ನನಗೆ ಡೈವೋರ್ಸ್ ಕೊಡಿಸಿ  ಎಂದು ಪೊಲೀಸರ ಮುಂದೆಯೇ ಹುಡುಗಿ ಉಲ್ಟಾ ಹೊಡೆದಿದ್ದಾಳೆ. “ನೀನು ಅವನನ್ನು ಬಿಟ್ಟರೆ ನಿನ್ನನ್ನು ಇವನೊಂದಿಗೆ ಮದುವೆಯ ಮಾಡುತ್ತೇವೆ ಬಿಡು” ಎಂದು ನೈತಿಕತೆಯ ವಾರಸುದಾರರು ಮೊದಲೇ ರೆಡಿ ಇಟ್ಟುಕೊಂಡಿದ್ದ ಸಜಾತಿಯ ವರನನ್ನು ಹುಡುಗಿ ಮುಂದೆ ನಿಲ್ಲಿಸಿದ್ದಾರೆ.  “ಇವನೊಂದಿಗೆ ಮದವೆ ಮಾಡುವ ಜವಾಬ್ಧಾರಿ ನಮ್ಮದು” ಎಂದು ಹುಡುಗಿಗೆ ಧೈರ್ಯ ತುಂಬಿದ್ದಾರೆ. ಕೋಲೆ ಬಸವನಂತ ಆ ಹುಡುಗ ಕೂಡ ತಲೆಯಾಡಿಸಿದ್ದಾನೆ.

ಹೀಗೆ ಸಂಜೆಯ ಹೊತ್ತಿಗೆ ಪೊಲೀಸ್ ಠಾಣೆಯಲ್ಲೆ ಸಿನಿಮಿಯ ರೀತಿಯಲ್ಲಿ ಉಲ್ಟಾ ಹೊಡೆದ ಪ್ರಕರಣ ನೋಡಿದ ಪೊಲೀಸ್ ಇನ್ಸಪೆಕ್ಟರ್ ಸಹ “ಆ ಹುಡುಗ ಹುಡುಗಿಯ ಬದುಕನ್ನು ಬಲಿಪಶು ತೊಗೊತ್ತಿದ್ದಿರಲ್ಲ ನೀವು, ನಾಚಿಕೆಯಾಗಲ್ವಾ, ಈ ಹೊಸ ಹುಡುಗ ಈ ಹುಡುಗಿಯನ್ನು ಮುಂದೆ ಚನ್ನಾಗಿ ಬಾಳಿಸದಿದ್ದರೆ, ಅನುಮಾನಪಡತೊಡಗಿದರೆ ಏನ್ ಮಾಡ್ತಿರಿ ಎಂದು ಎರಡೂ ಕಡೆಯವರನ್ನು ಹತಾಶೆಯಿಂದ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಂತೂ ಬೆಳಗ್ಗೆ ನನ್ನ ಗಂಡನನ್ನು ಕಾಪಾಡಿ ಎಂದು ಬೊಬ್ಬಿರಿಯುತ್ತಿದ್ದ ಹುಡುಗಿ ಸಂಜೆ ಅಷ್ಟೊತ್ತಿಗೆ ಆ ಹುಡುಗನೇ ಬೇಡ ಎಂದು ರೋಧಿಸತೊಡಗಿದ್ದಾಳೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಭಯಮಿಶ್ರಿತ ಗೊಂದಲದಲ್ಲಿದ್ದ ಹುಡುಗನ ಕಣ್ಣಂಚು ತೇವ ತೇವ. ನನ್ನ ಹುಡುಗಿಯನ್ನು ನನಗೆ ಕೊಡಿಸಿದರೆ ಸಾಕು ಎಂದು ಆತ ಅಳತೊಡಗಿದ್ದಾನೆ.

ಗದಗ ಜಿಲ್ಲೆಯ ಲಕ್ಕಲಕಟ್ಟಿ ಗ್ರಾಮದಲ್ಲಿ ಕಳೆದ ಒಂದು ವಾರದ ಹಿಂದೆ ಅಷ್ಟೆ ಅಂತರ್ಜಾತಿ ವಿವಾಹವಾಗಿದ್ದ ಯುವ ದಂಪತಿಗಳ ಜೋಡಿ ಕೊಲೆ ನಡೆದಿತ್ತು. ಅದು ನಡೆದ ಒಂದೇ ವಾರದಲ್ಲಿ ಈಗ ಈ ಪ್ರಕರಣ ನಡೆದಿದೆ. ಹಾಗೆ ನೋಡಿದರೆ ಜಾತಿ ಗೋಡೆಯನ್ನು ಕಿತ್ತೆಸೆದು, ಧರ್ಮದ ಬೇಲಿಗೆ ಕಿವಿಗೊಡದೇ ಹಲವಾರು ಯುವ ಜೋಡಿಗಳು ಪ್ರೀತಿಸಿ ಮದುವೆಯಾಗುವ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಆದರೆ, ಆ ಜೋಡಿಗಳು ನೆಮ್ಮದಿಯಿಂದ ಬಾಳುವೆ ಮಾಡುವ ವಾತಾವರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡು ಬರುವುದಿಲ್ಲ. ಈ ಭಾಗದಲ್ಲಿ ದಲಿತ ಸಂಘರ್ಷ ಸಮಿತಿಗಳು ಸಹ ಅಷ್ಟೊಂದು ಸಕ್ರಿಯವಾಗಿಲ್ಲ.

ಮಾಡದ ತಪ್ಪಿಗೆ ಆತ ತನ್ನ ಹುಡುಗಿಯನ್ನು ಇನ್ನೊಂದು ಹುಡುಗನೊಂದಿಗ ಮದುವೆ ಮಾಡಿಸಲು ಖರ್ಚಿನ ಬಾಬ್ತು ಎಂದು ಮೂರು ಲಕ್ಷ ರೂಪಾಯಿ ತಪ್ಪುದಂಡ ಕೊಡಬೇಕು. ಈ ಹಣದಲ್ಲಿ ಒಂದಿಷ್ಟು ಪಾಲು ಎರಡು ಕಡೆಯ ನೈತಿಕ ವಾರಸುದಾರರಿಗೂ ಹಂಚಿಕೆಯಾಗುತ್ತದೆ ಎಂಬ ಆರೋಪವೂ ಸ್ಥಳಿಯರಿಂದ ಕೇಳಿ ಬಂದಿದೆ.

ಈ ಎರಡು ಪ್ರಕರಣಗಳ ಹಿಂದೆ ನಾವು ನಿಮ್ಮ ಹಿಂದೆ ಇದ್ದೇವೆ ಎಂದು ಧೈರ್ಯ ತುಂಬುವ, ಕರೆತಂದು ಮದುವೆ ಮಾಡಿಸುವ, ಇಂಥ ಯುವಜೋಡಿಗಳ ಮೇಲೆ ಹಲ್ಲೆಗಳು ನಡೆದಾಗ ಬೀದಿಗಿಳಿದು ಪ್ರತಿಭಟನೆ ಮಾಡುವ ಸಂಘಟನೆಗಳ, ಜೀವಪರ ಮನಸ್ಸುಗಳ ಕೊರತೆ ಇದೆ. ಹೀಗಾಗಿ ಇಲ್ಲಿನ ಅಂತರ್ಜಾತಿ ವಿವಾಹಗಳು ದುರಂತ ಅಂತ್ಯ ಕಾಣುತ್ತವೆ ಎಂದು ಗದಗದ ದಲಿತಪರ ಹೋರಾಟಗಾರ ರಮೇಶ ಕೋಳೂರು ನೋವಿನಿಂದ ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾತೀಯತೆ ಎನ್ನುವುದು ಮೇಲ್ಜಾತಿಯ ಜನರಲ್ಲಿ ಮಾತ್ರವಲ್ಲ, ಬಹುತೇಕ ಜಾತಿಗಳಲ್ಲಿ ತುಂಬಿ ತುಳುಕುತ್ತಿದೆ. ಇದೇ ಈ ದೇಶದ ದುರಂತ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....