Homeಕರ್ನಾಟಕ19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ...

19 ದಿನಗಳಲ್ಲಿ ಮುರಿದು ಬಿದ್ದ ಅಂತರ್ಜಾತಿ ವಿವಾಹ : ಹುಡುಗ ಆಸ್ಪತ್ರೆಯಲ್ಲಿ, ಹುಡುಗಿಗೆ ಮತ್ತೊಂದು ಮದುವೆಗೆ ಸಿದ್ಧತೆ

ಬೆಳಗ್ಗೆ ನನ್ನ ಗಂಡನನ್ನು ಕಾಪಾಡಿ ಎಂದು ಬೊಬ್ಬಿರಿಯುತ್ತಿದ್ದ ಹುಡುಗಿ ಸಂಜೆ ಅಷ್ಟೊತ್ತಿಗೆ ಆ ಹುಡುಗನೇ ಬೇಡ ಎಂದು ರೋಧಿಸತೊಡಗಿದ್ದಾಳೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಭಯಮಿಶ್ರಿತ ಗೊಂದಲದಲ್ಲಿದ್ದ ಹುಡುಗನ ಕಣ್ಣಂಚು ತೇವ ತೇವ.

- Advertisement -
- Advertisement -

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಕಳೆದ 20 ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ ಯುವಜೋಡಿಗಳ ಪ್ರಕರಣ ಸಿನಿಮಿಯ ರೀತಿಯಲ್ಲಿ ಕೊನೆಗೊಂಡಿದೆ. ಕೊನೆಗೂ ಆ ಪ್ರಕರಣದಲ್ಲಿ ಊರ ಹಿರಿಯರು ಎನಿಸಿಕೊಳ್ಳುವ ನೈತಿಕತೆಯ ವಾರಸುದಾರರು ಹುಡುಗ ಹುಡುಗಿಯನ್ನು ಬೇರ್ಪಡಿಸಿ ದುರಂತ ಅಂತ್ಯದ ಷರಾ ಬರೆದಿದ್ದಾರೆ.

ಹುಡುಗ ಗಾಣಿಗ ಸಮುದಾಯದವ. ಹುಡುಗಿ ಮಾದರ ಜಾತಿಗೆ ಸೇರಿದವಳು. ಈ ಯುವಪ್ರೇಮಿಗಳು ಕಳೆದ ಅಕ್ಟೋಬರ್ 24ರಂದು ಕಾನೂನುಬದ್ಧವಾಗಿಯೇ ರಜಿಸ್ಟರ್ ಮದುವೆಯಾಗಿದ್ದರು. ಕೇವಲ ಮದುವೆಯಾಗಿ 19 ದಿನಗಳಲ್ಲೆ ಮುರಿದು ಬಿದ್ದಿದೆ. ಮತ್ತು ಈ ಪ್ರಕರಣ ಗೊತ್ತಿದ್ದರೂ ಏನು ಮಾಡಲಿಕ್ಕಾಗದೇ  ಹಲವಾರು ಜೀವಪರ ಮನಸ್ಸುಗಳು ದಲಿತಪರ ಸಂಘಟನೆಗಳು ಏನೂ ಮಡಲಾಗದೇ ಕೈ ಚೆಲ್ಲಿ ಕುಳಿತಿವೆ.

ನಿಮ್ಮ ಮದುವೆಯನ್ನು ಮಾನ್ಯ ಮಾಡುತ್ತೇವೆ ಬನ್ನಿ ಎಂದು ಊರಿಂದ ತಪ್ಪಿಸಿಕೊಂಡು ದೂರ ಹೋಗಿದ್ದ ಯುವಪ್ರೇಮಿಗಳನ್ನು ಊರಿನ ನೈತಿಕತೆಯ ವಾರಸುದಾರರು ವಾಪಸ್ ಕರೆಸಿಕೊಂಡಿದ್ದರು. ಆದರೆ, ಆದದ್ದೇ ಬೇರೆ. ಹುಡುಗಿಯದ್ದು ಕೀಳುಜಾತಿಯಾದ್ದರಿಂದ ಹುಡುಗಿಯನ್ನು ಮರೆತುಬಿಡಬೇಕೆಂದು ಹುಡುಗನಿಗೆ ವಾರ್ನಿಂಗ್ ಮಾಡಿದ್ದಾರೆ. ಹುಡುಗ ಒಪ್ಪದಿದ್ದುದ್ದಕ್ಕೆ ಅವನನ್ನು ಮೈ ಬಾಯುವ ಹಾಗೆ ಮುಖ ಮೋತಿಯನ್ನದೇ ಬಡಿದು ಹೆದರಿಸಿದ್ದಾರೆ. ಇದು ಗೊತ್ತಾಗುತ್ತಿದ್ದಂತೆ ಕೆಲವು ದಲಿತಪರ ಹೋರಾಟಗಾರರಾದ ನಾಗಮ್ಮ, ರಮೇಶ ಕೋಳೂರು ಮತ್ತಿತರರು ಧಾವಿಸಿ ಬಂದು ಹುಡುಗನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜೊತೆಗೆ ಎರಡು ಕಡೆಯವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಪ್ರಕರಣಕ್ಕೆ ಸುಖಾಂತ್ಯ ಹಾಡಲು ನೋಡಿದ್ದಾರೆ.

ಆದರೆ, ಅಷ್ಟೊತ್ತಿಗೆಗಾಗಲೇ ನೈತಿಕ ವಾರಸುದಾರರು ಹೆದರಿಸುವಿಕೆ ಮತ್ತು ಪುಸಲಾಯಿಸುವಿಕೆ ಎಷ್ಟರಮಟ್ಟಿಗೆ ಇತ್ತೆಂದರೆ ಸಂಜೆ ಅಷ್ಟೊತ್ತಿಗೆ ನಾನು ಆ ಹುಡುಗನೊಂದಿಗೆ ಬಾಳ್ವೆ ಮಾಡಲು ಸುತಾರಂ ಇಷ್ಟವಿಲ್ಲ. ನನಗೆ ಡೈವೋರ್ಸ್ ಕೊಡಿಸಿ  ಎಂದು ಪೊಲೀಸರ ಮುಂದೆಯೇ ಹುಡುಗಿ ಉಲ್ಟಾ ಹೊಡೆದಿದ್ದಾಳೆ. “ನೀನು ಅವನನ್ನು ಬಿಟ್ಟರೆ ನಿನ್ನನ್ನು ಇವನೊಂದಿಗೆ ಮದುವೆಯ ಮಾಡುತ್ತೇವೆ ಬಿಡು” ಎಂದು ನೈತಿಕತೆಯ ವಾರಸುದಾರರು ಮೊದಲೇ ರೆಡಿ ಇಟ್ಟುಕೊಂಡಿದ್ದ ಸಜಾತಿಯ ವರನನ್ನು ಹುಡುಗಿ ಮುಂದೆ ನಿಲ್ಲಿಸಿದ್ದಾರೆ.  “ಇವನೊಂದಿಗೆ ಮದವೆ ಮಾಡುವ ಜವಾಬ್ಧಾರಿ ನಮ್ಮದು” ಎಂದು ಹುಡುಗಿಗೆ ಧೈರ್ಯ ತುಂಬಿದ್ದಾರೆ. ಕೋಲೆ ಬಸವನಂತ ಆ ಹುಡುಗ ಕೂಡ ತಲೆಯಾಡಿಸಿದ್ದಾನೆ.

ಹೀಗೆ ಸಂಜೆಯ ಹೊತ್ತಿಗೆ ಪೊಲೀಸ್ ಠಾಣೆಯಲ್ಲೆ ಸಿನಿಮಿಯ ರೀತಿಯಲ್ಲಿ ಉಲ್ಟಾ ಹೊಡೆದ ಪ್ರಕರಣ ನೋಡಿದ ಪೊಲೀಸ್ ಇನ್ಸಪೆಕ್ಟರ್ ಸಹ “ಆ ಹುಡುಗ ಹುಡುಗಿಯ ಬದುಕನ್ನು ಬಲಿಪಶು ತೊಗೊತ್ತಿದ್ದಿರಲ್ಲ ನೀವು, ನಾಚಿಕೆಯಾಗಲ್ವಾ, ಈ ಹೊಸ ಹುಡುಗ ಈ ಹುಡುಗಿಯನ್ನು ಮುಂದೆ ಚನ್ನಾಗಿ ಬಾಳಿಸದಿದ್ದರೆ, ಅನುಮಾನಪಡತೊಡಗಿದರೆ ಏನ್ ಮಾಡ್ತಿರಿ ಎಂದು ಎರಡೂ ಕಡೆಯವರನ್ನು ಹತಾಶೆಯಿಂದ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಂತೂ ಬೆಳಗ್ಗೆ ನನ್ನ ಗಂಡನನ್ನು ಕಾಪಾಡಿ ಎಂದು ಬೊಬ್ಬಿರಿಯುತ್ತಿದ್ದ ಹುಡುಗಿ ಸಂಜೆ ಅಷ್ಟೊತ್ತಿಗೆ ಆ ಹುಡುಗನೇ ಬೇಡ ಎಂದು ರೋಧಿಸತೊಡಗಿದ್ದಾಳೆ. ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಭಯಮಿಶ್ರಿತ ಗೊಂದಲದಲ್ಲಿದ್ದ ಹುಡುಗನ ಕಣ್ಣಂಚು ತೇವ ತೇವ. ನನ್ನ ಹುಡುಗಿಯನ್ನು ನನಗೆ ಕೊಡಿಸಿದರೆ ಸಾಕು ಎಂದು ಆತ ಅಳತೊಡಗಿದ್ದಾನೆ.

ಗದಗ ಜಿಲ್ಲೆಯ ಲಕ್ಕಲಕಟ್ಟಿ ಗ್ರಾಮದಲ್ಲಿ ಕಳೆದ ಒಂದು ವಾರದ ಹಿಂದೆ ಅಷ್ಟೆ ಅಂತರ್ಜಾತಿ ವಿವಾಹವಾಗಿದ್ದ ಯುವ ದಂಪತಿಗಳ ಜೋಡಿ ಕೊಲೆ ನಡೆದಿತ್ತು. ಅದು ನಡೆದ ಒಂದೇ ವಾರದಲ್ಲಿ ಈಗ ಈ ಪ್ರಕರಣ ನಡೆದಿದೆ. ಹಾಗೆ ನೋಡಿದರೆ ಜಾತಿ ಗೋಡೆಯನ್ನು ಕಿತ್ತೆಸೆದು, ಧರ್ಮದ ಬೇಲಿಗೆ ಕಿವಿಗೊಡದೇ ಹಲವಾರು ಯುವ ಜೋಡಿಗಳು ಪ್ರೀತಿಸಿ ಮದುವೆಯಾಗುವ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಆದರೆ, ಆ ಜೋಡಿಗಳು ನೆಮ್ಮದಿಯಿಂದ ಬಾಳುವೆ ಮಾಡುವ ವಾತಾವರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡು ಬರುವುದಿಲ್ಲ. ಈ ಭಾಗದಲ್ಲಿ ದಲಿತ ಸಂಘರ್ಷ ಸಮಿತಿಗಳು ಸಹ ಅಷ್ಟೊಂದು ಸಕ್ರಿಯವಾಗಿಲ್ಲ.

ಮಾಡದ ತಪ್ಪಿಗೆ ಆತ ತನ್ನ ಹುಡುಗಿಯನ್ನು ಇನ್ನೊಂದು ಹುಡುಗನೊಂದಿಗ ಮದುವೆ ಮಾಡಿಸಲು ಖರ್ಚಿನ ಬಾಬ್ತು ಎಂದು ಮೂರು ಲಕ್ಷ ರೂಪಾಯಿ ತಪ್ಪುದಂಡ ಕೊಡಬೇಕು. ಈ ಹಣದಲ್ಲಿ ಒಂದಿಷ್ಟು ಪಾಲು ಎರಡು ಕಡೆಯ ನೈತಿಕ ವಾರಸುದಾರರಿಗೂ ಹಂಚಿಕೆಯಾಗುತ್ತದೆ ಎಂಬ ಆರೋಪವೂ ಸ್ಥಳಿಯರಿಂದ ಕೇಳಿ ಬಂದಿದೆ.

ಈ ಎರಡು ಪ್ರಕರಣಗಳ ಹಿಂದೆ ನಾವು ನಿಮ್ಮ ಹಿಂದೆ ಇದ್ದೇವೆ ಎಂದು ಧೈರ್ಯ ತುಂಬುವ, ಕರೆತಂದು ಮದುವೆ ಮಾಡಿಸುವ, ಇಂಥ ಯುವಜೋಡಿಗಳ ಮೇಲೆ ಹಲ್ಲೆಗಳು ನಡೆದಾಗ ಬೀದಿಗಿಳಿದು ಪ್ರತಿಭಟನೆ ಮಾಡುವ ಸಂಘಟನೆಗಳ, ಜೀವಪರ ಮನಸ್ಸುಗಳ ಕೊರತೆ ಇದೆ. ಹೀಗಾಗಿ ಇಲ್ಲಿನ ಅಂತರ್ಜಾತಿ ವಿವಾಹಗಳು ದುರಂತ ಅಂತ್ಯ ಕಾಣುತ್ತವೆ ಎಂದು ಗದಗದ ದಲಿತಪರ ಹೋರಾಟಗಾರ ರಮೇಶ ಕೋಳೂರು ನೋವಿನಿಂದ ಹೇಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾತೀಯತೆ ಎನ್ನುವುದು ಮೇಲ್ಜಾತಿಯ ಜನರಲ್ಲಿ ಮಾತ್ರವಲ್ಲ, ಬಹುತೇಕ ಜಾತಿಗಳಲ್ಲಿ ತುಂಬಿ ತುಳುಕುತ್ತಿದೆ. ಇದೇ ಈ ದೇಶದ ದುರಂತ.

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...