Homeಕರ್ನಾಟಕಒಳಮೀಸಲಾತಿ ಬೇಗುದಿ; ಮುಂದುವರಿದ ಬಂಜಾರರ ಪ್ರತಿಭಟನೆ

ಒಳಮೀಸಲಾತಿ ಬೇಗುದಿ; ಮುಂದುವರಿದ ಬಂಜಾರರ ಪ್ರತಿಭಟನೆ

- Advertisement -
- Advertisement -

ಒಳಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯ ನಡೆಸುತ್ತಿರುವ ಹೋರಾಟ ಮುಂದುವರಿಸಿದೆ. ಶಿಕಾರಿಪುರದಲ್ಲಿ ಸೋಮವಾರ ನಡೆದ ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಕಲ್ಲು ತೂರಾಟ ಮಾಡಲಾಗಿತ್ತು.

ಪ್ರತಿಭಟನೆ ಮುಂದುವರಿದ ಕಾರಣ ಗೃಹ ಸಚಿವ ಆರಗ ಜ್ಞಾನೇಂದ್ರ ಶಿಕಾರಿಪುರಕ್ಕೆ ಬಂದಿದ್ದಾರೆ. ಪಟ್ಟಣದಲ್ಲಿ ಕಾನೂನು-ಸುವ್ಯವಸ್ಥೆ ಕುರಿತು ಚರ್ಚೆ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಸಂಸದ ಬಿವೈ ರಾಘವೇಂದ್ರ, ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ. ಹಾಜರಿದ್ದರು.

ಶಿವಮೊಗ್ಗ ತಾಲೂಕು ಕುಂಚೇನಹಳ್ಳಿಯಲ್ಲಿ ಬಂಜಾರ ಸಮುದಾಯದವರು ಒಳಮೀಸಲು ಜಾರಿ ವಿರೋಧಿಸಿ ರಸ್ತೆ ತಡೆ ನಡೆಸಿದ್ದಾರೆ. ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಜಾಮ್ ಆಗಿರುವ ದೃಶ್ಯಗಳು ಕಂಡುಬಂದಿವೆ. ಪ್ರತಿಭಟನಾಕಾರರು ರಸ್ತೆಯಲ್ಲಿ ಬೆಂಕಿ ಹಚ್ಚಿದ್ದರಿಂದ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿತ್ತು.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವುದು ದೃರದೃಷ್ಟಕರ. ಯಾರೋ ತಪ್ಪು ತಿಳಿವಳಿಕೆಯಿಂದ ಪ್ರಚೋದನೆ ಕೊಟ್ಟಿದ್ದು, ಘಟನೆ ಸಂಭವಿಸಿದೆ. ವಿಶೇಷವಾಗಿ ಬಿಎಸ್ ಯಡಿಯೂರಪ್ಪನವರ ರಾಜಕಾರಣವನ್ನು ನಾನು ಆರಂಭದಿಂದಲೂ ನೋಡುತ್ತಿದ್ದೇನೆ. ಬಂಜಾರ ಸಮುದಾಯದ ಎಲ್ಲಾ ಬೇಡಿಕೆಗಳನ್ನು ಯಡಿಯೂರಪ್ಪ ಈಡೇರಿಸಿಕೊಂಡು ಬಂದಿದ್ದಾರೆ” ಎಂದು ತಿಳಿಸಿದ್ದಾರೆ.

“ಇಲ್ಲೇ ಸಮೀಪದ ಸುರಗೊಂಡನ ಕೊಪ್ಪ ಅಭಿವೃದ್ಧಿಗೆ ಯಥೇಚ್ಛ ಅನುದಾನವನ್ನು ನೀಡಿದ್ದರು. ಅವರ ಶ್ರದ್ಧಾ ಕೇಂದ್ರವಾದಂತಹ ಸುರಗೊಂಡನಕೊಪ್ಪವನ್ನ ಅಭಿವೃದ್ಧಿ ಮಾಡುವ ಮೂಲಕ ಅವರ ಗೌರವ ಇನ್ನೂ ಹೆಚ್ಚಾಗುವಂತೆ ಮಾಡಿದ್ದಾರೆ. ಮನೆ ಮೇಲೆ ಕಲ್ಲು ತೂರಿದರೂ ಕೂಡ ಈ ಘಟನೆ ಕುರಿತು ಯಾವುದೇ ಕ್ರಮ ಜರುಗಿಸಬೇಡಿ ಎಂದು ಯಡಿಯೂರಪ್ಪನವರು ಹೇಳಿದ್ದಾರೆ” ಎಂದಿದ್ದಾರೆ.

ಪರಿಶಿಷ್ಟ ಸಮುದಾಯಗಳಲ್ಲಿ ಒಳ ಮೀಸಲಾತಿ ನೀಡಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ವರದಿಯನ್ನು ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡುವ ನಿರ್ಧಾರವನ್ನು ವಿರೋಧಿಸಿ ಶಿಕಾರಿಪುರದಲ್ಲಿ ಸೋಮವಾರ ಬಂಜಾರ ಸಮಾಜದವರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.

ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದರು. ದರೆ ಕೆಲವು ಕಿಡಿಗೇಡಿಗಳು ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕಲ್ಲು ತೂರಾಟದಿಂದ ಮನೆಯ ಕಿಟಕಿ ಗಾಜಿಗೆ ಹಾನಿಯಾಗಿದೆ. ತಡೆಯಲು ಬಂದ ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಲಾಗಿದೆ. ಯಡಿಯೂರಪ್ಪ ನಿವಾಸದ ಮುಂದೆ ಹಾಕಲಾಗಿದ್ದ ಬ್ಯಾನರ್​ಗಳನ್ನು ಸಹ ಹರಿದು ಹಾಕಲಾಗಿದೆ. ನಿವಾಸದ ಮೇಲೆ ಚಪ್ಪಲಿ ಎಸೆದು ಆಕ್ರೋಶ ಹೊರಹಾಕಿದ್ದರು.

ರಾಜ್ಯ ಸರ್ಕಾರ ಹೊರಡಿಸಿರುವ ಮೀಸಲಾತಿ ಪ್ರಮಾಣದ ವಿರುದ್ಧ ಬಂಜಾರ ಸಮುದಾಯದ ಯುವಕರು ನಗರದ ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಸರಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದ್ದರು.

ಈ ವೇಳೆ ಪಟ್ಟಣದಲ್ಲಿ ಹಾಕಲಾಗಿದ್ದ ಬಿಜೆಪಿ, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ಬ್ಯಾನರ್, ಫ್ಲೆಕ್ಸ್‌ಗಳನ್ನು ಕಿತ್ತೊಗೆದಿದ್ದರು. ಟೈರ್‌, ಸೀರೆಗಳಿಗೆ ಬೆಂಕಿ ಹಚ್ಚಿ,  ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು. ಘಟನೆಯಲ್ಲಿ ಪ್ರತಿಭಟನಾಕಾರರು ಮತ್ತು ಕೆಲವು ಪೊಲೀಸರು ಗಾಯಗೊಂಡಿದ್ದರು ಎಂದು ತಿಳಿದು ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...