Homeಕರ್ನಾಟಕಒಳಮೀಸಲಾತಿ ಹೋರಾಟದ ನಾಯಕ ಅಂಬಣ್ಣರವರ ತಂದೆ ಷಣ್ಮುಖಪ್ಪ ನಿಧನ

ಒಳಮೀಸಲಾತಿ ಹೋರಾಟದ ನಾಯಕ ಅಂಬಣ್ಣರವರ ತಂದೆ ಷಣ್ಮುಖಪ್ಪ ನಿಧನ

- Advertisement -
- Advertisement -

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಯಾಗಬೇಕು ಎಂಬ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ನಾಯಕರಾದ ಅಂಬಣ್ಣ ಅರೋಲಿಕರ್‌ ಅವರ ತಂದೆ ಷಣ್ಮುಖಪ್ಪ ಅರೋಲಿ ನಿಧನರಾಗಿದ್ದಾರೆ.

ಶತಾಯುಷಿಯಾಗಿದ್ದ ಷಣ್ಮುಖಪ್ಪ ಅವರು ವಯೋಸಹಜ ಅನಾರೋಗ್ಯದಲ್ಲಿದ್ದರು. ಮಂಗಳವಾರ ರಾತ್ರಿ ಕೊನೆಯುಸಿರೆಳೆದರು. ಬುಧವಾರ 2.30ಕ್ಕೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಅರೋಲಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.

ನಿಧನದ ಕುರಿತು ‘ಒಳಮೀಸಲಾತಿ’ ಫೇಸ್‌ಬುಕ್‌ ಪುಟದಲ್ಲಿ ತಿಳಿಸಲಾಗಿದ್ದು, “ವಯಸ್ಸಾದ, ಅನಾರೋಗ್ಯದಲ್ಲಿದ್ದ ತಂದೆಯನ್ನು ಮನೆಯಲ್ಲಿ ಬಿಟ್ಟು ಶೋಷಿತ, ಅವಕಾಶ ವಂಚಿತ ಜನರ ಹಕ್ಕುಗಳಿಗಾಗಿ ಹಲವಾರು ದಿನ, ನೂರಾರು ಊರು ಕೇರಿ ಸುತ್ತಿ ಅಂಬಣ್ಣ ಅರೋಲಿಕರ್‌‌ ಪಾದಯಾತ್ರೆ ಮಾಡಿದರು. ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟದಲ್ಲಿದ್ದ ಅಂಬಣ್ಣ ಅವರ ತಂದೆ ಈಗ ನಮ್ಮನ್ನ ಅಗಲಿದ್ದಾರೆ. ಇವರಿಗೆ ಎಲ್ಲಾ ರೀತಿಯಲ್ಲೂ ಅನೇಕ ಹೋರಾಟದ ಸಂಗಾತಿಗಳು ಜೊತೆ ನಿಂತಿದ್ದಾರೆ. ಹೋರಾಟವೂ ಮುಂದುವರೆಯುತ್ತಿದೆ. ಇಂತಹ ಹೊತ್ತಲ್ಲಿ ತಂದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅಂಬಣ್ಣ ಮತ್ತು ಅವರ ಕುಟುಂಬಕ್ಕೆ ಬರಲಿ. ನಿಮ್ಮ ದುಃಖದಲ್ಲಿ ನಾವೆಲ್ಲ ಭಾಗಿ, ನಿಮ್ಮ ಜೊತೆಯಲ್ಲಿ ನಾವಿದ್ದೇವೆ” ಎಂದು ಸಂತಾಪ ಸೂಚಿಸಲಾಗಿದೆ.

ಚಿಂತಕರಾದ ಹುಲಿಕುಂಟೆಮೂರ್ತಿಯವರು ಪ್ರತಿಕ್ರಿಯಿಸಿ, “ಒಳಮೀಸಲಾತಿ ಕಾಲ್ನಡಿಗೆ ಜಾಥಾ ತುಮಕೂರಿಗೆ ಬಂದ ದಿನವೇ ಅಂಬಣ್ಣ ಅವರ ತಂದೆ ಆರೋಗ್ಯದಲ್ಲಿ ಹೆಚ್ಚೇ ಏರುಪೇರಾಗಿತ್ತು. ಅಂಬಣ್ಣ ಹೋಗಿ ಜಾಥಾ ನೆಲಮಂಗಲ ತಲುಪುವಷ್ಟರಲ್ಲಿ ಬಂದುಬಿಟ್ಟರು. ಅವರಿಗೆ ತಂದೆಯ ಅನಾರೋಗ್ಯ ಮತ್ತು ಹೋರಾಟದ ದಿಕ್ಕು ಎರಡೂ ತಲೆಯಲ್ಲಿ ಕೊರೆಯುತ್ತಿದ್ದವು. ಜೈಲಿಗೂ ಹೋಗಿಬಂದರು. ಒಳಗಿನ ಕಾರಣಗಳಿಗೆ‌ ಕಣ್ಣೀರು ಹಾಕಿದರು. ಅಪ್ಪ ಅಂಬಣ್ಣನನ್ನು ಬಿಟ್ಟು ಹೋಗೇಬಿಟ್ಟರು. ಅಂತ್ಯಕ್ರಿಯೆ ಮುಗಿಸಿ ಅಂಬಣ್ಣ ನಾಳೆಯೇ ಬೆಂಗಳೂರಿಗೆ ಬರ್ತಿದಾರೆ. ಹೋರಾಟ ನಿಲ್ಲುವುದಿಲ್ಲ” ಎಂದಿದ್ದಾರೆ.

ಮುಖಂಡರಾದ ಉದಯ್ ಅರೋಲಿಕರ್‌ ಅವರು ಅಂಬಣ್ಣ ಅವರ ಪ್ರತಿಕ್ರಿಯೆಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ನನ್ನಪ್ಪ ಡಿಸೆಂಬರ್ 11 ರ ಹೋರಾಟಕ್ಕೂ ಮುನ್ನವೇ ಕೊನೆಯುಸಿರು ಬಿಡಬಹುದೆಂಬ ಆತಂಕ ನನ್ನ ಕುಟುಂಬಕ್ಕಿತ್ತು. ಭರವಸೆಯನ್ನು ತಂದೆ ಹುಸಿಗೊಳಿಸಿ ಹೋರಾಟದ ಗಡುವಿಗೆ ಜೀವತುಂಬಿ ಇಂದು ಜೀವ ಬಿಟ್ಟಿದ್ದಾರೆ. ಅಪ್ಪನ ಅಂತಿಮ ಪಯಣಕ್ಕೆ ನಾವುಗಳು ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸೋಣ. ನನ್ನ ತಾಯಿ ನಾನು 11 ವರ್ಷದವನಿದ್ದಾಗಲೇ ಕಾಲರಾಕ್ಕೆ ಬಲಿಯಾದಾಗಿನಿಂದ ನನಗೆ ತಂದೆಯೇ ನನಗೆ ತಾಯಿಯಾಗಿದ್ದರು.  ಮಾರ್ಗದರ್ಶಕನಾಗಿರುವುದಲ್ಲದೇ ನನ್ನ ಹೋರಾಟದ ಹಾದಿಗೆ ಎಂದು ಅಡ್ಡಿಪಡಿಸದೇ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ ನನ್ಪಪ್ಪನದು ಸಹ ಅವಿಶ್ರಾಂತ ಹೋರಾಟದ ದಾರಿಯೆನ್ನುವುದರಲ್ಲಿ ಸಂಶಯವಿಲ್ಲ” ಎಂದು ಅಂಬಣ್ಣ ಸ್ಮರಿಸಿದ್ದಾರೆ.

“ಸಾಲಿ ಮಾಸ್ತಾರನಾಗಬೇಕೆಂಬ ನನ್ನ ತಂದೆಯ ಆಶಯಕ್ಕೆ ತದ್ವಿರುದ್ಧವಾಗಿ ತಮಟೆ ಬಾರಿಸಿದ ನನ್ನ ಮೇಲೆ ಹಾಗೂ ನನ್ನ ಹೋರಾಟದ ಸ್ಫೂರ್ತಿಯಾದ ಪ್ರಜಾಯುದ್ದನೌಕೆ ಗದ್ದರ್ ವಿರುದ್ಧದ ಕೋಪ ಇಂದಿಗೂ ಶಮನವಾಗದಿದ್ದರೂ ನಾನು ನಡೆವ ದಾರಿ ನೂರಾರು ಜನರಿಗೆ ಉಪಯುಕ್ತ ಮಾರ್ಗವೆಂಬ ಖಾತರಿ ಇರುವುದರಿಂದ ನನಗೆ ಸಂಪೂರ್ಣ ವಿನಾಯಿತಿ ಸಿಕ್ಕಿತ್ತು” ಎಂದು ನೆನೆದಿದ್ದಾರೆ.

“ಮೂರು ದಿನಗಳ ಹಿಂದೆ ಹೋರಾಟದ ಒತ್ತಡಗಳ ಮಧ್ಯೆ ಒಮ್ಮೆ ನೋಡಿ ಕಣ್ತುಂಬಿಸಿಕೊಂಡಿದ್ದೆ. ಡಿಸೆಂಬರ್ 11ರ ಕಾರ್ಯಕ್ರಮ ಸಂಪೂರ್ಣ ಯಶಸ್ವಿಯಾಗಿ ಡಿಸೆಂಬರ್‌‌ 19ರ ಅಧಿವೇಶನದಲ್ಲಿ ಒಳಮೀಸಲಾತಿ ಪ್ರಸ್ತಾಪಕ್ಕೆ ಸರ್ಕಾರದ ಗಮನಸೆಳೆಯುವ ಬಿರುಸಿನ ಪ್ರಯತ್ನಕ್ಕಾಗಿ ಇಂದು ಒಡನಾಡಿಗಳು ಖಾಯಂ ಹೋರಾಟದ ಬಿಡಾರ ಸಜ್ಜುಗೊಳಿಸುವ ಪ್ರಯತ್ನದಲ್ಲಿದ್ದೆವು. ಈ ಸಂದರ್ಭದಲ್ಲಿ ನನ್ನ ಪತ್ನಿ ಸುಜಾತಾ ಅಘಾತಕರ ಸುದ್ದಿಯನ್ನು ತಿಳಿಸಿದರು. ರಾಜಧಾನಿಯಿಂದ ರಾಯಚೂರಿಗೆ ಪಯಣ ಬೆಳೆಸಿರುವೆ” ಎಂದು ಹೇಳಿದ್ದಾರೆ.

“ನನ್ನ ಅನುಪಸ್ಥಿತಿಯಲ್ಲಿ ನನ್ನ ಮಡದಿ ಸುಜಾತಳ ಹಾರೈಕೆಯಿಂದಾಗಿ ಅಪ್ಪ ಇಷ್ಟು ವರ್ಷ ನಮ್ಮೊಂದಿಗಿರಲು ಸಾಧ್ಯವಾಗಿದೆ. ಸರ್ಕಾರ ಪ್ರಕಟಿಸಿರುವ ಒಳಮೀಸಲಾತಿ ಕುರಿತ ಉಪಸಮಿತಿ ಹಾಗೂ ಉಪಸಮಿತಿಯ ಮೊದಲ ಸಭೆ ಘೋಷಣೆಯ ಹಿನ್ನೆಲೆಯಲ್ಲಿ ಮುಂದೆ ಹಮ್ಮಿಕೊಳ್ಳಬೇಕಾದ ಹೋರಾಟದ ಹೆಜ್ಜೆಗಳನ್ನು ಅತ್ಯಂತ ಜಾಗರೂಕತೆಯಿಂದ ಮುಂದುವರೆಸೋಣ ಎಂದು ತಮ್ಮಲ್ಲಿ ಕೋರುತ್ತಾ ಅಪ್ಪನ ಅಂತಿಮ ಪಯಣಕ್ಕೆ ಹೋಗಿಬರುವೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...