Homeಕರ್ನಾಟಕಒಳಮೀಸಲಾತಿ ಹೋರಾಟದ ನಾಯಕ ಅಂಬಣ್ಣರವರ ತಂದೆ ಷಣ್ಮುಖಪ್ಪ ನಿಧನ

ಒಳಮೀಸಲಾತಿ ಹೋರಾಟದ ನಾಯಕ ಅಂಬಣ್ಣರವರ ತಂದೆ ಷಣ್ಮುಖಪ್ಪ ನಿಧನ

- Advertisement -
- Advertisement -

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಯಾಗಬೇಕು ಎಂಬ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ನಾಯಕರಾದ ಅಂಬಣ್ಣ ಅರೋಲಿಕರ್‌ ಅವರ ತಂದೆ ಷಣ್ಮುಖಪ್ಪ ಅರೋಲಿ ನಿಧನರಾಗಿದ್ದಾರೆ.

ಶತಾಯುಷಿಯಾಗಿದ್ದ ಷಣ್ಮುಖಪ್ಪ ಅವರು ವಯೋಸಹಜ ಅನಾರೋಗ್ಯದಲ್ಲಿದ್ದರು. ಮಂಗಳವಾರ ರಾತ್ರಿ ಕೊನೆಯುಸಿರೆಳೆದರು. ಬುಧವಾರ 2.30ಕ್ಕೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಅರೋಲಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.

ನಿಧನದ ಕುರಿತು ‘ಒಳಮೀಸಲಾತಿ’ ಫೇಸ್‌ಬುಕ್‌ ಪುಟದಲ್ಲಿ ತಿಳಿಸಲಾಗಿದ್ದು, “ವಯಸ್ಸಾದ, ಅನಾರೋಗ್ಯದಲ್ಲಿದ್ದ ತಂದೆಯನ್ನು ಮನೆಯಲ್ಲಿ ಬಿಟ್ಟು ಶೋಷಿತ, ಅವಕಾಶ ವಂಚಿತ ಜನರ ಹಕ್ಕುಗಳಿಗಾಗಿ ಹಲವಾರು ದಿನ, ನೂರಾರು ಊರು ಕೇರಿ ಸುತ್ತಿ ಅಂಬಣ್ಣ ಅರೋಲಿಕರ್‌‌ ಪಾದಯಾತ್ರೆ ಮಾಡಿದರು. ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟದಲ್ಲಿದ್ದ ಅಂಬಣ್ಣ ಅವರ ತಂದೆ ಈಗ ನಮ್ಮನ್ನ ಅಗಲಿದ್ದಾರೆ. ಇವರಿಗೆ ಎಲ್ಲಾ ರೀತಿಯಲ್ಲೂ ಅನೇಕ ಹೋರಾಟದ ಸಂಗಾತಿಗಳು ಜೊತೆ ನಿಂತಿದ್ದಾರೆ. ಹೋರಾಟವೂ ಮುಂದುವರೆಯುತ್ತಿದೆ. ಇಂತಹ ಹೊತ್ತಲ್ಲಿ ತಂದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅಂಬಣ್ಣ ಮತ್ತು ಅವರ ಕುಟುಂಬಕ್ಕೆ ಬರಲಿ. ನಿಮ್ಮ ದುಃಖದಲ್ಲಿ ನಾವೆಲ್ಲ ಭಾಗಿ, ನಿಮ್ಮ ಜೊತೆಯಲ್ಲಿ ನಾವಿದ್ದೇವೆ” ಎಂದು ಸಂತಾಪ ಸೂಚಿಸಲಾಗಿದೆ.

ಚಿಂತಕರಾದ ಹುಲಿಕುಂಟೆಮೂರ್ತಿಯವರು ಪ್ರತಿಕ್ರಿಯಿಸಿ, “ಒಳಮೀಸಲಾತಿ ಕಾಲ್ನಡಿಗೆ ಜಾಥಾ ತುಮಕೂರಿಗೆ ಬಂದ ದಿನವೇ ಅಂಬಣ್ಣ ಅವರ ತಂದೆ ಆರೋಗ್ಯದಲ್ಲಿ ಹೆಚ್ಚೇ ಏರುಪೇರಾಗಿತ್ತು. ಅಂಬಣ್ಣ ಹೋಗಿ ಜಾಥಾ ನೆಲಮಂಗಲ ತಲುಪುವಷ್ಟರಲ್ಲಿ ಬಂದುಬಿಟ್ಟರು. ಅವರಿಗೆ ತಂದೆಯ ಅನಾರೋಗ್ಯ ಮತ್ತು ಹೋರಾಟದ ದಿಕ್ಕು ಎರಡೂ ತಲೆಯಲ್ಲಿ ಕೊರೆಯುತ್ತಿದ್ದವು. ಜೈಲಿಗೂ ಹೋಗಿಬಂದರು. ಒಳಗಿನ ಕಾರಣಗಳಿಗೆ‌ ಕಣ್ಣೀರು ಹಾಕಿದರು. ಅಪ್ಪ ಅಂಬಣ್ಣನನ್ನು ಬಿಟ್ಟು ಹೋಗೇಬಿಟ್ಟರು. ಅಂತ್ಯಕ್ರಿಯೆ ಮುಗಿಸಿ ಅಂಬಣ್ಣ ನಾಳೆಯೇ ಬೆಂಗಳೂರಿಗೆ ಬರ್ತಿದಾರೆ. ಹೋರಾಟ ನಿಲ್ಲುವುದಿಲ್ಲ” ಎಂದಿದ್ದಾರೆ.

ಮುಖಂಡರಾದ ಉದಯ್ ಅರೋಲಿಕರ್‌ ಅವರು ಅಂಬಣ್ಣ ಅವರ ಪ್ರತಿಕ್ರಿಯೆಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ನನ್ನಪ್ಪ ಡಿಸೆಂಬರ್ 11 ರ ಹೋರಾಟಕ್ಕೂ ಮುನ್ನವೇ ಕೊನೆಯುಸಿರು ಬಿಡಬಹುದೆಂಬ ಆತಂಕ ನನ್ನ ಕುಟುಂಬಕ್ಕಿತ್ತು. ಭರವಸೆಯನ್ನು ತಂದೆ ಹುಸಿಗೊಳಿಸಿ ಹೋರಾಟದ ಗಡುವಿಗೆ ಜೀವತುಂಬಿ ಇಂದು ಜೀವ ಬಿಟ್ಟಿದ್ದಾರೆ. ಅಪ್ಪನ ಅಂತಿಮ ಪಯಣಕ್ಕೆ ನಾವುಗಳು ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸೋಣ. ನನ್ನ ತಾಯಿ ನಾನು 11 ವರ್ಷದವನಿದ್ದಾಗಲೇ ಕಾಲರಾಕ್ಕೆ ಬಲಿಯಾದಾಗಿನಿಂದ ನನಗೆ ತಂದೆಯೇ ನನಗೆ ತಾಯಿಯಾಗಿದ್ದರು.  ಮಾರ್ಗದರ್ಶಕನಾಗಿರುವುದಲ್ಲದೇ ನನ್ನ ಹೋರಾಟದ ಹಾದಿಗೆ ಎಂದು ಅಡ್ಡಿಪಡಿಸದೇ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ ನನ್ಪಪ್ಪನದು ಸಹ ಅವಿಶ್ರಾಂತ ಹೋರಾಟದ ದಾರಿಯೆನ್ನುವುದರಲ್ಲಿ ಸಂಶಯವಿಲ್ಲ” ಎಂದು ಅಂಬಣ್ಣ ಸ್ಮರಿಸಿದ್ದಾರೆ.

“ಸಾಲಿ ಮಾಸ್ತಾರನಾಗಬೇಕೆಂಬ ನನ್ನ ತಂದೆಯ ಆಶಯಕ್ಕೆ ತದ್ವಿರುದ್ಧವಾಗಿ ತಮಟೆ ಬಾರಿಸಿದ ನನ್ನ ಮೇಲೆ ಹಾಗೂ ನನ್ನ ಹೋರಾಟದ ಸ್ಫೂರ್ತಿಯಾದ ಪ್ರಜಾಯುದ್ದನೌಕೆ ಗದ್ದರ್ ವಿರುದ್ಧದ ಕೋಪ ಇಂದಿಗೂ ಶಮನವಾಗದಿದ್ದರೂ ನಾನು ನಡೆವ ದಾರಿ ನೂರಾರು ಜನರಿಗೆ ಉಪಯುಕ್ತ ಮಾರ್ಗವೆಂಬ ಖಾತರಿ ಇರುವುದರಿಂದ ನನಗೆ ಸಂಪೂರ್ಣ ವಿನಾಯಿತಿ ಸಿಕ್ಕಿತ್ತು” ಎಂದು ನೆನೆದಿದ್ದಾರೆ.

“ಮೂರು ದಿನಗಳ ಹಿಂದೆ ಹೋರಾಟದ ಒತ್ತಡಗಳ ಮಧ್ಯೆ ಒಮ್ಮೆ ನೋಡಿ ಕಣ್ತುಂಬಿಸಿಕೊಂಡಿದ್ದೆ. ಡಿಸೆಂಬರ್ 11ರ ಕಾರ್ಯಕ್ರಮ ಸಂಪೂರ್ಣ ಯಶಸ್ವಿಯಾಗಿ ಡಿಸೆಂಬರ್‌‌ 19ರ ಅಧಿವೇಶನದಲ್ಲಿ ಒಳಮೀಸಲಾತಿ ಪ್ರಸ್ತಾಪಕ್ಕೆ ಸರ್ಕಾರದ ಗಮನಸೆಳೆಯುವ ಬಿರುಸಿನ ಪ್ರಯತ್ನಕ್ಕಾಗಿ ಇಂದು ಒಡನಾಡಿಗಳು ಖಾಯಂ ಹೋರಾಟದ ಬಿಡಾರ ಸಜ್ಜುಗೊಳಿಸುವ ಪ್ರಯತ್ನದಲ್ಲಿದ್ದೆವು. ಈ ಸಂದರ್ಭದಲ್ಲಿ ನನ್ನ ಪತ್ನಿ ಸುಜಾತಾ ಅಘಾತಕರ ಸುದ್ದಿಯನ್ನು ತಿಳಿಸಿದರು. ರಾಜಧಾನಿಯಿಂದ ರಾಯಚೂರಿಗೆ ಪಯಣ ಬೆಳೆಸಿರುವೆ” ಎಂದು ಹೇಳಿದ್ದಾರೆ.

“ನನ್ನ ಅನುಪಸ್ಥಿತಿಯಲ್ಲಿ ನನ್ನ ಮಡದಿ ಸುಜಾತಳ ಹಾರೈಕೆಯಿಂದಾಗಿ ಅಪ್ಪ ಇಷ್ಟು ವರ್ಷ ನಮ್ಮೊಂದಿಗಿರಲು ಸಾಧ್ಯವಾಗಿದೆ. ಸರ್ಕಾರ ಪ್ರಕಟಿಸಿರುವ ಒಳಮೀಸಲಾತಿ ಕುರಿತ ಉಪಸಮಿತಿ ಹಾಗೂ ಉಪಸಮಿತಿಯ ಮೊದಲ ಸಭೆ ಘೋಷಣೆಯ ಹಿನ್ನೆಲೆಯಲ್ಲಿ ಮುಂದೆ ಹಮ್ಮಿಕೊಳ್ಳಬೇಕಾದ ಹೋರಾಟದ ಹೆಜ್ಜೆಗಳನ್ನು ಅತ್ಯಂತ ಜಾಗರೂಕತೆಯಿಂದ ಮುಂದುವರೆಸೋಣ ಎಂದು ತಮ್ಮಲ್ಲಿ ಕೋರುತ್ತಾ ಅಪ್ಪನ ಅಂತಿಮ ಪಯಣಕ್ಕೆ ಹೋಗಿಬರುವೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...