Homeಕರ್ನಾಟಕಒಳಮೀಸಲಾತಿ ಹೋರಾಟದ ನಾಯಕ ಅಂಬಣ್ಣರವರ ತಂದೆ ಷಣ್ಮುಖಪ್ಪ ನಿಧನ

ಒಳಮೀಸಲಾತಿ ಹೋರಾಟದ ನಾಯಕ ಅಂಬಣ್ಣರವರ ತಂದೆ ಷಣ್ಮುಖಪ್ಪ ನಿಧನ

- Advertisement -
- Advertisement -

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಯಾಗಬೇಕು ಎಂಬ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ನಾಯಕರಾದ ಅಂಬಣ್ಣ ಅರೋಲಿಕರ್‌ ಅವರ ತಂದೆ ಷಣ್ಮುಖಪ್ಪ ಅರೋಲಿ ನಿಧನರಾಗಿದ್ದಾರೆ.

ಶತಾಯುಷಿಯಾಗಿದ್ದ ಷಣ್ಮುಖಪ್ಪ ಅವರು ವಯೋಸಹಜ ಅನಾರೋಗ್ಯದಲ್ಲಿದ್ದರು. ಮಂಗಳವಾರ ರಾತ್ರಿ ಕೊನೆಯುಸಿರೆಳೆದರು. ಬುಧವಾರ 2.30ಕ್ಕೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಅರೋಲಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.

ನಿಧನದ ಕುರಿತು ‘ಒಳಮೀಸಲಾತಿ’ ಫೇಸ್‌ಬುಕ್‌ ಪುಟದಲ್ಲಿ ತಿಳಿಸಲಾಗಿದ್ದು, “ವಯಸ್ಸಾದ, ಅನಾರೋಗ್ಯದಲ್ಲಿದ್ದ ತಂದೆಯನ್ನು ಮನೆಯಲ್ಲಿ ಬಿಟ್ಟು ಶೋಷಿತ, ಅವಕಾಶ ವಂಚಿತ ಜನರ ಹಕ್ಕುಗಳಿಗಾಗಿ ಹಲವಾರು ದಿನ, ನೂರಾರು ಊರು ಕೇರಿ ಸುತ್ತಿ ಅಂಬಣ್ಣ ಅರೋಲಿಕರ್‌‌ ಪಾದಯಾತ್ರೆ ಮಾಡಿದರು. ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟದಲ್ಲಿದ್ದ ಅಂಬಣ್ಣ ಅವರ ತಂದೆ ಈಗ ನಮ್ಮನ್ನ ಅಗಲಿದ್ದಾರೆ. ಇವರಿಗೆ ಎಲ್ಲಾ ರೀತಿಯಲ್ಲೂ ಅನೇಕ ಹೋರಾಟದ ಸಂಗಾತಿಗಳು ಜೊತೆ ನಿಂತಿದ್ದಾರೆ. ಹೋರಾಟವೂ ಮುಂದುವರೆಯುತ್ತಿದೆ. ಇಂತಹ ಹೊತ್ತಲ್ಲಿ ತಂದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅಂಬಣ್ಣ ಮತ್ತು ಅವರ ಕುಟುಂಬಕ್ಕೆ ಬರಲಿ. ನಿಮ್ಮ ದುಃಖದಲ್ಲಿ ನಾವೆಲ್ಲ ಭಾಗಿ, ನಿಮ್ಮ ಜೊತೆಯಲ್ಲಿ ನಾವಿದ್ದೇವೆ” ಎಂದು ಸಂತಾಪ ಸೂಚಿಸಲಾಗಿದೆ.

ಚಿಂತಕರಾದ ಹುಲಿಕುಂಟೆಮೂರ್ತಿಯವರು ಪ್ರತಿಕ್ರಿಯಿಸಿ, “ಒಳಮೀಸಲಾತಿ ಕಾಲ್ನಡಿಗೆ ಜಾಥಾ ತುಮಕೂರಿಗೆ ಬಂದ ದಿನವೇ ಅಂಬಣ್ಣ ಅವರ ತಂದೆ ಆರೋಗ್ಯದಲ್ಲಿ ಹೆಚ್ಚೇ ಏರುಪೇರಾಗಿತ್ತು. ಅಂಬಣ್ಣ ಹೋಗಿ ಜಾಥಾ ನೆಲಮಂಗಲ ತಲುಪುವಷ್ಟರಲ್ಲಿ ಬಂದುಬಿಟ್ಟರು. ಅವರಿಗೆ ತಂದೆಯ ಅನಾರೋಗ್ಯ ಮತ್ತು ಹೋರಾಟದ ದಿಕ್ಕು ಎರಡೂ ತಲೆಯಲ್ಲಿ ಕೊರೆಯುತ್ತಿದ್ದವು. ಜೈಲಿಗೂ ಹೋಗಿಬಂದರು. ಒಳಗಿನ ಕಾರಣಗಳಿಗೆ‌ ಕಣ್ಣೀರು ಹಾಕಿದರು. ಅಪ್ಪ ಅಂಬಣ್ಣನನ್ನು ಬಿಟ್ಟು ಹೋಗೇಬಿಟ್ಟರು. ಅಂತ್ಯಕ್ರಿಯೆ ಮುಗಿಸಿ ಅಂಬಣ್ಣ ನಾಳೆಯೇ ಬೆಂಗಳೂರಿಗೆ ಬರ್ತಿದಾರೆ. ಹೋರಾಟ ನಿಲ್ಲುವುದಿಲ್ಲ” ಎಂದಿದ್ದಾರೆ.

ಮುಖಂಡರಾದ ಉದಯ್ ಅರೋಲಿಕರ್‌ ಅವರು ಅಂಬಣ್ಣ ಅವರ ಪ್ರತಿಕ್ರಿಯೆಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ನನ್ನಪ್ಪ ಡಿಸೆಂಬರ್ 11 ರ ಹೋರಾಟಕ್ಕೂ ಮುನ್ನವೇ ಕೊನೆಯುಸಿರು ಬಿಡಬಹುದೆಂಬ ಆತಂಕ ನನ್ನ ಕುಟುಂಬಕ್ಕಿತ್ತು. ಭರವಸೆಯನ್ನು ತಂದೆ ಹುಸಿಗೊಳಿಸಿ ಹೋರಾಟದ ಗಡುವಿಗೆ ಜೀವತುಂಬಿ ಇಂದು ಜೀವ ಬಿಟ್ಟಿದ್ದಾರೆ. ಅಪ್ಪನ ಅಂತಿಮ ಪಯಣಕ್ಕೆ ನಾವುಗಳು ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸೋಣ. ನನ್ನ ತಾಯಿ ನಾನು 11 ವರ್ಷದವನಿದ್ದಾಗಲೇ ಕಾಲರಾಕ್ಕೆ ಬಲಿಯಾದಾಗಿನಿಂದ ನನಗೆ ತಂದೆಯೇ ನನಗೆ ತಾಯಿಯಾಗಿದ್ದರು.  ಮಾರ್ಗದರ್ಶಕನಾಗಿರುವುದಲ್ಲದೇ ನನ್ನ ಹೋರಾಟದ ಹಾದಿಗೆ ಎಂದು ಅಡ್ಡಿಪಡಿಸದೇ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ ನನ್ಪಪ್ಪನದು ಸಹ ಅವಿಶ್ರಾಂತ ಹೋರಾಟದ ದಾರಿಯೆನ್ನುವುದರಲ್ಲಿ ಸಂಶಯವಿಲ್ಲ” ಎಂದು ಅಂಬಣ್ಣ ಸ್ಮರಿಸಿದ್ದಾರೆ.

“ಸಾಲಿ ಮಾಸ್ತಾರನಾಗಬೇಕೆಂಬ ನನ್ನ ತಂದೆಯ ಆಶಯಕ್ಕೆ ತದ್ವಿರುದ್ಧವಾಗಿ ತಮಟೆ ಬಾರಿಸಿದ ನನ್ನ ಮೇಲೆ ಹಾಗೂ ನನ್ನ ಹೋರಾಟದ ಸ್ಫೂರ್ತಿಯಾದ ಪ್ರಜಾಯುದ್ದನೌಕೆ ಗದ್ದರ್ ವಿರುದ್ಧದ ಕೋಪ ಇಂದಿಗೂ ಶಮನವಾಗದಿದ್ದರೂ ನಾನು ನಡೆವ ದಾರಿ ನೂರಾರು ಜನರಿಗೆ ಉಪಯುಕ್ತ ಮಾರ್ಗವೆಂಬ ಖಾತರಿ ಇರುವುದರಿಂದ ನನಗೆ ಸಂಪೂರ್ಣ ವಿನಾಯಿತಿ ಸಿಕ್ಕಿತ್ತು” ಎಂದು ನೆನೆದಿದ್ದಾರೆ.

“ಮೂರು ದಿನಗಳ ಹಿಂದೆ ಹೋರಾಟದ ಒತ್ತಡಗಳ ಮಧ್ಯೆ ಒಮ್ಮೆ ನೋಡಿ ಕಣ್ತುಂಬಿಸಿಕೊಂಡಿದ್ದೆ. ಡಿಸೆಂಬರ್ 11ರ ಕಾರ್ಯಕ್ರಮ ಸಂಪೂರ್ಣ ಯಶಸ್ವಿಯಾಗಿ ಡಿಸೆಂಬರ್‌‌ 19ರ ಅಧಿವೇಶನದಲ್ಲಿ ಒಳಮೀಸಲಾತಿ ಪ್ರಸ್ತಾಪಕ್ಕೆ ಸರ್ಕಾರದ ಗಮನಸೆಳೆಯುವ ಬಿರುಸಿನ ಪ್ರಯತ್ನಕ್ಕಾಗಿ ಇಂದು ಒಡನಾಡಿಗಳು ಖಾಯಂ ಹೋರಾಟದ ಬಿಡಾರ ಸಜ್ಜುಗೊಳಿಸುವ ಪ್ರಯತ್ನದಲ್ಲಿದ್ದೆವು. ಈ ಸಂದರ್ಭದಲ್ಲಿ ನನ್ನ ಪತ್ನಿ ಸುಜಾತಾ ಅಘಾತಕರ ಸುದ್ದಿಯನ್ನು ತಿಳಿಸಿದರು. ರಾಜಧಾನಿಯಿಂದ ರಾಯಚೂರಿಗೆ ಪಯಣ ಬೆಳೆಸಿರುವೆ” ಎಂದು ಹೇಳಿದ್ದಾರೆ.

“ನನ್ನ ಅನುಪಸ್ಥಿತಿಯಲ್ಲಿ ನನ್ನ ಮಡದಿ ಸುಜಾತಳ ಹಾರೈಕೆಯಿಂದಾಗಿ ಅಪ್ಪ ಇಷ್ಟು ವರ್ಷ ನಮ್ಮೊಂದಿಗಿರಲು ಸಾಧ್ಯವಾಗಿದೆ. ಸರ್ಕಾರ ಪ್ರಕಟಿಸಿರುವ ಒಳಮೀಸಲಾತಿ ಕುರಿತ ಉಪಸಮಿತಿ ಹಾಗೂ ಉಪಸಮಿತಿಯ ಮೊದಲ ಸಭೆ ಘೋಷಣೆಯ ಹಿನ್ನೆಲೆಯಲ್ಲಿ ಮುಂದೆ ಹಮ್ಮಿಕೊಳ್ಳಬೇಕಾದ ಹೋರಾಟದ ಹೆಜ್ಜೆಗಳನ್ನು ಅತ್ಯಂತ ಜಾಗರೂಕತೆಯಿಂದ ಮುಂದುವರೆಸೋಣ ಎಂದು ತಮ್ಮಲ್ಲಿ ಕೋರುತ್ತಾ ಅಪ್ಪನ ಅಂತಿಮ ಪಯಣಕ್ಕೆ ಹೋಗಿಬರುವೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...