Homeಕರ್ನಾಟಕಒಳಮೀಸಲಾತಿ ಹೋರಾಟದ ನಾಯಕ ಅಂಬಣ್ಣರವರ ತಂದೆ ಷಣ್ಮುಖಪ್ಪ ನಿಧನ

ಒಳಮೀಸಲಾತಿ ಹೋರಾಟದ ನಾಯಕ ಅಂಬಣ್ಣರವರ ತಂದೆ ಷಣ್ಮುಖಪ್ಪ ನಿಧನ

- Advertisement -
- Advertisement -

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಜಾರಿಯಾಗಬೇಕು ಎಂಬ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ನಾಯಕರಾದ ಅಂಬಣ್ಣ ಅರೋಲಿಕರ್‌ ಅವರ ತಂದೆ ಷಣ್ಮುಖಪ್ಪ ಅರೋಲಿ ನಿಧನರಾಗಿದ್ದಾರೆ.

ಶತಾಯುಷಿಯಾಗಿದ್ದ ಷಣ್ಮುಖಪ್ಪ ಅವರು ವಯೋಸಹಜ ಅನಾರೋಗ್ಯದಲ್ಲಿದ್ದರು. ಮಂಗಳವಾರ ರಾತ್ರಿ ಕೊನೆಯುಸಿರೆಳೆದರು. ಬುಧವಾರ 2.30ಕ್ಕೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಅರೋಲಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.

ನಿಧನದ ಕುರಿತು ‘ಒಳಮೀಸಲಾತಿ’ ಫೇಸ್‌ಬುಕ್‌ ಪುಟದಲ್ಲಿ ತಿಳಿಸಲಾಗಿದ್ದು, “ವಯಸ್ಸಾದ, ಅನಾರೋಗ್ಯದಲ್ಲಿದ್ದ ತಂದೆಯನ್ನು ಮನೆಯಲ್ಲಿ ಬಿಟ್ಟು ಶೋಷಿತ, ಅವಕಾಶ ವಂಚಿತ ಜನರ ಹಕ್ಕುಗಳಿಗಾಗಿ ಹಲವಾರು ದಿನ, ನೂರಾರು ಊರು ಕೇರಿ ಸುತ್ತಿ ಅಂಬಣ್ಣ ಅರೋಲಿಕರ್‌‌ ಪಾದಯಾತ್ರೆ ಮಾಡಿದರು. ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟದಲ್ಲಿದ್ದ ಅಂಬಣ್ಣ ಅವರ ತಂದೆ ಈಗ ನಮ್ಮನ್ನ ಅಗಲಿದ್ದಾರೆ. ಇವರಿಗೆ ಎಲ್ಲಾ ರೀತಿಯಲ್ಲೂ ಅನೇಕ ಹೋರಾಟದ ಸಂಗಾತಿಗಳು ಜೊತೆ ನಿಂತಿದ್ದಾರೆ. ಹೋರಾಟವೂ ಮುಂದುವರೆಯುತ್ತಿದೆ. ಇಂತಹ ಹೊತ್ತಲ್ಲಿ ತಂದೆಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅಂಬಣ್ಣ ಮತ್ತು ಅವರ ಕುಟುಂಬಕ್ಕೆ ಬರಲಿ. ನಿಮ್ಮ ದುಃಖದಲ್ಲಿ ನಾವೆಲ್ಲ ಭಾಗಿ, ನಿಮ್ಮ ಜೊತೆಯಲ್ಲಿ ನಾವಿದ್ದೇವೆ” ಎಂದು ಸಂತಾಪ ಸೂಚಿಸಲಾಗಿದೆ.

ಚಿಂತಕರಾದ ಹುಲಿಕುಂಟೆಮೂರ್ತಿಯವರು ಪ್ರತಿಕ್ರಿಯಿಸಿ, “ಒಳಮೀಸಲಾತಿ ಕಾಲ್ನಡಿಗೆ ಜಾಥಾ ತುಮಕೂರಿಗೆ ಬಂದ ದಿನವೇ ಅಂಬಣ್ಣ ಅವರ ತಂದೆ ಆರೋಗ್ಯದಲ್ಲಿ ಹೆಚ್ಚೇ ಏರುಪೇರಾಗಿತ್ತು. ಅಂಬಣ್ಣ ಹೋಗಿ ಜಾಥಾ ನೆಲಮಂಗಲ ತಲುಪುವಷ್ಟರಲ್ಲಿ ಬಂದುಬಿಟ್ಟರು. ಅವರಿಗೆ ತಂದೆಯ ಅನಾರೋಗ್ಯ ಮತ್ತು ಹೋರಾಟದ ದಿಕ್ಕು ಎರಡೂ ತಲೆಯಲ್ಲಿ ಕೊರೆಯುತ್ತಿದ್ದವು. ಜೈಲಿಗೂ ಹೋಗಿಬಂದರು. ಒಳಗಿನ ಕಾರಣಗಳಿಗೆ‌ ಕಣ್ಣೀರು ಹಾಕಿದರು. ಅಪ್ಪ ಅಂಬಣ್ಣನನ್ನು ಬಿಟ್ಟು ಹೋಗೇಬಿಟ್ಟರು. ಅಂತ್ಯಕ್ರಿಯೆ ಮುಗಿಸಿ ಅಂಬಣ್ಣ ನಾಳೆಯೇ ಬೆಂಗಳೂರಿಗೆ ಬರ್ತಿದಾರೆ. ಹೋರಾಟ ನಿಲ್ಲುವುದಿಲ್ಲ” ಎಂದಿದ್ದಾರೆ.

ಮುಖಂಡರಾದ ಉದಯ್ ಅರೋಲಿಕರ್‌ ಅವರು ಅಂಬಣ್ಣ ಅವರ ಪ್ರತಿಕ್ರಿಯೆಯನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ನನ್ನಪ್ಪ ಡಿಸೆಂಬರ್ 11 ರ ಹೋರಾಟಕ್ಕೂ ಮುನ್ನವೇ ಕೊನೆಯುಸಿರು ಬಿಡಬಹುದೆಂಬ ಆತಂಕ ನನ್ನ ಕುಟುಂಬಕ್ಕಿತ್ತು. ಭರವಸೆಯನ್ನು ತಂದೆ ಹುಸಿಗೊಳಿಸಿ ಹೋರಾಟದ ಗಡುವಿಗೆ ಜೀವತುಂಬಿ ಇಂದು ಜೀವ ಬಿಟ್ಟಿದ್ದಾರೆ. ಅಪ್ಪನ ಅಂತಿಮ ಪಯಣಕ್ಕೆ ನಾವುಗಳು ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸೋಣ. ನನ್ನ ತಾಯಿ ನಾನು 11 ವರ್ಷದವನಿದ್ದಾಗಲೇ ಕಾಲರಾಕ್ಕೆ ಬಲಿಯಾದಾಗಿನಿಂದ ನನಗೆ ತಂದೆಯೇ ನನಗೆ ತಾಯಿಯಾಗಿದ್ದರು.  ಮಾರ್ಗದರ್ಶಕನಾಗಿರುವುದಲ್ಲದೇ ನನ್ನ ಹೋರಾಟದ ಹಾದಿಗೆ ಎಂದು ಅಡ್ಡಿಪಡಿಸದೇ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ ನನ್ಪಪ್ಪನದು ಸಹ ಅವಿಶ್ರಾಂತ ಹೋರಾಟದ ದಾರಿಯೆನ್ನುವುದರಲ್ಲಿ ಸಂಶಯವಿಲ್ಲ” ಎಂದು ಅಂಬಣ್ಣ ಸ್ಮರಿಸಿದ್ದಾರೆ.

“ಸಾಲಿ ಮಾಸ್ತಾರನಾಗಬೇಕೆಂಬ ನನ್ನ ತಂದೆಯ ಆಶಯಕ್ಕೆ ತದ್ವಿರುದ್ಧವಾಗಿ ತಮಟೆ ಬಾರಿಸಿದ ನನ್ನ ಮೇಲೆ ಹಾಗೂ ನನ್ನ ಹೋರಾಟದ ಸ್ಫೂರ್ತಿಯಾದ ಪ್ರಜಾಯುದ್ದನೌಕೆ ಗದ್ದರ್ ವಿರುದ್ಧದ ಕೋಪ ಇಂದಿಗೂ ಶಮನವಾಗದಿದ್ದರೂ ನಾನು ನಡೆವ ದಾರಿ ನೂರಾರು ಜನರಿಗೆ ಉಪಯುಕ್ತ ಮಾರ್ಗವೆಂಬ ಖಾತರಿ ಇರುವುದರಿಂದ ನನಗೆ ಸಂಪೂರ್ಣ ವಿನಾಯಿತಿ ಸಿಕ್ಕಿತ್ತು” ಎಂದು ನೆನೆದಿದ್ದಾರೆ.

“ಮೂರು ದಿನಗಳ ಹಿಂದೆ ಹೋರಾಟದ ಒತ್ತಡಗಳ ಮಧ್ಯೆ ಒಮ್ಮೆ ನೋಡಿ ಕಣ್ತುಂಬಿಸಿಕೊಂಡಿದ್ದೆ. ಡಿಸೆಂಬರ್ 11ರ ಕಾರ್ಯಕ್ರಮ ಸಂಪೂರ್ಣ ಯಶಸ್ವಿಯಾಗಿ ಡಿಸೆಂಬರ್‌‌ 19ರ ಅಧಿವೇಶನದಲ್ಲಿ ಒಳಮೀಸಲಾತಿ ಪ್ರಸ್ತಾಪಕ್ಕೆ ಸರ್ಕಾರದ ಗಮನಸೆಳೆಯುವ ಬಿರುಸಿನ ಪ್ರಯತ್ನಕ್ಕಾಗಿ ಇಂದು ಒಡನಾಡಿಗಳು ಖಾಯಂ ಹೋರಾಟದ ಬಿಡಾರ ಸಜ್ಜುಗೊಳಿಸುವ ಪ್ರಯತ್ನದಲ್ಲಿದ್ದೆವು. ಈ ಸಂದರ್ಭದಲ್ಲಿ ನನ್ನ ಪತ್ನಿ ಸುಜಾತಾ ಅಘಾತಕರ ಸುದ್ದಿಯನ್ನು ತಿಳಿಸಿದರು. ರಾಜಧಾನಿಯಿಂದ ರಾಯಚೂರಿಗೆ ಪಯಣ ಬೆಳೆಸಿರುವೆ” ಎಂದು ಹೇಳಿದ್ದಾರೆ.

“ನನ್ನ ಅನುಪಸ್ಥಿತಿಯಲ್ಲಿ ನನ್ನ ಮಡದಿ ಸುಜಾತಳ ಹಾರೈಕೆಯಿಂದಾಗಿ ಅಪ್ಪ ಇಷ್ಟು ವರ್ಷ ನಮ್ಮೊಂದಿಗಿರಲು ಸಾಧ್ಯವಾಗಿದೆ. ಸರ್ಕಾರ ಪ್ರಕಟಿಸಿರುವ ಒಳಮೀಸಲಾತಿ ಕುರಿತ ಉಪಸಮಿತಿ ಹಾಗೂ ಉಪಸಮಿತಿಯ ಮೊದಲ ಸಭೆ ಘೋಷಣೆಯ ಹಿನ್ನೆಲೆಯಲ್ಲಿ ಮುಂದೆ ಹಮ್ಮಿಕೊಳ್ಳಬೇಕಾದ ಹೋರಾಟದ ಹೆಜ್ಜೆಗಳನ್ನು ಅತ್ಯಂತ ಜಾಗರೂಕತೆಯಿಂದ ಮುಂದುವರೆಸೋಣ ಎಂದು ತಮ್ಮಲ್ಲಿ ಕೋರುತ್ತಾ ಅಪ್ಪನ ಅಂತಿಮ ಪಯಣಕ್ಕೆ ಹೋಗಿಬರುವೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...