Homeಕರ್ನಾಟಕಸುಸ್ತಿದಾರ ರೈತರು ಪಾವತಿಸುವ ಸಾಲದ ಬಡ್ಡಿ ಮನ್ನ, ಸರ್ಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲು: ಸಂಪುಟ ನಿರ್ಧಾರ

ಸುಸ್ತಿದಾರ ರೈತರು ಪಾವತಿಸುವ ಸಾಲದ ಬಡ್ಡಿ ಮನ್ನ, ಸರ್ಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲು: ಸಂಪುಟ ನಿರ್ಧಾರ

- Advertisement -
- Advertisement -

ರಾಜ್ಯದ ಸಹಕಾರ ಸಂಘಗಳಲ್ಲಿನ ಸುಸ್ತಿದಾರ ರೈತರು ಸಾಲದ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು 440.20 ಕೋಟಿ ರೂ.ಗಳ ಬಡ್ಡಿ ಮನ್ನಾ ಹಾಗೂ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ.2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ನಿರ್ಧರಿಸಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ)ನಿಯಮಗಳು, 2024ಕ್ಕೆ ಸಂಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಿದ ನಂತರ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ.2 ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ನಿರ್ಧರಿಸಿತು. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊತ್ತದ ₹142.47 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ರಾಯಚೂರು ವಿಶ್ವವಿದ್ಯಾಲಯ ಆವರಣದಲ್ಲಿ ‘ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆ’ ನಿರ್ಮಾಣವನ್ನು ₹47.32 ಕೋಟಿಗಳ ಅಂದಾಜು ಮೊತ್ತದಲ್ಲಿ ಕೆಕೆಆರ್ ಡಿ ಬಿ ಅನುದಾನದಲ್ಲಿ ಕೈಗೊಳ್ಳಲು ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. 2023-24ನೇ ಸಾಲಿಗೆ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿನ 104 ‘ಕರ್ನಾಟಕ ಪಬ್ಲಿಕ್ ಶಾಲೆ;’ಳಿಗೆ ₹60 ಕೋಟಿ ಅಂದಾಜು ವೆಚ್ಚದಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿಗೆ ಅನುಮೋದನೆ ನೀಡಲಾಯಿತು.

ಬೈಯ್ಯಪ್ಪನಹಳ್ಳಿ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸರ್.ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ ಅನ್ನು ಸಂಪರ್ಕಿಸಲು ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ₹263 ಕೋಟಿಗಳ ಅಂದಾಜು ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ಬೆಳಗಾವಿ ಜಿಲ್ಲೆಯ ಉಚ್ಛಗಾಂವ್ ಹಾಗೂ ಸಂತಿಬಸ್ತವಾಡ ಹೋಬಳಿಯ 20 ಕೆರೆಗಳನ್ನು ₹287.55 ಕೋಟಿ ಮೊತ್ತದಲ್ಲಿ ನಿರ್ಮಿಸುವ ಯೋಜನಾ ವರದಿಗೆ ಹಾಗೂ ಹಿರೇಬಾಗೇವಾಡಿಯ 61 ಕೆರೆಗಳನ್ನು ತುಂಬಿಸುವ ‘ಬಾಗೇವಾಡಿ ಕೆರೆ ತುಂಬಿಸುವ ಯೋಜನೆ’ಯ ₹519.10 ಕೋಟಿಗಳ ಅಂದಾಜು ಮೊತ್ತದ ಪರಿಷ್ಕೃತ ಯೋಜನಾ ವರದಿಗೆ ಸಭೆ ಅನುಮೋದನೆ ನೀಡಿದೆ.

ರಾಯಚೂರು ತಾಲ್ಲೂಕಿನ ಚಿಕ್ಕಮಂಚಾಲಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕಾಗಿ ₹158.10 ಕೋಟಿ ಯೋಜನಾ ವರದಿಗೆ ಅನುಮೋದನೆ, ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ ₹499 ಕೋಟಿ ಮೊತ್ತದ ಯೋಜನೆ ಆರಂಭಕ್ಕೆ ಸರ್ಕಾರ ಒಪ್ಪಿಕೊಂಡಿದೆ.

‘ರಾಜ್ಯದ 6 ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು, ರಾಯಚೂರು, ಬಳ್ಳಾರಿ, ವಿಜಯಪುರಗಳಲ್ಲಿ ₹52.81 ಕೋಟಿ ವೆಚ್ಚದಲ್ಲಿ ಮತ್ತು ಬೆಂಗಳೂರಿನ ಹೊಸೂರು ರಸ್ತೆ, ಕಲಬುರಗಿ, ಮೈಸೂರು ಸರ್ಕಾರಿ ಕೈಗಾರಿಕಾ ಸಂಸ್ಥೆಗಳಲ್ಲಿ ₹47.18 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲ ಮೂಲಭೂತ ಸೌಕರ್ಯ ಕಾಮಗಾರಿಗಳ ₹120 ಕೋಟಿ ಕ್ರಿಯಾ ಯೋಜನೆಗೆ ಅನುಮತಿ ನೀಡಿ, ದಿನಾಂಕ: 12-01-2024 ರಂದು ಹೊರಡಿಸಿದ ಸರ್ಕಾರಿ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಯಿತು. ಜತೆಗೆ, ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ಆವರಣಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ , ಲಾಂಡ್ರಿ ಕಟ್ಟಡ, ಎಸ್ ಟಿ ಪಿ ಉನ್ನತೀಕರಣ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಒಟ್ಟು ₹150 ಕೋಟಿ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ ₹455 ಕೋಟಿಗಳ ಕಾಮಗಾರಿಗೆ ಸಭೆ ಒಪ್ಪಿಕೊಂಡಿದೆ.

ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಗೊಂಡಿರುವ 110 ಹಳ್ಳಿಗಳಲ್ಲಿ ಬಿಟ್ಟುಹೋಗಿರುವ ಪ್ರದೇಶಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 2ನೇ ಹಂದಲ್ಲಿ ₹208.45 ಕೋಟಿ ಅಂದಾಜು ಮೊತ್ತದ ಕುಡಿಯು ನೀರಿನ ಯೋಜನೆ, ರಾಜ್ಯದ ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಾಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು ₹440.20 ಕೋಟಿಗಳ ಬಡ್ಡಿ ಮನ್ನಾ ಮಾಡುವ ಸಂಬಂಧ ಹೊರಡಿಸಿದ್ದ 20-01-2024ರ ಸರ್ಕಾರಿ ಅದೇಶಕ್ಕೆ ಘಟನೋತ್ತರ ಅನುಮೋದನೆಯನ್ನು ನೀಡಲಾಗಿದೆ.

ಇದನ್ನೂ ಓದಿ; ಬಣ್ಣಬಣ್ಣದ ಮಾತುಗಳ ಮಾಯಾಜಾಲ, ಕೇಂದ್ರದ ಬಜೆಟ್‌ನಲ್ಲಿ ಗಟ್ಟಿತನವಿಲ್ಲ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...